Homeಮುಖಪುಟಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

ಗುಜರಾತ್‌ನಲ್ಲಿ ಬಿಜೆಪಿಗೆ ಬಂಡಾಯದ ಬಿಸಿ: ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯುತ್ತಿರುವ ಟಿಕೆಟ್ ವಂಚಿತರು!

- Advertisement -
- Advertisement -

ಸತತ 27 ವರ್ಷಗಳಿಂದ ಗುಜರಾತ್‌ನಲ್ಲಿ ಆಡಳಿತದಲ್ಲಿರುವ ಬಿಜೆಪಿ ಪಕ್ಷಕ್ಕೆ ಈ ಬಾರಿಯ ಚುನಾವಣೆಯಲ್ಲಿ ಬಂಡಾಯದ ಬಿಸಿ ಜೋರಾಗಿದೆ. 38 ಹಾಲಿ ಬಿಜೆಪಿ ಶಾಸಕರಿಗೆ ಅದು ಟಿಕೆಟ್ ನಿರಾಕರಿಸಿರಿವುದರಿಂದ ಬಂಡಾಯವೆದ್ದಿರುವ ಹಲವು ಶಾಸಕರು ಸಂಧಾನಕ್ಕೆ ಒಪ್ಪದೇ ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಗಾಂಧಿನಗರದ ಬಿಜೆಪಿ ಕಚೇರಿ ಕಮಲಂ ಎದರು ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ನಾಯಕರಿಗೆ ಟಿಕೆಟ್ ನೀಡದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ರಾಜ್ಯದ ಗೃಹ ಸಚಿವ ಹರ್ಷ ಸಂಘ್ವಿ ನಾಲ್ವರು ಬಂಡಾಯ ಶಾಸಕರ ಜೊತೆ ಸಂಧಾನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜವಾಗಿಲ್ಲ.

20 ವರ್ಷಗಳ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಒತ್ತಾಯದ ಮೇರೆಗೆ ಬಿಜೆಪಿಗೆ ಸೇರಿದ್ದೆ ಎಂದು ಹೇಳಿಕೊಂಡಿರುವ ಆರು ಬಾರಿ ಶಾಸಕರಾಗಿರುವ ಟಿಕೆಟ್ ವಂಚಿತ ಮಧುಭಾಯಿ ಶ್ರೀವಾಸ್ತವ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ.

ಅತೃಪ್ತರ ಬಂಡಾಯ ಶಮನಗೊಳಿಸಲು ಗುಜರಾತ್‌ಗೆ ತೆರಳಿರುವ ಗೃಹ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರೊಂದಿಗೆ 5 ಗಂಟೆಗಳ ಸುದೀರ್ಘ ಸಭೆ ನಡೆಸಿದ್ದಾರೆ. ಬಂಡಾಯವೆದ್ದಿರುವವರು ಬಹಳ ವರ್ಷಗಳಿಂದ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರೊಂದಿಗೆ ಪ್ರೀತಿ ಮತ್ತು ಸಹಾನುಭೂತಿಯಿಂದ ಅವರೊಂದಿಗೆ ವ್ಯವಹರಿಸಿ ಎಂದು ಅಮಿತ್ ಶಾ ಹೇಳಿದ್ದಾರೆ ಎನ್ನಲಾಗಿದೆ.

ಇದೇ ರೀತಿಯ ಬಂಡಾಯವನ್ನು ಬಿಜೆಪಿ ಹಿಮಾಚಲ ಪ್ರದೇಶದಲ್ಲಿಯೂ ಸಹ ಅನುಭವಿಸಿತ್ತು. ಅಲ್ಲಿನ 68 ವಿಧಾನಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಫೋನ್ ಕರೆ ಮಾಡಿ ಮಾತನಾಡಿದರೂ ಸಹ ಒಬ್ಬ ಬಂಡಾಯಗಾರನನ್ನು ಸಹ ಮನವೊಲಿಸಲು ಸಾಧ್ಯವಾಗಿರಲಿಲ್ಲ.

