Homeಮುಖಪುಟಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

ಗುಜರಾತ್‌ | ಇ-ಕೆವೈಸಿ ಲೋಪ; ಪಡಿತರವಿಲ್ಲದೆ ಬಳಲುತ್ತಿರುವ 10 ಲಕ್ಷ ಜನರು

- Advertisement -
- Advertisement -

ಇ-ಕೆವೈಸಿ ಲೋಪದಿಂದಾಗಿ ಗುಜರಾತ್‌ನ 10 ಲಕ್ಷ ಜನರು ಪಡಿತರವಿಲ್ಲದೆ ಬಳಲುತ್ತಿದ್ದಾರೆ ಎಂದು TNIE ವರದಿ ಮಾಡಿದೆ. 2025ರ ಏಪ್ರಿಲ್, ಮೇ ಮತ್ತು ಜೂನ್‌ನಲ್ಲಿ ಸುಮಾರು 10 ಲಕ್ಷ ಫಲಾನುಭವಿಗಳು ಅಪೂರ್ಣ ಕೆವೈಸಿ ಔಪಚಾರಿಕತೆಗಳಿಂದಾಗಿ ಪಡಿತರವನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ವರದಿ ಬಹಿರಂಗಪಡಿಸಿದೆ. ಗುಜರಾತ್‌ | ಇ-ಕೆವೈಸಿ

ಗರ್ಭಾವಸ್ಥೆಯ ಹಂತದಿಂದ ಪ್ರೌಢಾವಸ್ಥೆಯವರೆಗೆ ಪ್ರತಿಯೊಬ್ಬ ನಾಗರಿಕರಿಗೂ ಆಹಾರವನ್ನು ಖಾತರಿಪಡಿಸುವುದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಲ್ಲಿ ಕಡ್ಡಾಯವಾಗಿದೆ. ಆದಾಗ್ಯೂ, ಗುಜರಾತ್‌ನಲ್ಲಿ ಈ ಹಕ್ಕನ್ನು ರಕ್ಷಿಸಲು ಉದ್ದೇಶಿಸಲಾದ ವ್ಯವಸ್ಥೆಯಲ್ಲಿ ಬಿರುಕು ಬಿಟ್ಟಿದೆ ಎಂದು ವರದಿ ಸೂಚಿಸಿದೆ.

ನೀತಿಯ ಭರವಸೆಗಳು ಮತ್ತು ವಾಸ್ತವ ವಿತರಣೆಯ ನಡುವಿನ ಅಂತರವನ್ನು ಈ ಬೃಹತ್ ಲೋಪ ಬಹಿರಂಗಪಡಿಸಿದ್ದು, ಇದರಿಂದಾಗಿ ಲಕ್ಷಾಂತರ ದುರ್ಬಲ ನಾಗರಿಕರು ಅಧಿಕಾರಶಾಹಿ ಅಡೆತಡೆಗಳ ನಡುವೆ ಹಸಿವಿನಿಂದ ಬಳಲುತ್ತಿದ್ದಾರೆ ಎಂದು ವರದಿ ಹೇಳಿದೆ.

ಅನ್ನ ಸುರಕ್ಷಾ ಅಧಿಕಾರ ಅಭಿಯಾನದ ಪ್ರಕಾರ, ಕೇಂದ್ರದ NDPS ಪೋರ್ಟಲ್ ಗುಜರಾತ್‌ನಲ್ಲಿ 3.82 ಕೋಟಿ ಫಲಾನುಭವಿಗಳನ್ನು ಪಟ್ಟಿ ಮಾಡಿದೆ. ಆದರೂ, ಕಳೆದ ಮೂರು ತಿಂಗಳುಗಳಲ್ಲಿ, ನಿಜವಾದ ಫಲಾನುಭವಿಗಳ ಸಂಖ್ಯೆ ಕೇವಲ 3.72 ಕೋಟಿಯಿಂದ 3.76 ಕೋಟಿಯವರೆಗೆ ಇದೆ. ಸುಮಾರು 10 ಲಕ್ಷ ಅರ್ಹ ಜನರು ಈ ಯೋಜನೆ ಪ್ರಯೋಜನದಿಂದ ವಂಚಿತರಾಗಿದ್ದಾರೆ.

