Homeದಲಿತ್ ಫೈಲ್ಸ್ಗುಜರಾತ್: ದಲಿತ ಯುವಕನಿಗೆ ನಡುರಸ್ತೆಯಲ್ಲಿ ಮಾರಣಾಂತಿಕ ಥಳಿತ- ಐವರು ಸವರ್ಣೀಯರ ಬಂಧನ

ಗುಜರಾತ್: ದಲಿತ ಯುವಕನಿಗೆ ನಡುರಸ್ತೆಯಲ್ಲಿ ಮಾರಣಾಂತಿಕ ಥಳಿತ- ಐವರು ಸವರ್ಣೀಯರ ಬಂಧನ

- Advertisement -
- Advertisement -

ಹುಡುಗಿಯೊಂದಿಗೆ ಮಾತನಾಡುತ್ತಿದ್ದ ದಲಿತ ಯುವಕನಿಗೆ ನಡುರಸ್ತೆಯಲ್ಲಿ 7 ಜನ ಸವರ್ಣೀಯರು ಬೆಲ್ಟ್‌ಗಳಿಂದ ಮತ್ತು ಬಡಿಗೆಗಳಿಂದ ಮಾರಣಾಂತಿಕವಾಗಿ ಥಳಿಸಿರುವ ಅಮಾನುಷ ಘಟನೆ ಗುಜರಾತ್‌ನ ವಡೋದರದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಥಳಿಸುವ ವಿಡಿಯೋ ವೈರಲ್ ಆಗಿದ್ದು, ಅದರ ಆಧಾರದಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ.

ಭಾಯ್ಲಿ ಗ್ರಾಮದ ನಿವಾಸಿ ಅಲ್ಪೇಶ್ ಪರ್ಮಾರ್ ಎಂಬ ದಲಿತ ಯುವಕ ವಡೋದರದ ಸೇವಾಸಿ ಕಾಲುವೆ ರಸ್ತೆಯಲ್ಲಿ ಹುಡುಗಿಯೊಂದಿಗೆ ಮಾತನಾಡುತ್ತಿದ್ದಾಗ ಏಳು ಜನರು ವಿನಾಕಾರಣ ಹಲ್ಲೆ ನಡೆಸಿದ್ದಾರೆ. ಜಾತಿನಿಂದನೆ ಮಾಡಿ, ಬೆಲ್ಟ್‌ಗಳಿಂದ ಮನಬಂದಂತೆ ತಳಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅದೇ ಗ್ರಾಮದ ಸವರ್ಣೀಯ ಹುಡುಗನೊಬ್ಬನ ಇನ್ಸ್ಟಗ್ರಾಂ ಖಾತೆಯಲ್ಲಿ ನಾನು ಕಮೆಂಟ್ ಮಾಡಿದ ಏಕೈಕ ಕಾರಣಕ್ಕಾಗಿ ನನ್ನ ಮೇಲೆ ಹಲ್ಲೆ ನಡೆಸಿದರು. ಅಲ್ಲದೆ ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದಲ್ಲದೆ ಪೊಲೀಸ್ ದೂರು ನೀಡಿದರೆ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಆದರೆ ಆ ವಿಡಿಯೋ ಎಲ್ಲೆಡೆ ವೈರಲ್ ಆದ ನಂತರ ನಮ್ಮ ಮನೆಯವರು ದೂರು ನೀಡಲು ಧೈರ್ಯ ತುಂಬಿದರು ಎಂದು ಸಂತ್ರಸ್ತ ಯುವಕ ಅಲ್ಪೇಶ್ ಪರ್ಮಾರ್ ತಿಳಿಸಿದ್ದಾರೆ.

