Homeಮುಖಪುಟಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

ಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

- Advertisement -
- Advertisement -

ಸತತ 27 ವರ್ಷಗಳಿಂದ ಗುಜರಾತ್‌ನಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷಕ್ಕೆ ಈ ಬಾರಿಯ ಚುನಾವಣೆಯಲ್ಲಿ ಬಂಡಾಯದ ಬಿಸಿ ಜೋರಾಗಿದೆ. 38 ಹಾಲಿ ಬಿಜೆಪಿ ಶಾಸಕರಿಗೆ ಅದು ಟಿಕೆಟ್ ನಿರಾಕರಿಸಿರಿವುದರಿಂದ ಬಂಡಾಯವೆದ್ದಿರುವ ಹಲವು ಶಾಸಕರು ಸಂಧಾನಕ್ಕೆ ಒಪ್ಪದೇ ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಗಾಂಧಿನಗರದ ಬಿಜೆಪಿ ಕಚೇರಿ ಕಮಲಂ ಎದರು ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ನಾಯಕರಿಗೆ ಟಿಕೆಟ್ ನೀಡದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ಗೃಹ ಸಚಿವ ಹರ್ಷ ಸಂಘ್ವಿ ನಾಲ್ವರು ಬಂಡಾಯ ಶಾಸಕರ ಜೊತೆ ಸಂಧಾನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜವಾಗಿಲ್ಲ.

20 ವರ್ಷಗಳ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಒತ್ತಾಯದ ಮೇರೆಗೆ ಬಿಜೆಪಿಗೆ ಸೇರಿದ್ದೆ ಎಂದು ಹೇಳಿಕೊಂಡಿರುವ ಆರು ಬಾರಿ ಶಾಸಕರಾಗಿರುವ ಟಿಕೆಟ್ ವಂಚಿತ ಮಧುಭಾಯಿ ಶ್ರೀವಾಸ್ತವ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಅತೃಪ್ತರ ಬಂಡಾಯ ಶಮನಗೊಳಿಸಲು ಗುಜರಾತ್‌ಗೆ ತೆರಳಿರುವ ಗೃಹ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರೊಂದಿಗೆ 5 ಗಂಟೆಗಳ ಸುದೀರ್ಘ ಸಭೆ ನಡೆಸಿದ್ದಾರೆ. ಬಂಡಾಯವೆದ್ದಿರುವವರು ಬಹಳ ವರ್ಷಗಳಿಂದ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರೊಂದಿಗೆ ಪ್ರೀತಿ ಮತ್ತು ಸಹಾನುಭೂತಿಯಿಂದ ಅವರೊಂದಿಗೆ ವ್ಯವಹರಿಸಿ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ.

ಇದೇ ರೀತಿಯ ಬಂಡಾಯವನ್ನು ಬಿಜೆಪಿ ಹಿಮಾಚಲ ಪ್ರದೇಶದಲ್ಲಿಯೂ ಸಹ ಅನುಭವಿಸಿತ್ತು. ಅಲ್ಲಿನ 68 ವಿಧಾನಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಫೋನ್ ಕರೆ ಮಾಡಿ ಮಾತನಾಡಿದರೂ ಸಹ ಒಬ್ಬ ಬಂಡಾಯಗಾರನನ್ನು ಸಹ ಮನವೊಲಿಸಲು ಸಾಧ್ಯವಾಗಿರಲಿಲ್ಲ.

