Homeದಲಿತ್ ಫೈಲ್ಸ್ಗುಜರಾತ್: ದಲಿತ ಯುವಕನಿಗೆ ನಡುರಸ್ತೆಯಲ್ಲಿ ಮಾರಣಾಂತಿಕ ಥಳಿತ- ಐವರು ಸವರ್ಣೀಯರ ಬಂಧನ

ಗುಜರಾತ್: ದಲಿತ ಯುವಕನಿಗೆ ನಡುರಸ್ತೆಯಲ್ಲಿ ಮಾರಣಾಂತಿಕ ಥಳಿತ- ಐವರು ಸವರ್ಣೀಯರ ಬಂಧನ

- Advertisement -
- Advertisement -

ಹುಡುಗಿಯೊಂದಿಗೆ ಮಾತನಾಡುತ್ತಿದ್ದ ದಲಿತ ಯುವಕನಿಗೆ ನಡುರಸ್ತೆಯಲ್ಲಿ 7 ಜನ ಸವರ್ಣೀಯರು ಬೆಲ್ಟ್‌ಗಳಿಂದ ಮತ್ತು ಬಡಿಗೆಗಳಿಂದ ಮಾರಣಾಂತಿಕವಾಗಿ ಥಳಿಸಿರುವ ಅಮಾನುಷ ಘಟನೆ ಗುಜರಾತ್‌ನ ವಡೋದರದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಥಳಿಸುವ ವಿಡಿಯೋ ವೈರಲ್ ಆಗಿದ್ದು, ಅದರ ಆಧಾರದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಭಾಯ್ಲಿ ಗ್ರಾಮದ ನಿವಾಸಿ ಅಲ್ಪೇಶ್ ಪರ್ಮಾರ್ ಎಂಬ ದಲಿತ ಯುವಕ ವಡೋದರದ ಸೇವಾಸಿ ಕಾಲುವೆ ರಸ್ತೆಯಲ್ಲಿ ಹುಡುಗಿಯೊಂದಿಗೆ ಮಾತನಾಡುತ್ತಿದ್ದಾಗ ಏಳು ಜನರು ವಿನಾಕಾರಣ ಹಲ್ಲೆ ನಡೆಸಿದ್ದಾರೆ. ಜಾತಿನಿಂದನೆ ಮಾಡಿ, ಬೆಲ್ಟ್‌ಗಳಿಂದ ಮನಬಂದಂತೆ ತಳಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅದೇ ಗ್ರಾಮದ ಸವರ್ಣೀಯ ಹುಡುಗನೊಬ್ಬನ ಇನ್ಸ್ಟಗ್ರಾಂ ಖಾತೆಯಲ್ಲಿ ನಾನು ಕಮೆಂಟ್ ಮಾಡಿದ ಏಕೈಕ ಕಾರಣಕ್ಕಾಗಿ ನನ್ನ ಮೇಲೆ ಹಲ್ಲೆ ನಡೆಸಿದರು. ಅಲ್ಲದೆ ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದಲ್ಲದೆ ಪೊಲೀಸ್ ದೂರು ನೀಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಆದರೆ ಆ ವಿಡಿಯೋ ಎಲ್ಲೆಡೆ ವೈರಲ್ ಆದ ನಂತರ ನಮ್ಮ ಮನೆಯವರು ದೂರು ನೀಡಲು ಧೈರ್ಯ ತುಂಬಿದರು ಎಂದು ಸಂತ್ರಸ್ತ ಯುವಕ ಅಲ್ಪೇಶ್ ಪರ್ಮಾರ್ ತಿಳಿಸಿದ್ದಾರೆ.

