Homeಮುಖಪುಟಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

- Advertisement -
- Advertisement -

ಇ-ಕೆವೈಸಿ ಲೋಪದಿಂದಾಗಿ ಗುಜರಾತ್‌ನ 10 ಲಕ್ಷ ಜನರು ಪಡಿತರವಿಲ್ಲದೆ ಬಳಲುತ್ತಿದ್ದಾರೆ ಎಂದು TNIE ವರದಿ ಮಾಡಿದೆ. 2025ರ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳು ಅಪೂರ್ಣ ಕೆವೈಸಿ ಔಪಚಾರಿಕತೆಗಳಿಂದಾಗಿ ಪಡಿತರವನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ವರದಿ ಬಹಿರಂಗಪಡಿಸಿದೆ. ಗುಜರಾತ್‌ | ಇ-ಕೆವೈಸಿ

ಗರ್ಭಾವಸ್ಥೆಯ ಹಂತದಿಂದ ಪ್ರೌಢಾವಸ್ಥೆಯವರೆಗೆ ಪ್ರತಿಯೊಬ್ಬ ನಾಗರಿಕರಿಗೂ ಆಹಾರವನ್ನು ಖಾತರಿಪಡಿಸುವುದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಲ್ಲಿ ಕಡ್ಡಾಯವಾಗಿದೆ. ಆದಾಗ್ಯೂ, ಗುಜರಾತ್‌ನಲ್ಲಿ ಈ ಹಕ್ಕನ್ನು ರಕ್ಷಿಸಲು ಉದ್ದೇಶಿಸಲಾದ ವ್ಯವಸ್ಥೆಯಲ್ಲಿ ಬಿರುಕು ಬಿಟ್ಟಿದೆ ಎಂದು ವರದಿ ಸೂಚಿಸಿದೆ.

ನೀತಿಯ ಭರವಸೆಗಳು ಮತ್ತು ವಾಸ್ತವ ವಿತರಣೆಯ ನಡುವಿನ ಅಂತರವನ್ನು ಈ ಬೃಹತ್ ಲೋಪ ಬಹಿರಂಗಪಡಿಸಿದ್ದು, ಇದರಿಂದಾಗಿ ಲಕ್ಷಾಂತರ ದುರ್ಬಲ ನಾಗರಿಕರು ಅಧಿಕಾರಶಾಹಿ ಅಡೆತಡೆಗಳ ನಡುವೆ ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿ ಹೇಳಿದೆ.

ಅನ್ನ ಸುರಕ್ಷಾ ಅಧಿಕಾರ ಅಭಿಯಾನದ ಪ್ರಕಾರ, ಕೇಂದ್ರದ NDPS ಪೋರ್ಟಲ್ ಗುಜರಾತ್‌ನಲ್ಲಿ 3.82 ಕೋಟಿ ಫಲಾನುಭವಿಗಳನ್ನು ಪಟ್ಟಿ ಮಾಡಿದೆ. ಆದರೂ, ಕಳೆದ ಮೂರು ತಿಂಗಳುಗಳಲ್ಲಿ, ನಿಜವಾದ ಫಲಾನುಭವಿಗಳ ಸಂಖ್ಯೆ ಕೇವಲ 3.72 ಕೋಟಿಯಿಂದ 3.76 ಕೋಟಿಯವರೆಗೆ ಇದೆ. ಸುಮಾರು 10 ಲಕ್ಷ ಅರ್ಹ ಜನರು ಈ ಯೋಜನೆ ಪ್ರಯೋಜನದಿಂದ ವಂಚಿತರಾಗಿದ್ದಾರೆ.

ಕಡ್ಡಾಯ ಇ-ಕೆವೈಸಿಯಲ್ಲಿ ವಿಳಂಬ ಮತ್ತು ದೋಷಗಳು ಇದರ ಲೋಪಕ್ಕೆ ಕಾರಣ ಎಂದು ಹೇಳಲಾಗಿದ್ದರೂ, ಅದು ಒಂದೇ ಸಮಸ್ಯೆಯಲ್ಲ ಎಂದು ವರದಿ ಉಲ್ಲೇಖಿಸಿದೆ. ನಿರ್ದಿಷ್ಟ ಅವಧಿಯವರೆಗೆ (ಸಾಮಾನ್ಯವಾಗಿ ಸತತ 3 ತಿಂಗಳು) ಪಡಿತರ ಅಂಗಡಿಗಳಿಂದ ಯಾವುದೇ ಆಹಾರ ಧಾನ್ಯವನ್ನು ಖರೀದಿಸದ ಸೈಲೆಂಟ್ ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕೂಡಾ ಮತ್ತೊಂದು ಬಿಕ್ಕಟ್ಟನ್ನು ಸೃಷ್ಟಿಸಿದೆ.

ಕಳೆದ ಮೂರು ತಿಂಗಳಲ್ಲಿ ಗುಜರಾತ್‌ನಲ್ಲಿ 4 ಲಕ್ಷಕ್ಕೂ ಹೆಚ್ಚು ಸೈಲೆಂಟ್ ಕಾರ್ಡ್‌ಗಳು ದಾಖಲಾಗಿವೆ ಎಂದು ವರದಿ ಹೇಳಿದೆ. ಮೂರು ತಿಂಗಳವರೆಗೆ ಬಳಸದಿದ್ದರೆ ಪಡಿತರ ಚೀಟಿಗಳು ಸ್ವಯಂಚಾಲಿತವಾಗಿ ನಿಷ್ಕ್ರಿಯಗೊಳ್ಳುತ್ತವೆ.

