Homeದಲಿತ್ ಫೈಲ್ಸ್ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

- Advertisement -
- Advertisement -

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮೇ 10 ರಂದು ಗ್ರಾಮದ ಡೈರಿಯ ಬಳಿ ನಡೆದ ಈ ಘಟನೆಯು, ಸಮಾಜದಲ್ಲಿ ದಲಿತರ ಒಳಗೊಳ್ಳುವಿಕೆ ಮತ್ತು ಸಮಾನತೆಗೆ ಪ್ರತಿರೋಧದ ಮತ್ತೊಂದು ನಿದರ್ಶನವಾಗಿದೆ. ಹೆಚ್ಚಿನ ಭಾರತೀಯ ವಿವಾಹದ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವುದು ವಾಡಿಕೆಯಾಗಿದೆ. ಆದರೆ, ಈ ಸಂಪ್ರದಾಯ ಪಾಲಿಸುವ ದಲಿತ ಕುಟುಂಬಗಳನ್ನು ಪದೇ ಪದೇ ಗುರಿಯಾಗಿಸಿಕೊಳ್ಳಲಾಗುತ್ತಿದೆ.

ದಲಿತ ಸಮುದಾಯಕ್ಕೆ ಸೇರಿದ ವರ ಮಾಯಾಂಕ್ ರಾವತ್ ಅವರ ಸಹೋದರ ಭಾವಿಕ್ ರಾವತ್ ಮಾತನಾಡಿ, “ದರ್ಬಾರ್ ಸಮುದಾಯದ ತುವ್ರಾಜ್‌ಸಿನ್ಹ್ ಚೌಹಾಣ್ ಮತ್ತು ನಿಕುಲ್ಸಿನ್ಹ್ ಚೌಹಾಣ್ ಅವರ ಮೇಲೆ ಹಲ್ಲೆ ನಡೆಸಿದ್ದಾರೆ” ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ. “ಆರೋಪಿಗಳು ಜಾತಿ ನಿಂದನೆ ಮಾಡಿ ವರನಿಗೆ ಹಲ್ಲೆ ಮಾಡಿ ನಿಂದಿಸಿದ್ದಾರೆ, ಮೆರವಣಿಗೆಗಾಗಿ ಕುದುರೆ ಹತ್ತುವುದು ದರ್ಬಾರ್‌ನ ಹಕ್ಕು ಮಾತ್ರ ಎಂದು ಹೇಳಿರುವುದಾಗಿ” ವರದಿಯಾಗಿದೆ.

ಆರೋಪಿಗಳು ಕುಟುಂಬಕ್ಕೆ ಬರಾತ್ ಮುಂದುವರಿಸದಂತೆ ಬೆದರಿಕೆ ಹಾಕಿದರು. ಇದರಿಂದಾಗಿ ಆತನ ಸಂಬಂಧಿಕರು ಮದುವೆ ಸಮಾರಂಭಕ್ಕೆ ಅಹಮದಾಬಾದ್‌ಗೆ ಹೋಗುವುದನ್ನು ತಪ್ಪಿಸಬೇಕಾಯಿತು.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿಗಳಾದ ತುವ್ರಜ್‌ಸಿನ್ಹ್ ಮತ್ತು ನಿಕುಲ್ಸಿನ್ಹ್ ವಿರುದ್ಧ ಲಾಡೋಲ್ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ.

ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಕೌಶಿಕ್ ಅವರ ಪ್ರಕಾರ, ಸಾಂವಿಧಾನಿಕ ರಕ್ಷಣೆಗಳ ಹೊರತಾಗಿಯೂ ದಲಿತರು ತಾರತಮ್ಯವನ್ನು ಎದುರಿಸುತ್ತಿದ್ದಾರೆ ಎಂಬುದನ್ನು ಈ ದಾಳಿ ಸಾಬೀತುಪಡಿಸುತ್ತದೆ ಎಂದಿದ್ದಾರೆ.

