Homeಮುಖಪುಟಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

ಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

- Advertisement -
- Advertisement -

ಸತತ 27 ವರ್ಷಗಳಿಂದ ಗುಜರಾತ್‌ನಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷಕ್ಕೆ ಈ ಬಾರಿಯ ಚುನಾವಣೆಯಲ್ಲಿ ಬಂಡಾಯದ ಬಿಸಿ ಜೋರಾಗಿದೆ. 38 ಹಾಲಿ ಬಿಜೆಪಿ ಶಾಸಕರಿಗೆ ಅದು ಟಿಕೆಟ್ ನಿರಾಕರಿಸಿರಿವುದರಿಂದ ಬಂಡಾಯವೆದ್ದಿರುವ ಹಲವು ಶಾಸಕರು ಸಂಧಾನಕ್ಕೆ ಒಪ್ಪದೇ ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಗಾಂಧಿನಗರದ ಬಿಜೆಪಿ ಕಚೇರಿ ಕಮಲಂ ಎದರು ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ನಾಯಕರಿಗೆ ಟಿಕೆಟ್ ನೀಡದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ಗೃಹ ಸಚಿವ ಹರ್ಷ ಸಂಘ್ವಿ ನಾಲ್ವರು ಬಂಡಾಯ ಶಾಸಕರ ಜೊತೆ ಸಂಧಾನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜವಾಗಿಲ್ಲ.

20 ವರ್ಷಗಳ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಒತ್ತಾಯದ ಮೇರೆಗೆ ಬಿಜೆಪಿಗೆ ಸೇರಿದ್ದೆ ಎಂದು ಹೇಳಿಕೊಂಡಿರುವ ಆರು ಬಾರಿ ಶಾಸಕರಾಗಿರುವ ಟಿಕೆಟ್ ವಂಚಿತ ಮಧುಭಾಯಿ ಶ್ರೀವಾಸ್ತವ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಅತೃಪ್ತರ ಬಂಡಾಯ ಶಮನಗೊಳಿಸಲು ಗುಜರಾತ್‌ಗೆ ತೆರಳಿರುವ ಗೃಹ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರೊಂದಿಗೆ 5 ಗಂಟೆಗಳ ಸುದೀರ್ಘ ಸಭೆ ನಡೆಸಿದ್ದಾರೆ. ಬಂಡಾಯವೆದ್ದಿರುವವರು ಬಹಳ ವರ್ಷಗಳಿಂದ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರೊಂದಿಗೆ ಪ್ರೀತಿ ಮತ್ತು ಸಹಾನುಭೂತಿಯಿಂದ ಅವರೊಂದಿಗೆ ವ್ಯವಹರಿಸಿ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ.

ಇದೇ ರೀತಿಯ ಬಂಡಾಯವನ್ನು ಬಿಜೆಪಿ ಹಿಮಾಚಲ ಪ್ರದೇಶದಲ್ಲಿಯೂ ಸಹ ಅನುಭವಿಸಿತ್ತು. ಅಲ್ಲಿನ 68 ವಿಧಾನಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಫೋನ್ ಕರೆ ಮಾಡಿ ಮಾತನಾಡಿದರೂ ಸಹ ಒಬ್ಬ ಬಂಡಾಯಗಾರನನ್ನು ಸಹ ಮನವೊಲಿಸಲು ಸಾಧ್ಯವಾಗಿರಲಿಲ್ಲ.

