Homeಮುಖಪುಟಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

ಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

- Advertisement -
- Advertisement -

ಸತತ 27 ವರ್ಷಗಳಿಂದ ಗುಜರಾತ್‌ನಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷಕ್ಕೆ ಈ ಬಾರಿಯ ಚುನಾವಣೆಯಲ್ಲಿ ಬಂಡಾಯದ ಬಿಸಿ ಜೋರಾಗಿದೆ. 38 ಹಾಲಿ ಬಿಜೆಪಿ ಶಾಸಕರಿಗೆ ಅದು ಟಿಕೆಟ್ ನಿರಾಕರಿಸಿರಿವುದರಿಂದ ಬಂಡಾಯವೆದ್ದಿರುವ ಹಲವು ಶಾಸಕರು ಸಂಧಾನಕ್ಕೆ ಒಪ್ಪದೇ ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಗಾಂಧಿನಗರದ ಬಿಜೆಪಿ ಕಚೇರಿ ಕಮಲಂ ಎದರು ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ನಾಯಕರಿಗೆ ಟಿಕೆಟ್ ನೀಡದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ಗೃಹ ಸಚಿವ ಹರ್ಷ ಸಂಘ್ವಿ ನಾಲ್ವರು ಬಂಡಾಯ ಶಾಸಕರ ಜೊತೆ ಸಂಧಾನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜವಾಗಿಲ್ಲ.

20 ವರ್ಷಗಳ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಒತ್ತಾಯದ ಮೇರೆಗೆ ಬಿಜೆಪಿಗೆ ಸೇರಿದ್ದೆ ಎಂದು ಹೇಳಿಕೊಂಡಿರುವ ಆರು ಬಾರಿ ಶಾಸಕರಾಗಿರುವ ಟಿಕೆಟ್ ವಂಚಿತ ಮಧುಭಾಯಿ ಶ್ರೀವಾಸ್ತವ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಅತೃಪ್ತರ ಬಂಡಾಯ ಶಮನಗೊಳಿಸಲು ಗುಜರಾತ್‌ಗೆ ತೆರಳಿರುವ ಗೃಹ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರೊಂದಿಗೆ 5 ಗಂಟೆಗಳ ಸುದೀರ್ಘ ಸಭೆ ನಡೆಸಿದ್ದಾರೆ. ಬಂಡಾಯವೆದ್ದಿರುವವರು ಬಹಳ ವರ್ಷಗಳಿಂದ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರೊಂದಿಗೆ ಪ್ರೀತಿ ಮತ್ತು ಸಹಾನುಭೂತಿಯಿಂದ ಅವರೊಂದಿಗೆ ವ್ಯವಹರಿಸಿ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ.

ಇದೇ ರೀತಿಯ ಬಂಡಾಯವನ್ನು ಬಿಜೆಪಿ ಹಿಮಾಚಲ ಪ್ರದೇಶದಲ್ಲಿಯೂ ಸಹ ಅನುಭವಿಸಿತ್ತು. ಅಲ್ಲಿನ 68 ವಿಧಾನಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಫೋನ್ ಕರೆ ಮಾಡಿ ಮಾತನಾಡಿದರೂ ಸಹ ಒಬ್ಬ ಬಂಡಾಯಗಾರನನ್ನು ಸಹ ಮನವೊಲಿಸಲು ಸಾಧ್ಯವಾಗಿರಲಿಲ್ಲ.

