Homeಮುಖಪುಟಗುಜರಾತ್: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಪೋಟ; ಬಾಲಕಿ ಸಹಿತ 4 ಸಾವು

ಗುಜರಾತ್: ರಾಸಾಯನಿಕ ಕಾರ್ಖಾನೆಯಲ್ಲಿ ಸ್ಪೋಟ; ಬಾಲಕಿ ಸಹಿತ 4 ಸಾವು

- Advertisement -
- Advertisement -

ಗುಜರಾತಿನ ವಡೋದರಾ ಜಿಲ್ಲೆಯ ಕೈಗಾರಿಕಾ ವಲಯದ ರಾಸಾಯನಿಕ ಕಾರ್ಖಾನೆಯ ಬಾಯ್ಲರ್‌ನಲ್ಲಿ ಸಂಭವಿಸಿದ ಸ್ಫೋಟದಿಂದಾಗಿ ನಾಲ್ಕು ವರ್ಷದ ಬಾಲಕಿ ಮತ್ತು 65 ವರ್ಷದ ವ್ಯಕ್ತಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಘಟನೆಯಲ್ಲಿ 11 ಜನರು ಗಾಯಗೊಂಡಿದ್ದಾರೆ ಎಂದು ‘ದಿ ಹಿಂದೂ’ ವರದಿ ವರದಿ ಮಾಡಿದೆ.

ಹದಿಹರೆಯದ ಬಾಲಕಿ ಮತ್ತು ನಾಲ್ಕು ವರ್ಷದ ಬಾಲಕಿಯ ತಾಯಿ(30) ಈ ದುರ್ಘಟನೆಯಲ್ಲಿ ಮೃತಪಟ್ಟಿರುವ ಮತ್ತಿಬ್ಬರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ದೇವಾಲಯವನ್ನೇ ಧಿಕ್ಕರಿಸಿ: ಜಾತಿ ದೌರ್ಜನ್ಯಕ್ಕೆ ಒಳಗಾದ ಹರಿಹರಪುರ ದಲಿತರಿಗೆ ಕೃಷ್ಣಮೂರ್ತಿ ಮನವಿ

“ಬೆಳಿಗ್ಗೆ ಈ ಪ್ರದೇಶದಲ್ಲಿ ಭಾರಿ ಸ್ಫೋಟ ಸಂಭವಿಸಿದೆ ಮತ್ತು ಸುಮಾರು 15 ಜನರು ಗಾಯಗೊಂಡಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಕೊಂಡೊಯ್ಯಲಾಯಿತು. ಅವರಲ್ಲಿ ನಾಲ್ವರು ಮೃತಪಟ್ಟರು ಅಥವಾ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದರು ಎಂದು ಘೋಷಿಸಲಾಯಿತು” ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸಾಜಿದ್ ಬಲೋಚ್ ಹೇಳಿದ್ದಾರೆ.

ಸ್ಥಳೀಯರ ಪ್ರಕಾರ, ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಮನೆಗಳ ಗೋಡೆಗಳು ಕುಸಿದುಬಿದ್ದಿವೆ ಮತ್ತು 1.5 ಕಿಮೀ ಸುತ್ತಲಿನ ಕಟ್ಟಡಗಳ ಗಾಜುಗಳು ಪುಡಿಪುಡಿಯಾಗಿವೆ.

ಇದನ್ನೂ ಓದಿ:ಮತಾಂತರ ನಿಷೇಧ ಮಸೂದೆ ಅಸ್ಪೃಶ್ಯತೆಯನ್ನು ಸುಡುವುದೇ?

ಘಟನೆಯಲ್ಲಿ ಮೃತಪಟ್ಟವರು ಮತ್ತು ಗಾಯಗೊಂಡವರು ಕಾರ್ಖಾನೆಯ ಕಾರ್ಮಿಕರು ಮತ್ತು ಕಾರ್ಖಾನೆಯ ಬಳಿಯಿಂದ ತೆರಳುತ್ತಿದ್ದವರಾಗಿದ್ದಾರೆ ಎಂದು ಪತ್ರಿಕೆ ಉಲ್ಲೇಖಿಸಿದೆ.

ಔಷಧೀಯ ಪದಾರ್ಥಗಳ ತಯಾರಿಕೆಯಲ್ಲಿ ತೊಡಗಿರುವ ಕ್ಯಾಂಟನ್ ಪ್ರಯೋಗಾಲಯದಲ್ಲಿ ಈ ಘಟನೆ ಸಂಭವಿಸಿದೆ.

ಗುಜರಾತ್‌ನಲ್ಲಿ, ಎಂಟು ದಿನಗಳ ಅವಧಿಯಲ್ಲಿ ಇದು ಎರಡನೇ ಘಟನೆಯಾಗಿದ್ದು, ಅನೇಕ ಸಾವುನೋವುಗಳು ವರದಿಯಾಗಿವೆ. ಡಿಸೆಂಬರ್ 16 ರಂದು, ಪಂಚಮಹಲ್ ಜಿಲ್ಲೆಯಲ್ಲಿ ಇದೇ ರೀತಿಯ ಕಾರ್ಖಾನೆ ಸ್ಫೋಟದಲ್ಲಿ ಏಳು ಜನರು ಸಾವನ್ನಪ್ಪಿದ್ದರು ಮತ್ತು ಹಲವರು ಗಾಯಗೊಂಡಿದ್ದರು.

ಇದನ್ನೂ ಓದಿ:ದಲಿತ ಮಹಿಳೆ ತಯಾರಿಸಿದ ಊಟ ತಿನ್ನದ ಸವರ್ಣೀಯ ಮಕ್ಕಳು; ‘ಭೋಜನ್‌ ಮಾತಾ’ ಕೆಲಸದಿಂದ ಮಹಿಳೆ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...