Homeಮುಖಪುಟಗುಜರಾತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಳಿದ ಟಿಕೆಟ್ ವಂಚಿತ 7 ಶಾಸಕರನ್ನು ಅಮಾನತುಗೊಳಿಸಿದ ಬಿಜೆಪಿ

ಗುಜರಾತ್ ಚುನಾವಣೆ: ಬಂಡಾಯ ಅಭ್ಯರ್ಥಿಗಳಾಗಿ ಕಣಕ್ಕಳಿದ ಟಿಕೆಟ್ ವಂಚಿತ 7 ಶಾಸಕರನ್ನು ಅಮಾನತುಗೊಳಿಸಿದ ಬಿಜೆಪಿ

- Advertisement -
- Advertisement -

ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆಯುವ ಗುಜರಾತ್ ಚುನಾವಣೆ ಬಿಜೆಪಿಗೆ ಬಂಡಾಯದ ಬಿಸಿ ಮುಟ್ಟಿಸಿದೆ. ಈ ಬಾರಿ ಬಿಜೆಪಿಯು 38 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸುವುದು ದುಬಾರಿ ಆಗಿ ಪರಿಣಮಿಸುವ ಸಾಧ್ಯತೆಯಿದೆ. ಅವರಲ್ಲಿ 7 ಶಾಸಕರು ಬಂಡಾಯ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದು, ಹಿಂತೆಗೆದುಕೊಳ್ಳದಿರಲು ನಿರ್ಧರಿಸಿದ್ದಾರೆ. ಬಿಜೆಪಿಯು ಅವರೆಲ್ಲರನ್ನು ಪಕ್ಷದಿಂದ ಅಮಾನತುಗೊಳಿಸಿದೆ.

ಇಂದು ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್‌ನ ಸೌರಾಷ್ಟ್ರದ ದೊರಾಜಿಯಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿರುವಾಗಲೇ ಈ ಘಟನೆ ನಡೆದಿದೆ.

ಗಾಂಧಿನಗರದ ಬಿಜೆಪಿ ಕಚೇರಿ ಕಮಲಂ ಎದರು ಬಿಜೆಪಿ ಪಕ್ಷದ ಕಾರ್ಯಕರ್ತರು ತಮ್ಮ ನಾಯಕರಿಗೆ ಟಿಕೆಟ್ ನೀಡದಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವುದರ ನಡುವೆ ಈ ಬೆಳವಣಿಗೆಗಳು ನಡೆದಿವೆ. ರಾಜ್ಯದ ಗೃಹ ಸಚಿವ ಹರ್ಷ ಸಂಘ್ವಿ ಹಲವು ಬಂಡಾಯ ಶಾಸಕರ ಜೊತೆ ಸಂಧಾನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜವಾಗಿಲ್ಲ.

ಇದನ್ನೂ ಓದಿ; ಗುಜರಾತ್ ಚುನಾವಣೆ: ನಗರಗಳಲ್ಲಿ ಪ್ರಬಲವಾಗಿರುವ ಬಿಜೆಪಿ ಮತ ಕಬಳಿಸಲಿದೆಯೇ ಆಪ್?

20 ವರ್ಷಗಳ ಹಿಂದೆ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಒತ್ತಾಯದ ಮೇರೆಗೆ ಬಿಜೆಪಿಗೆ ಸೇರಿದ್ದೆ ಎಂದು ಹೇಳಿಕೊಂಡಿರುವ ಆರು ಬಾರಿ ಶಾಸಕರಾಗಿರುವ ಟಿಕೆಟ್ ವಂಚಿತ ಮಧುಭಾಯಿ ಶ್ರೀವಾಸ್ತವ್ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ಅತೃಪ್ತರ ಬಂಡಾಯ ಶಮನಗೊಳಿಸಲು ಗುಜರಾತ್‌ಗೆ ತೆರಳಿರುವ ಗೃಹ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರೊಂದಿಗೆ 5 ಗಂಟೆಗಳ ಸುದೀರ್ಘ ಸಭೆ ನಡೆಸಿದ್ದಾರೆ. ಬಂಡಾಯವೆದ್ದಿರುವವರು ಬಹಳ ವರ್ಷಗಳಿಂದ ಬಿಜೆಪಿಯೊಂದಿಗೆ ಸಂಬಂಧ ಹೊಂದಿದ್ದಾರೆ. ಅವರೊಂದಿಗೆ ಪ್ರೀತಿ ಮತ್ತು ಸಹಾನುಭೂತಿಯಿಂದ ಅವರೊಂದಿಗೆ ವ್ಯವಹರಿಸಿ ಎಂದು ಅಮಿತ್ ಶಾ ಹೇಳಿದ್ದರು.

ಇದೇ ರೀತಿಯ ಬಂಡಾಯವನ್ನು ಬಿಜೆಪಿ ಹಿಮಾಚಲ ಪ್ರದೇಶದಲ್ಲಿಯೂ ಸಹ ಅನುಭವಿಸಿತ್ತು. ಅಲ್ಲಿನ 68 ವಿಧಾನಸಭಾ ಕ್ಷೇತ್ರಗಳ ಪೈಕಿ 21 ಕ್ಷೇತ್ರಗಳಲ್ಲಿ ಬಿಜೆಪಿಯ ಬಂಡಾಯ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಖುದ್ದು ಪ್ರಧಾನಿ ನರೇಂದ್ರ ಮೋದಿಯವರೇ ಫೋನ್ ಕರೆ ಮಾಡಿ ಮಾತನಾಡಿದರೂ ಸಹ ಒಬ್ಬ ಬಂಡಾಯಗಾರನನ್ನು ಸಹ ಮನವೊಲಿಸಲು ಸಾಧ್ಯವಾಗಿರಲಿಲ್ಲ.

ಇದನ್ನೂ ಓದಿ; ಹಿಮಾಚಲ ಪ್ರದೇಶ ಚುನಾವಣೆ: ಬಿಜೆಪಿ ವಿರುದ್ಧ ಸಿಡಿಮಿಡಿಗೊಂಡಿರುವ ಸೇಬು ಬೆಳೆಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...