ಕಡ್ಡಾಯ ಇ-ಕೆವೈಸಿಯಲ್ಲಿ ವಿಳಂಬ ಮತ್ತು ದೋಷಗಳು ಇದರ ಲೋಪಕ್ಕೆ ಕಾರಣ ಎಂದು ಹೇಳಲಾಗಿದ್ದರೂ, ಅದು ಒಂದೇ ಸಮಸ್ಯೆಯಲ್ಲ ಎಂದು ವರದಿ ಉಲ್ಲೇಖಿಸಿದೆ. ನಿರ್ದಿಷ್ಟ ಅವಧಿಯವರೆಗೆ (ಸಾಮಾನ್ಯವಾಗಿ ಸತತ 3 ತಿಂಗಳು) ಪಡಿತರ ಅಂಗಡಿಗಳಿಂದ ಯಾವುದೇ ಆಹಾರ ಧಾನ್ಯವನ್ನು ಖರೀದಿಸದ ಸೈಲೆಂಟ್ ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಕೂಡಾ ಮತ್ತೊಂದು ಬಿಕ್ಕಟ್ಟನ್ನು ಸೃಷ್ಟಿಸಿದೆ.

ಕಳೆದ ಮೂರು ತಿಂಗಳಲ್ಲಿ ಗುಜರಾತ್‌ನಲ್ಲಿ 4 ಲಕ್ಷಕ್ಕೂ ಹೆಚ್ಚು ಸೈಲೆಂಟ್ ಕಾರ್ಡ್‌ಗಳು ದಾಖಲಾಗಿವೆ ಎಂದು ವರದಿ ಹೇಳಿದೆ. ಮೂರು ತಿಂಗಳವರೆಗೆ ಬಳಸದಿದ್ದರೆ ಪಡಿತರ ಚೀಟಿಗಳು ಸ್ವಯಂಚಾಲಿತವಾಗಿ ನಿಷ್ಕ್ರಿಯಗೊಳ್ಳುತ್ತವೆ.

ಅನ್ನಾ ಸುರಕ್ಷಾ ಅಧಿಕಾರ ಅಭಿಯಾನ ಸಂಯೋಜಕಿ ಪಂಕ್ತಿ ಜೋಗ್ ಮಾತನಾಡಿ, “ದಾಖಲೆಯಲ್ಲಿ ಜನರು ಪಡಿತರ ಸಂಗ್ರಹಿಸುವುದನ್ನು ನಿಲ್ಲಿಸಿದಂತೆ ಕಾಣುತ್ತದೆ. ಆದರೆ, ಅಪೂರ್ಣ ಇ-ಕೆವೈಸಿಯಿಂದಾಗಿ ಪಡಿತರ ವಿತರಕರು ತಮ್ಮನ್ನು ಹಿಂತಿರುಗಿ ಹೋಗುವಂತೆ ಹೇಳುತ್ತಿದ್ದಾರೆ ಎಂದು ಕುಟುಂಬಗಳು ಹೇಳಿಕೊಳ್ಳುತ್ತಿವೆ. ಅವರು ಆಹಾರವಿಲ್ಲದೆ ಉಳಿದಿದ್ದು, ವ್ಯವಸ್ಥೆಯ ಕಾರಣಕ್ಕೆ ಅವರ ಪಡಿತರ ಚೀಟಿಗಳು ನಿಷ್ಕ್ರಿಯವಾಗಿದೆ” ಎಂದು ಹೇಳಿದ್ದಾರೆ.