ಅನ್ನಾ ಸುರಕ್ಷಾ ಅಧಿಕಾರ ಅಭಿಯಾನ ಸಂಯೋಜಕಿ ಪಂಕ್ತಿ ಜೋಗ್ ಮಾತನಾಡಿ, “ದಾಖಲೆಯಲ್ಲಿ ಜನರು ಪಡಿತರ ಸಂಗ್ರಹಿಸುವುದನ್ನು ನಿಲ್ಲಿಸಿದಂತೆ ಕಾಣುತ್ತದೆ. ಆದರೆ, ಅಪೂರ್ಣ ಇ-ಕೆವೈಸಿಯಿಂದಾಗಿ ಪಡಿತರ ವಿತರಕರು ತಮ್ಮನ್ನು ಹಿಂತಿರುಗಿ ಹೋಗುವಂತೆ ಹೇಳುತ್ತಿದ್ದಾರೆ ಎಂದು ಕುಟುಂಬಗಳು ಹೇಳಿಕೊಳ್ಳುತ್ತಿವೆ. ಅವರು ಆಹಾರವಿಲ್ಲದೆ ಉಳಿದಿದ್ದು, ವ್ಯವಸ್ಥೆಯ ಕಾರಣಕ್ಕೆ ಅವರ ಪಡಿತರ ಚೀಟಿಗಳು ನಿಷ್ಕ್ರಿಯವಾಗಿದೆ” ಎಂದು ಹೇಳಿದ್ದಾರೆ.

“ಇದು ತೀಕ್ಷ್ಣವಾದ ಮತ್ತು ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಇ-ಕೆವೈಸಿ ಸಮಸ್ಯೆಗಳಿಂದಾಗಿ ಜನರಿಗೆ ಪಡಿತರ ನಿರಾಕರಿಸಲ್ಪಟ್ಟರೆ ಮತ್ತು ಅವರ ಕಾರ್ಡ್‌ಗಳನ್ನು ಸೈಲೆಂಟ್ ಎಂದು ಗುರುತಿಸಿದರೆ, ಲಕ್ಷಾಂತರ ಜನರನ್ನು ಅನೈಚ್ಛಿಕ ಹಸಿವಿಗೆ ತಳ್ಳುವಂತೆ ಮಾಡಿದ ಹೊಣೆ ಯಾರು ಹೊತ್ತುಕೊಳ್ಳಬೇಕು? ಪ್ರತಿ ಪಡಿತರ ಚೀಟಿ ಸಾಮಾನ್ಯವಾಗಿ ಮೂರು ಅಥವಾ ಹೆಚ್ಚಿನ ಕುಟುಂಬ ಸದಸ್ಯರಿದ್ದರೆ, ಬಾಧಿತ ವ್ಯಕ್ತಿಗಳ ನಿಜವಾದ ಸಂಖ್ಯೆ 10 ಲಕ್ಷಕ್ಕೂ ಹೆಚ್ಚಿರಬಹುದು, ”ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

2013ರಲ್ಲಿ, ಸಂಸತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಯನ್ನು ಅಂಗೀಕರಿಸಿತು. ಇದು ಅಂಗನವಾಡಿಗಳಲ್ಲಿನ ಮಕ್ಕಳಿಂದ ಹಿಡಿದು ನಗರದ ಬಡವರವರೆಗೆ ಪ್ರತಿಯೊಬ್ಬ ಭಾರತೀಯರನ್ನು ಕಾನೂನುಬದ್ಧ ಆಹಾರ ಸುರಕ್ಷತಾ ಜಾಲದ ಅಡಿಯಲ್ಲಿ ತರುವ ಗುರಿಯನ್ನು ಹೊಂದಿದೆ. ಇದರ ಅಡಿಯಲ್ಲಿ ಶಾಲೆಯಲ್ಲಿನ ಮಧ್ಯಾಹ್ನದ ಬಿಸಿಯೂಟ, ಅಂಗನವಾಡಿಯ ಪೌಷ್ಟಿಕಾಂಶ ಆಹಾರ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಯಂತಹ ತನ್ನ ವ್ಯಾಪ್ತಿಯ ಪ್ರಮುಖ ಯೋಜನೆಗಳ ಅಡಿಯಲ್ಲಿ ತಂದಿದೆ.

ಗುಜರಾತ್ ರಾಜ್ಯವು ಏಪ್ರಿಲ್ 1, 2016 ರಿಂದ ಈ ಕಾಯ್ದೆಯನ್ನು ಜಾರಿಗೆ ತಂದಿದ್ದು, ತನ್ನ ಗ್ರಾಮೀಣ ಜನಸಂಖ್ಯೆಯ 75% ಮತ್ತು ನಗರದ 50%ರಷ್ಟು ಜನರಿಗೆ ಸಬ್ಸಿಡಿ ಧಾನ್ಯಗಳು ₹2/ಕೆಜಿಗೆ ಗೋಧಿ, ₹3/ಕೆಜಿಗೆ ಅಕ್ಕಿ ಮತ್ತು ₹1/ಕೆಜಿಗೆ ಕಡಿಮೆ ಸಂಸ್ಕರಿತ ಧಾನ್ಯಗಳು ನೀಡುವ ಭರವಸೆ ನೀಡಲಾಗಿತ್ತು. ಹೆಚ್ಚುವರಿ ಪೋಷಣೆಗಾಗಿ ದ್ವಿದಳ ಧಾನ್ಯಗಳು, ಬೇಳೆಕಾಳು ಮತ್ತು ಎಣ್ಣೆಯೊಂದಿಗೆ ಇದನ್ನು ವಿಸ್ತರಿಸಲು ರಾಜ್ಯಗಳಿಗೆ ಅವಕಾಶ ನೀಡಲಾಯಿತು. ಗುಜರಾತ್‌ | ಇ-ಕೆವೈಸಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...