Homeಮುಖಪುಟಗುಜರಾತ್ ಚುನಾವಣೆ: ನಗರಗಳಲ್ಲಿ ಪ್ರಬಲವಾಗಿರುವ ಬಿಜೆಪಿ ಮತ ಕಬಳಿಸಲಿದೆಯೇ ಆಪ್?

ಗುಜರಾತ್ ಚುನಾವಣೆ: ನಗರಗಳಲ್ಲಿ ಪ್ರಬಲವಾಗಿರುವ ಬಿಜೆಪಿ ಮತ ಕಬಳಿಸಲಿದೆಯೇ ಆಪ್?

2017ರ ಚುನಾವಣೆಯಲ್ಲಿ ನಗರಗಳಲ್ಲಿನ 84 ಕ್ಷೇತ್ರಗಳಲ್ಲಿ ಬಿಜೆಪಿ 63 ಅನ್ನು ಗೆದ್ದುಕೊಂಡಿತ್ತು.

- Advertisement -
- Advertisement -

ಗುಜರಾತ್ ಚುನಾವಣೆಯು ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 8ರಂದು ಫಲಿತಾಂಶ ಘೋಷಣೆಯಾಗಲಿದೆ. ನರೇಂದ್ರ ಮೋದಿ, ಅಮಿತ್ ಶಾ, ಗೌತಮ್ ಅದಾನಿ ಮತ್ತು ಮುಖೇಶ್ ಅಂಬಾನಿಯವರ ತವರು ರಾಜ್ಯವಾದ ಕಾರಣಕ್ಕೂ ಈ ಚುನಾವಣೆ ತೀವ್ರ ಕುತೂಹಲ ಮೂಡಿಸಿದೆ.

1995ರವರೆಗೆ ಗುಜರಾತ್ ರಾಜ್ಯವನ್ನು ಕಾಂಗ್ರೆಸ್, ಸಂಸ್ಥಾ ಕಾಂಗ್ರೆಸ್ ಮತ್ತು ಜನತಾದಳ ಪಕ್ಷಗಳು ಆಳಿದ್ದರೆ 1995ರಿಂದೀಚೆಗೆ ನಡೆದ 6 ಚುನಾವಣೆಗಳಲ್ಲಿ ಬಿಜೆಪಿ ಸತತವಾಗಿ ಗೆದ್ದು ಅಧಿಕಾರದಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಗುಜರಾತ್‌ನಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆಯೆ ಅಧಿಕಾರಕ್ಕಾಗಿ ಪೈಪೋಟಿ ನಡೆಯುತ್ತಿತ್ತು. ಆದರೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಆಪ್ ಕೂಡ ಬಿರುಸಿನ ಪೈಪೋಟಿ ನೀಡಲು ಮುಂದಾಗಿದೆ. ಅದಕ್ಕೆ ಇಂಬು ಕೊಡುವಂತೆ ಕೆಲ ಸಮೀಕ್ಷೆಗಳು ಈ ಬಾರಿಯೂ ಬಿಜೆಪಿ ಬಹುಮತ ಸಾಧಿಸಲಿದ್ದು, ಆಪ್ ಎರಡನೇ ಸ್ಥಾನ ಪಡೆಯುತ್ತದೆ ಮತ್ತು ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳ್ಳಲ್ಪಡುತ್ತದೆ ಎಂದು ಭವಿಷ್ಯ ನುಡಿದಿವೆ. ಹಾಗಾಗಿ ಗುಜರಾತ್ ಚುನಾವಣೆ ಬಗೆಗಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ.

2017ರ ಚುನಾವಣಾ ಮೆಲುಕು

182 ವಿಧಾನಸಭಾ ಕ್ಷೇತ್ರಗಳಿರುವ ಗುಜರಾತ್‌ನಲ್ಲಿ ಸರಳ ಬಹುಮತಕ್ಕೆ 93 ಸ್ಥಾನಗಳ ಅಗತ್ಯವಿದೆ. 2017ರ ಕೊನೆಯ ಚುನಾವಣೆಯಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಕಾಳಗ ನಡೆದು ಕೊನೆಗೆ 99 ಸ್ಥಾನ ಗೆಲ್ಲುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಂಡಿತು. ಅದು 2012ರ ಚುನಾವಣೆಗೆ ಹೋಲಿಸಿಕೊಂಡರೆ 16 ಸೀಟುಗಳನ್ನು ಕಳೆದುಕೊಂಡರೂ ಆಡಳಿತ ವಿರೋಧಿ ಅಲೆಯ ನಡುವೆಯೂ ಸತತ ಆರನೇ ಬಾರಿಗೆ ಅಧಿಕಾರ ದಕ್ಕಿಸಿಕೊಂಡಿದ್ದು ದಾಖಲೆಯೇ ಸರಿ. ಕಾಂಗ್ರೆಸ್ ಅಧಿಕಾರದ ಹತ್ತಿರಕ್ಕೆ ಬಂದು (77 ಸ್ಥಾನಗಳು) ಎಡವಿತು. ಅದು 16 ಹೆಚ್ಚುವರಿ ಸೀಟುಗಳನ್ನು ಗೆದ್ದುಕೊಂಡರೂ ಸಹ ಸರಳ ಬಹುಮತ ತಲುಪಲು ಸಾಧ್ಯವಾಗಲಿಲ್ಲ.

