Homeಮುಖಪುಟಗುಜರಾತ್‌ ಚುನಾವಣೆ: ಇನ್‌ಸ್ಟಾದಲ್ಲಿ ಪೋಸ್ಟ್‌ ಹಾಕಿದ್ದ ಐಎಎಸ್ ಅಧಿಕಾರಿ ಅಮಾನತು

ಗುಜರಾತ್‌ ಚುನಾವಣೆ: ಇನ್‌ಸ್ಟಾದಲ್ಲಿ ಪೋಸ್ಟ್‌ ಹಾಕಿದ್ದ ಐಎಎಸ್ ಅಧಿಕಾರಿ ಅಮಾನತು

- Advertisement -
- Advertisement -

ಗುಜರಾತ್ ಚುನಾವಣಾ ಕರ್ತವ್ಯಕ್ಕೆ ನಿಯೋಜಿತವಾಗಿರುವ ಅಧಿಕಾರಿಯೊಬ್ಬರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಾಡಿರುವ ಪೋಸ್ಟ್‌ಗಳ ಕಾರಣಕ್ಕಾಗಿ ಅಮಾನತಿಗೆ ಒಳಗಾಗಿದ್ದಾರೆ.

ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಅಭಿಷೇಕ್ ಸಿಂಗ್ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಕಾರಣಕ್ಕಾಗಿ ಚುನಾವಣಾ ಆಯೋಗವು ಅವರನ್ನು ಕರ್ತವ್ಯದಿಂದ ತೆರವು ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಭಿಷೇಕ್ ಸಿಂಗ್ ಅವರು “ಜನರಲ್ ಅಬ್ಸರ್ವರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ತಮ್ಮ ಅಧಿಕೃತ ಸ್ಥಾನವನ್ನು ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ” ಎಂದು ಚುನಾವಣಾ ಆಯೋಗದ ಆದೇಶ ತಿಳಿಸಿದೆ.

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ಚುನಾವಣೆಗೆ ಮುಂಚಿತವಾಗಿ, ಉತ್ತರ ಪ್ರದೇಶ ಕೇಡರ್ ಅಧಿಕಾರಿ ಅಭಿಷೇಕ್ ಸಿಂಗ್ ಅವರನ್ನು ಅಹಮದಾಬಾದ್‌ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ (ಬಾಪುನಗರ ಮತ್ತು ಅಸರ್ವಾ) ಸಾಮಾನ್ಯ ವೀಕ್ಷಕರನ್ನಾಗಿ ನೇಮಿಸಲಾಗಿತ್ತು.

 

View this post on Instagram

 

A post shared by Abhishek Singh (@abhishek_as_it_is)

ಸಾಮಾಜಿಕ ಮಾಧ್ಯಮದಲ್ಲಿ ಅಭಿಷೇಕ್ ಎಸ್. ಐಎಎಸ್ ಎಂದು ಗುರುತಿಸಿಕೊಂಡಿರುವ ಅಧಿಕಾರಿಯು, ಇನ್‌ಸ್ಟಾಗ್ರಾಮ್‌ನಲ್ಲಿ ಎರಡು ಫೋಟೋಗಳನ್ನು ಹಂಚಿಕೊಂಡಿದ್ದರು. ಬಿಕಾನ್‌ ಇರುವ ಅಧಿಕೃತ ಕಾರಿಗೆ ‘ವೀಕ್ಷಕ’ ಎಂಬ ಬೋರ್ಡ್ ನೇತು ಹಾಕಲಾಗಿದ್ದು, ಅದರ ಪಕ್ಕದಲ್ಲಿ ಅಧಿಕಾರಿ ನಿಂತಿರುವುದನ್ನು ಒಂದು ಫೋಟೋದಲ್ಲಿ ಕಾಣಬಹುದು.

“ಗುಜರಾತ್ ಚುನಾವಣೆಗೆ ವೀಕ್ಷಕನಾಗಿ ಸೇರ್ಪಡೆಗೊಂಡಿದ್ದೇನೆ” ಎಂದು ಶೀರ್ಷಿಕೆಯನ್ನು ನೀಡಲಾಗಿದೆ. ಮತ್ತೊಂದು ಫೋಟೋದಲ್ಲಿ ಅಭಿಷೇಕ್ ಅವರೊಂದಿಗೆ ಇನ್ನೂ ಮೂವರು ಅಧಿಕಾರಿಗಳು ಮತ್ತು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ಇರುವುದನ್ನು ಕಾಣಬಹುದು.

ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಅಭಿಷೇಕ್ ಅವರು ತಮ್ಮನ್ನು “ಸಾರ್ವಜನಿಕ ಸೇವಕ, ನಟ, ಸಾಮಾಜಿಕ ಉದ್ಯಮಿ ಮತ್ತು ಪಟ್ಟುಬಿಡದ ಆಶಾವಾದಿ” ಎಂದು ವಿವರಿಸಿಕೊಂಡಿದ್ದಾರೆ.

ಈ ಫೋಟೋಗಳನ್ನು ಟ್ವಿಟರ್‌ನಲ್ಲಿಯೂ ಅವರು ಹಂಚಿಕೊಂಡಿದ್ದಾರೆ.

“ಚುನಾವಣಾ ಆಯೋಗವು ಅಧಿಕಾರಿಯ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಅವರನ್ನು ಸಾಮಾನ್ಯ ವೀಕ್ಷಕ ಹುದ್ದೆಯಿಂದ ತಕ್ಷಣವೇ ತೆರೆವು ಮಾಡಲಾಗಿದೆ. ಮುಂದಿನ ಆದೇಶದವರೆಗೆ ಯಾವುದೇ ಚುನಾವಣಾ ಸಂಬಂಧಿತ ಕರ್ತವ್ಯದಿಂದ ಅವರನ್ನು ಹೊರಗಿಡಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಭಿಷೇಕ್, ಚುನಾವಣಾ ಆಯೋಗದ ನಿರ್ಧಾರವನ್ನು ಒಪ್ಪಿಕೊಂಡಿರುವುದಾಗಿಯೂ ಹೇಳಿದ್ದಾರೆ.

“ಗೌರವಾನ್ವಿತ ಚುನಾವಣಾ ಆಯೋಗದ ನಿರ್ಧಾರವನ್ನು ಎಲ್ಲಾ ನಮ್ರತೆಯಿಂದ ಸ್ವೀಕರಿಸುತ್ತೇನೆ. ಈ ಪೋಸ್ಟ್‌ನಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಒಬ್ಬ ಸಾರ್ವಜನಿಕ ಸೇವಕ ತನ್ನ ಕರ್ತವ್ಯದ ಕುರಿತು ಸಾರ್ವಜನಿಕರಿಗೆ ತಿಳಿಸುವ ವಿಷಯ ಇದಾಗಿದೆ. ಆದರೆ ಪ್ರಚಾರ ಅಥವಾ ಸ್ಟಂಟ್ ಅಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

ಅಧಿಕಾರಿಯು ತಕ್ಷಣವೇ ಕ್ಷೇತ್ರವನ್ನು ತೊರೆಯಬೇಕು. ಇವರ ನಂತರದ ಅಧಿಕಾರಿ ಕೆಲಸಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಆದೇಶಿಸಲಾಯಿತು. ಅಭಿಷೇಕ್‌ ಅವರ ಪೋಸ್ಟ್‌ಗಳಲ್ಲಿ ಕಾಣಿಸಿಕೊಂಡಿದ್ದ ಕಾರು ಸೇರಿದಂತೆ ಗುಜರಾತ್‌ನಲ್ಲಿ ಅವರಿಗೆ ಒದಗಿಸಲಾದ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಸಹ ಕಸಿದುಕೊಳ್ಳಲಾಗಿದೆ.

ಅಭಿಷೇಕ್ ಅವರ ಸ್ಥಾನಕ್ಕೆ ಮತ್ತೊಬ್ಬ ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಕ್ರಿಶನ್ ಬಾಜ್‌ಪೇಯ್ ಅವರನ್ನು ನೇಮಿಸಲಾಗಿದೆ.

ಗುಜರಾತ್‌ನಲ್ಲಿ ಹೊಸ ಸರ್ಕಾರ ರಚನೆಗಾಗಿ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...