ದಲಿತರ ಮದುವೆ ಮೆರವಣಿಗೆಗಳ ಮೇಲೆ ನಿರಂತರ ದಾಳಿ

ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ದಲಿತ ವರರು ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುವುದನ್ನು ವಿರೋಧಿಸಿ ಪ್ರಬಲ ಜಾತಿ ಜನರು ಹಲ್ಲೆ, ನಿಂದನೆ ಅಥವಾ ಸಾಮಾಜಿಕ ಬಹಿಷ್ಕಾರ ಹಾಕುವ ಘಟನೆಗಳು ಇತ್ತೀಚಿನ ವರ್ಷಗಳಲ್ಲಿ ವರದಿಯಾಗುತ್ತಲೇ ಇವೆ. ಇದು ಸಮಾಜದಲ್ಲಿ ಇಂದಿಗೂ ಬೇರೂರಿರುವ ಜಾತೀಯತೆ ಮತ್ತು ತಾರತಮ್ಯವನ್ನು ಎತ್ತಿ ತೋರಿಸುತ್ತದೆ.

ಗುಜರಾತ್‌ನ ವಿವಿಧ ಜಿಲ್ಲೆಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿವೆ. ಮೆಹ್ಸಾನಾ ಜಿಲ್ಲೆಯ ಘಟನೆಯಲ್ಲದೆ, ಇತ್ತೀಚೆಗೆ ಇತರ ಭಾಗಗಳಲ್ಲೂ ಇಂತಹ ಘಟನೆಗಳು ನಡೆದಿವೆ. ಗಾಂಧಿನಗರ ಜಿಲ್ಲೆಯಲ್ಲಿ ನಡೆದ ಮದುವೆ ಮೆರವಣಿಗೆಯೊಂದರಲ್ಲಿ ದಲಿತ ವರನೊಬ್ಬ ಕುದುರೆ ಏರಿದ್ದಕ್ಕಾಗಿ ಪ್ರಬಲಜಾತಿ ಯುವಕರ ಗುಂಪೊಂದು ಆತನನ್ನು ಕೆಳಗಿಳಿಸಿ, ಹಲ್ಲೆ ನಡೆಸಿತ್ತು. ವರನಿಗೆ ರಕ್ಷಣೆ ನೀಡಲು ಪೊಲೀಸರು ಹರಸಾಹಸ ಪಡಬೇಕಾಯಿತು.

    ಬನಸ್ಕಾಂತ ಜಿಲ್ಲೆಯಲ್ಲಿ ಸಹ ದಲಿತ ವರ ಕುದುರೆ ಸವಾರಿ ಮಾಡಬಾರದು ಎಂದು ಗ್ರಾಮದ ಮೇಲ್ಜಾತಿಯ ಮುಖಂಡರು ಫತ್ವಾ ಹೊರಡಿಸಿದ್ದರು. ಇದನ್ನು ಮೀರಿ ಮೆರವಣಿಗೆ ನಡೆಸಿದಾಗ ಕಲ್ಲು ತೂರಾಟ ನಡೆಸಲಾಗಿತ್ತು. ನಂತರ ಇಡೀ ಗ್ರಾಮಕ್ಕೆ ಪೊಲೀಸ್ ಬಂದೋಬಸ್ತ್ ಒದಗಿಸಬೇಕಾಯಿತು.

    ಮಧ್ಯಪ್ರದೇಶದ ಹಲವು ಜಿಲ್ಲೆಗಳಲ್ಲಿ ಸಹ ಇಂತಹ ಪ್ರಕರಣಗಳು ನಡೆದಿವೆ. ಛತ್ತರ್‌ಪುರ್ ಜಿಲ್ಲೆಯ ದಲಿತ ಯುವಕನೊಬ್ಬ ಮದುವೆ ದಿನ ಕುದುರೆ ಸವಾರಿ ಮಾಡಿದ್ದಕ್ಕಾಗಿ ಮೇಲ್ಜಾತಿ ಪುರುಷರ ಗುಂಪೊಂದು ಆತನ ಮನೆಗೆ ನುಗ್ಗಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿ, ಕುಟುಂಬಸ್ಥರ ಮೇಲೆ ಹಲ್ಲೆ ನಡೆಸಿತ್ತು.

