Homeದಲಿತ್ ಫೈಲ್ಸ್ಗುಜರಾತ್: ದಲಿತ ಯುವಕನಿಗೆ ನಡುರಸ್ತೆಯಲ್ಲಿ ಮಾರಣಾಂತಿಕ ಥಳಿತ- ಐವರು ಸವರ್ಣೀಯರ ಬಂಧನ

ಗುಜರಾತ್: ದಲಿತ ಯುವಕನಿಗೆ ನಡುರಸ್ತೆಯಲ್ಲಿ ಮಾರಣಾಂತಿಕ ಥಳಿತ- ಐವರು ಸವರ್ಣೀಯರ ಬಂಧನ

- Advertisement -
- Advertisement -

ಹುಡುಗಿಯೊಂದಿಗೆ ಮಾತನಾಡುತ್ತಿದ್ದ ದಲಿತ ಯುವಕನಿಗೆ ನಡುರಸ್ತೆಯಲ್ಲಿ 7 ಜನ ಸವರ್ಣೀಯರು ಬೆಲ್ಟ್‌ಗಳಿಂದ ಮತ್ತು ಬಡಿಗೆಗಳಿಂದ ಮಾರಣಾಂತಿಕವಾಗಿ ಥಳಿಸಿರುವ ಅಮಾನುಷ ಘಟನೆ ಗುಜರಾತ್‌ನ ವಡೋದರದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಥಳಿಸುವ ವಿಡಿಯೋ ವೈರಲ್ ಆಗಿದ್ದು, ಅದರ ಆಧಾರದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಭಾಯ್ಲಿ ಗ್ರಾಮದ ನಿವಾಸಿ ಅಲ್ಪೇಶ್ ಪರ್ಮಾರ್ ಎಂಬ ದಲಿತ ಯುವಕ ವಡೋದರದ ಸೇವಾಸಿ ಕಾಲುವೆ ರಸ್ತೆಯಲ್ಲಿ ಹುಡುಗಿಯೊಂದಿಗೆ ಮಾತನಾಡುತ್ತಿದ್ದಾಗ ಏಳು ಜನರು ವಿನಾಕಾರಣ ಹಲ್ಲೆ ನಡೆಸಿದ್ದಾರೆ. ಜಾತಿನಿಂದನೆ ಮಾಡಿ, ಬೆಲ್ಟ್‌ಗಳಿಂದ ಮನಬಂದಂತೆ ತಳಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅದೇ ಗ್ರಾಮದ ಸವರ್ಣೀಯ ಹುಡುಗನೊಬ್ಬನ ಇನ್ಸ್ಟಗ್ರಾಂ ಖಾತೆಯಲ್ಲಿ ನಾನು ಕಮೆಂಟ್ ಮಾಡಿದ ಏಕೈಕ ಕಾರಣಕ್ಕಾಗಿ ನನ್ನ ಮೇಲೆ ಹಲ್ಲೆ ನಡೆಸಿದರು. ಅಲ್ಲದೆ ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದಲ್ಲದೆ ಪೊಲೀಸ್ ದೂರು ನೀಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಆದರೆ ಆ ವಿಡಿಯೋ ಎಲ್ಲೆಡೆ ವೈರಲ್ ಆದ ನಂತರ ನಮ್ಮ ಮನೆಯವರು ದೂರು ನೀಡಲು ಧೈರ್ಯ ತುಂಬಿದರು ಎಂದು ಸಂತ್ರಸ್ತ ಯುವಕ ಅಲ್ಪೇಶ್ ಪರ್ಮಾರ್ ತಿಳಿಸಿದ್ದಾರೆ.