ಗುಜರಾತ್ ಚುನಾವಣೆಯು ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. ನರೇಂದ್ರ ಮೋದಿ, ಅಮಿತ್ ಶಾ, ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿಯವರ ತವರು ರಾಜ್ಯವಾದ ಕಾರಣಕ್ಕೂ ಈ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

1995ರವರೆಗೆ ಗುಜರಾತ್ ರಾಜ್ಯವನ್ನು ಕಾಂಗ್ರೆಸ್, ಸಂಸ್ಥಾ ಕಾಂಗ್ರೆಸ್ ಮತ್ತು ಜನತಾದಳ ಪಕ್ಷಗಳು ಆಳಿದ್ದರೆ 1995ರಿಂದೀಚೆಗೆ ನಡೆದ 6 ಚುನಾವಣೆಗಳಲ್ಲಿ ಬಿಜೆಪಿ ಸತತವಾಗಿ ಗೆದ್ದು ಅಧಿಕಾರದಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆಯೆ ಅಧಿಕಾರಕ್ಕಾಗಿ ಪೈಪೋಟಿ ನಡೆಯುತ್ತಿತ್ತು. ಆದರೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಆಪ್ ಕೂಡ ಬಿರುಸಿನ ಪೈಪೋಟಿ ನೀಡಲು ಮುಂದಾಗಿದೆ. ಅದಕ್ಕೆ ಇಂಬು ಕೊಡುವಂತೆ ಕೆಲ ಸಮೀಕ್ಷೆಗಳು ಈ ಬಾರಿಯೂ ಬಿಜೆಪಿ ಬಹುಮತ ಸಾಧಿಸಲಿದ್ದು, ಆಪ್ ಎರಡನೇ ಸ್ಥಾನ ಪಡೆಯುತ್ತದೆ ಮತ್ತು ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡುತ್ತದೆ ಎಂದು ಭವಿಷ್ಯ ನುಡಿದಿವೆ. ಹಾಗಾಗಿ ಗುಜರಾತ್ ಚುನಾವಣೆ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

2017ರ ಚುನಾವಣಾ ಮೆಲುಕು

182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಸರಳ ಬಹುಮತಕ್ಕೆ 93 ಸ್ಥಾನಗಳ ಅಗತ್ಯವಿದೆ. 2017ರ ಕೊನೆಯ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ 99 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಂಡಿತು. ಅದು 2012ರ ಚುನಾವಣೆಗೆ ಹೋಲಿಸಿಕೊಂಡರೆ 16 ಸೀಟುಗಳನ್ನು ಕಳೆದುಕೊಂಡರೂ ಆಡಳಿತ ವಿರೋಧಿ ಅಲೆಯ ನಡುವೆಯೂ ಸತತ ಆರನೇ ಬಾರಿಗೆ ಅಧಿಕಾರ ದಕ್ಕಿಸಿಕೊಂಡಿದ್ದು ದಾಖಲೆಯೇ ಸರಿ. ಕಾಂಗ್ರೆಸ್ ಅಧಿಕಾರದ ಹತ್ತಿರಕ್ಕೆ ಬಂದು (77 ಸ್ಥಾನಗಳು) ಎಡವಿತು. ಅದು 16 ಹೆಚ್ಚುವರಿ ಸೀಟುಗಳನ್ನು ಗೆದ್ದುಕೊಂಡರೂ ಸಹ ಸರಳ ಬಹುಮತ ತಲುಪಲು ಸಾಧ್ಯವಾಗಲಿಲ್ಲ.

2017ರ ಚುನಾವಣೆಯ ಸಮಯದಲ್ಲಿ ಊನಾ ದಲಿತ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದರೆ, ಪಾಟೀದಾರ್ ಮೀಸಲಾತಿಗಾಗಿನ ಹೋರಾಟಗಾರ ಹಾರ್ದಿಕ್ ಪಟೇಲ್ ಮತ್ತು ಹಿಂದುಳಿದ ವರ್ಗದ ಯುವ ನಾಯಕ ಅಲ್ಪೇಶ್ ಠಾಕೂರ್ ಕಾಂಗ್ರೆಸ್ ಸೇರಿದ್ದರು. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ವಿರುದ್ಧ ಸೂರತ್‌ನ ವ್ಯಾಪಾರಿ ಸಮುದಾಯದಲ್ಲಿ ಆಕ್ರೋಶವಿತ್ತು. ಆದರೂ ಕಾಂಗ್ರೆಸ್ ಗೆಲ್ಲಲಾಗಲಿಲ್ಲ. ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ನರೇಂದ್ರ ಮೋದಿಯವರನ್ನು ನೀಚ ಮನುಷ್ಯ ಎಂದು ಕರೆದಿದ್ದುದು ಕಾಂಗ್ರೆಸ್‌ಗೆ ಮುಳುವಾಯಿತು ಎಂಬ ವಿಶ್ಲೇಷಣೆಗಳು ಕೇಳಿಬಂದಿದ್ದವು.

