Homeಮುಖಪುಟಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

- Advertisement -
- Advertisement -

ಇ-ಕೆವೈಸಿ ಲೋಪದಿಂದಾಗಿ ಗುಜರಾತ್‌ನ 10 ಲಕ್ಷ ಜನರು ಪಡಿತರವಿಲ್ಲದೆ ಬಳಲುತ್ತಿದ್ದಾರೆ ಎಂದು TNIE ವರದಿ ಮಾಡಿದೆ. 2025ರ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳು ಅಪೂರ್ಣ ಕೆವೈಸಿ ಔಪಚಾರಿಕತೆಗಳಿಂದಾಗಿ ಪಡಿತರವನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ವರದಿ ಬಹಿರಂಗಪಡಿಸಿದೆ. ಗುಜರಾತ್‌ | ಇ-ಕೆವೈಸಿ

ಗರ್ಭಾವಸ್ಥೆಯ ಹಂತದಿಂದ ಪ್ರೌಢಾವಸ್ಥೆಯವರೆಗೆ ಪ್ರತಿಯೊಬ್ಬ ನಾಗರಿಕರಿಗೂ ಆಹಾರವನ್ನು ಖಾತರಿಪಡಿಸುವುದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಲ್ಲಿ ಕಡ್ಡಾಯವಾಗಿದೆ. ಆದಾಗ್ಯೂ, ಗುಜರಾತ್‌ನಲ್ಲಿ ಈ ಹಕ್ಕನ್ನು ರಕ್ಷಿಸಲು ಉದ್ದೇಶಿಸಲಾದ ವ್ಯವಸ್ಥೆಯಲ್ಲಿ ಬಿರುಕು ಬಿಟ್ಟಿದೆ ಎಂದು ವರದಿ ಸೂಚಿಸಿದೆ.

ನೀತಿಯ ಭರವಸೆಗಳು ಮತ್ತು ವಾಸ್ತವ ವಿತರಣೆಯ ನಡುವಿನ ಅಂತರವನ್ನು ಈ ಬೃಹತ್ ಲೋಪ ಬಹಿರಂಗಪಡಿಸಿದ್ದು, ಇದರಿಂದಾಗಿ ಲಕ್ಷಾಂತರ ದುರ್ಬಲ ನಾಗರಿಕರು ಅಧಿಕಾರಶಾಹಿ ಅಡೆತಡೆಗಳ ನಡುವೆ ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿ ಹೇಳಿದೆ.

ಅನ್ನ ಸುರಕ್ಷಾ ಅಧಿಕಾರ ಅಭಿಯಾನದ ಪ್ರಕಾರ, ಕೇಂದ್ರದ NDPS ಪೋರ್ಟಲ್ ಗುಜರಾತ್‌ನಲ್ಲಿ 3.82 ಕೋಟಿ ಫಲಾನುಭವಿಗಳನ್ನು ಪಟ್ಟಿ ಮಾಡಿದೆ. ಆದರೂ, ಕಳೆದ ಮೂರು ತಿಂಗಳುಗಳಲ್ಲಿ, ನಿಜವಾದ ಫಲಾನುಭವಿಗಳ ಸಂಖ್ಯೆ ಕೇವಲ 3.72 ಕೋಟಿಯಿಂದ 3.76 ಕೋಟಿಯವರೆಗೆ ಇದೆ. ಸುಮಾರು 10 ಲಕ್ಷ ಅರ್ಹ ಜನರು ಈ ಯೋಜನೆ ಪ್ರಯೋಜನದಿಂದ ವಂಚಿತರಾಗಿದ್ದಾರೆ.

ಕಡ್ಡಾಯ ಇ-ಕೆವೈಸಿಯಲ್ಲಿ ವಿಳಂಬ ಮತ್ತು ದೋಷಗಳು ಇದರ ಲೋಪಕ್ಕೆ ಕಾರಣ ಎಂದು ಹೇಳಲಾಗಿದ್ದರೂ, ಅದು ಒಂದೇ ಸಮಸ್ಯೆಯಲ್ಲ ಎಂದು ವರದಿ ಉಲ್ಲೇಖಿಸಿದೆ. ನಿರ್ದಿಷ್ಟ ಅವಧಿಯವರೆಗೆ (ಸಾಮಾನ್ಯವಾಗಿ ಸತತ 3 ತಿಂಗಳು) ಪಡಿತರ ಅಂಗಡಿಗಳಿಂದ ಯಾವುದೇ ಆಹಾರ ಧಾನ್ಯವನ್ನು ಖರೀದಿಸದ ಸೈಲೆಂಟ್ ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕೂಡಾ ಮತ್ತೊಂದು ಬಿಕ್ಕಟ್ಟನ್ನು ಸೃಷ್ಟಿಸಿದೆ.

ಕಳೆದ ಮೂರು ತಿಂಗಳಲ್ಲಿ ಗುಜರಾತ್‌ನಲ್ಲಿ 4 ಲಕ್ಷಕ್ಕೂ ಹೆಚ್ಚು ಸೈಲೆಂಟ್ ಕಾರ್ಡ್‌ಗಳು ದಾಖಲಾಗಿವೆ ಎಂದು ವರದಿ ಹೇಳಿದೆ. ಮೂರು ತಿಂಗಳವರೆಗೆ ಬಳಸದಿದ್ದರೆ ಪಡಿತರ ಚೀಟಿಗಳು ಸ್ವಯಂಚಾಲಿತವಾಗಿ ನಿಷ್ಕ್ರಿಯಗೊಳ್ಳುತ್ತವೆ.