      ಬುಂದೇಲ್‌ಖಂಡ್ ಪ್ರದೇಶದ ಒಂದು ಹಳ್ಳಿಯಲ್ಲಿ ದಲಿತ ವರನ ಮೆರವಣಿಗೆಗೆ ಕಲ್ಲು ತೂರಾಟ ನಡೆಸಿದ ನಂತರ, ವರನಿಗೆ ಹೆಲ್ಮೆಟ್ ಹಾಕಿಸಿ ಸುಮಾರು 100 ಕ್ಕೂ ಹೆಚ್ಚು ಪೊಲೀಸರ ಕಾವಲಿನಲ್ಲಿ ಮದುವೆ ಮೆರವಣಿಗೆಯನ್ನು ಪೂರ್ಣಗೊಳಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.

      ರಾಜಸ್ಥಾನದ ಭಿಲ್ವಾರಾ ಮತ್ತು ಜಲೋರ್ ಜಿಲ್ಲೆಗಳಲ್ಲಿ ಸಹ ಇಂತಹ ಪ್ರಕರಣಗಳು ಬೆಳಕಿಗೆ ಬಂದಿವೆ. ರಾಜಸ್ಥಾನದ ಗ್ರಾಮೀಣ ಭಾಗಗಳಲ್ಲಿ ಮದುವೆ ಮೆರವಣಿಗೆ ವೇಳೆ ಇಂತಹ ಸಂಘರ್ಷಗಳು ಹೆಚ್ಚಾಗಿ ನಡೆಯುತ್ತವೆ.

        ಭಿಲ್ವಾರಾ ಜಿಲ್ಲೆಯಲ್ಲಿ ದಲಿತ ವರ ಕುದುರೆ ಏರಿದ್ದನ್ನು ವಿರೋಧಿಸಿ ಮದುವೆ ಮೆರವಣಿಗೆಯನ್ನು ತಡೆದು ನಿಲ್ಲಿಸಲಾಯಿತು. ವರನ ಕಡೆಯವರ ಮೇಲೆ ಲಾಠಿ ಹಾಗೂ ಕಲ್ಲುಗಳಿಂದ ಹಲ್ಲೆ ನಡೆಸಲಾಯಿತು. ಈ ಘಟನೆಯ ನಂತರ ಗ್ರಾಮದ ಹಲವರ ವಿರುದ್ಧ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

        ಜಲೋರ್ ಜಿಲ್ಲೆಯ ಪ್ರಬ ಜಾತಿ ಧಾರ್ಮಿಕ ಸ್ಥಳದ ಮುಂದೆ ದಲಿತ ವರ ಕುದುರೆ ಸವಾರಿ ಮಾಡಿಕೊಂಡು ಹೋಗಬಾರದು ಎಂದು ಮೆರವಣಿಗೆಯನ್ನು ತಡೆದ ಘಟನೆ ನಡೆದಿತ್ತು.

        ಉತ್ತರ ಪ್ರದೇಶದ ಕಸ್ಗಂಜ್ ಮತ್ತು ಆಗ್ರಾ ಜಿಲ್ಲೆಗಳಲ್ಲಿ ಸಹ ಇದೇ ಮಾದರಿಯ ಪ್ರಕರಣಗಳು ನಡೆದಿವೆ. ಕಸ್ಗಂಜ್ ಜಿಲ್ಲೆಯ ದಲಿತ ವರನೊಬ್ಬ ತಾನು ಮದುವೆಯಲ್ಲಿ ಕುದುರೆ ಸವಾರಿ ಮಾಡಬೇಕು, ಮೆರವಣಿಗೆಯು ಮೇಲ್ಜಾತಿಯವರು ವಾಸಿಸುವ ರಸ್ತೆಯ ಮೂಲಕ ಸಾಗಬೇಕು ಎಂದು ಅಲಹಾಬಾದ್ ಹೈಕೋರ್ಟ್ ಮತ್ತು ಜಿಲ್ಲಾಡಳಿತದ ಮೊರೆ ಹೋಗಬೇಕಾಯಿತು. ತೀವ್ರ ಪ್ರತಿರೋಧದ ನಡುವೆಯೂ, ಭಾರಿ ಪೊಲೀಸ್ ಭದ್ರತೆಯೊಂದಿಗೆ ಆ ಮೆರವಣಿಗೆ ನಡೆದಿತ್ತು.

          ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

          LEAVE A REPLY

          Please enter your comment!
          Please enter your name here

          - Advertisment -

          ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

          ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

          ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

          ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

          ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

          ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

          ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

          ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

          ‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

          ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

          ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

          ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

          ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

          ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

          ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

          ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

          ‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

          ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

          ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

          ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...