Homeಮುಖಪುಟಗುಜರಾತ್‌ ಚುನಾವಣೆ: ಇನ್‌ಸ್ಟಾದಲ್ಲಿ ಪೋಸ್ಟ್‌ ಹಾಕಿದ್ದ ಐಎಎಸ್ ಅಧಿಕಾರಿ ಅಮಾನತು

ಗುಜರಾತ್‌ ಚುನಾವಣೆ: ಇನ್‌ಸ್ಟಾದಲ್ಲಿ ಪೋಸ್ಟ್‌ ಹಾಕಿದ್ದ ಐಎಎಸ್ ಅಧಿಕಾರಿ ಅಮಾನತು

- Advertisement -
- Advertisement -

ಗುಜರಾತ್ ಚುನಾವಣಾ ಕರ್ತವ್ಯಕ್ಕೆ ನಿಯೋಜಿತವಾಗಿರುವ ಅಧಿಕಾರಿಯೊಬ್ಬರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಮಾಡಿರುವ ಪೋಸ್ಟ್‌ಗಳ ಕಾರಣಕ್ಕಾಗಿ ಅಮಾನತಿಗೆ ಒಳಗಾಗಿದ್ದಾರೆ.

ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಅಭಿಷೇಕ್ ಸಿಂಗ್ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಕಾರಣಕ್ಕಾಗಿ ಚುನಾವಣಾ ಆಯೋಗವು ಅವರನ್ನು ಕರ್ತವ್ಯದಿಂದ ತೆರವು ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅಭಿಷೇಕ್ ಸಿಂಗ್ ಅವರು “ಜನರಲ್ ಅಬ್ಸರ್ವರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದು ಅವರು ಪೋಸ್ಟ್ ಮಾಡಿದ್ದಾರೆ. ತಮ್ಮ ಅಧಿಕೃತ ಸ್ಥಾನವನ್ನು ವೈಯಕ್ತಿಕ ಪ್ರಚಾರಕ್ಕೆ ಬಳಸಿಕೊಂಡಿದ್ದಾರೆ” ಎಂದು ಚುನಾವಣಾ ಆಯೋಗದ ಆದೇಶ ತಿಳಿಸಿದೆ.

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ಚುನಾವಣೆಗೆ ಮುಂಚಿತವಾಗಿ, ಉತ್ತರ ಪ್ರದೇಶ ಕೇಡರ್ ಅಧಿಕಾರಿ ಅಭಿಷೇಕ್ ಸಿಂಗ್ ಅವರನ್ನು ಅಹಮದಾಬಾದ್‌ನ ಎರಡು ವಿಧಾನಸಭಾ ಕ್ಷೇತ್ರಗಳಿಗೆ (ಬಾಪುನಗರ ಮತ್ತು ಅಸರ್ವಾ) ಸಾಮಾನ್ಯ ವೀಕ್ಷಕರನ್ನಾಗಿ ನೇಮಿಸಲಾಗಿತ್ತು.

 

View this post on Instagram

 

A post shared by Abhishek Singh (@abhishek_as_it_is)

ಸಾಮಾಜಿಕ ಮಾಧ್ಯಮದಲ್ಲಿ ಅಭಿಷೇಕ್ ಎಸ್. ಐಎಎಸ್ ಎಂದು ಗುರುತಿಸಿಕೊಂಡಿರುವ ಅಧಿಕಾರಿಯು, ಇನ್‌ಸ್ಟಾಗ್ರಾಮ್‌ನಲ್ಲಿ ಎರಡು ಫೋಟೋಗಳನ್ನು ಹಂಚಿಕೊಂಡಿದ್ದರು. ಬಿಕಾನ್‌ ಇರುವ ಅಧಿಕೃತ ಕಾರಿಗೆ ‘ವೀಕ್ಷಕ’ ಎಂಬ ಬೋರ್ಡ್ ನೇತು ಹಾಕಲಾಗಿದ್ದು, ಅದರ ಪಕ್ಕದಲ್ಲಿ ಅಧಿಕಾರಿ ನಿಂತಿರುವುದನ್ನು ಒಂದು ಫೋಟೋದಲ್ಲಿ ಕಾಣಬಹುದು.

“ಗುಜರಾತ್ ಚುನಾವಣೆಗೆ ವೀಕ್ಷಕನಾಗಿ ಸೇರ್ಪಡೆಗೊಂಡಿದ್ದೇನೆ” ಎಂದು ಶೀರ್ಷಿಕೆಯನ್ನು ನೀಡಲಾಗಿದೆ. ಮತ್ತೊಂದು ಫೋಟೋದಲ್ಲಿ ಅಭಿಷೇಕ್ ಅವರೊಂದಿಗೆ ಇನ್ನೂ ಮೂವರು ಅಧಿಕಾರಿಗಳು ಮತ್ತು ಶಸ್ತ್ರಸಜ್ಜಿತ ಭದ್ರತಾ ಸಿಬ್ಬಂದಿ ಇರುವುದನ್ನು ಕಾಣಬಹುದು.

ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಅಭಿಷೇಕ್ ಅವರು ತಮ್ಮನ್ನು “ಸಾರ್ವಜನಿಕ ಸೇವಕ, ನಟ, ಸಾಮಾಜಿಕ ಉದ್ಯಮಿ ಮತ್ತು ಪಟ್ಟುಬಿಡದ ಆಶಾವಾದಿ” ಎಂದು ವಿವರಿಸಿಕೊಂಡಿದ್ದಾರೆ.

ಈ ಫೋಟೋಗಳನ್ನು ಟ್ವಿಟರ್‌ನಲ್ಲಿಯೂ ಅವರು ಹಂಚಿಕೊಂಡಿದ್ದಾರೆ.

“ಚುನಾವಣಾ ಆಯೋಗವು ಅಧಿಕಾರಿಯ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಗಳನ್ನು ಬಹಳ ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ಅವರನ್ನು ಸಾಮಾನ್ಯ ವೀಕ್ಷಕ ಹುದ್ದೆಯಿಂದ ತಕ್ಷಣವೇ ತೆರೆವು ಮಾಡಲಾಗಿದೆ. ಮುಂದಿನ ಆದೇಶದವರೆಗೆ ಯಾವುದೇ ಚುನಾವಣಾ ಸಂಬಂಧಿತ ಕರ್ತವ್ಯದಿಂದ ಅವರನ್ನು ಹೊರಗಿಡಲಾಗಿದೆ” ಎಂದು ಮೂಲಗಳು ತಿಳಿಸಿವೆ.

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅಭಿಷೇಕ್, ಚುನಾವಣಾ ಆಯೋಗದ ನಿರ್ಧಾರವನ್ನು ಒಪ್ಪಿಕೊಂಡಿರುವುದಾಗಿಯೂ ಹೇಳಿದ್ದಾರೆ.

“ಗೌರವಾನ್ವಿತ ಚುನಾವಣಾ ಆಯೋಗದ ನಿರ್ಧಾರವನ್ನು ಎಲ್ಲಾ ನಮ್ರತೆಯಿಂದ ಸ್ವೀಕರಿಸುತ್ತೇನೆ. ಈ ಪೋಸ್ಟ್‌ನಲ್ಲಿ ಯಾವುದೇ ತಪ್ಪಿಲ್ಲ ಎಂದು ನಾನು ಭಾವಿಸುತ್ತೇನೆ. ಒಬ್ಬ ಸಾರ್ವಜನಿಕ ಸೇವಕ ತನ್ನ ಕರ್ತವ್ಯದ ಕುರಿತು ಸಾರ್ವಜನಿಕರಿಗೆ ತಿಳಿಸುವ ವಿಷಯ ಇದಾಗಿದೆ. ಆದರೆ ಪ್ರಚಾರ ಅಥವಾ ಸ್ಟಂಟ್ ಅಲ್ಲ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿರಿ: ಫ್ಯಾಕ್ಟ್‌‌ಚೆಕ್‌: ‘ಮಹಾಭಾರತದ ರಥಗಳು’ ಎಂದು ಚೀನಾದ ಮ್ಯೂಸಿಯಂ ದೃಶ್ಯಗಳು ವೈರಲ್‌!

ಅಧಿಕಾರಿಯು ತಕ್ಷಣವೇ ಕ್ಷೇತ್ರವನ್ನು ತೊರೆಯಬೇಕು. ಇವರ ನಂತರದ ಅಧಿಕಾರಿ ಕೆಲಸಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಆದೇಶಿಸಲಾಯಿತು. ಅಭಿಷೇಕ್‌ ಅವರ ಪೋಸ್ಟ್‌ಗಳಲ್ಲಿ ಕಾಣಿಸಿಕೊಂಡಿದ್ದ ಕಾರು ಸೇರಿದಂತೆ ಗುಜರಾತ್‌ನಲ್ಲಿ ಅವರಿಗೆ ಒದಗಿಸಲಾದ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ಸಹ ಕಸಿದುಕೊಳ್ಳಲಾಗಿದೆ.

ಅಭಿಷೇಕ್ ಅವರ ಸ್ಥಾನಕ್ಕೆ ಮತ್ತೊಬ್ಬ ಐಎಎಸ್ (ಭಾರತೀಯ ಆಡಳಿತ ಸೇವೆ) ಅಧಿಕಾರಿ ಕ್ರಿಶನ್ ಬಾಜ್‌ಪೇಯ್ ಅವರನ್ನು ನೇಮಿಸಲಾಗಿದೆ.

ಗುಜರಾತ್‌ನಲ್ಲಿ ಹೊಸ ಸರ್ಕಾರ ರಚನೆಗಾಗಿ ಡಿಸೆಂಬರ್ 1 ಮತ್ತು 5 ರಂದು ಮತದಾನ ನಡೆಯಲಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...