ಅನ್ನಾ ಸುರಕ್ಷಾ ಅಧಿಕಾರ ಅಭಿಯಾನ ಸಂಯೋಜಕಿ ಪಂಕ್ತಿ ಜೋಗ್ ಮಾತನಾಡಿ, “ದಾಖಲೆಯಲ್ಲಿ ಜನರು ಪಡಿತರ ಸಂಗ್ರಹಿಸುವುದನ್ನು ನಿಲ್ಲಿಸಿದಂತೆ ಕಾಣುತ್ತದೆ. ಆದರೆ, ಅಪೂರ್ಣ ಇ-ಕೆವೈಸಿಯಿಂದಾಗಿ ಪಡಿತರ ವಿತರಕರು ತಮ್ಮನ್ನು ಹಿಂತಿರುಗಿ ಹೋಗುವಂತೆ ಹೇಳುತ್ತಿದ್ದಾರೆ ಎಂದು ಕುಟುಂಬಗಳು ಹೇಳಿಕೊಳ್ಳುತ್ತಿವೆ. ಅವರು ಆಹಾರವಿಲ್ಲದೆ ಉಳಿದಿದ್ದು, ವ್ಯವಸ್ಥೆಯ ಕಾರಣಕ್ಕೆ ಅವರ ಪಡಿತರ ಚೀಟಿಗಳು ನಿಷ್ಕ್ರಿಯವಾಗಿದೆ” ಎಂದು ಹೇಳಿದ್ದಾರೆ.

“ಇದು ತೀಕ್ಷ್ಣವಾದ ಮತ್ತು ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಇ-ಕೆವೈಸಿ ಸಮಸ್ಯೆಗಳಿಂದಾಗಿ ಜನರಿಗೆ ಪಡಿತರ ನಿರಾಕರಿಸಲ್ಪಟ್ಟರೆ ಮತ್ತು ಅವರ ಕಾರ್ಡ್‌ಗಳನ್ನು ಸೈಲೆಂಟ್ ಎಂದು ಗುರುತಿಸಿದರೆ, ಲಕ್ಷಾಂತರ ಜನರನ್ನು ಅನೈಚ್ಛಿಕ ಹಸಿವಿಗೆ ತಳ್ಳುವಂತೆ ಮಾಡಿದ ಹೊಣೆ ಯಾರು ಹೊತ್ತುಕೊಳ್ಳಬೇಕು? ಪ್ರತಿ ಪಡಿತರ ಚೀಟಿ ಸಾಮಾನ್ಯವಾಗಿ ಮೂರು ಅಥವಾ ಹೆಚ್ಚಿನ ಕುಟುಂಬ ಸದಸ್ಯರಿದ್ದರೆ, ಬಾಧಿತ ವ್ಯಕ್ತಿಗಳ ನಿಜವಾದ ಸಂಖ್ಯೆ 10 ಲಕ್ಷಕ್ಕೂ ಹೆಚ್ಚಿರಬಹುದು, ”ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

2013ರಲ್ಲಿ, ಸಂಸತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಯನ್ನು ಅಂಗೀಕರಿಸಿತು. ಇದು ಅಂಗನವಾಡಿಗಳಲ್ಲಿನ ಮಕ್ಕಳಿಂದ ಹಿಡಿದು ನಗರದ ಬಡವರವರೆಗೆ ಪ್ರತಿಯೊಬ್ಬ ಭಾರತೀಯರನ್ನು ಕಾನೂನುಬದ್ಧ ಆಹಾರ ಸುರಕ್ಷತಾ ಜಾಲದ ಅಡಿಯಲ್ಲಿ ತರುವ ಗುರಿಯನ್ನು ಹೊಂದಿದೆ. ಇದರ ಅಡಿಯಲ್ಲಿ ಶಾಲೆಯಲ್ಲಿನ ಮಧ್ಯಾಹ್ನದ ಬಿಸಿಯೂಟ, ಅಂಗನವಾಡಿಯ ಪೌಷ್ಟಿಕಾಂಶ ಆಹಾರ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಯಂತಹ ತನ್ನ ವ್ಯಾಪ್ತಿಯ ಪ್ರಮುಖ ಯೋಜನೆಗಳ ಅಡಿಯಲ್ಲಿ ತಂದಿದೆ.

ಗುಜರಾತ್ ರಾಜ್ಯವು ಏಪ್ರಿಲ್ 1, 2016 ರಿಂದ ಈ ಕಾಯ್ದೆಯನ್ನು ಜಾರಿಗೆ ತಂದಿದ್ದು, ತನ್ನ ಗ್ರಾಮೀಣ ಜನಸಂಖ್ಯೆಯ 75% ಮತ್ತು ನಗರದ 50%ರಷ್ಟು ಜನರಿಗೆ ಸಬ್ಸಿಡಿ ಧಾನ್ಯಗಳು ₹2/ಕೆಜಿಗೆ ಗೋಧಿ, ₹3/ಕೆಜಿಗೆ ಅಕ್ಕಿ ಮತ್ತು ₹1/ಕೆಜಿಗೆ ಕಡಿಮೆ ಸಂಸ್ಕರಿತ ಧಾನ್ಯಗಳು ನೀಡುವ ಭರವಸೆ ನೀಡಲಾಗಿತ್ತು. ಹೆಚ್ಚುವರಿ ಪೋಷಣೆಗಾಗಿ ದ್ವಿದಳ ಧಾನ್ಯಗಳು, ಬೇಳೆಕಾಳು ಮತ್ತು ಎಣ್ಣೆಯೊಂದಿಗೆ ಇದನ್ನು ವಿಸ್ತರಿಸಲು ರಾಜ್ಯಗಳಿಗೆ ಅವಕಾಶ ನೀಡಲಾಯಿತು. ಗುಜರಾತ್‌ | ಇ-ಕೆವೈಸಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...