ತನ್ನ ಮೇಲೆ ಹಲ್ಲೆ ನಡೆಸಿದ ವಿಡಿಯೋವನ್ನು “ನಮ್ಮ ಲೈವ್‌ನಲ್ಲಿ ನೆಗೆಟಿವ್ ಕಮೆಂಟ್ ಮಾಡುವವರಿಗೆ ಇದೇ ಗತಿ” ಎಂಬ ಎಚ್ಚರಿಕೆಯೊಂದಿಗೆ ಆರೋಪಿಗಳು ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಕೊನೆಯಲ್ಲಿ ‘ಜೈ ರಜಪೂತಾನ’ ಎಂದು ತಮ್ಮ ಜಾತಿಸೂಚಕವನ್ನು ಉಲ್ಲೇಖಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾವು ಏಳು ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸಿದ್ದೇವೆ. ಅವರಲ್ಲಿ ಇಬ್ಬರು ರಜಪೂತರು ಮತ್ತು ಇಬ್ಬರು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದವರು. ದಾಳಿಯ ಹಿಂದಿನ ನಿಖರವಾದ ಕಾರಣವನ್ನು ತನಿಖೆ ಮಾಡುತ್ತಿದ್ದೇವೆ. ಆರೋಪಿಗಳ ವಿರುದ್ಧ ಹಲವು IPC ಸೆಕ್ಷನ್‌ಗಳ ಅಡಿಯಲ್ಲಿ ಗಲಭೆ, ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಸಕ ಜಿಗ್ನೇಶ್ ಮೇವಾನಿ ಖಂಡನೆ

ದಲಿತ ಯುವಕನ ಮೇಲಿನ ಅಮಾನುಷ ಹಲ್ಲೆಯನ್ನು ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಖಂಡಿಸಿದ್ದಾರೆ. “ಉನಾ ಘಟನೆಯ ಸಮಯದಲ್ಲಿ, “ನೀವು ಕೊಲ್ಲಲು ಬಯಸಿದರೆ, ನನ್ನನ್ನು ಕೊಲ್ಲಿ, ನನ್ನ ದಲಿತ ಸಹೋದರರನ್ನಲ್ಲ” ಎಂದು ಮೋದಿಜಿ ಹೇಳಿದ್ದರು. ಆದರೆ ಅಂತಹ ಘಟನೆಗಳು ಮತ್ತೆ ಸಂಭವಿಸದಂತೆ ತಡೆಯಲು ಸರ್ಕಾರ ಮುಂದಾಗಲಿಲ್ಲ. ಅದರ ಫಲಿತಾಂಶವಾಗಿ ನಿನ್ನೆ ವಡೋದರಾ ಜಿಲ್ಲೆಯಲ್ಲಿ ದಲಿತ ಯುವಕನನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಪ್ರಯತ್ನ ನಡೆದಿದೆ. ಗುಜರಾತಿನಲ್ಲಿ ಗೂಂಡಾರಾಜ್ ಆಳ್ವಿಕೆ ನಡೆಯುತ್ತಿದೆ” ಎಂದು ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಶವಸಂಸ್ಕಾರ ತಡೆದ ಸವರ್ಣೀಯರು – ರಸ್ತೆಯಲ್ಲಿ ಶವ ಇಟ್ಟು 5 ಗಂಟೆ ಕಾದ ದಲಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಜಾತಿ ರೋಗಿಷ್ಟ ನಾಯಿಗಳಿಗೆ, ಆ ಪಡಪಾಯಿಗೆ ಹಲ್ಲೆ ಮಾಡಿದ ರೀತಿಯಲ್ಲೇ ಸಾರ್ವಜನಿಕವಾಗಿ ದಲಿತರು ಒಗ್ಗೂಡಿ ಮಾಡಬೇಕು,ಆಗಲೇ ಈ ರೋಗಪೀಡಿತ ಜಾತಿವಾದಿ ನಾಯಿಗಳಿಗೆ ಅರಿವಾಗೋದು.

  2. RSS AND BHAJARANGADAL ORGANIZATIONS WERE ONLY A SPECTATOR THEY SHOUT WHEN EVER THEY FACE TROUBLE FROM OTHER RELIGION THEY CAME TO S.C. PEOPLE FOR PROTEST THE INCIDENT S.C.S ARE HINDUS WHY HINDUS ARE THEMSELVES BEATEN TO DEATH IT IS THE BIRTH PLACE OF MAHATMA GANDHIS&SARDAR VALLABHBHAI PATEL AND ALSO PRESENT PRIME MINISTER OF THIS COUNTRY,ARE THEY NOT ABLE TO PROTECT THE LIFE OF DALITHS BY PUTTING PRESSURE ON LAW AND ORDER PROTECTORS IF NOT WHAT IS USE OF KEEPING SUCH AUTHORITY IN THE STATE LIKE GUJARAT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....