Homeದಲಿತ್ ಫೈಲ್ಸ್ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

- Advertisement -
- Advertisement -

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ ಮಾರ್ಪಟ್ಟಿತು. ಸೋಮವಾರ, ವಿಶಾಲ್ ತನ್ನ ವಿವಾಹ ಮೆರವಣಿಗೆಯನ್ನು (ವರ್ಘೋಡೊ) ಚಂದ್ರುಮಣ ಗ್ರಾಮದ ಬೀದಿಗಳಲ್ಲಿ ನಡೆಸಲು ಕುದುರೆ ಏರಿದಾಗ, ಸಂಭ್ರಮಾಚರಣೆಯು ಕತ್ತಿಗಳ ಆರ್ಭಟದಿಂದ ಹಠಾತ್ತನೆ ದುರಂತವಾಗಿ ಪರಿವರ್ತಿತವಾಯಿತು.

ಸ್ಥಳೀಯ ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರಬಲ ಸಮುದಾಯದ ಪುರುಷರ ಗುಂಪೊಂದು ಮೆರವಣಿಗೆಯನ್ನು ತಡೆದಿದೆ. ‘ಕೆಳಜಾತಿ’ಯ ವರನೊಬ್ಬ ತಮ್ಮ ವಿಶೇಷ ಸವಲತ್ತು ಎಂದು ಪರಿಗಣಿಸುವ ಪದ್ಧತಿಯನ್ನು ಅಳವಡಿಸಿಕೊಳ್ಳಲು ಧೈರ್ಯ ಮಾಡಿದ್ದರಿಂದ, ಪ್ರಬಲ ಜಾತಿ ಜನ ರನ್ನು ಕೆರಳಿಸಲಾಗಿದೆ ಎಂದು ಆರೋಪಿಸಲಾಗಿದೆ.

“ಈ ಗ್ರಾಮದಲ್ಲಿ ದಲಿತನಿಗೆ ಕುದುರೆ ಸವಾರಿ ಮಾಡಲು ಎಷ್ಟು ಧೈರ್ಯ” ಎಂದು ಪರಿಸ್ಥಿತಿ ಹಿಂಸಾಚಾರಕ್ಕೆ ತಿರುಗುವ ಮುನ್ನ ದಾಳಿಕೋರರು ಕೂಗಾಡಿದ್ದಾರೆ ಎಂದು ವರದಿಯಾಗಿದೆ. ಕತ್ತಿಗಳನ್ನು ಹಿಡಿದುಕೊಂಡು ಹಲ್ಲೆಯಲ್ಲಿ ತೊಡಗಿದ್ದರು, ವರನನ್ನು ಬೆದರಿಸಿದರು. ಮದುವೆಗೆ ಬಂದಿದ್ದವರ ಮೇಲೂ ದೈಹಿಕವಾಗಿ ಹಲ್ಲೆ ನಡೆಸಿದರು ಎಂದು ಆರೋಪಿಸಲಾಗಿದೆ. ಈ ಘಟನೆಯನ್ನು, ಕುದುರೆ ಮೇಲೆ ದಲಿತ ವ್ಯಕ್ತಿಯೊಬ್ಬ ಕಾಣಿಸಿಕೊಂಡ ದೃಶ್ಯವನ್ನು ಮದುವೆಯ ಆಚರಣೆಯಾಗಿ ಪರಿಗಣಿಸದೆ, ಶತಮಾನಗಳಷ್ಟು ಹಳೆಯದಾದ ಸಾಮಾಜಿಕ ಶ್ರೇಣಿಯನ್ನು ಧಿಕ್ಕರಿಸುವ ಕೃತ್ಯವೆಂದು ಪರಿಗಣಿಸಲಾಗಿದೆ.

ಈ ದಾಳಿಯು ಮೊದಲನೆಯದಲ್ಲ, ಗುಜರಾತ್‌ನಲ್ಲಿ ದಲಿತ ದೌರ್ಜನ್ಯದ ಪುನರಾವರ್ತಿತ ಘಟನೆಗಳಲ್ಲಿ ಒಂದಾಗಿದೆ. ಗಾಂಧಿನಗರದಿಂದ ಬನಸ್ಕಾಂತದವರೆಗೆ, ದಲಿತ ವರನೊಬ್ಬ ಕುದುರೆ ಸವಾರಿ ಮಾಡುವ ಸರಳ ಕೃತ್ಯವು ಪದೇ ಪದೇ ಹಿಂಸಾಚಾರಕ್ಕೆ ಕಾರಣವಾಗುತ್ತಿದೆ. ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ಹೊರತಾಗಿಯೂ, “ಕುದುರೆ ಸವಾರಿ ನಿಷೇಧ”ವು ಅಂಚಿನಲ್ಲಿರುವ ಸಮುದಾಯಗಳನ್ನು “ತಮ್ಮ ಸ್ಥಾನದಲ್ಲಿ” ಇರಿಸಿಕೊಳ್ಳಲು ಪ್ರಬಲ ಜಾತಿಗಳು ಬಳಸುವ ಸಾಮಾಜಿಕ ನಿಯಂತ್ರಣದ ಹಿಂಸಾತ್ಮಕ ಸಾಧನವಾಗಿ ಉಳಿದಿದೆ.

ಸ್ಥಳೀಯ ಅಧಿಕಾರಿಗಳು ಎಫ್‌ಐಆರ್ ದಾಖಲಿಸಿ ಸುವ್ಯವಸ್ಥೆ ಕಾಪಾಡಲು ಪೊಲೀಸರನ್ನು ನಿಯೋಜಿಸಿದ್ದರೂ, ವಿಶಾಲ್ ಮತ್ತು ಅವರ ಕುಟುಂಬದ ಮೇಲೆ ನಡೆದ ದಾಳಿಯು, ಕುಟುಂಬದ ಮಾನಸಿಕ ಗಾಯಗಳು ಆಳವಾಗಿ ಉಳಿಯುವಂತೆ ಮಾಡಿದೆ.

ಫೆಬ್ರವರಿ 2024 ರಲ್ಲಿ, ಗಾಂಧಿನಗರದ ಚಡಸಾನ ಗ್ರಾಮದಲ್ಲಿ ದಲಿತ ವರ ವಿಕಾಸ್ ಚಾವ್ಡಾ ಅವರನ್ನು ಕುದುರೆಯಿಂದ ಎಳೆದು ನಾಲ್ವರು ಕಪಾಳಮೋಕ್ಷ ಮಾಡಿದರು.

2020 ರಲ್ಲಿ, ಸೇನಾ ಜವಾನನೊಬ್ಬ ಕುದುರೆ ಸವಾರಿ ಮಾಡುತ್ತಿದ್ದ ಎಂಬ ಕಾರಣಕ್ಕಾಗಿ ಅವರ ವಿವಾಹ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...