Homeಮುಖಪುಟಗುಜರಾತ್‌ ಚುನಾವಣೆ: ಅಚ್ಛೇದಿನ್‌ ಬದಿಗೆ ಸರಿದು, ಮುನ್ನಲೆಗೆ ಬರಲಿದೆ ಹಿಂದುತ್ವ?

ಗುಜರಾತ್‌ ಚುನಾವಣೆ: ಅಚ್ಛೇದಿನ್‌ ಬದಿಗೆ ಸರಿದು, ಮುನ್ನಲೆಗೆ ಬರಲಿದೆ ಹಿಂದುತ್ವ?

- Advertisement -
- Advertisement -

ಮುಂದಿನ ಹದಿನಾರು ತಿಂಗಳ ಬಳಿಕ ಗುಜರಾತ್‌ ವಿಧಾನಸಭೆ ಚುನಾವಣೆ ಎದುರಾಗಲಿದ್ದು, ಬಿಜೆಪಿಯು ಹಿಂದುತ್ವವನ್ನು ಮುನ್ನೆಲೆಗೆ ತರಲು ಸಿದ್ಧತೆ ನಡೆಸಿದೆ. ಬೆಲೆ ಏರಿಕೆ, ಉದ್ಯೋಗ ನಷ್ಟದಂತಹ ಸಮಸ್ಯೆಗಳಿಗೆ ಬೆನ್ನು ತಿರುಗಿಸುವ ಸೂಚನೆಗಳು ದೊರೆತ್ತಿದ್ದು, ತನ್ನ ಹಳೆಯ ಅಜೆಂಡಾವಾದ ಹಿಂದುತ್ವದ ಬೆನ್ನೇರಿ ಚುನಾವಣೆ ಎದುರಿಸುವತ್ತ ಬಿಜೆಪಿ ಹೆಜ್ಜೆಗಳನ್ನಿರಿಸಿದೆ. ಈಗಾಗಲೇ ಚುನಾವಣಾ ಸಿದ್ಧತೆಯಲ್ಲಿ ಬಿಜೆಪಿ ತೊಡಗಿದ್ದು, ಹಿಂದುತ್ವವನ್ನು ಕೈಬಿಟ್ಟರೆ “ಅಚ್ಛೇದಿನ್‌” ಘೋಷಣೆ ಬಿಜೆಪಿಗೆ ಮುಳುವಾಗುವುದು ಸ್ಪಷ್ಟ.

ಬಿಜೆಪಿಯ ಕಾರ್ಯಕಾರಿ ಸಭೆ ಗುಜರಾತ್‌ನ ಕೆವಾಡಿಯದಲ್ಲಿ ಒಕ್ಕೂಟ ಸರ್ಕಾರದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಉಪಸ್ಥಿತಿಯಲ್ಲಿ ಗುರುವಾರ ನಡೆದಿದ್ದು, ಸಭೆಯಲ್ಲಿ ಹಿಂದುತ್ವವೇ ಪ್ರಧಾನವಾಗಿ ಚರ್ಚಿಸಲ್ಪಟ್ಟಿದೆ ಎಂದು ’ದಿ ವೈರ್’ ಜಾಲತಾಣ ಅಭಿಪ್ರಾಯಪಟ್ಟಿದೆ.

ಸಭೆಯಲ್ಲಿ ಮಾತನಾಡಿರುವ ಪ್ರತಿಯೊಬ್ಬರೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸಿ, “ಭಯೋತ್ವಾದನೆ ಮುಕ್ತ ಭಾರತ”, “ಸ್ವಾವಲಂಬಿ ಭಾರತ”, “ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ”, “370ನೇ ವಿಧಿ ರದ್ಧತಿ” ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ. 2017 ರಲ್ಲಿ ವಿಕಾಸ ಮತ್ತು ಅಚ್ಛೇದಿನ್‌ ಎನ್ನುತ್ತಿದ್ದವರು ಈಗ ಹಿಂದುತ್ವದ ಕಡೆಗೆ ಹೊರಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ 71 ನೇ ಜನ್ಮದಿನ ಹಿನ್ನೆಲೆಯಲ್ಲಿ ಸೆ.17 ರಂದು ಇಡೀ ಗುಜರಾತ್‌ ರಾಜ್ಯದ್ಯಾಂತ 7,001 ರಾಮ ಮಂದಿರಗಳಲ್ಲಿ ವಿಶೇಷ ಆರತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವುದಾಗಿ ರಾಜ್ಯ ಬಿಜೆಪಿ ಮುಖ್ಯಸ್ಥ ಸಿ.ಆರ್.ಪಾಟೀಲ್‌ ಘೋಷಿಸಿದ್ದಾರೆ. “ನಿಮಗೆ ರಾಮಮಂದಿರ ಸಿಗದಿದ್ದರೆ ರಾಮನ ಫೋಟೋವನ್ನಾದರೂ ಇಟ್ಟು ಪೂಜೆ ಮಾಡಿ” ಎಂದು ತಿಳಿಸಿದ್ದಾರೆ.

ಕೋಟ್ಯಂತರ ಭಾರತೀಯರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಿಸಲಾಗುತ್ತಿದೆ. ಜಾತ್ಯತೀತರೆಂದು ಕರೆಸಿಕೊಳ್ಳುವವರು ಇದನ್ನು ಇಷ್ಟಪಡುವುದಿಲ್ಲ. ಪ್ರತಿಯೊಬ್ಬರೂ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯವಾಗಿ ಕೆಲಸ ಮಾಡಿ ಮೋದಿಯವರ ಸಾಧನೆಗಳನ್ನು ಜನರಿಗೆ ತಿಳಿಸಬೇಕು ಎಂದು ಸಭೆಯಲ್ಲಿದ್ದವರಿಗೆ ನಿರ್ದೇಶಿಸಲಾಗಿದೆ.

ರಾಜ್‌ನಾಥ್‌ ಸಿಂಗ್ ಮಾತನಾಡಿ, “ಮೋದಿಯವರು ಭಯೋತ್ಪಾದನೆಯನ್ನಷ್ಟೇ ನಿರ್ಮೂಲನೆ ಮಾಡಿಲ್ಲ. 17,000 ಕೋಟಿ ರೂ. ಮೌಲ್ಯದ ರಕ್ಷಣಾ ಉತ್ಪನ್ನಗಳನ್ನು ರಫ್ತು ಮಾಡಿದ್ದಾರೆ. ನಾವು ಇವಿಎಂ ತಿರುಚಿ ಗೆದ್ದಿಲ್ಲ, ಜನರ ನಂಬಿಕೆಯನ್ನು ಉಳಿಸಿಕೊಂಡು ಗೆದ್ದಿದ್ದೇವೆ. ಭಾರತವನ್ನು ವಿಶ್ವಗುರು ಮಾಡಲು ಬೇಕಾದ ಕ್ರಮಗಳನ್ನು ಮೋದಿ ಕೈಗೊಂಡಿದ್ದಾರೆ. ಮುಸ್ಲಿಂ ಮಹಿಳೆಯರ ಉನ್ನತಿಗಾಗಿ ತ್ರಿವಳಿ ತಲಾಖ್‌ ನಿಷೇಧಿಸಿ ಕಾನೂನು ತರಲಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: ನಕಲಿ ದೇಶಭಕ್ತಿ ಹೇಳುತ್ತಿದ್ದ ಬಿಜೆಪಿ ಈಗ ಜನರ ಬದುಕನ್ನು ಹೈರಾಣಾಗಿಸಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...