ತನ್ನ ಮೇಲೆ ಹಲ್ಲೆ ನಡೆಸಿದ ವಿಡಿಯೋವನ್ನು “ನಮ್ಮ ಲೈವ್‌ನಲ್ಲಿ ನೆಗೆಟಿವ್ ಕಮೆಂಟ್ ಮಾಡುವವರಿಗೆ ಇದೇ ಗತಿ” ಎಂಬ ಎಚ್ಚರಿಕೆಯೊಂದಿಗೆ ಆರೋಪಿಗಳು ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಕೊನೆಯಲ್ಲಿ ‘ಜೈ ರಜಪೂತಾನ’ ಎಂದು ತಮ್ಮ ಜಾತಿಸೂಚಕವನ್ನು ಉಲ್ಲೇಖಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾವು ಏಳು ಆರೋಪಿಗಳ ಪೈಕಿ ನಾಲ್ವರನ್ನು ಬಂಧಿಸಿದ್ದೇವೆ. ಅವರಲ್ಲಿ ಇಬ್ಬರು ರಜಪೂತರು ಮತ್ತು ಇಬ್ಬರು ಇತರೆ ಹಿಂದುಳಿದ ವರ್ಗಗಳಿಗೆ ಸೇರಿದವರು. ದಾಳಿಯ ಹಿಂದಿನ ನಿಖರವಾದ ಕಾರಣವನ್ನು ತನಿಖೆ ಮಾಡುತ್ತಿದ್ದೇವೆ. ಆರೋಪಿಗಳ ವಿರುದ್ಧ ಹಲವು IPC ಸೆಕ್ಷನ್‌ಗಳ ಅಡಿಯಲ್ಲಿ ಗಲಭೆ, ಹಲ್ಲೆ ಮತ್ತು ಕ್ರಿಮಿನಲ್ ಬೆದರಿಕೆ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಾಸಕ ಜಿಗ್ನೇಶ್ ಮೇವಾನಿ ಖಂಡನೆ

ದಲಿತ ಯುವಕನ ಮೇಲಿನ ಅಮಾನುಷ ಹಲ್ಲೆಯನ್ನು ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಖಂಡಿಸಿದ್ದಾರೆ. “ಉನಾ ಘಟನೆಯ ಸಮಯದಲ್ಲಿ, “ನೀವು ಕೊಲ್ಲಲು ಬಯಸಿದರೆ, ನನ್ನನ್ನು ಕೊಲ್ಲಿ, ನನ್ನ ದಲಿತ ಸಹೋದರರನ್ನಲ್ಲ” ಎಂದು ಮೋದಿಜಿ ಹೇಳಿದ್ದರು. ಆದರೆ ಅಂತಹ ಘಟನೆಗಳು ಮತ್ತೆ ಸಂಭವಿಸದಂತೆ ತಡೆಯಲು ಸರ್ಕಾರ ಮುಂದಾಗಲಿಲ್ಲ. ಅದರ ಫಲಿತಾಂಶವಾಗಿ ನಿನ್ನೆ ವಡೋದರಾ ಜಿಲ್ಲೆಯಲ್ಲಿ ದಲಿತ ಯುವಕನನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಪ್ರಯತ್ನ ನಡೆದಿದೆ. ಗುಜರಾತಿನಲ್ಲಿ ಗೂಂಡಾರಾಜ್ ಆಳ್ವಿಕೆ ನಡೆಯುತ್ತಿದೆ” ಎಂದು ಜಿಗ್ನೇಶ್ ಮೇವಾನಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಶವಸಂಸ್ಕಾರ ತಡೆದ ಸವರ್ಣೀಯರು – ರಸ್ತೆಯಲ್ಲಿ ಶವ ಇಟ್ಟು 5 ಗಂಟೆ ಕಾದ ದಲಿತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಈ ಜಾತಿ ರೋಗಿಷ್ಟ ನಾಯಿಗಳಿಗೆ, ಆ ಪಡಪಾಯಿಗೆ ಹಲ್ಲೆ ಮಾಡಿದ ರೀತಿಯಲ್ಲೇ ಸಾರ್ವಜನಿಕವಾಗಿ ದಲಿತರು ಒಗ್ಗೂಡಿ ಮಾಡಬೇಕು,ಆಗಲೇ ಈ ರೋಗಪೀಡಿತ ಜಾತಿವಾದಿ ನಾಯಿಗಳಿಗೆ ಅರಿವಾಗೋದು.

  2. RSS AND BHAJARANGADAL ORGANIZATIONS WERE ONLY A SPECTATOR THEY SHOUT WHEN EVER THEY FACE TROUBLE FROM OTHER RELIGION THEY CAME TO S.C. PEOPLE FOR PROTEST THE INCIDENT S.C.S ARE HINDUS WHY HINDUS ARE THEMSELVES BEATEN TO DEATH IT IS THE BIRTH PLACE OF MAHATMA GANDHIS&SARDAR VALLABHBHAI PATEL AND ALSO PRESENT PRIME MINISTER OF THIS COUNTRY,ARE THEY NOT ABLE TO PROTECT THE LIFE OF DALITHS BY PUTTING PRESSURE ON LAW AND ORDER PROTECTORS IF NOT WHAT IS USE OF KEEPING SUCH AUTHORITY IN THE STATE LIKE GUJARAT

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....