Homeಮುಖಪುಟಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

- Advertisement -
- Advertisement -

ಇ-ಕೆವೈಸಿ ಲೋಪದಿಂದಾಗಿ ಗುಜರಾತ್‌ನ 10 ಲಕ್ಷ ಜನರು ಪಡಿತರವಿಲ್ಲದೆ ಬಳಲುತ್ತಿದ್ದಾರೆ ಎಂದು TNIE ವರದಿ ಮಾಡಿದೆ. 2025ರ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳು ಅಪೂರ್ಣ ಕೆವೈಸಿ ಔಪಚಾರಿಕತೆಗಳಿಂದಾಗಿ ಪಡಿತರವನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ವರದಿ ಬಹಿರಂಗಪಡಿಸಿದೆ. ಗುಜರಾತ್‌ | ಇ-ಕೆವೈಸಿ

ಗರ್ಭಾವಸ್ಥೆಯ ಹಂತದಿಂದ ಪ್ರೌಢಾವಸ್ಥೆಯವರೆಗೆ ಪ್ರತಿಯೊಬ್ಬ ನಾಗರಿಕರಿಗೂ ಆಹಾರವನ್ನು ಖಾತರಿಪಡಿಸುವುದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಲ್ಲಿ ಕಡ್ಡಾಯವಾಗಿದೆ. ಆದಾಗ್ಯೂ, ಗುಜರಾತ್‌ನಲ್ಲಿ ಈ ಹಕ್ಕನ್ನು ರಕ್ಷಿಸಲು ಉದ್ದೇಶಿಸಲಾದ ವ್ಯವಸ್ಥೆಯಲ್ಲಿ ಬಿರುಕು ಬಿಟ್ಟಿದೆ ಎಂದು ವರದಿ ಸೂಚಿಸಿದೆ.

ನೀತಿಯ ಭರವಸೆಗಳು ಮತ್ತು ವಾಸ್ತವ ವಿತರಣೆಯ ನಡುವಿನ ಅಂತರವನ್ನು ಈ ಬೃಹತ್ ಲೋಪ ಬಹಿರಂಗಪಡಿಸಿದ್ದು, ಇದರಿಂದಾಗಿ ಲಕ್ಷಾಂತರ ದುರ್ಬಲ ನಾಗರಿಕರು ಅಧಿಕಾರಶಾಹಿ ಅಡೆತಡೆಗಳ ನಡುವೆ ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿ ಹೇಳಿದೆ.

ಅನ್ನ ಸುರಕ್ಷಾ ಅಧಿಕಾರ ಅಭಿಯಾನದ ಪ್ರಕಾರ, ಕೇಂದ್ರದ NDPS ಪೋರ್ಟಲ್ ಗುಜರಾತ್‌ನಲ್ಲಿ 3.82 ಕೋಟಿ ಫಲಾನುಭವಿಗಳನ್ನು ಪಟ್ಟಿ ಮಾಡಿದೆ. ಆದರೂ, ಕಳೆದ ಮೂರು ತಿಂಗಳುಗಳಲ್ಲಿ, ನಿಜವಾದ ಫಲಾನುಭವಿಗಳ ಸಂಖ್ಯೆ ಕೇವಲ 3.72 ಕೋಟಿಯಿಂದ 3.76 ಕೋಟಿಯವರೆಗೆ ಇದೆ. ಸುಮಾರು 10 ಲಕ್ಷ ಅರ್ಹ ಜನರು ಈ ಯೋಜನೆ ಪ್ರಯೋಜನದಿಂದ ವಂಚಿತರಾಗಿದ್ದಾರೆ.

ಕಡ್ಡಾಯ ಇ-ಕೆವೈಸಿಯಲ್ಲಿ ವಿಳಂಬ ಮತ್ತು ದೋಷಗಳು ಇದರ ಲೋಪಕ್ಕೆ ಕಾರಣ ಎಂದು ಹೇಳಲಾಗಿದ್ದರೂ, ಅದು ಒಂದೇ ಸಮಸ್ಯೆಯಲ್ಲ ಎಂದು ವರದಿ ಉಲ್ಲೇಖಿಸಿದೆ. ನಿರ್ದಿಷ್ಟ ಅವಧಿಯವರೆಗೆ (ಸಾಮಾನ್ಯವಾಗಿ ಸತತ 3 ತಿಂಗಳು) ಪಡಿತರ ಅಂಗಡಿಗಳಿಂದ ಯಾವುದೇ ಆಹಾರ ಧಾನ್ಯವನ್ನು ಖರೀದಿಸದ ಸೈಲೆಂಟ್ ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕೂಡಾ ಮತ್ತೊಂದು ಬಿಕ್ಕಟ್ಟನ್ನು ಸೃಷ್ಟಿಸಿದೆ.

ಕಳೆದ ಮೂರು ತಿಂಗಳಲ್ಲಿ ಗುಜರಾತ್‌ನಲ್ಲಿ 4 ಲಕ್ಷಕ್ಕೂ ಹೆಚ್ಚು ಸೈಲೆಂಟ್ ಕಾರ್ಡ್‌ಗಳು ದಾಖಲಾಗಿವೆ ಎಂದು ವರದಿ ಹೇಳಿದೆ. ಮೂರು ತಿಂಗಳವರೆಗೆ ಬಳಸದಿದ್ದರೆ ಪಡಿತರ ಚೀಟಿಗಳು ಸ್ವಯಂಚಾಲಿತವಾಗಿ ನಿಷ್ಕ್ರಿಯಗೊಳ್ಳುತ್ತವೆ.

