Homeಮುಖಪುಟಗುಜರಾತ್‌: ಸವರ್ಣೀಯ ಜಾತಿಯ ಅಂಗಡಿಯ ಮಗನಿಗೆ "ಬೇಟಾ" ಎಂದು ಕರೆದಿದ್ದ ದಲಿತ ವ್ಯಕ್ತಿಯ ಹತ್ಯೆ

ಗುಜರಾತ್‌: ಸವರ್ಣೀಯ ಜಾತಿಯ ಅಂಗಡಿಯ ಮಗನಿಗೆ “ಬೇಟಾ” ಎಂದು ಕರೆದಿದ್ದ ದಲಿತ ವ್ಯಕ್ತಿಯ ಹತ್ಯೆ

- Advertisement -
- Advertisement -

ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ಸವರ್ಣೀಯ ಜಾತಿಯ ಅಂಗಡಿಯ ಪುತ್ರನಿಗೆ  ದಲಿತ ವ್ಯಕ್ತಿಯೋರ್ವ  ‘ಬೇಟಾ’ ಎಂದು ಕರೆದಿದ್ದಕ್ಕೆ ಹಲ್ಲೆ ಮಾಡಿ ಆರು ದಿನಗಳ ನಂತರ ಹತ್ಯೆ ಮಾಡಲಾಗಿದೆ.

ಅಮ್ರೇಲಿ ಜಿಲ್ಲೆಯ ಲಾಥಿ ತೆಹ್ಸಿಲ್‌ನ ಜರಾಖಿಯಾ ಗ್ರಾಮದ 20 ವರ್ಷದ ದಲಿತ ಯುವಕ ನೀಲೇಶ್ ರಾಥೋಡ್ ಗುರುವಾರ ಭಾವನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಮೇ 16ರಂದು ರಾಥೋಡ್ ಪ್ಯಾಕ್ ಮಾಡಿದ ತಿಂಡಿಗಳನ್ನು ಖರೀದಿಸಲು ಹತ್ತಿರದ ಅಂಗಡಿಗೆ ಹೋದಾಗ ಈ ಘಟನೆ ಸಂಭವಿಸಿದೆ ಎಂದು ಘಟನೆಯಲ್ಲಿ ಹಲ್ಲೆಗೊಳಗಾದ 28 ವರ್ಷದ ಲಾಲ್ಜಿ ಮನ್ಸುಖ್ ಚೌಹಾಣ್ ಸಲ್ಲಿಸಿದ ದೂರಿನಲ್ಲಿ ಹೇಳಲಾಗಿದೆ.

ಚೌಹಾಣ್ ಅವರು ರಾಥೋಡ್ ಅವರ ಮೇಲೆ ಹಲ್ಲೆ ನಡೆದ ನಂತರ ಪರಿಸ್ಥಿತಿಯನ್ನು ಪರಿಶೀಲಿಸಲು ಅಂಗಡಿಗೆ ಹೋದರು. ಅಲ್ಲಿ ಅಂಗಡಿಯವ ತನ್ನ ಮೇಲೆ ಕೋಲಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಚೌಹಾಣ್ ಮತ್ತು ರಾಥೋಡ್ ಇಬ್ಬರ ಮೇಲೂ ಹಲ್ಲೆ ನಡೆಸಿದ ವಿಜಯ್ ಆನಂದ್ ತೋಟಾ ಅವರ ಹೆಸರನ್ನೂ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಭಜಿಯಾ ಅಂಗಡಿಯ ಮಾಲೀಕ ಜಗ ದುಧಾತ್ ಮಧ್ಯಪ್ರವೇಶಿಸಿ ಅವರನ್ನು ರಕ್ಷಿಸಿದ್ದಾರೆ ಎಂದು ದೂರಿನಲ್ಲಿ ಸೇರಿಸಲಾಗಿದೆ.

ರಾಥೋಡ್‌ನ ಚಿಕ್ಕಪ್ಪ ಸುರೇಶ್ ವಾಲಾ ಅಂಗಡಿಗೆ ಹೋಗಿ ಈ ಕುರಿತು ಪ್ರಶ್ನಿಸಿದರು. ಆ ಹೊತ್ತಿಗೆ, ಅಂಗಡಿಯವನು ವಾಲಾ ಮತ್ತು ಇತರರ ಮೇಲೆ ಕೋಲುಗಳು ಮತ್ತು ಕುಡುಗೋಲುಗಳಿಂದ ಹಲ್ಲೆ ನಡೆಸಿ, ಜಾತಿ ನಿಂದನೆಗಳನ್ನು ಎಸೆದಿದ್ದ ಎಂದು ದೂರಿನಲ್ಲಿ ಹೇಳಲಾಗಿದೆ.