ಗುಜರಾತ್ ಚುನಾವಣೆಯು ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. ನರೇಂದ್ರ ಮೋದಿ, ಅಮಿತ್ ಶಾ, ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿಯವರ ತವರು ರಾಜ್ಯವಾದ ಕಾರಣಕ್ಕೂ ಈ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

1995ರವರೆಗೆ ಗುಜರಾತ್ ರಾಜ್ಯವನ್ನು ಕಾಂಗ್ರೆಸ್, ಸಂಸ್ಥಾ ಕಾಂಗ್ರೆಸ್ ಮತ್ತು ಜನತಾದಳ ಪಕ್ಷಗಳು ಆಳಿದ್ದರೆ 1995ರಿಂದೀಚೆಗೆ ನಡೆದ 6 ಚುನಾವಣೆಗಳಲ್ಲಿ ಬಿಜೆಪಿ ಸತತವಾಗಿ ಗೆದ್ದು ಅಧಿಕಾರದಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆಯೆ ಅಧಿಕಾರಕ್ಕಾಗಿ ಪೈಪೋಟಿ ನಡೆಯುತ್ತಿತ್ತು. ಆದರೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಆಪ್ ಕೂಡ ಬಿರುಸಿನ ಪೈಪೋಟಿ ನೀಡಲು ಮುಂದಾಗಿದೆ. ಅದಕ್ಕೆ ಇಂಬು ಕೊಡುವಂತೆ ಕೆಲ ಸಮೀಕ್ಷೆಗಳು ಈ ಬಾರಿಯೂ ಬಿಜೆಪಿ ಬಹುಮತ ಸಾಧಿಸಲಿದ್ದು, ಆಪ್ ಎರಡನೇ ಸ್ಥಾನ ಪಡೆಯುತ್ತದೆ ಮತ್ತು ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡುತ್ತದೆ ಎಂದು ಭವಿಷ್ಯ ನುಡಿದಿವೆ. ಹಾಗಾಗಿ ಗುಜರಾತ್ ಚುನಾವಣೆ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

2017ರ ಚುನಾವಣಾ ಮೆಲುಕು

182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಸರಳ ಬಹುಮತಕ್ಕೆ 93 ಸ್ಥಾನಗಳ ಅಗತ್ಯವಿದೆ. 2017ರ ಕೊನೆಯ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ 99 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಂಡಿತು. ಅದು 2012ರ ಚುನಾವಣೆಗೆ ಹೋಲಿಸಿಕೊಂಡರೆ 16 ಸೀಟುಗಳನ್ನು ಕಳೆದುಕೊಂಡರೂ ಆಡಳಿತ ವಿರೋಧಿ ಅಲೆಯ ನಡುವೆಯೂ ಸತತ ಆರನೇ ಬಾರಿಗೆ ಅಧಿಕಾರ ದಕ್ಕಿಸಿಕೊಂಡಿದ್ದು ದಾಖಲೆಯೇ ಸರಿ. ಕಾಂಗ್ರೆಸ್ ಅಧಿಕಾರದ ಹತ್ತಿರಕ್ಕೆ ಬಂದು (77 ಸ್ಥಾನಗಳು) ಎಡವಿತು. ಅದು 16 ಹೆಚ್ಚುವರಿ ಸೀಟುಗಳನ್ನು ಗೆದ್ದುಕೊಂಡರೂ ಸಹ ಸರಳ ಬಹುಮತ ತಲುಪಲು ಸಾಧ್ಯವಾಗಲಿಲ್ಲ.

