Homeಮುಖಪುಟಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

- Advertisement -
- Advertisement -

ಇ-ಕೆವೈಸಿ ಲೋಪದಿಂದಾಗಿ ಗುಜರಾತ್‌ನ 10 ಲಕ್ಷ ಜನರು ಪಡಿತರವಿಲ್ಲದೆ ಬಳಲುತ್ತಿದ್ದಾರೆ ಎಂದು TNIE ವರದಿ ಮಾಡಿದೆ. 2025ರ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳು ಅಪೂರ್ಣ ಕೆವೈಸಿ ಔಪಚಾರಿಕತೆಗಳಿಂದಾಗಿ ಪಡಿತರವನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ವರದಿ ಬಹಿರಂಗಪಡಿಸಿದೆ. ಗುಜರಾತ್‌ | ಇ-ಕೆವೈಸಿ

ಗರ್ಭಾವಸ್ಥೆಯ ಹಂತದಿಂದ ಪ್ರೌಢಾವಸ್ಥೆಯವರೆಗೆ ಪ್ರತಿಯೊಬ್ಬ ನಾಗರಿಕರಿಗೂ ಆಹಾರವನ್ನು ಖಾತರಿಪಡಿಸುವುದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಲ್ಲಿ ಕಡ್ಡಾಯವಾಗಿದೆ. ಆದಾಗ್ಯೂ, ಗುಜರಾತ್‌ನಲ್ಲಿ ಈ ಹಕ್ಕನ್ನು ರಕ್ಷಿಸಲು ಉದ್ದೇಶಿಸಲಾದ ವ್ಯವಸ್ಥೆಯಲ್ಲಿ ಬಿರುಕು ಬಿಟ್ಟಿದೆ ಎಂದು ವರದಿ ಸೂಚಿಸಿದೆ.

ನೀತಿಯ ಭರವಸೆಗಳು ಮತ್ತು ವಾಸ್ತವ ವಿತರಣೆಯ ನಡುವಿನ ಅಂತರವನ್ನು ಈ ಬೃಹತ್ ಲೋಪ ಬಹಿರಂಗಪಡಿಸಿದ್ದು, ಇದರಿಂದಾಗಿ ಲಕ್ಷಾಂತರ ದುರ್ಬಲ ನಾಗರಿಕರು ಅಧಿಕಾರಶಾಹಿ ಅಡೆತಡೆಗಳ ನಡುವೆ ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿ ಹೇಳಿದೆ.

ಅನ್ನ ಸುರಕ್ಷಾ ಅಧಿಕಾರ ಅಭಿಯಾನದ ಪ್ರಕಾರ, ಕೇಂದ್ರದ NDPS ಪೋರ್ಟಲ್ ಗುಜರಾತ್‌ನಲ್ಲಿ 3.82 ಕೋಟಿ ಫಲಾನುಭವಿಗಳನ್ನು ಪಟ್ಟಿ ಮಾಡಿದೆ. ಆದರೂ, ಕಳೆದ ಮೂರು ತಿಂಗಳುಗಳಲ್ಲಿ, ನಿಜವಾದ ಫಲಾನುಭವಿಗಳ ಸಂಖ್ಯೆ ಕೇವಲ 3.72 ಕೋಟಿಯಿಂದ 3.76 ಕೋಟಿಯವರೆಗೆ ಇದೆ. ಸುಮಾರು 10 ಲಕ್ಷ ಅರ್ಹ ಜನರು ಈ ಯೋಜನೆ ಪ್ರಯೋಜನದಿಂದ ವಂಚಿತರಾಗಿದ್ದಾರೆ.

ಕಡ್ಡಾಯ ಇ-ಕೆವೈಸಿಯಲ್ಲಿ ವಿಳಂಬ ಮತ್ತು ದೋಷಗಳು ಇದರ ಲೋಪಕ್ಕೆ ಕಾರಣ ಎಂದು ಹೇಳಲಾಗಿದ್ದರೂ, ಅದು ಒಂದೇ ಸಮಸ್ಯೆಯಲ್ಲ ಎಂದು ವರದಿ ಉಲ್ಲೇಖಿಸಿದೆ. ನಿರ್ದಿಷ್ಟ ಅವಧಿಯವರೆಗೆ (ಸಾಮಾನ್ಯವಾಗಿ ಸತತ 3 ತಿಂಗಳು) ಪಡಿತರ ಅಂಗಡಿಗಳಿಂದ ಯಾವುದೇ ಆಹಾರ ಧಾನ್ಯವನ್ನು ಖರೀದಿಸದ ಸೈಲೆಂಟ್ ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕೂಡಾ ಮತ್ತೊಂದು ಬಿಕ್ಕಟ್ಟನ್ನು ಸೃಷ್ಟಿಸಿದೆ.