ರಾಥೋಡ್, ವಾಲಾ, ದುಧಾತ್ ಮತ್ತು ಇತರರು ಪರಾರಿಯಾಗಲು ಪ್ರಯತ್ನಿಸಿದರು ಎಂದು ದೂರುದಾರರು ಹೇಳಿದ್ದಾರೆ, ಆದರೆ ದಾಳಿಕೋರರು ಅವರನ್ನು ಬೆನ್ನಟ್ಟಿ ಹೊಡೆಯುತ್ತಲೇ ಇದ್ದರು, ಅವರ ಜಾತಿ ಸ್ಥಿತಿಯನ್ನು ಅಪಹಾಸ್ಯ ಮಾಡುತ್ತಾ ಮತ್ತು “ಅತಿಕ್ರಮಣ” ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಒಬ್ಬ ವೃದ್ಧ ವ್ಯಕ್ತಿ ಸ್ಥಳಕ್ಕೆ ಬಂದು ದಾಳಿಕೋರರನ್ನು ನಿಲ್ಲಿಸುವಂತೆ ಒತ್ತಾಯಿಸಿದ ನಂತರವೇ ಹಲ್ಲೆ ನಿಂತಿದೆ ಎಂದು ವರದಿಯಾಗಿದೆ. ಆರಂಭದಲ್ಲಿ, ಎಫ್‌ಐಆರ್‌ನಲ್ಲಿ ಚೋತಾ ಖೋಡಾ ಭರ್ವಾಡ್, ವಿಜಯ್ ಆನಂದ್ ತೋಟಾ, ಭವೇಶ್ ಮುಂಧ್ವಾ ಮತ್ತು ಜತಿನ್ ಮುಂಧ್ವಾ ಎಂಬ ನಾಲ್ವರು ಆರೋಪಿಗಳನ್ನು ಹೆಸರಿಸಲಾಗಿದೆ.

ಅವರ ಮೇಲೆ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 118(1) (ತೀವ್ರ ಗಾಯ), 115(2) (ಸ್ವಯಂಪ್ರೇರಣೆಯಿಂದ ಗಾಯ ಉಂಟುಮಾಡುವುದು), 189(2) ಮತ್ತು 189(4) (ಮಾರಕ ಆಯುಧಗಳನ್ನು ಹೊಂದುವುದು ಸೇರಿದಂತೆ ಕಾನೂನುಬಾಹಿರ ಸಭೆ), 190 (ಕಾನೂನುಬಾಹಿರ ಸಭೆಯ ಎಲ್ಲಾ ಸದಸ್ಯರ ಹೊಣೆಗಾರಿಕೆ), 191(2) ಮತ್ತು 191(3) (ಶಸ್ತ್ರಸಜ್ಜಿತವಾಗಿದ್ದಾಗ ಗಲಭೆ), 131 (ದಾಳಿ ಅಥವಾ ಕ್ರಿಮಿನಲ್ ಬಲಪ್ರಯೋಗ), 352 (ಶಾಂತಿ ಭಂಗವನ್ನು ಪ್ರಚೋದಿಸಲು ಉದ್ದೇಶಪೂರ್ವಕವಾಗಿ ಅವಮಾನ), 3(5) (ಕ್ರಿಮಿನಲ್ ಕೃತ್ಯದ ಜಂಟಿ ಹೊಣೆಗಾರಿಕೆ), 109 (ಕೊಲೆಗೆ ಪ್ರಯತ್ನ), ಮತ್ತು ನಂತರ, ಸೆಕ್ಷನ್ 103 (ಕೊಲೆ) ಸೇರಿದಂತೆ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅವರ ಮೇಲೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳು ಹಾಗೂ ಗುಜರಾತ್ ಪೊಲೀಸ್ ಕಾಯ್ದೆಯ ಸೆಕ್ಷನ್ 135 ರ ಅಡಿಯಲ್ಲಿಯೂ ಆರೋಪ ಹೊರಿಸಲಾಗಿದೆ.