ಗುಜರಾತ್ ಚುನಾವಣೆಯು ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. ನರೇಂದ್ರ ಮೋದಿ, ಅಮಿತ್ ಶಾ, ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿಯವರ ತವರು ರಾಜ್ಯವಾದ ಕಾರಣಕ್ಕೂ ಈ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

1995ರವರೆಗೆ ಗುಜರಾತ್ ರಾಜ್ಯವನ್ನು ಕಾಂಗ್ರೆಸ್, ಸಂಸ್ಥಾ ಕಾಂಗ್ರೆಸ್ ಮತ್ತು ಜನತಾದಳ ಪಕ್ಷಗಳು ಆಳಿದ್ದರೆ 1995ರಿಂದೀಚೆಗೆ ನಡೆದ 6 ಚುನಾವಣೆಗಳಲ್ಲಿ ಬಿಜೆಪಿ ಸತತವಾಗಿ ಗೆದ್ದು ಅಧಿಕಾರದಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆಯೆ ಅಧಿಕಾರಕ್ಕಾಗಿ ಪೈಪೋಟಿ ನಡೆಯುತ್ತಿತ್ತು. ಆದರೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಆಪ್ ಕೂಡ ಬಿರುಸಿನ ಪೈಪೋಟಿ ನೀಡಲು ಮುಂದಾಗಿದೆ. ಅದಕ್ಕೆ ಇಂಬು ಕೊಡುವಂತೆ ಕೆಲ ಸಮೀಕ್ಷೆಗಳು ಈ ಬಾರಿಯೂ ಬಿಜೆಪಿ ಬಹುಮತ ಸಾಧಿಸಲಿದ್ದು, ಆಪ್ ಎರಡನೇ ಸ್ಥಾನ ಪಡೆಯುತ್ತದೆ ಮತ್ತು ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡುತ್ತದೆ ಎಂದು ಭವಿಷ್ಯ ನುಡಿದಿವೆ. ಹಾಗಾಗಿ ಗುಜರಾತ್ ಚುನಾವಣೆ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

2017ರ ಚುನಾವಣಾ ಮೆಲುಕು

182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಸರಳ ಬಹುಮತಕ್ಕೆ 93 ಸ್ಥಾನಗಳ ಅಗತ್ಯವಿದೆ. 2017ರ ಕೊನೆಯ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ 99 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಂಡಿತು. ಅದು 2012ರ ಚುನಾವಣೆಗೆ ಹೋಲಿಸಿಕೊಂಡರೆ 16 ಸೀಟುಗಳನ್ನು ಕಳೆದುಕೊಂಡರೂ ಆಡಳಿತ ವಿರೋಧಿ ಅಲೆಯ ನಡುವೆಯೂ ಸತತ ಆರನೇ ಬಾರಿಗೆ ಅಧಿಕಾರ ದಕ್ಕಿಸಿಕೊಂಡಿದ್ದು ದಾಖಲೆಯೇ ಸರಿ. ಕಾಂಗ್ರೆಸ್ ಅಧಿಕಾರದ ಹತ್ತಿರಕ್ಕೆ ಬಂದು (77 ಸ್ಥಾನಗಳು) ಎಡವಿತು. ಅದು 16 ಹೆಚ್ಚುವರಿ ಸೀಟುಗಳನ್ನು ಗೆದ್ದುಕೊಂಡರೂ ಸಹ ಸರಳ ಬಹುಮತ ತಲುಪಲು ಸಾಧ್ಯವಾಗಲಿಲ್ಲ.

2017ರ ಚುನಾವಣೆಯ ಸಮಯದಲ್ಲಿ ಊನಾ ದಲಿತ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದರೆ, ಪಾಟೀದಾರ್ ಮೀಸಲಾತಿಗಾಗಿನ ಹೋರಾಟಗಾರ ಹಾರ್ದಿಕ್ ಪಟೇಲ್ ಮತ್ತು ಹಿಂದುಳಿದ ವರ್ಗದ ಯುವ ನಾಯಕ ಅಲ್ಪೇಶ್ ಠಾಕೂರ್ ಕಾಂಗ್ರೆಸ್ ಸೇರಿದ್ದರು. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ವಿರುದ್ಧ ಸೂರತ್‌ನ ವ್ಯಾಪಾರಿ ಸಮುದಾಯದಲ್ಲಿ ಆಕ್ರೋಶವಿತ್ತು. ಆದರೂ ಕಾಂಗ್ರೆಸ್ ಗೆಲ್ಲಲಾಗಲಿಲ್ಲ. ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ನರೇಂದ್ರ ಮೋದಿಯವರನ್ನು ನೀಚ ಮನುಷ್ಯ ಎಂದು ಕರೆದಿದ್ದುದು ಕಾಂಗ್ರೆಸ್‌ಗೆ ಮುಳುವಾಯಿತು ಎಂಬ ವಿಶ್ಲೇಷಣೆಗಳು ಕೇಳಿಬಂದಿದ್ದವು.