2017ರ ಚುನಾವಣೆಯ ಸಮಯದಲ್ಲಿ ಊನಾ ದಲಿತ ಚಳವಳಿಯ ನಾಯಕ ಜಿಗ್ನೇಶ್ ಮೇವಾನಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿದ್ದರೆ, ಪಾಟೀದಾರ್ ಮೀಸಲಾತಿಗಾಗಿನ ಹೋರಾಟಗಾರ ಹಾರ್ದಿಕ್ ಪಟೇಲ್ ಮತ್ತು ಹಿಂದುಳಿದ ವರ್ಗದ ಯುವ ನಾಯಕ ಅಲ್ಪೇಶ್ ಠಾಕೂರ್ ಕಾಂಗ್ರೆಸ್ ಸೇರಿದ್ದರು. ನೋಟು ಅಮಾನ್ಯೀಕರಣ ಮತ್ತು ಜಿಎಸ್‌ಟಿ ವಿರುದ್ಧ ಸೂರತ್‌ನ ವ್ಯಾಪಾರಿ ಸಮುದಾಯದಲ್ಲಿ ಆಕ್ರೋಶವಿತ್ತು. ಆದರೂ ಕಾಂಗ್ರೆಸ್ ಗೆಲ್ಲಲಾಗಲಿಲ್ಲ. ಚುನಾವಣೆಗೂ ಮುನ್ನ ಕಾಂಗ್ರೆಸ್ ಮುಖಂಡ ಮಣಿಶಂಕರ್ ಅಯ್ಯರ್ ನರೇಂದ್ರ ಮೋದಿಯವರನ್ನು ನೀಚ ಮನುಷ್ಯ ಎಂದು ಕರೆದಿದ್ದುದು ಕಾಂಗ್ರೆಸ್‌ಗೆ ಮುಳುವಾಯಿತು ಎಂಬ ವಿಶ್ಲೇಷಣೆಗಳು ಕೇಳಿಬಂದಿದ್ದವು.

2022ರ ಸಮೀಕ್ಷೆಗಳು

ಲೋಕನೀತಿ ಸಿಎಸ್‌ಡಿಎಸ್ ಸಮೀಕ್ಷೆಯ ಪ್ರಕಾರ ಗುಜರಾತ್‌ನ ಮೂರನೇ ಒಂದರಷ್ಟು ಜನಕ್ಕೆ ಮಾತ್ರ ಸರ್ಕಾರದ ವಿರುದ್ಧ ಅಸಮಾಧಾನವಿದ್ದು, ಮೂರನೇ ಎರಡರಷ್ಟು ಜನರು (31%) ಬಿಜೆಪಿ ಆಡಳಿತದಿಂದ ತೃಪ್ತರಾಗಿದ್ದೇವೆ ಎಂದಿದ್ದಾರೆ. 2017ರ ಸಮೀಕ್ಷೆಯಲ್ಲಿ ಕೇವಲ ಶೇ.8ರಷ್ಟು ಜನರಿಗೆ ಮಾತ್ರ ಬಿಜೆಪಿ ಆಡಳಿತದ ಬಗ್ಗೆ ಸಕಾರಾತ್ಮಕ ಅಭಿಪ್ರಾಯವಿತ್ತು. ಮೇಲ್ವರ್ಗ ಮತ್ತು ಮಧ್ಯಮ ವರ್ಗ ಬಿಜೆಪಿ ಜೊತೆಗಿದ್ದರೆ, ಕೆಳ ಮತ್ತು ಬಡತನ ರೇಖೆಯಿಂದ ಕೆಳಗಿನ ಬಡಜನರು ಕಾಂಗ್ರೆಸ್ ಕಡೆಗಿದ್ದಾರೆ ಎಂದು ಸಮೀಕ್ಷೆ ಹೇಳಿದೆ.

