Homeದಲಿತ್ ಫೈಲ್ಸ್ಗುಜರಾತ್: ದಲಿತ ಯುವಕನಿಗೆ ನಡುರಸ್ತೆಯಲ್ಲಿ ಮಾರಣಾಂತಿಕ ಥಳಿತ- ಐವರು ಸವರ್ಣೀಯರ ಬಂಧನ

ಗುಜರಾತ್: ದಲಿತ ಯುವಕನಿಗೆ ನಡುರಸ್ತೆಯಲ್ಲಿ ಮಾರಣಾಂತಿಕ ಥಳಿತ- ಐವರು ಸವರ್ಣೀಯರ ಬಂಧನ

- Advertisement -
- Advertisement -

ಹುಡುಗಿಯೊಂದಿಗೆ ಮಾತನಾಡುತ್ತಿದ್ದ ದಲಿತ ಯುವಕನಿಗೆ ನಡುರಸ್ತೆಯಲ್ಲಿ 7 ಜನ ಸವರ್ಣೀಯರು ಬೆಲ್ಟ್‌ಗಳಿಂದ ಮತ್ತು ಬಡಿಗೆಗಳಿಂದ ಮಾರಣಾಂತಿಕವಾಗಿ ಥಳಿಸಿರುವ ಅಮಾನುಷ ಘಟನೆ ಗುಜರಾತ್‌ನ ವಡೋದರದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಥಳಿಸುವ ವಿಡಿಯೋ ವೈರಲ್ ಆಗಿದ್ದು, ಅದರ ಆಧಾರದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಭಾಯ್ಲಿ ಗ್ರಾಮದ ನಿವಾಸಿ ಅಲ್ಪೇಶ್ ಪರ್ಮಾರ್ ಎಂಬ ದಲಿತ ಯುವಕ ವಡೋದರದ ಸೇವಾಸಿ ಕಾಲುವೆ ರಸ್ತೆಯಲ್ಲಿ ಹುಡುಗಿಯೊಂದಿಗೆ ಮಾತನಾಡುತ್ತಿದ್ದಾಗ ಏಳು ಜನರು ವಿನಾಕಾರಣ ಹಲ್ಲೆ ನಡೆಸಿದ್ದಾರೆ. ಜಾತಿನಿಂದನೆ ಮಾಡಿ, ಬೆಲ್ಟ್‌ಗಳಿಂದ ಮನಬಂದಂತೆ ತಳಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅದೇ ಗ್ರಾಮದ ಸವರ್ಣೀಯ ಹುಡುಗನೊಬ್ಬನ ಇನ್ಸ್ಟಗ್ರಾಂ ಖಾತೆಯಲ್ಲಿ ನಾನು ಕಮೆಂಟ್ ಮಾಡಿದ ಏಕೈಕ ಕಾರಣಕ್ಕಾಗಿ ನನ್ನ ಮೇಲೆ ಹಲ್ಲೆ ನಡೆಸಿದರು. ಅಲ್ಲದೆ ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದಲ್ಲದೆ ಪೊಲೀಸ್ ದೂರು ನೀಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಆದರೆ ಆ ವಿಡಿಯೋ ಎಲ್ಲೆಡೆ ವೈರಲ್ ಆದ ನಂತರ ನಮ್ಮ ಮನೆಯವರು ದೂರು ನೀಡಲು ಧೈರ್ಯ ತುಂಬಿದರು ಎಂದು ಸಂತ್ರಸ್ತ ಯುವಕ ಅಲ್ಪೇಶ್ ಪರ್ಮಾರ್ ತಿಳಿಸಿದ್ದಾರೆ.

