Homeಮುಖಪುಟಗುಜರಾತ್‌ ಚುನಾವಣೆ: ಅಚ್ಛೇದಿನ್‌ ಬದಿಗೆ ಸರಿದು, ಮುನ್ನಲೆಗೆ ಬರಲಿದೆ ಹಿಂದುತ್ವ?

ಗುಜರಾತ್‌ ಚುನಾವಣೆ: ಅಚ್ಛೇದಿನ್‌ ಬದಿಗೆ ಸರಿದು, ಮುನ್ನಲೆಗೆ ಬರಲಿದೆ ಹಿಂದುತ್ವ?

- Advertisement -
- Advertisement -

ಮುಂದಿನ ಹದಿನಾರು ತಿಂಗಳ ಬಳಿಕ ಗುಜರಾತ್‌ ವಿಧಾನಸಭೆ ಚುನಾವಣೆ ಎದುರಾಗಲಿದ್ದು, ಬಿಜೆಪಿಯು ಹಿಂದುತ್ವವನ್ನು ಮುನ್ನೆಲೆಗೆ ತರಲು ಸಿದ್ಧತೆ ನಡೆಸಿದೆ. ಬೆಲೆ ಏರಿಕೆ, ಉದ್ಯೋಗ ನಷ್ಟದಂತಹ ಸಮಸ್ಯೆಗಳಿಗೆ ಬೆನ್ನು ತಿರುಗಿಸುವ ಸೂಚನೆಗಳು ದೊರೆತ್ತಿದ್ದು, ತನ್ನ ಹಳೆಯ ಅಜೆಂಡಾವಾದ ಹಿಂದುತ್ವದ ಬೆನ್ನೇರಿ ಚುನಾವಣೆ ಎದುರಿಸುವತ್ತ ಬಿಜೆಪಿ ಹೆಜ್ಜೆಗಳನ್ನಿರಿಸಿದೆ. ಈಗಾಗಲೇ ಚುನಾವಣಾ ಸಿದ್ಧತೆಯಲ್ಲಿ ಬಿಜೆಪಿ ತೊಡಗಿದ್ದು, ಹಿಂದುತ್ವವನ್ನು ಕೈಬಿಟ್ಟರೆ “ಅಚ್ಛೇದಿನ್‌” ಘೋಷಣೆ ಬಿಜೆಪಿಗೆ ಮುಳುವಾಗುವುದು ಸ್ಪಷ್ಟ.

ಬಿಜೆಪಿಯ ಕಾರ್ಯಕಾರಿ ಸಭೆ ಗುಜರಾತ್‌ನ ಕೆವಾಡಿಯದಲ್ಲಿ ಒಕ್ಕೂಟ ಸರ್ಕಾರದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಉಪಸ್ಥಿತಿಯಲ್ಲಿ ಗುರುವಾರ ನಡೆದಿದ್ದು, ಸಭೆಯಲ್ಲಿ ಹಿಂದುತ್ವವೇ ಪ್ರಧಾನವಾಗಿ ಚರ್ಚಿಸಲ್ಪಟ್ಟಿದೆ ಎಂದು ’ದಿ ವೈರ್’ ಜಾಲತಾಣ ಅಭಿಪ್ರಾಯಪಟ್ಟಿದೆ.

ಸಭೆಯಲ್ಲಿ ಮಾತನಾಡಿರುವ ಪ್ರತಿಯೊಬ್ಬರೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿ, “ಭಯೋತ್ವಾದನೆ ಮುಕ್ತ ಭಾರತ”, “ಸ್ವಾವಲಂಬಿ ಭಾರತ”, “ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ”, “370ನೇ ವಿಧಿ ರದ್ಧತಿ” ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. 2017 ರಲ್ಲಿ ವಿಕಾಸ ಮತ್ತು ಅಚ್ಛೇದಿನ್‌ ಎನ್ನುತ್ತಿದ್ದವರು ಈಗ ಹಿಂದುತ್ವದ ಕಡೆಗೆ ಹೊರಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ 71 ನೇ ಜನ್ಮದಿನ ಹಿನ್ನೆಲೆಯಲ್ಲಿ ಸೆ.17 ರಂದು ಇಡೀ ಗುಜರಾತ್‌ ರಾಜ್ಯದ್ಯಾಂತ 7,001 ರಾಮ ಮಂದಿರಗಳಲ್ಲಿ ವಿಶೇಷ ಆರತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ರಾಜ್ಯ ಬಿಜೆಪಿ ಮುಖ್ಯಸ್ಥ ಸಿ.ಆರ್.ಪಾಟೀಲ್‌ ಘೋಷಿಸಿದ್ದಾರೆ. “ನಿಮಗೆ ರಾಮಮಂದಿರ ಸಿಗದಿದ್ದರೆ ರಾಮನ ಫೋಟೋವನ್ನಾದರೂ ಇಟ್ಟು ಪೂಜೆ ಮಾಡಿ” ಎಂದು ತಿಳಿಸಿದ್ದಾರೆ.

ಕೋಟ್ಯಂತರ ಭಾರತೀಯರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಿಸಲಾಗುತ್ತಿದೆ. ಜಾತ್ಯತೀತರೆಂದು ಕರೆಸಿಕೊಳ್ಳುವವರು ಇದನ್ನು ಇಷ್ಟಪಡುವುದಿಲ್ಲ. ಪ್ರತಿಯೊಬ್ಬರೂ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿ ಕೆಲಸ ಮಾಡಿ ಮೋದಿಯವರ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಎಂದು ಸಭೆಯಲ್ಲಿದ್ದವರಿಗೆ ನಿರ್ದೇಶಿಸಲಾಗಿದೆ.

ರಾಜ್‌ನಾಥ್‌ ಸಿಂಗ್ ಮಾತನಾಡಿ, “ಮೋದಿಯವರು ಭಯೋತ್ಪಾದನೆಯನ್ನಷ್ಟೇ ನಿರ್ಮೂಲನೆ ಮಾಡಿಲ್ಲ. 17,000 ಕೋಟಿ ರೂ. ಮೌಲ್ಯದ ರಕ್ಷಣಾ ಉತ್ಪನ್ನಗಳನ್ನು ರಫ್ತು ಮಾಡಿದ್ದಾರೆ. ನಾವು ಇವಿಎಂ ತಿರುಚಿ ಗೆದ್ದಿಲ್ಲ, ಜನರ ನಂಬಿಕೆಯನ್ನು ಉಳಿಸಿಕೊಂಡು ಗೆದ್ದಿದ್ದೇವೆ. ಭಾರತವನ್ನು ವಿಶ್ವಗುರು ಮಾಡಲು ಬೇಕಾದ ಕ್ರಮಗಳನ್ನು ಮೋದಿ ಕೈಗೊಂಡಿದ್ದಾರೆ. ಮುಸ್ಲಿಂ ಮಹಿಳೆಯರ ಉನ್ನತಿಗಾಗಿ ತ್ರಿವಳಿ ತಲಾಖ್‌ ನಿಷೇಧಿಸಿ ಕಾನೂನು ತರಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...