ಕಳೆದ ಮೂರು ತಿಂಗಳಲ್ಲಿ ಗುಜರಾತ್‌ನಲ್ಲಿ 4 ಲಕ್ಷಕ್ಕೂ ಹೆಚ್ಚು ಸೈಲೆಂಟ್ ಕಾರ್ಡ್‌ಗಳು ದಾಖಲಾಗಿವೆ ಎಂದು ವರದಿ ಹೇಳಿದೆ. ಮೂರು ತಿಂಗಳವರೆಗೆ ಬಳಸದಿದ್ದರೆ ಪಡಿತರ ಚೀಟಿಗಳು ಸ್ವಯಂಚಾಲಿತವಾಗಿ ನಿಷ್ಕ್ರಿಯಗೊಳ್ಳುತ್ತವೆ.

ಅನ್ನಾ ಸುರಕ್ಷಾ ಅಧಿಕಾರ ಅಭಿಯಾನ ಸಂಯೋಜಕಿ ಪಂಕ್ತಿ ಜೋಗ್ ಮಾತನಾಡಿ, “ದಾಖಲೆಯಲ್ಲಿ ಜನರು ಪಡಿತರ ಸಂಗ್ರಹಿಸುವುದನ್ನು ನಿಲ್ಲಿಸಿದಂತೆ ಕಾಣುತ್ತದೆ. ಆದರೆ, ಅಪೂರ್ಣ ಇ-ಕೆವೈಸಿಯಿಂದಾಗಿ ಪಡಿತರ ವಿತರಕರು ತಮ್ಮನ್ನು ಹಿಂತಿರುಗಿ ಹೋಗುವಂತೆ ಹೇಳುತ್ತಿದ್ದಾರೆ ಎಂದು ಕುಟುಂಬಗಳು ಹೇಳಿಕೊಳ್ಳುತ್ತಿವೆ. ಅವರು ಆಹಾರವಿಲ್ಲದೆ ಉಳಿದಿದ್ದು, ವ್ಯವಸ್ಥೆಯ ಕಾರಣಕ್ಕೆ ಅವರ ಪಡಿತರ ಚೀಟಿಗಳು ನಿಷ್ಕ್ರಿಯವಾಗಿದೆ” ಎಂದು ಹೇಳಿದ್ದಾರೆ.

“ಇದು ತೀಕ್ಷ್ಣವಾದ ಮತ್ತು ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಇ-ಕೆವೈಸಿ ಸಮಸ್ಯೆಗಳಿಂದಾಗಿ ಜನರಿಗೆ ಪಡಿತರ ನಿರಾಕರಿಸಲ್ಪಟ್ಟರೆ ಮತ್ತು ಅವರ ಕಾರ್ಡ್‌ಗಳನ್ನು ಸೈಲೆಂಟ್ ಎಂದು ಗುರುತಿಸಿದರೆ, ಲಕ್ಷಾಂತರ ಜನರನ್ನು ಅನೈಚ್ಛಿಕ ಹಸಿವಿಗೆ ತಳ್ಳುವಂತೆ ಮಾಡಿದ ಹೊಣೆ ಯಾರು ಹೊತ್ತುಕೊಳ್ಳಬೇಕು? ಪ್ರತಿ ಪಡಿತರ ಚೀಟಿ ಸಾಮಾನ್ಯವಾಗಿ ಮೂರು ಅಥವಾ ಹೆಚ್ಚಿನ ಕುಟುಂಬ ಸದಸ್ಯರಿದ್ದರೆ, ಬಾಧಿತ ವ್ಯಕ್ತಿಗಳ ನಿಜವಾದ ಸಂಖ್ಯೆ 10 ಲಕ್ಷಕ್ಕೂ ಹೆಚ್ಚಿರಬಹುದು, ”ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

2013ರಲ್ಲಿ, ಸಂಸತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಯನ್ನು ಅಂಗೀಕರಿಸಿತು. ಇದು ಅಂಗನವಾಡಿಗಳಲ್ಲಿನ ಮಕ್ಕಳಿಂದ ಹಿಡಿದು ನಗರದ ಬಡವರವರೆಗೆ ಪ್ರತಿಯೊಬ್ಬ ಭಾರತೀಯರನ್ನು ಕಾನೂನುಬದ್ಧ ಆಹಾರ ಸುರಕ್ಷತಾ ಜಾಲದ ಅಡಿಯಲ್ಲಿ ತರುವ ಗುರಿಯನ್ನು ಹೊಂದಿದೆ. ಇದರ ಅಡಿಯಲ್ಲಿ ಶಾಲೆಯಲ್ಲಿನ ಮಧ್ಯಾಹ್ನದ ಬಿಸಿಯೂಟ, ಅಂಗನವಾಡಿಯ ಪೌಷ್ಟಿಕಾಂಶ ಆಹಾರ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಯಂತಹ ತನ್ನ ವ್ಯಾಪ್ತಿಯ ಪ್ರಮುಖ ಯೋಜನೆಗಳ ಅಡಿಯಲ್ಲಿ ತಂದಿದೆ.

