Homeಮುಖಪುಟಗುಜರಾತ್‌ ಚುನಾವಣೆ: ಇನ್‌ಸ್ಟಾದಲ್ಲಿ ಪೋಸ್ಟ್‌ ಹಾಕಿದ್ದ ಐಎಎಸ್ ಅಧಿಕಾರಿ ಅಮಾನತು

ಗುಜರಾತ್‌ ಚುನಾವಣೆ: ಇನ್‌ಸ್ಟಾದಲ್ಲಿ ಪೋಸ್ಟ್‌ ಹಾಕಿದ್ದ ಐಎಎಸ್ ಅಧಿಕಾರಿ ಅಮಾನತು

- Advertisement -
- Advertisement -

ಗುಜರಾತ್ ಚುನಾವಣಾ ಕರ್ತವ್ಯಕ್ಕೆ ನಿಯೋಜಿತವಾಗಿರುವ ಅಧಿಕಾರಿಯೊಬ್ಬರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಾಡಿರುವ ಪೋಸ್ಟ್‌ಗಳ ಕಾರಣಕ್ಕಾಗಿ ಅಮಾನತಿಗೆ ಒಳಗಾಗಿದ್ದಾರೆ.

ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಅಭಿಷೇಕ್ ಸಿಂಗ್ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಕಾರಣಕ್ಕಾಗಿ ಚುನಾವಣಾ ಆಯೋಗವು ಅವರನ್ನು ಕರ್ತವ್ಯದಿಂದ ತೆರವು ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಭಿಷೇಕ್ ಸಿಂಗ್ ಅವರು “ಜನರಲ್ ಅಬ್ಸರ್ವರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ತಮ್ಮ ಅಧಿಕೃತ ಸ್ಥಾನವನ್ನು ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ” ಎಂದು ಚುನಾವಣಾ ಆಯೋಗದ ಆದೇಶ ತಿಳಿಸಿದೆ.

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ಚುನಾವಣೆಗೆ ಮುಂಚಿತವಾಗಿ, ಉತ್ತರ ಪ್ರದೇಶ ಕೇಡರ್ ಅಧಿಕಾರಿ ಅಭಿಷೇಕ್ ಸಿಂಗ್ ಅವರನ್ನು ಅಹಮದಾಬಾದ್‌ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ (ಬಾಪುನಗರ ಮತ್ತು ಅಸರ್ವಾ) ಸಾಮಾನ್ಯ ವೀಕ್ಷಕರನ್ನಾಗಿ ನೇಮಿಸಲಾಗಿತ್ತು.

 

View this post on Instagram

 

A post shared by Abhishek Singh (@abhishek_as_it_is)

ಸಾಮಾಜಿಕ ಮಾಧ್ಯಮದಲ್ಲಿ ಅಭಿಷೇಕ್ ಎಸ್. ಐಎಎಸ್ ಎಂದು ಗುರುತಿಸಿಕೊಂಡಿರುವ ಅಧಿಕಾರಿಯು, ಇನ್‌ಸ್ಟಾಗ್ರಾಮ್‌ನಲ್ಲಿ ಎರಡು ಫೋಟೋಗಳನ್ನು ಹಂಚಿಕೊಂಡಿದ್ದರು. ಬಿಕಾನ್‌ ಇರುವ ಅಧಿಕೃತ ಕಾರಿಗೆ ‘ವೀಕ್ಷಕ’ ಎಂಬ ಬೋರ್ಡ್ ನೇತು ಹಾಕಲಾಗಿದ್ದು, ಅದರ ಪಕ್ಕದಲ್ಲಿ ಅಧಿಕಾರಿ ನಿಂತಿರುವುದನ್ನು ಒಂದು ಫೋಟೋದಲ್ಲಿ ಕಾಣಬಹುದು.

“ಗುಜರಾತ್ ಚುನಾವಣೆಗೆ ವೀಕ್ಷಕನಾಗಿ ಸೇರ್ಪಡೆಗೊಂಡಿದ್ದೇನೆ” ಎಂದು ಶೀರ್ಷಿಕೆಯನ್ನು ನೀಡಲಾಗಿದೆ. ಮತ್ತೊಂದು ಫೋಟೋದಲ್ಲಿ ಅಭಿಷೇಕ್ ಅವರೊಂದಿಗೆ ಇನ್ನೂ ಮೂವರು ಅಧಿಕಾರಿಗಳು ಮತ್ತು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ಇರುವುದನ್ನು ಕಾಣಬಹುದು.

ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಅಭಿಷೇಕ್ ಅವರು ತಮ್ಮನ್ನು “ಸಾರ್ವಜನಿಕ ಸೇವಕ, ನಟ, ಸಾಮಾಜಿಕ ಉದ್ಯಮಿ ಮತ್ತು ಪಟ್ಟುಬಿಡದ ಆಶಾವಾದಿ” ಎಂದು ವಿವರಿಸಿಕೊಂಡಿದ್ದಾರೆ.

ಈ ಫೋಟೋಗಳನ್ನು ಟ್ವಿಟರ್‌ನಲ್ಲಿಯೂ ಅವರು ಹಂಚಿಕೊಂಡಿದ್ದಾರೆ.

“ಚುನಾವಣಾ ಆಯೋಗವು ಅಧಿಕಾರಿಯ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಅವರನ್ನು ಸಾಮಾನ್ಯ ವೀಕ್ಷಕ ಹುದ್ದೆಯಿಂದ ತಕ್ಷಣವೇ ತೆರೆವು ಮಾಡಲಾಗಿದೆ. ಮುಂದಿನ ಆದೇಶದವರೆಗೆ ಯಾವುದೇ ಚುನಾವಣಾ ಸಂಬಂಧಿತ ಕರ್ತವ್ಯದಿಂದ ಅವರನ್ನು ಹೊರಗಿಡಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಭಿಷೇಕ್, ಚುನಾವಣಾ ಆಯೋಗದ ನಿರ್ಧಾರವನ್ನು ಒಪ್ಪಿಕೊಂಡಿರುವುದಾಗಿಯೂ ಹೇಳಿದ್ದಾರೆ.

“ಗೌರವಾನ್ವಿತ ಚುನಾವಣಾ ಆಯೋಗದ ನಿರ್ಧಾರವನ್ನು ಎಲ್ಲಾ ನಮ್ರತೆಯಿಂದ ಸ್ವೀಕರಿಸುತ್ತೇನೆ. ಈ ಪೋಸ್ಟ್‌ನಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಒಬ್ಬ ಸಾರ್ವಜನಿಕ ಸೇವಕ ತನ್ನ ಕರ್ತವ್ಯದ ಕುರಿತು ಸಾರ್ವಜನಿಕರಿಗೆ ತಿಳಿಸುವ ವಿಷಯ ಇದಾಗಿದೆ. ಆದರೆ ಪ್ರಚಾರ ಅಥವಾ ಸ್ಟಂಟ್ ಅಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

ಅಧಿಕಾರಿಯು ತಕ್ಷಣವೇ ಕ್ಷೇತ್ರವನ್ನು ತೊರೆಯಬೇಕು. ಇವರ ನಂತರದ ಅಧಿಕಾರಿ ಕೆಲಸಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಆದೇಶಿಸಲಾಯಿತು. ಅಭಿಷೇಕ್‌ ಅವರ ಪೋಸ್ಟ್‌ಗಳಲ್ಲಿ ಕಾಣಿಸಿಕೊಂಡಿದ್ದ ಕಾರು ಸೇರಿದಂತೆ ಗುಜರಾತ್‌ನಲ್ಲಿ ಅವರಿಗೆ ಒದಗಿಸಲಾದ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಸಹ ಕಸಿದುಕೊಳ್ಳಲಾಗಿದೆ.

ಅಭಿಷೇಕ್ ಅವರ ಸ್ಥಾನಕ್ಕೆ ಮತ್ತೊಬ್ಬ ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಕ್ರಿಶನ್ ಬಾಜ್‌ಪೇಯ್ ಅವರನ್ನು ನೇಮಿಸಲಾಗಿದೆ.

ಗುಜರಾತ್‌ನಲ್ಲಿ ಹೊಸ ಸರ್ಕಾರ ರಚನೆಗಾಗಿ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...