ತನ್ನ ಮೇಲೆ ಹಲ್ಲೆ ನಡೆಸಿದ ವಿಡಿಯೋವನ್ನು “ನಮ್ಮ ಲೈವ್‌ನಲ್ಲಿ ನೆಗೆಟಿವ್ ಕಮೆಂಟ್ ಮಾಡುವವರಿಗೆ ಇದೇ ಗತಿ” ಎಂಬ ಎಚ್ಚರಿಕೆಯೊಂದಿಗೆ ಆರೋಪಿಗಳು ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಕೊನೆಯಲ್ಲಿ ‘ಜೈ ರಜಪೂತಾನ’ ಎಂದು ತಮ್ಮ ಜಾತಿಸೂಚಕವನ್ನು ಉಲ್ಲೇಖಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾವು ಏಳು ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸಿದ್ದೇವೆ. ಅವರಲ್ಲಿ ಇಬ್ಬರು ರಜಪೂತರು ಮತ್ತು ಇಬ್ಬರು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದವರು. ದಾಳಿಯ ಹಿಂದಿನ ನಿಖರವಾದ ಕಾರಣವನ್ನು ತನಿಖೆ ಮಾಡುತ್ತಿದ್ದೇವೆ. ಆರೋಪಿಗಳ ವಿರುದ್ಧ ಹಲವು IPC ಸೆಕ್ಷನ್‌ಗಳ ಅಡಿಯಲ್ಲಿ ಗಲಭೆ, ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಸಕ ಜಿಗ್ನೇಶ್ ಮೇವಾನಿ ಖಂಡನೆ

ದಲಿತ ಯುವಕನ ಮೇಲಿನ ಅಮಾನುಷ ಹಲ್ಲೆಯನ್ನು ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಖಂಡಿಸಿದ್ದಾರೆ. “ಉನಾ ಘಟನೆಯ ಸಮಯದಲ್ಲಿ, “ನೀವು ಕೊಲ್ಲಲು ಬಯಸಿದರೆ, ನನ್ನನ್ನು ಕೊಲ್ಲಿ, ನನ್ನ ದಲಿತ ಸಹೋದರರನ್ನಲ್ಲ” ಎಂದು ಮೋದಿಜಿ ಹೇಳಿದ್ದರು. ಆದರೆ ಅಂತಹ ಘಟನೆಗಳು ಮತ್ತೆ ಸಂಭವಿಸದಂತೆ ತಡೆಯಲು ಸರ್ಕಾರ ಮುಂದಾಗಲಿಲ್ಲ. ಅದರ ಫಲಿತಾಂಶವಾಗಿ ನಿನ್ನೆ ವಡೋದರಾ ಜಿಲ್ಲೆಯಲ್ಲಿ ದಲಿತ ಯುವಕನನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಪ್ರಯತ್ನ ನಡೆದಿದೆ. ಗುಜರಾತಿನಲ್ಲಿ ಗೂಂಡಾರಾಜ್ ಆಳ್ವಿಕೆ ನಡೆಯುತ್ತಿದೆ” ಎಂದು ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಶವಸಂಸ್ಕಾರ ತಡೆದ ಸವರ್ಣೀಯರು – ರಸ್ತೆಯಲ್ಲಿ ಶವ ಇಟ್ಟು 5 ಗಂಟೆ ಕಾದ ದಲಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಜಾತಿ ರೋಗಿಷ್ಟ ನಾಯಿಗಳಿಗೆ, ಆ ಪಡಪಾಯಿಗೆ ಹಲ್ಲೆ ಮಾಡಿದ ರೀತಿಯಲ್ಲೇ ಸಾರ್ವಜನಿಕವಾಗಿ ದಲಿತರು ಒಗ್ಗೂಡಿ ಮಾಡಬೇಕು,ಆಗಲೇ ಈ ರೋಗಪೀಡಿತ ಜಾತಿವಾದಿ ನಾಯಿಗಳಿಗೆ ಅರಿವಾಗೋದು.

  2. RSS AND BHAJARANGADAL ORGANIZATIONS WERE ONLY A SPECTATOR THEY SHOUT WHEN EVER THEY FACE TROUBLE FROM OTHER RELIGION THEY CAME TO S.C. PEOPLE FOR PROTEST THE INCIDENT S.C.S ARE HINDUS WHY HINDUS ARE THEMSELVES BEATEN TO DEATH IT IS THE BIRTH PLACE OF MAHATMA GANDHIS&SARDAR VALLABHBHAI PATEL AND ALSO PRESENT PRIME MINISTER OF THIS COUNTRY,ARE THEY NOT ABLE TO PROTECT THE LIFE OF DALITHS BY PUTTING PRESSURE ON LAW AND ORDER PROTECTORS IF NOT WHAT IS USE OF KEEPING SUCH AUTHORITY IN THE STATE LIKE GUJARAT

LEAVE A REPLY

Please enter your comment!
Please enter your name here

- Advertisment -

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...