ಅನ್ನಾ ಸುರಕ್ಷಾ ಅಧಿಕಾರ ಅಭಿಯಾನ ಸಂಯೋಜಕಿ ಪಂಕ್ತಿ ಜೋಗ್ ಮಾತನಾಡಿ, “ದಾಖಲೆಯಲ್ಲಿ ಜನರು ಪಡಿತರ ಸಂಗ್ರಹಿಸುವುದನ್ನು ನಿಲ್ಲಿಸಿದಂತೆ ಕಾಣುತ್ತದೆ. ಆದರೆ, ಅಪೂರ್ಣ ಇ-ಕೆವೈಸಿಯಿಂದಾಗಿ ಪಡಿತರ ವಿತರಕರು ತಮ್ಮನ್ನು ಹಿಂತಿರುಗಿ ಹೋಗುವಂತೆ ಹೇಳುತ್ತಿದ್ದಾರೆ ಎಂದು ಕುಟುಂಬಗಳು ಹೇಳಿಕೊಳ್ಳುತ್ತಿವೆ. ಅವರು ಆಹಾರವಿಲ್ಲದೆ ಉಳಿದಿದ್ದು, ವ್ಯವಸ್ಥೆಯ ಕಾರಣಕ್ಕೆ ಅವರ ಪಡಿತರ ಚೀಟಿಗಳು ನಿಷ್ಕ್ರಿಯವಾಗಿದೆ” ಎಂದು ಹೇಳಿದ್ದಾರೆ.

“ಇದು ತೀಕ್ಷ್ಣವಾದ ಮತ್ತು ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಇ-ಕೆವೈಸಿ ಸಮಸ್ಯೆಗಳಿಂದಾಗಿ ಜನರಿಗೆ ಪಡಿತರ ನಿರಾಕರಿಸಲ್ಪಟ್ಟರೆ ಮತ್ತು ಅವರ ಕಾರ್ಡ್‌ಗಳನ್ನು ಸೈಲೆಂಟ್ ಎಂದು ಗುರುತಿಸಿದರೆ, ಲಕ್ಷಾಂತರ ಜನರನ್ನು ಅನೈಚ್ಛಿಕ ಹಸಿವಿಗೆ ತಳ್ಳುವಂತೆ ಮಾಡಿದ ಹೊಣೆ ಯಾರು ಹೊತ್ತುಕೊಳ್ಳಬೇಕು? ಪ್ರತಿ ಪಡಿತರ ಚೀಟಿ ಸಾಮಾನ್ಯವಾಗಿ ಮೂರು ಅಥವಾ ಹೆಚ್ಚಿನ ಕುಟುಂಬ ಸದಸ್ಯರಿದ್ದರೆ, ಬಾಧಿತ ವ್ಯಕ್ತಿಗಳ ನಿಜವಾದ ಸಂಖ್ಯೆ 10 ಲಕ್ಷಕ್ಕೂ ಹೆಚ್ಚಿರಬಹುದು, ”ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

2013ರಲ್ಲಿ, ಸಂಸತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಯನ್ನು ಅಂಗೀಕರಿಸಿತು. ಇದು ಅಂಗನವಾಡಿಗಳಲ್ಲಿನ ಮಕ್ಕಳಿಂದ ಹಿಡಿದು ನಗರದ ಬಡವರವರೆಗೆ ಪ್ರತಿಯೊಬ್ಬ ಭಾರತೀಯರನ್ನು ಕಾನೂನುಬದ್ಧ ಆಹಾರ ಸುರಕ್ಷತಾ ಜಾಲದ ಅಡಿಯಲ್ಲಿ ತರುವ ಗುರಿಯನ್ನು ಹೊಂದಿದೆ. ಇದರ ಅಡಿಯಲ್ಲಿ ಶಾಲೆಯಲ್ಲಿನ ಮಧ್ಯಾಹ್ನದ ಬಿಸಿಯೂಟ, ಅಂಗನವಾಡಿಯ ಪೌಷ್ಟಿಕಾಂಶ ಆಹಾರ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಯಂತಹ ತನ್ನ ವ್ಯಾಪ್ತಿಯ ಪ್ರಮುಖ ಯೋಜನೆಗಳ ಅಡಿಯಲ್ಲಿ ತಂದಿದೆ.

ಗುಜರಾತ್ ರಾಜ್ಯವು ಏಪ್ರಿಲ್ 1, 2016 ರಿಂದ ಈ ಕಾಯ್ದೆಯನ್ನು ಜಾರಿಗೆ ತಂದಿದ್ದು, ತನ್ನ ಗ್ರಾಮೀಣ ಜನಸಂಖ್ಯೆಯ 75% ಮತ್ತು ನಗರದ 50%ರಷ್ಟು ಜನರಿಗೆ ಸಬ್ಸಿಡಿ ಧಾನ್ಯಗಳು ₹2/ಕೆಜಿಗೆ ಗೋಧಿ, ₹3/ಕೆಜಿಗೆ ಅಕ್ಕಿ ಮತ್ತು ₹1/ಕೆಜಿಗೆ ಕಡಿಮೆ ಸಂಸ್ಕರಿತ ಧಾನ್ಯಗಳು ನೀಡುವ ಭರವಸೆ ನೀಡಲಾಗಿತ್ತು. ಹೆಚ್ಚುವರಿ ಪೋಷಣೆಗಾಗಿ ದ್ವಿದಳ ಧಾನ್ಯಗಳು, ಬೇಳೆಕಾಳು ಮತ್ತು ಎಣ್ಣೆಯೊಂದಿಗೆ ಇದನ್ನು ವಿಸ್ತರಿಸಲು ರಾಜ್ಯಗಳಿಗೆ ಅವಕಾಶ ನೀಡಲಾಯಿತು. ಗುಜರಾತ್‌ | ಇ-ಕೆವೈಸಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...