2017ರ ಚುನಾವಣೆಯ ಸಮಯದಲ್ಲಿ ಊನಾ ದಲಿತ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದರೆ, ಪಾಟೀದಾರ್ ಮೀಸಲಾತಿಗಾಗಿನ ಹೋರಾಟಗಾರ ಹಾರ್ದಿಕ್ ಪಟೇಲ್ ಮತ್ತು ಹಿಂದುಳಿದ ವರ್ಗದ ಯುವ ನಾಯಕ ಅಲ್ಪೇಶ್ ಠಾಕೂರ್ ಕಾಂಗ್ರೆಸ್ ಸೇರಿದ್ದರು. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ವಿರುದ್ಧ ಸೂರತ್‌ನ ವ್ಯಾಪಾರಿ ಸಮುದಾಯದಲ್ಲಿ ಆಕ್ರೋಶವಿತ್ತು. ಆದರೂ ಕಾಂಗ್ರೆಸ್ ಗೆಲ್ಲಲಾಗಲಿಲ್ಲ. ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ನರೇಂದ್ರ ಮೋದಿಯವರನ್ನು ನೀಚ ಮನುಷ್ಯ ಎಂದು ಕರೆದಿದ್ದುದು ಕಾಂಗ್ರೆಸ್‌ಗೆ ಮುಳುವಾಯಿತು ಎಂಬ ವಿಶ್ಲೇಷಣೆಗಳು ಕೇಳಿಬಂದಿದ್ದವು.

ಗುಜರಾತ್ ನಗರಗಳಲ್ಲಿ ಬಿಜೆಪಿ ಪ್ರಾಬಲ್ಯ- ಗ್ರಾಮೀಣದಲ್ಲಿ ಕಾಂಗ್ರೆಸ್ ಹಿಡಿತ

ಗುಜರಾತ್ ಹೆಚ್ಚು ನಗರೀಕೃತ ರಾಜ್ಯವಾಗಿದೆ. ರಾಜ್ಯದಲ್ಲಿ ಶೇ.43ರಷ್ಟು ನಗರನಿವಾಸಿಗಳು ಎಂದು 2011ರ ಜನಗಣತಿ ಹೇಳುತ್ತದೆ. ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 84 ಕ್ಷೇತ್ರಗಳು ನಗರ, ಪಟ್ಟಣ ಪ್ರದೇಶಗಳಲ್ಲಿದ್ದರೆ, ಉಳಿದ 98 ಕ್ಷೇತ್ರಗಳು ಗ್ರಾಮೀಣ ಭಾಗದಲ್ಲಿವೆ. ಇತ್ತೀಚಿನ ಚುನಾವಣೆಗಳಲ್ಲಿ ನಗರ ಭಾಗದಲ್ಲಿ ಬಿಜೆಪಿ ಹಿಡಿತವಿದ್ದರೆ ಕಾಂಗ್ರೆಸ್ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯ ಸಾಧಿಸಿದೆ.

2017ರ ಚುನಾವಣೆಯನ್ನು ನೋಡುವುದಾದರೆ ನಗರಗಳಲ್ಲಿನ 84 ಕ್ಷೇತ್ರಗಳಲ್ಲಿ ಬಿಜೆಪಿ 63 ಅನ್ನು ಗೆದ್ದುಕೊಂಡಿತ್ತು. ಆದರೆ ಗ್ರಾಮೀಣ ಭಾಗದಲ್ಲಿನ 98 ಕ್ಷೇತ್ರಗಳಲ್ಲಿ 36 ಸ್ಥಾನಗಳಿಗೆ ಸೀಮಿತಗೊಂಡಿತ್ತು. ಅದೇ ರೀತಿ ಕಾಂಗ್ರೆಸ್ ಪಕ್ಷವು ನಗರ ಭಾಗದಲ್ಲಿ ಕೇವಲ 20 ಸ್ಥಾನಗಳಲ್ಲಿ ಗೆಲುವು ಕಂಡರೆ, ಗ್ರಾಮೀಣ ಭಾಗದಲ್ಲಿ 57 ಕ್ಷೇತ್ರಗಳಲ್ಲಿ ಪ್ರಾಬಲ್ಯ ಮೆರೆದಿತ್ತು.

ಆಪ್ ಪ್ರವೇಶದಿಂದ ಯಾರಿಗೆ ಲಾಭ?