ಗುಜರಾತ್ ಚುನಾವಣೆಯು ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. ನರೇಂದ್ರ ಮೋದಿ, ಅಮಿತ್ ಶಾ, ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿಯವರ ತವರು ರಾಜ್ಯವಾದ ಕಾರಣಕ್ಕೂ ಈ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

1995ರವರೆಗೆ ಗುಜರಾತ್ ರಾಜ್ಯವನ್ನು ಕಾಂಗ್ರೆಸ್, ಸಂಸ್ಥಾ ಕಾಂಗ್ರೆಸ್ ಮತ್ತು ಜನತಾದಳ ಪಕ್ಷಗಳು ಆಳಿದ್ದರೆ 1995ರಿಂದೀಚೆಗೆ ನಡೆದ 6 ಚುನಾವಣೆಗಳಲ್ಲಿ ಬಿಜೆಪಿ ಸತತವಾಗಿ ಗೆದ್ದು ಅಧಿಕಾರದಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆಯೆ ಅಧಿಕಾರಕ್ಕಾಗಿ ಪೈಪೋಟಿ ನಡೆಯುತ್ತಿತ್ತು. ಆದರೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಆಪ್ ಕೂಡ ಬಿರುಸಿನ ಪೈಪೋಟಿ ನೀಡಲು ಮುಂದಾಗಿದೆ. ಅದಕ್ಕೆ ಇಂಬು ಕೊಡುವಂತೆ ಕೆಲ ಸಮೀಕ್ಷೆಗಳು ಈ ಬಾರಿಯೂ ಬಿಜೆಪಿ ಬಹುಮತ ಸಾಧಿಸಲಿದ್ದು, ಆಪ್ ಎರಡನೇ ಸ್ಥಾನ ಪಡೆಯುತ್ತದೆ ಮತ್ತು ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡುತ್ತದೆ ಎಂದು ಭವಿಷ್ಯ ನುಡಿದಿವೆ. ಹಾಗಾಗಿ ಗುಜರಾತ್ ಚುನಾವಣೆ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

2017ರ ಚುನಾವಣಾ ಮೆಲುಕು

182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಸರಳ ಬಹುಮತಕ್ಕೆ 93 ಸ್ಥಾನಗಳ ಅಗತ್ಯವಿದೆ. 2017ರ ಕೊನೆಯ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ 99 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಂಡಿತು. ಅದು 2012ರ ಚುನಾವಣೆಗೆ ಹೋಲಿಸಿಕೊಂಡರೆ 16 ಸೀಟುಗಳನ್ನು ಕಳೆದುಕೊಂಡರೂ ಆಡಳಿತ ವಿರೋಧಿ ಅಲೆಯ ನಡುವೆಯೂ ಸತತ ಆರನೇ ಬಾರಿಗೆ ಅಧಿಕಾರ ದಕ್ಕಿಸಿಕೊಂಡಿದ್ದು ದಾಖಲೆಯೇ ಸರಿ. ಕಾಂಗ್ರೆಸ್ ಅಧಿಕಾರದ ಹತ್ತಿರಕ್ಕೆ ಬಂದು (77 ಸ್ಥಾನಗಳು) ಎಡವಿತು. ಅದು 16 ಹೆಚ್ಚುವರಿ ಸೀಟುಗಳನ್ನು ಗೆದ್ದುಕೊಂಡರೂ ಸಹ ಸರಳ ಬಹುಮತ ತಲುಪಲು ಸಾಧ್ಯವಾಗಲಿಲ್ಲ.

2017ರ ಚುನಾವಣೆಯ ಸಮಯದಲ್ಲಿ ಊನಾ ದಲಿತ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದರೆ, ಪಾಟೀದಾರ್ ಮೀಸಲಾತಿಗಾಗಿನ ಹೋರಾಟಗಾರ ಹಾರ್ದಿಕ್ ಪಟೇಲ್ ಮತ್ತು ಹಿಂದುಳಿದ ವರ್ಗದ ಯುವ ನಾಯಕ ಅಲ್ಪೇಶ್ ಠಾಕೂರ್ ಕಾಂಗ್ರೆಸ್ ಸೇರಿದ್ದರು. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ವಿರುದ್ಧ ಸೂರತ್‌ನ ವ್ಯಾಪಾರಿ ಸಮುದಾಯದಲ್ಲಿ ಆಕ್ರೋಶವಿತ್ತು. ಆದರೂ ಕಾಂಗ್ರೆಸ್ ಗೆಲ್ಲಲಾಗಲಿಲ್ಲ. ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ನರೇಂದ್ರ ಮೋದಿಯವರನ್ನು ನೀಚ ಮನುಷ್ಯ ಎಂದು ಕರೆದಿದ್ದುದು ಕಾಂಗ್ರೆಸ್‌ಗೆ ಮುಳುವಾಯಿತು ಎಂಬ ವಿಶ್ಲೇಷಣೆಗಳು ಕೇಳಿಬಂದಿದ್ದವು.