ಗುಜರಾತ್ ನಗರಗಳಲ್ಲಿ ಬಿಜೆಪಿ ಪ್ರಾಬಲ್ಯ- ಗ್ರಾಮೀಣದಲ್ಲಿ ಕಾಂಗ್ರೆಸ್ ಹಿಡಿತ

ಗುಜರಾತ್ ಹೆಚ್ಚು ನಗರೀಕೃತ ರಾಜ್ಯವಾಗಿದೆ. ರಾಜ್ಯದಲ್ಲಿ ಶೇ.43ರಷ್ಟು ನಗರನಿವಾಸಿಗಳು ಎಂದು 2011ರ ಜನಗಣತಿ ಹೇಳುತ್ತದೆ. ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 84 ಕ್ಷೇತ್ರಗಳು ನಗರ, ಪಟ್ಟಣ ಪ್ರದೇಶಗಳಲ್ಲಿದ್ದರೆ, ಉಳಿದ 98 ಕ್ಷೇತ್ರಗಳು ಗ್ರಾಮೀಣ ಭಾಗದಲ್ಲಿವೆ. ಇತ್ತೀಚಿನ ಚುನಾವಣೆಗಳಲ್ಲಿ ನಗರ ಭಾಗದಲ್ಲಿ ಬಿಜೆಪಿ ಹಿಡಿತವಿದ್ದರೆ ಕಾಂಗ್ರೆಸ್ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯ ಸಾಧಿಸಿದೆ.

2017ರ ಚುನಾವಣೆಯನ್ನು ನೋಡುವುದಾದರೆ ನಗರಗಳಲ್ಲಿನ 84 ಕ್ಷೇತ್ರಗಳಲ್ಲಿ ಬಿಜೆಪಿ 63 ಅನ್ನು ಗೆದ್ದುಕೊಂಡಿತ್ತು. ಆದರೆ ಗ್ರಾಮೀಣ ಭಾಗದಲ್ಲಿನ 98 ಕ್ಷೇತ್ರಗಳಲ್ಲಿ 36 ಸ್ಥಾನಗಳಿಗೆ ಸೀಮಿತಗೊಂಡಿತ್ತು. ಅದೇ ರೀತಿ ಕಾಂಗ್ರೆಸ್ ಪಕ್ಷವು ನಗರ ಭಾಗದಲ್ಲಿ ಕೇವಲ 20 ಸ್ಥಾನಗಳಲ್ಲಿ ಗೆಲುವು ಕಂಡರೆ, ಗ್ರಾಮೀಣ ಭಾಗದಲ್ಲಿ 57 ಕ್ಷೇತ್ರಗಳಲ್ಲಿ ಪ್ರಾಬಲ್ಯ ಮೆರೆದಿತ್ತು.

ಆಪ್ ಪ್ರವೇಶದಿಂದ ಯಾರಿಗೆ ಲಾಭ?

