Homeಮುಖಪುಟಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

- Advertisement -
- Advertisement -

ಇ-ಕೆವೈಸಿ ಲೋಪದಿಂದಾಗಿ ಗುಜರಾತ್‌ನ 10 ಲಕ್ಷ ಜನರು ಪಡಿತರವಿಲ್ಲದೆ ಬಳಲುತ್ತಿದ್ದಾರೆ ಎಂದು TNIE ವರದಿ ಮಾಡಿದೆ. 2025ರ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳು ಅಪೂರ್ಣ ಕೆವೈಸಿ ಔಪಚಾರಿಕತೆಗಳಿಂದಾಗಿ ಪಡಿತರವನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ವರದಿ ಬಹಿರಂಗಪಡಿಸಿದೆ. ಗುಜರಾತ್‌ | ಇ-ಕೆವೈಸಿ

ಗರ್ಭಾವಸ್ಥೆಯ ಹಂತದಿಂದ ಪ್ರೌಢಾವಸ್ಥೆಯವರೆಗೆ ಪ್ರತಿಯೊಬ್ಬ ನಾಗರಿಕರಿಗೂ ಆಹಾರವನ್ನು ಖಾತರಿಪಡಿಸುವುದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಲ್ಲಿ ಕಡ್ಡಾಯವಾಗಿದೆ. ಆದಾಗ್ಯೂ, ಗುಜರಾತ್‌ನಲ್ಲಿ ಈ ಹಕ್ಕನ್ನು ರಕ್ಷಿಸಲು ಉದ್ದೇಶಿಸಲಾದ ವ್ಯವಸ್ಥೆಯಲ್ಲಿ ಬಿರುಕು ಬಿಟ್ಟಿದೆ ಎಂದು ವರದಿ ಸೂಚಿಸಿದೆ.

ನೀತಿಯ ಭರವಸೆಗಳು ಮತ್ತು ವಾಸ್ತವ ವಿತರಣೆಯ ನಡುವಿನ ಅಂತರವನ್ನು ಈ ಬೃಹತ್ ಲೋಪ ಬಹಿರಂಗಪಡಿಸಿದ್ದು, ಇದರಿಂದಾಗಿ ಲಕ್ಷಾಂತರ ದುರ್ಬಲ ನಾಗರಿಕರು ಅಧಿಕಾರಶಾಹಿ ಅಡೆತಡೆಗಳ ನಡುವೆ ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿ ಹೇಳಿದೆ.

ಅನ್ನ ಸುರಕ್ಷಾ ಅಧಿಕಾರ ಅಭಿಯಾನದ ಪ್ರಕಾರ, ಕೇಂದ್ರದ NDPS ಪೋರ್ಟಲ್ ಗುಜರಾತ್‌ನಲ್ಲಿ 3.82 ಕೋಟಿ ಫಲಾನುಭವಿಗಳನ್ನು ಪಟ್ಟಿ ಮಾಡಿದೆ. ಆದರೂ, ಕಳೆದ ಮೂರು ತಿಂಗಳುಗಳಲ್ಲಿ, ನಿಜವಾದ ಫಲಾನುಭವಿಗಳ ಸಂಖ್ಯೆ ಕೇವಲ 3.72 ಕೋಟಿಯಿಂದ 3.76 ಕೋಟಿಯವರೆಗೆ ಇದೆ. ಸುಮಾರು 10 ಲಕ್ಷ ಅರ್ಹ ಜನರು ಈ ಯೋಜನೆ ಪ್ರಯೋಜನದಿಂದ ವಂಚಿತರಾಗಿದ್ದಾರೆ.

ಕಡ್ಡಾಯ ಇ-ಕೆವೈಸಿಯಲ್ಲಿ ವಿಳಂಬ ಮತ್ತು ದೋಷಗಳು ಇದರ ಲೋಪಕ್ಕೆ ಕಾರಣ ಎಂದು ಹೇಳಲಾಗಿದ್ದರೂ, ಅದು ಒಂದೇ ಸಮಸ್ಯೆಯಲ್ಲ ಎಂದು ವರದಿ ಉಲ್ಲೇಖಿಸಿದೆ. ನಿರ್ದಿಷ್ಟ ಅವಧಿಯವರೆಗೆ (ಸಾಮಾನ್ಯವಾಗಿ ಸತತ 3 ತಿಂಗಳು) ಪಡಿತರ ಅಂಗಡಿಗಳಿಂದ ಯಾವುದೇ ಆಹಾರ ಧಾನ್ಯವನ್ನು ಖರೀದಿಸದ ಸೈಲೆಂಟ್ ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕೂಡಾ ಮತ್ತೊಂದು ಬಿಕ್ಕಟ್ಟನ್ನು ಸೃಷ್ಟಿಸಿದೆ.

ಕಳೆದ ಮೂರು ತಿಂಗಳಲ್ಲಿ ಗುಜರಾತ್‌ನಲ್ಲಿ 4 ಲಕ್ಷಕ್ಕೂ ಹೆಚ್ಚು ಸೈಲೆಂಟ್ ಕಾರ್ಡ್‌ಗಳು ದಾಖಲಾಗಿವೆ ಎಂದು ವರದಿ ಹೇಳಿದೆ. ಮೂರು ತಿಂಗಳವರೆಗೆ ಬಳಸದಿದ್ದರೆ ಪಡಿತರ ಚೀಟಿಗಳು ಸ್ವಯಂಚಾಲಿತವಾಗಿ ನಿಷ್ಕ್ರಿಯಗೊಳ್ಳುತ್ತವೆ.