ಗುಜರಾತ್ ನಗರಗಳಲ್ಲಿ ಬಿಜೆಪಿ ಪ್ರಾಬಲ್ಯ- ಗ್ರಾಮೀಣದಲ್ಲಿ ಕಾಂಗ್ರೆಸ್ ಹಿಡಿತ

ಗುಜರಾತ್ ಹೆಚ್ಚು ನಗರೀಕೃತ ರಾಜ್ಯವಾಗಿದೆ. ರಾಜ್ಯದಲ್ಲಿ ಶೇ.43ರಷ್ಟು ನಗರನಿವಾಸಿಗಳು ಎಂದು 2011ರ ಜನಗಣತಿ ಹೇಳುತ್ತದೆ. ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 84 ಕ್ಷೇತ್ರಗಳು ನಗರ, ಪಟ್ಟಣ ಪ್ರದೇಶಗಳಲ್ಲಿದ್ದರೆ, ಉಳಿದ 98 ಕ್ಷೇತ್ರಗಳು ಗ್ರಾಮೀಣ ಭಾಗದಲ್ಲಿವೆ. ಇತ್ತೀಚಿನ ಚುನಾವಣೆಗಳಲ್ಲಿ ನಗರ ಭಾಗದಲ್ಲಿ ಬಿಜೆಪಿ ಹಿಡಿತವಿದ್ದರೆ ಕಾಂಗ್ರೆಸ್ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯ ಸಾಧಿಸಿದೆ.

2017ರ ಚುನಾವಣೆಯನ್ನು ನೋಡುವುದಾದರೆ ನಗರಗಳಲ್ಲಿನ 84 ಕ್ಷೇತ್ರಗಳಲ್ಲಿ ಬಿಜೆಪಿ 63 ಅನ್ನು ಗೆದ್ದುಕೊಂಡಿತ್ತು. ಆದರೆ ಗ್ರಾಮೀಣ ಭಾಗದಲ್ಲಿನ 98 ಕ್ಷೇತ್ರಗಳಲ್ಲಿ 36 ಸ್ಥಾನಗಳಿಗೆ ಸೀಮಿತಗೊಂಡಿತ್ತು. ಅದೇ ರೀತಿ ಕಾಂಗ್ರೆಸ್ ಪಕ್ಷವು ನಗರ ಭಾಗದಲ್ಲಿ ಕೇವಲ 20 ಸ್ಥಾನಗಳಲ್ಲಿ ಗೆಲುವು ಕಂಡರೆ, ಗ್ರಾಮೀಣ ಭಾಗದಲ್ಲಿ 57 ಕ್ಷೇತ್ರಗಳಲ್ಲಿ ಪ್ರಾಬಲ್ಯ ಮೆರೆದಿತ್ತು.

ಆಪ್ ಪ್ರವೇಶದಿಂದ ಯಾರಿಗೆ ಲಾಭ?

