Homeಮುಖಪುಟಗುಜರಾತ್‌ ಚುನಾವಣೆ: ಇನ್‌ಸ್ಟಾದಲ್ಲಿ ಪೋಸ್ಟ್‌ ಹಾಕಿದ್ದ ಐಎಎಸ್ ಅಧಿಕಾರಿ ಅಮಾನತು

ಗುಜರಾತ್‌ ಚುನಾವಣೆ: ಇನ್‌ಸ್ಟಾದಲ್ಲಿ ಪೋಸ್ಟ್‌ ಹಾಕಿದ್ದ ಐಎಎಸ್ ಅಧಿಕಾರಿ ಅಮಾನತು

- Advertisement -
- Advertisement -

ಗುಜರಾತ್ ಚುನಾವಣಾ ಕರ್ತವ್ಯಕ್ಕೆ ನಿಯೋಜಿತವಾಗಿರುವ ಅಧಿಕಾರಿಯೊಬ್ಬರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಾಡಿರುವ ಪೋಸ್ಟ್‌ಗಳ ಕಾರಣಕ್ಕಾಗಿ ಅಮಾನತಿಗೆ ಒಳಗಾಗಿದ್ದಾರೆ.

ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಅಭಿಷೇಕ್ ಸಿಂಗ್ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಕಾರಣಕ್ಕಾಗಿ ಚುನಾವಣಾ ಆಯೋಗವು ಅವರನ್ನು ಕರ್ತವ್ಯದಿಂದ ತೆರವು ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಭಿಷೇಕ್ ಸಿಂಗ್ ಅವರು “ಜನರಲ್ ಅಬ್ಸರ್ವರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ತಮ್ಮ ಅಧಿಕೃತ ಸ್ಥಾನವನ್ನು ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ” ಎಂದು ಚುನಾವಣಾ ಆಯೋಗದ ಆದೇಶ ತಿಳಿಸಿದೆ.

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ಚುನಾವಣೆಗೆ ಮುಂಚಿತವಾಗಿ, ಉತ್ತರ ಪ್ರದೇಶ ಕೇಡರ್ ಅಧಿಕಾರಿ ಅಭಿಷೇಕ್ ಸಿಂಗ್ ಅವರನ್ನು ಅಹಮದಾಬಾದ್‌ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ (ಬಾಪುನಗರ ಮತ್ತು ಅಸರ್ವಾ) ಸಾಮಾನ್ಯ ವೀಕ್ಷಕರನ್ನಾಗಿ ನೇಮಿಸಲಾಗಿತ್ತು.

 

View this post on Instagram

 

A post shared by Abhishek Singh (@abhishek_as_it_is)

ಸಾಮಾಜಿಕ ಮಾಧ್ಯಮದಲ್ಲಿ ಅಭಿಷೇಕ್ ಎಸ್. ಐಎಎಸ್ ಎಂದು ಗುರುತಿಸಿಕೊಂಡಿರುವ ಅಧಿಕಾರಿಯು, ಇನ್‌ಸ್ಟಾಗ್ರಾಮ್‌ನಲ್ಲಿ ಎರಡು ಫೋಟೋಗಳನ್ನು ಹಂಚಿಕೊಂಡಿದ್ದರು. ಬಿಕಾನ್‌ ಇರುವ ಅಧಿಕೃತ ಕಾರಿಗೆ ‘ವೀಕ್ಷಕ’ ಎಂಬ ಬೋರ್ಡ್ ನೇತು ಹಾಕಲಾಗಿದ್ದು, ಅದರ ಪಕ್ಕದಲ್ಲಿ ಅಧಿಕಾರಿ ನಿಂತಿರುವುದನ್ನು ಒಂದು ಫೋಟೋದಲ್ಲಿ ಕಾಣಬಹುದು.

“ಗುಜರಾತ್ ಚುನಾವಣೆಗೆ ವೀಕ್ಷಕನಾಗಿ ಸೇರ್ಪಡೆಗೊಂಡಿದ್ದೇನೆ” ಎಂದು ಶೀರ್ಷಿಕೆಯನ್ನು ನೀಡಲಾಗಿದೆ. ಮತ್ತೊಂದು ಫೋಟೋದಲ್ಲಿ ಅಭಿಷೇಕ್ ಅವರೊಂದಿಗೆ ಇನ್ನೂ ಮೂವರು ಅಧಿಕಾರಿಗಳು ಮತ್ತು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ಇರುವುದನ್ನು ಕಾಣಬಹುದು.

ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಅಭಿಷೇಕ್ ಅವರು ತಮ್ಮನ್ನು “ಸಾರ್ವಜನಿಕ ಸೇವಕ, ನಟ, ಸಾಮಾಜಿಕ ಉದ್ಯಮಿ ಮತ್ತು ಪಟ್ಟುಬಿಡದ ಆಶಾವಾದಿ” ಎಂದು ವಿವರಿಸಿಕೊಂಡಿದ್ದಾರೆ.

ಈ ಫೋಟೋಗಳನ್ನು ಟ್ವಿಟರ್‌ನಲ್ಲಿಯೂ ಅವರು ಹಂಚಿಕೊಂಡಿದ್ದಾರೆ.

“ಚುನಾವಣಾ ಆಯೋಗವು ಅಧಿಕಾರಿಯ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಅವರನ್ನು ಸಾಮಾನ್ಯ ವೀಕ್ಷಕ ಹುದ್ದೆಯಿಂದ ತಕ್ಷಣವೇ ತೆರೆವು ಮಾಡಲಾಗಿದೆ. ಮುಂದಿನ ಆದೇಶದವರೆಗೆ ಯಾವುದೇ ಚುನಾವಣಾ ಸಂಬಂಧಿತ ಕರ್ತವ್ಯದಿಂದ ಅವರನ್ನು ಹೊರಗಿಡಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಭಿಷೇಕ್, ಚುನಾವಣಾ ಆಯೋಗದ ನಿರ್ಧಾರವನ್ನು ಒಪ್ಪಿಕೊಂಡಿರುವುದಾಗಿಯೂ ಹೇಳಿದ್ದಾರೆ.

“ಗೌರವಾನ್ವಿತ ಚುನಾವಣಾ ಆಯೋಗದ ನಿರ್ಧಾರವನ್ನು ಎಲ್ಲಾ ನಮ್ರತೆಯಿಂದ ಸ್ವೀಕರಿಸುತ್ತೇನೆ. ಈ ಪೋಸ್ಟ್‌ನಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಒಬ್ಬ ಸಾರ್ವಜನಿಕ ಸೇವಕ ತನ್ನ ಕರ್ತವ್ಯದ ಕುರಿತು ಸಾರ್ವಜನಿಕರಿಗೆ ತಿಳಿಸುವ ವಿಷಯ ಇದಾಗಿದೆ. ಆದರೆ ಪ್ರಚಾರ ಅಥವಾ ಸ್ಟಂಟ್ ಅಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

ಅಧಿಕಾರಿಯು ತಕ್ಷಣವೇ ಕ್ಷೇತ್ರವನ್ನು ತೊರೆಯಬೇಕು. ಇವರ ನಂತರದ ಅಧಿಕಾರಿ ಕೆಲಸಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಆದೇಶಿಸಲಾಯಿತು. ಅಭಿಷೇಕ್‌ ಅವರ ಪೋಸ್ಟ್‌ಗಳಲ್ಲಿ ಕಾಣಿಸಿಕೊಂಡಿದ್ದ ಕಾರು ಸೇರಿದಂತೆ ಗುಜರಾತ್‌ನಲ್ಲಿ ಅವರಿಗೆ ಒದಗಿಸಲಾದ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಸಹ ಕಸಿದುಕೊಳ್ಳಲಾಗಿದೆ.

ಅಭಿಷೇಕ್ ಅವರ ಸ್ಥಾನಕ್ಕೆ ಮತ್ತೊಬ್ಬ ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಕ್ರಿಶನ್ ಬಾಜ್‌ಪೇಯ್ ಅವರನ್ನು ನೇಮಿಸಲಾಗಿದೆ.

ಗುಜರಾತ್‌ನಲ್ಲಿ ಹೊಸ ಸರ್ಕಾರ ರಚನೆಗಾಗಿ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...