ಅನ್ನಾ ಸುರಕ್ಷಾ ಅಧಿಕಾರ ಅಭಿಯಾನ ಸಂಯೋಜಕಿ ಪಂಕ್ತಿ ಜೋಗ್ ಮಾತನಾಡಿ, “ದಾಖಲೆಯಲ್ಲಿ ಜನರು ಪಡಿತರ ಸಂಗ್ರಹಿಸುವುದನ್ನು ನಿಲ್ಲಿಸಿದಂತೆ ಕಾಣುತ್ತದೆ. ಆದರೆ, ಅಪೂರ್ಣ ಇ-ಕೆವೈಸಿಯಿಂದಾಗಿ ಪಡಿತರ ವಿತರಕರು ತಮ್ಮನ್ನು ಹಿಂತಿರುಗಿ ಹೋಗುವಂತೆ ಹೇಳುತ್ತಿದ್ದಾರೆ ಎಂದು ಕುಟುಂಬಗಳು ಹೇಳಿಕೊಳ್ಳುತ್ತಿವೆ. ಅವರು ಆಹಾರವಿಲ್ಲದೆ ಉಳಿದಿದ್ದು, ವ್ಯವಸ್ಥೆಯ ಕಾರಣಕ್ಕೆ ಅವರ ಪಡಿತರ ಚೀಟಿಗಳು ನಿಷ್ಕ್ರಿಯವಾಗಿದೆ” ಎಂದು ಹೇಳಿದ್ದಾರೆ.

“ಇದು ತೀಕ್ಷ್ಣವಾದ ಮತ್ತು ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಇ-ಕೆವೈಸಿ ಸಮಸ್ಯೆಗಳಿಂದಾಗಿ ಜನರಿಗೆ ಪಡಿತರ ನಿರಾಕರಿಸಲ್ಪಟ್ಟರೆ ಮತ್ತು ಅವರ ಕಾರ್ಡ್‌ಗಳನ್ನು ಸೈಲೆಂಟ್ ಎಂದು ಗುರುತಿಸಿದರೆ, ಲಕ್ಷಾಂತರ ಜನರನ್ನು ಅನೈಚ್ಛಿಕ ಹಸಿವಿಗೆ ತಳ್ಳುವಂತೆ ಮಾಡಿದ ಹೊಣೆ ಯಾರು ಹೊತ್ತುಕೊಳ್ಳಬೇಕು? ಪ್ರತಿ ಪಡಿತರ ಚೀಟಿ ಸಾಮಾನ್ಯವಾಗಿ ಮೂರು ಅಥವಾ ಹೆಚ್ಚಿನ ಕುಟುಂಬ ಸದಸ್ಯರಿದ್ದರೆ, ಬಾಧಿತ ವ್ಯಕ್ತಿಗಳ ನಿಜವಾದ ಸಂಖ್ಯೆ 10 ಲಕ್ಷಕ್ಕೂ ಹೆಚ್ಚಿರಬಹುದು, ”ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

2013ರಲ್ಲಿ, ಸಂಸತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಯನ್ನು ಅಂಗೀಕರಿಸಿತು. ಇದು ಅಂಗನವಾಡಿಗಳಲ್ಲಿನ ಮಕ್ಕಳಿಂದ ಹಿಡಿದು ನಗರದ ಬಡವರವರೆಗೆ ಪ್ರತಿಯೊಬ್ಬ ಭಾರತೀಯರನ್ನು ಕಾನೂನುಬದ್ಧ ಆಹಾರ ಸುರಕ್ಷತಾ ಜಾಲದ ಅಡಿಯಲ್ಲಿ ತರುವ ಗುರಿಯನ್ನು ಹೊಂದಿದೆ. ಇದರ ಅಡಿಯಲ್ಲಿ ಶಾಲೆಯಲ್ಲಿನ ಮಧ್ಯಾಹ್ನದ ಬಿಸಿಯೂಟ, ಅಂಗನವಾಡಿಯ ಪೌಷ್ಟಿಕಾಂಶ ಆಹಾರ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಯಂತಹ ತನ್ನ ವ್ಯಾಪ್ತಿಯ ಪ್ರಮುಖ ಯೋಜನೆಗಳ ಅಡಿಯಲ್ಲಿ ತಂದಿದೆ.

ಗುಜರಾತ್ ರಾಜ್ಯವು ಏಪ್ರಿಲ್ 1, 2016 ರಿಂದ ಈ ಕಾಯ್ದೆಯನ್ನು ಜಾರಿಗೆ ತಂದಿದ್ದು, ತನ್ನ ಗ್ರಾಮೀಣ ಜನಸಂಖ್ಯೆಯ 75% ಮತ್ತು ನಗರದ 50%ರಷ್ಟು ಜನರಿಗೆ ಸಬ್ಸಿಡಿ ಧಾನ್ಯಗಳು ₹2/ಕೆಜಿಗೆ ಗೋಧಿ, ₹3/ಕೆಜಿಗೆ ಅಕ್ಕಿ ಮತ್ತು ₹1/ಕೆಜಿಗೆ ಕಡಿಮೆ ಸಂಸ್ಕರಿತ ಧಾನ್ಯಗಳು ನೀಡುವ ಭರವಸೆ ನೀಡಲಾಗಿತ್ತು. ಹೆಚ್ಚುವರಿ ಪೋಷಣೆಗಾಗಿ ದ್ವಿದಳ ಧಾನ್ಯಗಳು, ಬೇಳೆಕಾಳು ಮತ್ತು ಎಣ್ಣೆಯೊಂದಿಗೆ ಇದನ್ನು ವಿಸ್ತರಿಸಲು ರಾಜ್ಯಗಳಿಗೆ ಅವಕಾಶ ನೀಡಲಾಯಿತು. ಗುಜರಾತ್‌ | ಇ-ಕೆವೈಸಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...