2017ರ ಚುನಾವಣೆಯಲ್ಲಿ ಆಪ್ ಗುಜರಾತ್‌ನಲ್ಲಿ ಗಮನ ಸೆಳೆಯಲು ವಿಫಲವಾಗಿತ್ತು. ಆದರೆ ದೆಹಲಿ ನಂತರ ಪಂಜಾಬ್‌ನಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಆಮ್ ಆದ್ಮಿ ಪಕ್ಷ ಸದ್ಯ ಗುಜರಾತ್ ಮೇಲೆ ಹೆಚ್ಚು ಗಮನ ಹರಿಸಿದೆ. ದೊಡ್ಡದೊಡ್ಡ ರ‍್ಯಾಲಿಗಳನ್ನು ನಡೆಸುತ್ತಿದ್ದು ಈಗಾಗಲೇ 118 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಾಧ್ಯಮಗಳು ಸಹ ಆಪ್ ಪಕ್ಷಕ್ಕೆ ಸಾಕಷ್ಟು ಪ್ರಚಾರ ನೀಡಿವೆ. ಕೆಲ ಸರ್ವೆಗಳು ಆಪ್ 22% ಮತಗಳೊಂದಿಗೆ ಕಾಂಗ್ರೆಸ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದು ಮುಖ್ಯ ವಿರೋಧ ಪಕ್ಷವಾಗಲಿದೆ ಎಂದಿವೆ. ಹಾಗಾಗಿ ಆಪ್ ಮೇಲೆ ಎಲ್ಲರ ಕಣ್ಣಿದೆ.

ಮಧ್ಯಮ ವರ್ಗ ಮತ್ತು ನಗರ ಕೇಂದ್ರಿತವಾದ ಆಮ್ ಆದ್ಮಿ ಪಕ್ಷವು ಬಿಜೆಪಿ ಮತಬ್ಯಾಂಕ್‌ಗೆ ಕೈಹಾಕಲಿದೆ ಎಂದು ಗುಜರಾತ್ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. “ಆಪ್‌ಗೆ ಗ್ರಾಮೀಣ ಭಾಗದಲ್ಲಿ ಯಾವುದೇ ನೆಲೆಯಿಲ್ಲ. ಅದು ಏನಿದ್ದರೂ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಗೆಲ್ಲಲಾಗದ ನಗರ ಮತ್ತು ಅರೆ ನಗರದ 66 ಕ್ಷೇತ್ರಗಳಲ್ಲಿ ಬಿಜೆಪಿಗೆ ತಲೆನೋವಾಗಲಿದೆ. ಆಡಳಿತ ವಿರೋಧಿ ಅಲೆ ಗಗನಕ್ಕೇರಿದ್ದು ಜನರು ಬಿಜೆಪಿಯ ದುರಾಡಳಿತದಿಂದ ಬಸವಳಿದಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ಪರೇಶ್ ಧಾನನಿ ಹೇಳಿದ್ದಾರೆ. ಆಪ್ ನಗರ ಪ್ರದೇಶಗಳಲ್ಲಿ ಒಂದಷ್ಟು ಮತ ಗಳಿಸುತ್ತದೆಯೇ ಹೊರತು ಅದು ಅಸೆಂಬ್ಲಿ ಸೀಟುಗಳನ್ನು ಗೆಲ್ಲುವುದಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅಭಿಪ್ರಾಯ ಪಡುತ್ತಾರೆ.

2017ರ ಚುನಾವಣೆಯಲ್ಲಿ ಬಿಜೆಪಿ 49.1% ಮತ ಗಳಿಸಿದರೆ ಕಾಂಗ್ರೆಸ್ 41.4% ಮತ ಗಳಿಸಿತ್ತು. ಆಪ್ ಕೇವಲ 0.10% ಮತಗಳನ್ನಷ್ಟೆ ಗಳಿಸಿತ್ತು. ಅದು ಈ ಬಾರಿ ತನ್ನ ಮತ ಪ್ರಮಾಣವನ್ನು ಎಷ್ಟು ಹೆಚ್ಚಿಸಿಕೊಳ್ಳುತ್ತದೆ ಎನ್ನುವುದರ ಮೇಲೆ ಗುಜರಾತ್‌ನಲ್ಲಿ ಯಾರು ಬಹುಮತ ಗಳಿಸುತ್ತಾರೆ ಎನ್ನುವುದು ನಿರ್ಧಾರವಾಗಲಿದೆ.

ಇದನ್ನೂ ಓದಿ; ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...