ತನ್ನ ಮೇಲೆ ಹಲ್ಲೆ ನಡೆಸಿದ ವಿಡಿಯೋವನ್ನು “ನಮ್ಮ ಲೈವ್‌ನಲ್ಲಿ ನೆಗೆಟಿವ್ ಕಮೆಂಟ್ ಮಾಡುವವರಿಗೆ ಇದೇ ಗತಿ” ಎಂಬ ಎಚ್ಚರಿಕೆಯೊಂದಿಗೆ ಆರೋಪಿಗಳು ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಕೊನೆಯಲ್ಲಿ ‘ಜೈ ರಜಪೂತಾನ’ ಎಂದು ತಮ್ಮ ಜಾತಿಸೂಚಕವನ್ನು ಉಲ್ಲೇಖಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾವು ಏಳು ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸಿದ್ದೇವೆ. ಅವರಲ್ಲಿ ಇಬ್ಬರು ರಜಪೂತರು ಮತ್ತು ಇಬ್ಬರು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದವರು. ದಾಳಿಯ ಹಿಂದಿನ ನಿಖರವಾದ ಕಾರಣವನ್ನು ತನಿಖೆ ಮಾಡುತ್ತಿದ್ದೇವೆ. ಆರೋಪಿಗಳ ವಿರುದ್ಧ ಹಲವು IPC ಸೆಕ್ಷನ್‌ಗಳ ಅಡಿಯಲ್ಲಿ ಗಲಭೆ, ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಸಕ ಜಿಗ್ನೇಶ್ ಮೇವಾನಿ ಖಂಡನೆ

ದಲಿತ ಯುವಕನ ಮೇಲಿನ ಅಮಾನುಷ ಹಲ್ಲೆಯನ್ನು ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಖಂಡಿಸಿದ್ದಾರೆ. “ಉನಾ ಘಟನೆಯ ಸಮಯದಲ್ಲಿ, “ನೀವು ಕೊಲ್ಲಲು ಬಯಸಿದರೆ, ನನ್ನನ್ನು ಕೊಲ್ಲಿ, ನನ್ನ ದಲಿತ ಸಹೋದರರನ್ನಲ್ಲ” ಎಂದು ಮೋದಿಜಿ ಹೇಳಿದ್ದರು. ಆದರೆ ಅಂತಹ ಘಟನೆಗಳು ಮತ್ತೆ ಸಂಭವಿಸದಂತೆ ತಡೆಯಲು ಸರ್ಕಾರ ಮುಂದಾಗಲಿಲ್ಲ. ಅದರ ಫಲಿತಾಂಶವಾಗಿ ನಿನ್ನೆ ವಡೋದರಾ ಜಿಲ್ಲೆಯಲ್ಲಿ ದಲಿತ ಯುವಕನನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಪ್ರಯತ್ನ ನಡೆದಿದೆ. ಗುಜರಾತಿನಲ್ಲಿ ಗೂಂಡಾರಾಜ್ ಆಳ್ವಿಕೆ ನಡೆಯುತ್ತಿದೆ” ಎಂದು ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಶವಸಂಸ್ಕಾರ ತಡೆದ ಸವರ್ಣೀಯರು – ರಸ್ತೆಯಲ್ಲಿ ಶವ ಇಟ್ಟು 5 ಗಂಟೆ ಕಾದ ದಲಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಜಾತಿ ರೋಗಿಷ್ಟ ನಾಯಿಗಳಿಗೆ, ಆ ಪಡಪಾಯಿಗೆ ಹಲ್ಲೆ ಮಾಡಿದ ರೀತಿಯಲ್ಲೇ ಸಾರ್ವಜನಿಕವಾಗಿ ದಲಿತರು ಒಗ್ಗೂಡಿ ಮಾಡಬೇಕು,ಆಗಲೇ ಈ ರೋಗಪೀಡಿತ ಜಾತಿವಾದಿ ನಾಯಿಗಳಿಗೆ ಅರಿವಾಗೋದು.

  2. RSS AND BHAJARANGADAL ORGANIZATIONS WERE ONLY A SPECTATOR THEY SHOUT WHEN EVER THEY FACE TROUBLE FROM OTHER RELIGION THEY CAME TO S.C. PEOPLE FOR PROTEST THE INCIDENT S.C.S ARE HINDUS WHY HINDUS ARE THEMSELVES BEATEN TO DEATH IT IS THE BIRTH PLACE OF MAHATMA GANDHIS&SARDAR VALLABHBHAI PATEL AND ALSO PRESENT PRIME MINISTER OF THIS COUNTRY,ARE THEY NOT ABLE TO PROTECT THE LIFE OF DALITHS BY PUTTING PRESSURE ON LAW AND ORDER PROTECTORS IF NOT WHAT IS USE OF KEEPING SUCH AUTHORITY IN THE STATE LIKE GUJARAT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...