ಇನ್ನು ಗುಜರಾತ್‌ಗೆ ಬಿಜೆಪಿ, ಕಾಂಗ್ರೆಸ್ ಹೊರತುಪಡಿಸಿ ಮೂರನೇ ಪರ್ಯಾಯ ಪಕ್ಷದ ಅಗತ್ಯವಿದೆಯೇ ಎಂಬ ಪ್ರಶ್ನೆಗೆ ಶೇ.62ರಷ್ಟು ಜನರು ಸಮ್ಮತಿ ಸೂಚಿಸಿದ್ದಾರೆ. 24% ಜನರು ಬೇಡ ಎಂದರೆ 15% ಜನರು ಉತ್ತರಿಸಿಲ್ಲ. ಇದು ಚುನಾವಣೆ ಮೇಲೆ ಗಮನಾರ್ಹ ಪರಿಣಾಮ ಬೀರಲಿದೆ ಎನ್ನಲಾಗುತ್ತಿದೆ.

ಗುಜರಾತ್ ನಗರಗಳಲ್ಲಿ ಬಿಜೆಪಿ ಪ್ರಾಬಲ್ಯ- ಗ್ರಾಮೀಣದಲ್ಲಿ ಕಾಂಗ್ರೆಸ್ ಹಿಡಿತ

ಗುಜರಾತ್ ಹೆಚ್ಚು ನಗರೀಕೃತ ರಾಜ್ಯವಾಗಿದೆ. ರಾಜ್ಯದಲ್ಲಿ ಶೇ.43ರಷ್ಟು ನಗರನಿವಾಸಿಗಳು ಎಂದು 2011ರ ಜನಗಣತಿ ಹೇಳುತ್ತದೆ. ಗುಜರಾತ್‌ನ 182 ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು 84 ಕ್ಷೇತ್ರಗಳು ನಗರ, ಪಟ್ಟಣ ಪ್ರದೇಶಗಳಲ್ಲಿದ್ದರೆ, ಉಳಿದ 98 ಕ್ಷೇತ್ರಗಳು ಗ್ರಾಮೀಣ ಭಾಗದಲ್ಲಿವೆ. ಇತ್ತೀಚಿನ ಚುನಾವಣೆಗಳಲ್ಲಿ ನಗರ ಭಾಗದಲ್ಲಿ ಬಿಜೆಪಿ ಹಿಡಿತವಿದ್ದರೆ ಕಾಂಗ್ರೆಸ್ ಗ್ರಾಮೀಣ ಭಾಗದಲ್ಲಿ ಪ್ರಾಬಲ್ಯ ಸಾಧಿಸಿದೆ.

2017ರ ಚುನಾವಣೆಯನ್ನು ನೋಡುವುದಾದರೆ ನಗರಗಳಲ್ಲಿನ 84 ಕ್ಷೇತ್ರಗಳಲ್ಲಿ ಬಿಜೆಪಿ 63 ಅನ್ನು ಗೆದ್ದುಕೊಂಡಿತ್ತು. ಆದರೆ ಗ್ರಾಮೀಣ ಭಾಗದಲ್ಲಿನ 98 ಕ್ಷೇತ್ರಗಳಲ್ಲಿ 36 ಸ್ಥಾನಗಳಿಗೆ ಸೀಮಿತಗೊಂಡಿತ್ತು. ಅದೇ ರೀತಿ ಕಾಂಗ್ರೆಸ್ ಪಕ್ಷವು ನಗರ ಭಾಗದಲ್ಲಿ ಕೇವಲ 20 ಸ್ಥಾನಗಳಲ್ಲಿ ಗೆಲುವು ಕಂಡರೆ, ಗ್ರಾಮೀಣ ಭಾಗದಲ್ಲಿ 57 ಕ್ಷೇತ್ರಗಳಲ್ಲಿ ಪ್ರಾಬಲ್ಯ ಮೆರೆದಿತ್ತು.

ಆಪ್ ಪ್ರವೇಶದಿಂದ ಯಾರಿಗೆ ಲಾಭ?