“ಇದು ತೀಕ್ಷ್ಣವಾದ ಮತ್ತು ಗಂಭೀರ ಪ್ರಶ್ನೆಯನ್ನು ಹುಟ್ಟುಹಾಕುತ್ತದೆ. ಇ-ಕೆವೈಸಿ ಸಮಸ್ಯೆಗಳಿಂದಾಗಿ ಜನರಿಗೆ ಪಡಿತರ ನಿರಾಕರಿಸಲ್ಪಟ್ಟರೆ ಮತ್ತು ಅವರ ಕಾರ್ಡ್‌ಗಳನ್ನು ಸೈಲೆಂಟ್ ಎಂದು ಗುರುತಿಸಿದರೆ, ಲಕ್ಷಾಂತರ ಜನರನ್ನು ಅನೈಚ್ಛಿಕ ಹಸಿವಿಗೆ ತಳ್ಳುವಂತೆ ಮಾಡಿದ ಹೊಣೆ ಯಾರು ಹೊತ್ತುಕೊಳ್ಳಬೇಕು? ಪ್ರತಿ ಪಡಿತರ ಚೀಟಿ ಸಾಮಾನ್ಯವಾಗಿ ಮೂರು ಅಥವಾ ಹೆಚ್ಚಿನ ಕುಟುಂಬ ಸದಸ್ಯರಿದ್ದರೆ, ಬಾಧಿತ ವ್ಯಕ್ತಿಗಳ ನಿಜವಾದ ಸಂಖ್ಯೆ 10 ಲಕ್ಷಕ್ಕೂ ಹೆಚ್ಚಿರಬಹುದು, ”ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

2013ರಲ್ಲಿ, ಸಂಸತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಯನ್ನು ಅಂಗೀಕರಿಸಿತು. ಇದು ಅಂಗನವಾಡಿಗಳಲ್ಲಿನ ಮಕ್ಕಳಿಂದ ಹಿಡಿದು ನಗರದ ಬಡವರವರೆಗೆ ಪ್ರತಿಯೊಬ್ಬ ಭಾರತೀಯರನ್ನು ಕಾನೂನುಬದ್ಧ ಆಹಾರ ಸುರಕ್ಷತಾ ಜಾಲದ ಅಡಿಯಲ್ಲಿ ತರುವ ಗುರಿಯನ್ನು ಹೊಂದಿದೆ. ಇದರ ಅಡಿಯಲ್ಲಿ ಶಾಲೆಯಲ್ಲಿನ ಮಧ್ಯಾಹ್ನದ ಬಿಸಿಯೂಟ, ಅಂಗನವಾಡಿಯ ಪೌಷ್ಟಿಕಾಂಶ ಆಹಾರ ಮತ್ತು ಸಾರ್ವಜನಿಕ ವಿತರಣಾ ವ್ಯವಸ್ಥೆ (PDS) ಯಂತಹ ತನ್ನ ವ್ಯಾಪ್ತಿಯ ಪ್ರಮುಖ ಯೋಜನೆಗಳ ಅಡಿಯಲ್ಲಿ ತಂದಿದೆ.

ಗುಜರಾತ್ ರಾಜ್ಯವು ಏಪ್ರಿಲ್ 1, 2016 ರಿಂದ ಈ ಕಾಯ್ದೆಯನ್ನು ಜಾರಿಗೆ ತಂದಿದ್ದು, ತನ್ನ ಗ್ರಾಮೀಣ ಜನಸಂಖ್ಯೆಯ 75% ಮತ್ತು ನಗರದ 50%ರಷ್ಟು ಜನರಿಗೆ ಸಬ್ಸಿಡಿ ಧಾನ್ಯಗಳು ₹2/ಕೆಜಿಗೆ ಗೋಧಿ, ₹3/ಕೆಜಿಗೆ ಅಕ್ಕಿ ಮತ್ತು ₹1/ಕೆಜಿಗೆ ಕಡಿಮೆ ಸಂಸ್ಕರಿತ ಧಾನ್ಯಗಳು ನೀಡುವ ಭರವಸೆ ನೀಡಲಾಗಿತ್ತು. ಹೆಚ್ಚುವರಿ ಪೋಷಣೆಗಾಗಿ ದ್ವಿದಳ ಧಾನ್ಯಗಳು, ಬೇಳೆಕಾಳು ಮತ್ತು ಎಣ್ಣೆಯೊಂದಿಗೆ ಇದನ್ನು ವಿಸ್ತರಿಸಲು ರಾಜ್ಯಗಳಿಗೆ ಅವಕಾಶ ನೀಡಲಾಯಿತು. ಗುಜರಾತ್‌ | ಇ-ಕೆವೈಸಿ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ಹಾವೇರಿ: ಪೌರಕಾರ್ಮಿಕರ ಹಲ್ಲೆ ಪ್ರಕರಣದಲ್ಲಿ ಅಕ್ಷತಾ ಪ್ರಮುಖ ಆರೋಪಿ: ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...