2017ರ ಚುನಾವಣೆಯಲ್ಲಿ ಆಪ್ ಗುಜರಾತ್‌ನಲ್ಲಿ ಗಮನ ಸೆಳೆಯಲು ವಿಫಲವಾಗಿತ್ತು. ಆದರೆ ದೆಹಲಿ ನಂತರ ಪಂಜಾಬ್‌ನಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಆಮ್ ಆದ್ಮಿ ಪಕ್ಷ ಸದ್ಯ ಗುಜರಾತ್ ಮೇಲೆ ಹೆಚ್ಚು ಗಮನ ಹರಿಸಿದೆ. ದೊಡ್ಡದೊಡ್ಡ ರ‍್ಯಾಲಿಗಳನ್ನು ನಡೆಸುತ್ತಿದ್ದು ಈಗಾಗಲೇ 118 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಾಧ್ಯಮಗಳು ಸಹ ಆಪ್ ಪಕ್ಷಕ್ಕೆ ಸಾಕಷ್ಟು ಪ್ರಚಾರ ನೀಡಿವೆ. ಕೆಲ ಸರ್ವೆಗಳು ಆಪ್ 22% ಮತಗಳೊಂದಿಗೆ ಕಾಂಗ್ರೆಸ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದು ಮುಖ್ಯ ವಿರೋಧ ಪಕ್ಷವಾಗಲಿದೆ ಎಂದಿವೆ. ಹಾಗಾಗಿ ಆಪ್ ಮೇಲೆ ಎಲ್ಲರ ಕಣ್ಣಿದೆ.

ಮಧ್ಯಮ ವರ್ಗ ಮತ್ತು ನಗರ ಕೇಂದ್ರಿತವಾದ ಆಮ್ ಆದ್ಮಿ ಪಕ್ಷವು ಬಿಜೆಪಿ ಮತಬ್ಯಾಂಕ್‌ಗೆ ಕೈಹಾಕಲಿದೆ ಎಂದು ಗುಜರಾತ್ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. “ಆಪ್‌ಗೆ ಗ್ರಾಮೀಣ ಭಾಗದಲ್ಲಿ ಯಾವುದೇ ನೆಲೆಯಿಲ್ಲ. ಅದು ಏನಿದ್ದರೂ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಗೆಲ್ಲಲಾಗದ ನಗರ ಮತ್ತು ಅರೆ ನಗರದ 66 ಕ್ಷೇತ್ರಗಳಲ್ಲಿ ಬಿಜೆಪಿಗೆ ತಲೆನೋವಾಗಲಿದೆ. ಆಡಳಿತ ವಿರೋಧಿ ಅಲೆ ಗಗನಕ್ಕೇರಿದ್ದು ಜನರು ಬಿಜೆಪಿಯ ದುರಾಡಳಿತದಿಂದ ಬಸವಳಿದಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ಪರೇಶ್ ಧಾನನಿ ಹೇಳಿದ್ದಾರೆ. ಆಪ್ ನಗರ ಪ್ರದೇಶಗಳಲ್ಲಿ ಒಂದಷ್ಟು ಮತ ಗಳಿಸುತ್ತದೆಯೇ ಹೊರತು ಅದು ಅಸೆಂಬ್ಲಿ ಸೀಟುಗಳನ್ನು ಗೆಲ್ಲುವುದಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅಭಿಪ್ರಾಯ ಪಡುತ್ತಾರೆ.

2017ರ ಚುನಾವಣೆಯಲ್ಲಿ ಬಿಜೆಪಿ 49.1% ಮತ ಗಳಿಸಿದರೆ ಕಾಂಗ್ರೆಸ್ 41.4% ಮತ ಗಳಿಸಿತ್ತು. ಆಪ್ ಕೇವಲ 0.10% ಮತಗಳನ್ನಷ್ಟೆ ಗಳಿಸಿತ್ತು. ಅದು ಈ ಬಾರಿ ತನ್ನ ಮತ ಪ್ರಮಾಣವನ್ನು ಎಷ್ಟು ಹೆಚ್ಚಿಸಿಕೊಳ್ಳುತ್ತದೆ ಎನ್ನುವುದರ ಮೇಲೆ ಗುಜರಾತ್‌ನಲ್ಲಿ ಯಾರು ಬಹುಮತ ಗಳಿಸುತ್ತಾರೆ ಎನ್ನುವುದು ನಿರ್ಧಾರವಾಗಲಿದೆ.

ಇದನ್ನೂ ಓದಿ; ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...