2017ರ ಚುನಾವಣೆಯಲ್ಲಿ ಆಪ್ ಗುಜರಾತ್‌ನಲ್ಲಿ ಗಮನ ಸೆಳೆಯಲು ವಿಫಲವಾಗಿತ್ತು. ಆದರೆ ದೆಹಲಿ ನಂತರ ಪಂಜಾಬ್‌ನಲ್ಲಿ ಭಾರೀ ಬಹುಮತದೊಂದಿಗೆ ಅಧಿಕಾರ ಹಿಡಿದಿರುವ ಆಮ್ ಆದ್ಮಿ ಪಕ್ಷ ಸದ್ಯ ಗುಜರಾತ್ ಮೇಲೆ ಹೆಚ್ಚು ಗಮನ ಹರಿಸಿದೆ. ದೊಡ್ಡದೊಡ್ಡ ರ‍್ಯಾಲಿಗಳನ್ನು ನಡೆಸುತ್ತಿದ್ದು ಈಗಾಗಲೇ 118 ಸ್ಥಾನಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಮಾಧ್ಯಮಗಳು ಸಹ ಆಪ್ ಪಕ್ಷಕ್ಕೆ ಸಾಕಷ್ಟು ಪ್ರಚಾರ ನೀಡಿವೆ. ಕೆಲ ಸರ್ವೆಗಳು ಆಪ್ 22% ಮತಗಳೊಂದಿಗೆ ಕಾಂಗ್ರೆಸ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದು ಮುಖ್ಯ ವಿರೋಧ ಪಕ್ಷವಾಗಲಿದೆ ಎಂದಿವೆ. ಹಾಗಾಗಿ ಆಪ್ ಮೇಲೆ ಎಲ್ಲರ ಕಣ್ಣಿದೆ.

ಮಧ್ಯಮ ವರ್ಗ ಮತ್ತು ನಗರ ಕೇಂದ್ರಿತವಾದ ಆಮ್ ಆದ್ಮಿ ಪಕ್ಷವು ಬಿಜೆಪಿ ಮತಬ್ಯಾಂಕ್‌ಗೆ ಕೈಹಾಕಲಿದೆ ಎಂದು ಗುಜರಾತ್ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. “ಆಪ್‌ಗೆ ಗ್ರಾಮೀಣ ಭಾಗದಲ್ಲಿ ಯಾವುದೇ ನೆಲೆಯಿಲ್ಲ. ಅದು ಏನಿದ್ದರೂ ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಗೆಲ್ಲಲಾಗದ ನಗರ ಮತ್ತು ಅರೆ ನಗರದ 66 ಕ್ಷೇತ್ರಗಳಲ್ಲಿ ಬಿಜೆಪಿಗೆ ತಲೆನೋವಾಗಲಿದೆ. ಆಡಳಿತ ವಿರೋಧಿ ಅಲೆ ಗಗನಕ್ಕೇರಿದ್ದು ಜನರು ಬಿಜೆಪಿಯ ದುರಾಡಳಿತದಿಂದ ಬಸವಳಿದಿದ್ದಾರೆ” ಎಂದು ಕಾಂಗ್ರೆಸ್ ಮುಖಂಡ ಪರೇಶ್ ಧಾನನಿ ಹೇಳಿದ್ದಾರೆ. ಆಪ್ ನಗರ ಪ್ರದೇಶಗಳಲ್ಲಿ ಒಂದಷ್ಟು ಮತ ಗಳಿಸುತ್ತದೆಯೇ ಹೊರತು ಅದು ಅಸೆಂಬ್ಲಿ ಸೀಟುಗಳನ್ನು ಗೆಲ್ಲುವುದಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಜಿಗ್ನೇಶ್ ಮೇವಾನಿ ಅಭಿಪ್ರಾಯ ಪಡುತ್ತಾರೆ.

2017ರ ಚುನಾವಣೆಯಲ್ಲಿ ಬಿಜೆಪಿ 49.1% ಮತ ಗಳಿಸಿದರೆ ಕಾಂಗ್ರೆಸ್ 41.4% ಮತ ಗಳಿಸಿತ್ತು. ಆಪ್ ಕೇವಲ 0.10% ಮತಗಳನ್ನಷ್ಟೆ ಗಳಿಸಿತ್ತು. ಅದು ಈ ಬಾರಿ ತನ್ನ ಮತ ಪ್ರಮಾಣವನ್ನು ಎಷ್ಟು ಹೆಚ್ಚಿಸಿಕೊಳ್ಳುತ್ತದೆ ಎನ್ನುವುದರ ಮೇಲೆ ಗುಜರಾತ್‌ನಲ್ಲಿ ಯಾರು ಬಹುಮತ ಗಳಿಸುತ್ತಾರೆ ಎನ್ನುವುದು ನಿರ್ಧಾರವಾಗಲಿದೆ.

ಇದನ್ನೂ ಓದಿ: ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...