ಗುಜರಾತ್ ನಗರಗಳಲ್ಲಿ ಬಿಜೆಪಿ ಪ್ರಾಬಲ್ಯ- ಗ್ರಾಮೀಣದಲ್ಲಿ ಕಾಂಗ್ರೆಸ್ ಹಿಡಿತ

ಗುಜರಾತ್ ಹೆಚ್ಚು ನಗರೀಕೃತ ರಾಜ್ಯವಾಗಿದೆ. ರಾಜ್ಯದಲ್ಲಿ ಶೇ.43ರಷ್ಟು ನಗರನಿವಾಸಿಗಳು ಎಂದು 2011ರ ಜನಗಣತಿ ಹೇಳುತ್ತದೆ. ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 84 ಕ್ಷೇತ್ರಗಳು ನಗರ, ಪಟ್ಟಣ ಪ್ರದೇಶಗಳಲ್ಲಿದ್ದರೆ, ಉಳಿದ 98 ಕ್ಷೇತ್ರಗಳು ಗ್ರಾಮೀಣ ಭಾಗದಲ್ಲಿವೆ. ಇತ್ತೀಚಿನ ಚುನಾವಣೆಗಳಲ್ಲಿ ನಗರ ಭಾಗದಲ್ಲಿ ಬಿಜೆಪಿ ಹಿಡಿತವಿದ್ದರೆ ಕಾಂಗ್ರೆಸ್ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯ ಸಾಧಿಸಿದೆ.

2017ರ ಚುನಾವಣೆಯನ್ನು ನೋಡುವುದಾದರೆ ನಗರಗಳಲ್ಲಿನ 84 ಕ್ಷೇತ್ರಗಳಲ್ಲಿ ಬಿಜೆಪಿ 63 ಅನ್ನು ಗೆದ್ದುಕೊಂಡಿತ್ತು. ಆದರೆ ಗ್ರಾಮೀಣ ಭಾಗದಲ್ಲಿನ 98 ಕ್ಷೇತ್ರಗಳಲ್ಲಿ 36 ಸ್ಥಾನಗಳಿಗೆ ಸೀಮಿತಗೊಂಡಿತ್ತು. ಅದೇ ರೀತಿ ಕಾಂಗ್ರೆಸ್ ಪಕ್ಷವು ನಗರ ಭಾಗದಲ್ಲಿ ಕೇವಲ 20 ಸ್ಥಾನಗಳಲ್ಲಿ ಗೆಲುವು ಕಂಡರೆ, ಗ್ರಾಮೀಣ ಭಾಗದಲ್ಲಿ 57 ಕ್ಷೇತ್ರಗಳಲ್ಲಿ ಪ್ರಾಬಲ್ಯ ಮೆರೆದಿತ್ತು.

ಆಪ್ ಪ್ರವೇಶದಿಂದ ಯಾರಿಗೆ ಲಾಭ?