ಈವರೆಗೆ, ಘಟನೆಯಲ್ಲಿ ಭಾಗಿಯಾಗಿರುವ ಹನ್ನೊಂದು ಜನರಲ್ಲಿ ಒಂಬತ್ತು ಜನರನ್ನು ಬಂಧಿಸಲಾಗಿದೆ.
ಬಂಧಿತರಲ್ಲಿ ಭರ್ವಾದ್, ತೋತಾ, ಭವೇಶ್ ಮುಂಧ್ವಾ, ಜತಿನ್ ಮುಂಧ್ವಾ, ಕಥದ್ ಅರ್ಜನ್ ಮುಂಧ್ವಾ, ದೇವ ಸಂಗ ಮುಂಧ್ವಾ, ದುದಾ ಬೋಘಾ ಮುಂಧ್ವಾ ಮತ್ತು ರವಿ ದುದಾ ಮುಂಧ್ವಾ ಸೇರಿದ್ದಾರೆ, ಉಳಿದ ಇಬ್ಬರಿಗಾಗಿ ಪೊಲೀಸ್ ತಂಡಗಳು ಹುಡುಕಾಟ ಮುಂದುವರಿಸಿವೆ.

ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಶುಕ್ರವಾರ ಮೃತ ನೀಲೇಶ್ ರಾಥೋಡ್ ಅವರ ಕುಟುಂಬ ಸದಸ್ಯರೊಂದಿಗೆ ಪ್ರತಿಭಟನೆಯಲ್ಲಿ ಕುಳಿತು ನ್ಯಾಯಕ್ಕಾಗಿ ಒತ್ತಾಯಿಸಿದರು.

ವಡ್ಗಾಮ್ ವಿಧಾನಸಭಾ ಕ್ಷೇತ್ರದ ಶಾಸಕರು ಈ ಘಟನೆಯನ್ನು ಖಂಡಿಸಿ, “ಇಂದಿಗೂ ಗುಜರಾತ್‌ನಲ್ಲಿ ಜಾತಿವಾದವು ಆಳವಾಗಿ ಬೇರೂರಿದೆ ಎಂದು ಇದು ತೋರಿಸುತ್ತದೆ. ದಲಿತರು ಭಯದಲ್ಲಿ ಬದುಕುತ್ತಿದ್ದಾರೆ ಮತ್ತು ತಮ್ಮ ಸ್ವಂತ ನೆಲದಲ್ಲಿ ಅಸುರಕ್ಷಿತರಾಗಿದ್ದಾರೆ” ಎಂದು ಹೇಳಿದರು.

ಅವರು ಉನ್ನತ ನಾಯಕರ ಮೌನವನ್ನು ಟೀಕಿಸುತ್ತಾ, “ಸ್ವತಃ ಗುಜರಾತ್ ಮೂಲದ ಪ್ರಧಾನಿ ಕೂಡ ಸಂತಾಪ ಸೂಚಿಸಿಲ್ಲ. ಏತನ್ಮಧ್ಯೆ, ರಾಜ್ಯದ ಸಾಮಾಜಿಕ ನ್ಯಾಯ ಸಚಿವರು ಮತ್ತು ಮುಖ್ಯಮಂತ್ರಿಗಳು ಒಮ್ಮೆಯೂ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಿ ಅವರ ಕಣ್ಣೀರು ಒರೆಸಿಲ್ಲ ಅಥವಾ ಬೆಂಬಲ ನೀಡಿಲ್ಲ” ಎಂದು ಹೇಳಿದರು. ಸರ್ಕಾರದ ವರ್ತನೆಯೂ ಜಾತಿವಾದಿಯಾಗಿ ಕಾಣುತ್ತದೆ. ದಲಿತರನ್ನು ಬಡಿಯಲಾಗುತ್ತದೆ, ತಾರತಮ್ಯ ಮಾಡಲಾಗುತ್ತದೆ, ಸಾಮಾನ್ಯ ಬಾವಿಗಳಿಂದ ನೀರು ತರುವುದನ್ನು ನಿರಾಕರಿಸಲಾಗುತ್ತದೆ, ದೇವಾಲಯಗಳಿಗೆ ಪ್ರವೇಶಿಸುವುದನ್ನು ತಡೆಯಲಾಗುತ್ತದೆ, ಅತ್ಯಾಚಾರ ಮಾಡಲಾಗುತ್ತದೆ ಮತ್ತು ‘ಚರಂಡಿಗಳನ್ನು ಸ್ವಚ್ಛಗೊಳಿಸುವ ಕೆಲಸಕ್ಕೆ ನೇಮಿಸಿ ಸಾಯಿಸಲಾಗುತ್ತಿದೆ ಮತ್ತು ಈಗ, ಒಬ್ಬ ದಲಿತರನ್ನು ಕ್ರೂರವಾಗಿ ಥಳಿಸಲಾಗಿದೆ, ಅದು ಒಬ್ಬ ದಲಿತ ವ್ಯಕ್ತಿಯ ಸಾವಿಗೆ ಕಾರಣವಾಗಿದೆ. ಆದರೆ ಸರ್ಕಾರ ಮೌನವಾಗಿದೆ. ಇದು ಅತ್ಯಂತ ದುರದೃಷ್ಟಕರ ಎಂದು ಅವರು ಹೇಳಿದರು.