2017ರ ಚುನಾವಣೆಯಲ್ಲಿ ಆಪ್ ಗುಜರಾತ್‌ನಲ್ಲಿ ಗಮನ ಸೆಳೆಯಲು ವಿಫಲವಾಗಿತ್ತು. ಆದರೆ ದೆಹಲಿ ನಂತರ ಪಂಜಾಬ್‌ನಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಆಮ್ ಆದ್ಮಿ ಪಕ್ಷ ಸದ್ಯ ಗುಜರಾತ್ ಮೇಲೆ ಹೆಚ್ಚು ಗಮನ ಹರಿಸಿದೆ. ದೊಡ್ಡದೊಡ್ಡ ರ‍್ಯಾಲಿಗಳನ್ನು ನಡೆಸುತ್ತಿದ್ದು ಈಗಾಗಲೇ 118 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಾಧ್ಯಮಗಳು ಸಹ ಆಪ್ ಪಕ್ಷಕ್ಕೆ ಸಾಕಷ್ಟು ಪ್ರಚಾರ ನೀಡಿವೆ. ಕೆಲ ಸರ್ವೆಗಳು ಆಪ್ 22% ಮತಗಳೊಂದಿಗೆ ಕಾಂಗ್ರೆಸ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದು ಮುಖ್ಯ ವಿರೋಧ ಪಕ್ಷವಾಗಲಿದೆ ಎಂದಿವೆ. ಹಾಗಾಗಿ ಆಪ್ ಮೇಲೆ ಎಲ್ಲರ ಕಣ್ಣಿದೆ.

ಮಧ್ಯಮ ವರ್ಗ ಮತ್ತು ನಗರ ಕೇಂದ್ರಿತವಾದ ಆಮ್ ಆದ್ಮಿ ಪಕ್ಷವು ಬಿಜೆಪಿ ಮತಬ್ಯಾಂಕ್‌ಗೆ ಕೈಹಾಕಲಿದೆ ಎಂದು ಗುಜರಾತ್ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. “ಆಪ್‌ಗೆ ಗ್ರಾಮೀಣ ಭಾಗದಲ್ಲಿ ಯಾವುದೇ ನೆಲೆಯಿಲ್ಲ. ಅದು ಏನಿದ್ದರೂ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಗೆಲ್ಲಲಾಗದ ನಗರ ಮತ್ತು ಅರೆ ನಗರದ 66 ಕ್ಷೇತ್ರಗಳಲ್ಲಿ ಬಿಜೆಪಿಗೆ ತಲೆನೋವಾಗಲಿದೆ. ಆಡಳಿತ ವಿರೋಧಿ ಅಲೆ ಗಗನಕ್ಕೇರಿದ್ದು ಜನರು ಬಿಜೆಪಿಯ ದುರಾಡಳಿತದಿಂದ ಬಸವಳಿದಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ಪರೇಶ್ ಧಾನನಿ ಹೇಳಿದ್ದಾರೆ. ಆಪ್ ನಗರ ಪ್ರದೇಶಗಳಲ್ಲಿ ಒಂದಷ್ಟು ಮತ ಗಳಿಸುತ್ತದೆಯೇ ಹೊರತು ಅದು ಅಸೆಂಬ್ಲಿ ಸೀಟುಗಳನ್ನು ಗೆಲ್ಲುವುದಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅಭಿಪ್ರಾಯ ಪಡುತ್ತಾರೆ.

2017ರ ಚುನಾವಣೆಯಲ್ಲಿ ಬಿಜೆಪಿ 49.1% ಮತ ಗಳಿಸಿದರೆ ಕಾಂಗ್ರೆಸ್ 41.4% ಮತ ಗಳಿಸಿತ್ತು. ಆಪ್ ಕೇವಲ 0.10% ಮತಗಳನ್ನಷ್ಟೆ ಗಳಿಸಿತ್ತು. ಅದು ಈ ಬಾರಿ ತನ್ನ ಮತ ಪ್ರಮಾಣವನ್ನು ಎಷ್ಟು ಹೆಚ್ಚಿಸಿಕೊಳ್ಳುತ್ತದೆ ಎನ್ನುವುದರ ಮೇಲೆ ಗುಜರಾತ್‌ನಲ್ಲಿ ಯಾರು ಬಹುಮತ ಗಳಿಸುತ್ತಾರೆ ಎನ್ನುವುದು ನಿರ್ಧಾರವಾಗಲಿದೆ.

ಇದನ್ನೂ ಓದಿ; ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...