2017ರ ಚುನಾವಣೆಯಲ್ಲಿ ಆಪ್ ಗುಜರಾತ್‌ನಲ್ಲಿ ಗಮನ ಸೆಳೆಯಲು ವಿಫಲವಾಗಿತ್ತು. ಆದರೆ ದೆಹಲಿ ನಂತರ ಪಂಜಾಬ್‌ನಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಆಮ್ ಆದ್ಮಿ ಪಕ್ಷ ಸದ್ಯ ಗುಜರಾತ್ ಮೇಲೆ ಹೆಚ್ಚು ಗಮನ ಹರಿಸಿದೆ. ದೊಡ್ಡದೊಡ್ಡ ರ‍್ಯಾಲಿಗಳನ್ನು ನಡೆಸುತ್ತಿದ್ದು ಈಗಾಗಲೇ 118 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಾಧ್ಯಮಗಳು ಸಹ ಆಪ್ ಪಕ್ಷಕ್ಕೆ ಸಾಕಷ್ಟು ಪ್ರಚಾರ ನೀಡಿವೆ. ಕೆಲ ಸರ್ವೆಗಳು ಆಪ್ 22% ಮತಗಳೊಂದಿಗೆ ಕಾಂಗ್ರೆಸ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದು ಮುಖ್ಯ ವಿರೋಧ ಪಕ್ಷವಾಗಲಿದೆ ಎಂದಿವೆ. ಹಾಗಾಗಿ ಆಪ್ ಮೇಲೆ ಎಲ್ಲರ ಕಣ್ಣಿದೆ.

ಮಧ್ಯಮ ವರ್ಗ ಮತ್ತು ನಗರ ಕೇಂದ್ರಿತವಾದ ಆಮ್ ಆದ್ಮಿ ಪಕ್ಷವು ಬಿಜೆಪಿ ಮತಬ್ಯಾಂಕ್‌ಗೆ ಕೈಹಾಕಲಿದೆ ಎಂದು ಗುಜರಾತ್ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. “ಆಪ್‌ಗೆ ಗ್ರಾಮೀಣ ಭಾಗದಲ್ಲಿ ಯಾವುದೇ ನೆಲೆಯಿಲ್ಲ. ಅದು ಏನಿದ್ದರೂ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಗೆಲ್ಲಲಾಗದ ನಗರ ಮತ್ತು ಅರೆ ನಗರದ 66 ಕ್ಷೇತ್ರಗಳಲ್ಲಿ ಬಿಜೆಪಿಗೆ ತಲೆನೋವಾಗಲಿದೆ. ಆಡಳಿತ ವಿರೋಧಿ ಅಲೆ ಗಗನಕ್ಕೇರಿದ್ದು ಜನರು ಬಿಜೆಪಿಯ ದುರಾಡಳಿತದಿಂದ ಬಸವಳಿದಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ಪರೇಶ್ ಧಾನನಿ ಹೇಳಿದ್ದಾರೆ. ಆಪ್ ನಗರ ಪ್ರದೇಶಗಳಲ್ಲಿ ಒಂದಷ್ಟು ಮತ ಗಳಿಸುತ್ತದೆಯೇ ಹೊರತು ಅದು ಅಸೆಂಬ್ಲಿ ಸೀಟುಗಳನ್ನು ಗೆಲ್ಲುವುದಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅಭಿಪ್ರಾಯ ಪಡುತ್ತಾರೆ.

2017ರ ಚುನಾವಣೆಯಲ್ಲಿ ಬಿಜೆಪಿ 49.1% ಮತ ಗಳಿಸಿದರೆ ಕಾಂಗ್ರೆಸ್ 41.4% ಮತ ಗಳಿಸಿತ್ತು. ಆಪ್ ಕೇವಲ 0.10% ಮತಗಳನ್ನಷ್ಟೆ ಗಳಿಸಿತ್ತು. ಅದು ಈ ಬಾರಿ ತನ್ನ ಮತ ಪ್ರಮಾಣವನ್ನು ಎಷ್ಟು ಹೆಚ್ಚಿಸಿಕೊಳ್ಳುತ್ತದೆ ಎನ್ನುವುದರ ಮೇಲೆ ಗುಜರಾತ್‌ನಲ್ಲಿ ಯಾರು ಬಹುಮತ ಗಳಿಸುತ್ತಾರೆ ಎನ್ನುವುದು ನಿರ್ಧಾರವಾಗಲಿದೆ.

ಇದನ್ನೂ ಓದಿ; ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...