ಗುಜರಾತ್ ರಾಜ್ಯವು ಏಪ್ರಿಲ್ 1, 2016 ರಿಂದ ಈ ಕಾಯ್ದೆಯನ್ನು ಜಾರಿಗೆ ತಂದಿದ್ದು, ತನ್ನ ಗ್ರಾಮೀಣ ಜನಸಂಖ್ಯೆಯ 75% ಮತ್ತು ನಗರದ 50%ರಷ್ಟು ಜನರಿಗೆ ಸಬ್ಸಿಡಿ ಧಾನ್ಯಗಳು ₹2/ಕೆಜಿಗೆ ಗೋಧಿ, ₹3/ಕೆಜಿಗೆ ಅಕ್ಕಿ ಮತ್ತು ₹1/ಕೆಜಿಗೆ ಕಡಿಮೆ ಸಂಸ್ಕರಿತ ಧಾನ್ಯಗಳು ನೀಡುವ ಭರವಸೆ ನೀಡಲಾಗಿತ್ತು. ಹೆಚ್ಚುವರಿ ಪೋಷಣೆಗಾಗಿ ದ್ವಿದಳ ಧಾನ್ಯಗಳು, ಬೇಳೆಕಾಳು ಮತ್ತು ಎಣ್ಣೆಯೊಂದಿಗೆ ಇದನ್ನು ವಿಸ್ತರಿಸಲು ರಾಜ್ಯಗಳಿಗೆ ಅವಕಾಶ ನೀಡಲಾಯಿತು. ಗುಜರಾತ್‌ | ಇ-ಕೆವೈಸಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಪ್ರತಿಪಕ್ಷಗಳು

ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆ, ಲೋಕಸಭೆಯ ಬಜೆಟ್ ಅಧಿವೇಶನದ 10ನೇ ದಿನದ ಕಲಾಪವೂ ಸೋಮವಾರ (ಫೆ.10) ಪದೇ ಪದೇ ಮುಂದೂಡಿಕೆಯಾಯಿತು. ಎಂದಿನಂತೆ ಬೆಳಿಗ್ಗೆ 11 ಗಂಟೆಗೆ ಕಲಾಪ ಆರಂಭವಾದಾಗ ವಿರೋಧ ಪಕ್ಷಗಳ ಸದಸ್ಯರು...

ರಾಜಸ್ಥಾನ| ಅನಧಿಕೃತ ಧರ್ಮೋಪದೇಶದ ಆರೋಪ; 12 ತಬ್ಲಿಘಿ ಜಮಾತ್ ಸದಸ್ಯರ ಬಂಧನ

ಗುಜರಾತ್‌ನ ಗೋಧ್ರಾದಿಂದ ಬಂದಿದ್ದ 10 ರಿಂದ 12 ಜನರ ಗುಂಪು ಕಳೆದ ಎರಡು ದಿನಗಳಿಂದ ಬಾಗಿಡೋರಾ ಪ್ರದೇಶದಲ್ಲಿ ಓಡಾಡುತ್ತಿದೆ ಎಂದು ಸ್ಥಳೀಯ ಪೊಲೀಸರಿಗೆ ಮಾಹಿತಿ ಬಂದ ನಂತರ ಅವರನ್ನು ಬಂಧಿಸಲಾಗಿದೆ. ಅಧಿಕಾರಿಗಳಿಗೆ ಮಾಹಿತಿ...

ಕೆನಡಾದಲ್ಲಿ ನೆಲಮಂಗಲ ಮೂಲದ 37ವರ್ಷದ ಟೆಕ್ಕಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಅಪರಿಚಿತ ಗುಂಪು 

ಬೆಂಗಳೂರು: ಕೆನಡಾದ ಟೊರೊಂಟೊದಲ್ಲಿರುವ ಜನನಿಬಿಡ ಶಾಪಿಂಗ್ ಸೆಂಟರ್‌ನ ಪಾರ್ಕಿಂಗ್ ಸ್ಥಳದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಬೆಂಗಳೂರು ಮೂಲದ 37 ವರ್ಷದ ಟೆಕ್ಕಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನೆಲಮಂಗಲ ಬಳಿಯ ತ್ಯಾಮಗೊಂಡ್ಲು ನಿವಾಸಿ...

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...