ಕಾಂಗ್ರೆಸ್ ಶಾಸಕ ಮೇವಾನಿಯವರು ಗಾಯಗೊಂಡವರು ಸೇರಿದಂತೆ ಸಂತ್ರಸ್ತ ಕುಟುಂಬಗಳಿಗೆ ಪರಿಹಾರವಾಗಿ ಸರ್ಕಾರಿ ಉದ್ಯೋಗ ಅಥವಾ ಭೂಮಿಯನ್ನು ನೀಡಲು ಒತ್ತಾಯಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತೆ ಅಮಿತಾ ಅಂಬೇಡ್ಕರ್ ಈ ಘಟನೆಗೆ ಪ್ರತಿಕ್ರಿಯಿಸುತ್ತಾ, “ಜಾತೀಯತೆಯು ಮತ್ತೊಂದು ದುಃಸ್ವಪ್ನ. ದಲಿತರಾದ ನಿಮ್ಮನ್ನು ಈ ಗೂಂಡಾಗಳು ಬಡಿಯುತ್ತಲೇ ಇರುತ್ತಾರೆ?” ಎಂದಿದ್ದಾರೆ.

ಮಾನಸ್ ಏಕ್ತಾ ಫೌಂಡೇಶನ್‌ನ ರಾಷ್ಟ್ರೀಯ ಉಪಾಧ್ಯಕ್ಷೆ ಗಿರಿಜಾ ಶಂಕರ್ ಪಾಲ್, “ಯಾರದರೂ ತನ್ನ ಮಗನ ವಯಸ್ಸಿನ ಹುಡುಗನನ್ನು ‘ಮಗ’ ಎಂದು ಕರೆದರೆ ಅದಕ್ಕೆ ಸಾವು ರೂಪದಲ್ಲಿ ಶಿಕ್ಷೆಯೇ?” ಎಂದು ಪ್ರಶ್ನಿಸಿದರು.

“ಇದು ಹೊಸ ಭಾರತವೇ? ಜಾತಿಯ ಗೋಡೆಗಳು ತುಂಬಾ ಎತ್ತರವಾಗಿದ್ದು, ಒಂದೇ ಒಂದು ಮಾತು ಒಬ್ಬರ ಜೀವವನ್ನು ಕಳೆದುಕೊಳ್ಳುವುದಕ್ಕೆ ಕಾರಣವಾಗುತ್ತದೆಯೇ?” ಎಂದು ಹೇಳಿದರು.

ಅಧಿಕಾರಿಗಳ ಮೌನವನ್ನು ಟೀಕಿಸಿದ ಪಾಲ್, “ಗುಜರಾತ್ ಸರ್ಕಾರ ಮೌನವಾಗಿದೆ. ಕಾನೂನು ಪಾಲಕರು ಮೌನವಾಗಿದ್ದಾರೆ. ಇದೇ ಭೂಮಿಯಿಂದ ಬಂದಿರುವ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ – ಅವರು ಏಕೆ ಉತ್ತರಿಸುತ್ತಿಲ್ಲ?” ಎಂದು ಎಚ್ಚರಿಸಿದರು.

“ಈಗ ಎದ್ದು ನಿಲ್ಲುವ, ಮಾತನಾಡುವ ಮತ್ತು ಅನ್ಯಾಯದ ವಿರುದ್ಧ ಎದ್ದು ಪ್ರತಿಭಟಿಸುವ ಪ್ರತಿಯೊಂದು ಧ್ವನಿಯೊಂದಿಗೆ ನಾವು ನಿಲ್ಲುವ ಸಮಯ” ಎಂದು ಅವರು ಹೇಳಿದರು.

ಹೊಲದಲ್ಲಿ ದನ ಮೇಯಿಸುವುದನ್ನು ಆಕ್ಷೇಪಿಸಿದ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...