Homeಮುಖಪುಟಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

- Advertisement -
- Advertisement -

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ.

‘ಕ್ಲಾರಿಯನ್ ಇಂಡಿಯಾ’ ವರದಿ ಪ್ರಕಾರ, ಈ ಘಟನೆ ಜುಲೈ 9 ರಂದು ವಲ್ಸಾದ್ ಜಿಲ್ಲೆಯ ಧರಂಪುರದಲ್ಲಿ ನಡೆದಿದೆ. ನಕಲಿ ಗೋರಕ್ಷಕರ ಗುಂಪಿನ ನೇತೃತ್ವವನ್ನು ಮಹೇಂದ್ರ ಸಿಂಗ್ ರಾಜಪುರೋಹಿತ್ ವಹಿಸಿದ್ದಾನೆ ಎಂದು ತಿಳಿದು ಬಂದಿದೆ. ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳಕ್ಕೆ ಸಂಬಂಧಿಸಿದ ವ್ಯಕ್ತಿಗಳನ್ನು ಸೇರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ವೀಡಿಯೊಗಳಲ್ಲಿ, ಹಿಂದುತ್ವ ಗುಂಪಿನ ಸದಸ್ಯರು ದನಗಳನ್ನು ಸಾಗಿಸುತ್ತಿದ್ದ ಪಿಕಪ್ ಟ್ರಕ್ ಅನ್ನು ಬಲವಂತವಾಗಿ ನಿಲ್ಲಿಸುವ ಮೊದಲು ಬೆನ್ನಟ್ಟುತ್ತಿರುವುದನ್ನು ಕಾಣಬಹುದು. ಚಾಲಕನನ್ನು ತಡೆದ ಗುಂಪು ಆತನ ಹೆಸರು, ಗುರುತು ಮತ್ತು ತಲುಪಬೇಕಾದ ಸ್ಥಳದ ಕುರಿತು ಹೇಳುವಂತೆ ಒತ್ತಾಯಿಸಿದ್ದಾರೆ. ಚಾಲಕ ಪ್ರಾಣಿಗಳನ್ನು ವಧೆಗಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದಾರೆ ಎಂದು ಗೋರಕ್ಷಕರು ಆರೋಪಿಸಿದ್ದಾರೆ.

“ವಾಹನವನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದೀಯಾ? ಹೆಸರು ಹೇಳು! ನಾವು ನಿನನಗೆ ಸರಿಯಾಗಿ ‘ಸೇವೆ’ ಮಾಡುತ್ತೇವೆ! ವಾಹನದಿಂದ ಇಳಿ” ಎಂದು ವ್ಯಕ್ತಿಯೊಬ್ಬ ಚಾಲಕನಿಗೆ ಬೆದರಿಕೆ ಹಾಕುತ್ತಿರುವುದು ಕೇಳಿಸುತ್ತದೆ.

ಸಾಮಾಜಿಕ ಮಾಧ್ಯಮದ ಪೋಸ್ಟ್‌ಗಳ ಪ್ರಕಾರ, ಚಾಲಕನಿಗೆ ಬೆದರಿಕೆ ಹಾಕಲಾಗಿದ್ದು, ದನಗಳನ್ನು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಒಪ್ಪಿಕೊಳ್ಳಲು ಒತ್ತಡ ಹೇರಲಾಗಿದೆ ಎಂದು ಆರೋಪಿಸಲಾಗಿದೆ. ಸಾಗಣೆದಾರರೊಂದಿಗೆ ಪ್ರಯಾಣಿಸುತ್ತಿದ್ದ ಮತ್ತೊಂದು ವಾಹನವನ್ನು ತಡೆಹಿಡಿಯಲಾಗಿದೆ, ಅದರ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಪಿಕಪ್ ಟ್ರಕ್ ಅನ್ನು ಹಿಂದುತ್ವ ಗುಂಪು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ.

ಈ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಟೀಕೆಗೆ ಗುರಿಯಾಗಿದೆ. ಖಾಸಗಿ ವ್ಯಕ್ತಿಗಳು ಸಾರ್ವಜನಿಕ ರಸ್ತೆಗಳಲ್ಲಿ ವಾಹನಗಳನ್ನು ಹೀಗೆ ಹಿಂಬಾಲಿಸಬಹುದೇ? ವಾಹನಗಳನ್ನು ನಿಲ್ಲಿಸಲು ಮತ್ತು ಜಾನುವಾರು ಸಾಗಣೆ ಅಪರಾಧಗಳ ಬಗ್ಗೆ ವಾಹನ ಚಾಲಕರನ್ನು ಹೀಗೆಲ್ಲಾ ವಿಚಾರಣೆ ಮಾಡಬಹುದೇ ಎಂದು ಪ್ರಶ್ನಿಸಿದ್ದಾರೆ.

ಹಲವಾರು ಸಾಮಾಜಿಕ ಜಾಲತಾಣ ಬಳಕೆದಾರರು ಪೊಲೀಸ್ ತನಿಖೆಗೆ ಒತ್ತಾಯಿಸಿ, ಅಕ್ರಮ ದನ ಸಾಗಣೆಯ ಅನುಮಾನಗಳಿದ್ದರೂ, ಕಾನೂನು ಜಾರಿ ಪೊಲೀಸರು ಮತ್ತು ನ್ಯಾಯಾಲಯಗಳ ಮೇಲಿದೆ, ನಕಲಿ ಗೋರಕ್ಷಕ ಗುಂಪುಗಳದ್ದಲ್ಲ ಎಂದು ವಾದಿಸಿದ್ದಾರೆ.

“ಗುಜರಾತ್‌ನಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವುದು ಮತ್ತು ನಾಗರಿಕರಿಗೆ ಭದ್ರತೆ ಒದಗಿಸುವುದು ಪೊಲೀಸರು ಮತ್ತು ನ್ಯಾಯಾಲಯಗಳ ಏಕೈಕ ಜವಾಬ್ದಾರಿಯಾಗಿದೆ. ಯಾವುದೇ ಸಂಘಟನೆ ಅಥವಾ ಬಾಹ್ಯ ಅಂಶವು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಅನುಮತಿಸಲಾಗುವುದಿಲ್ಲ. ಸಾರ್ವಜನಿಕ ನಂಬಿಕೆಯನ್ನು ಕಾಪಾಡಿಕೊಳ್ಳಲು ಕಠಿಣ ಕ್ರಮ ಯಾವಾಗ ತೆಗೆದುಕೊಳ್ಳಲಾಗುತ್ತದೆ?” ಎಂದು ಎಕ್ಸ್ ಬಳಕೆದಾರರೊಬ್ಬರು ಪ್ರಶ್ನಿಸಿದ್ದಾರೆ.

ಘಟನೆಯ ಸಂದರ್ಭಗಳನ್ನು ಅಥವಾ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾಗುವ ಆರೋಪಗಳನ್ನು ದೃಢೀಕರಿಸುವ ಅಧಿಕೃತ ಹೇಳಿಕೆಯನ್ನು ಗುಜರಾತ್ ಪೊಲೀಸರು ನೀಡಿಲ್ಲ.

ವೈರಲ್ ವೀಡಿಯೊಗಳಲ್ಲಿ ಕಂಡುಬರುವವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆಯೇ ಅಥವಾ ಯಾವುದೇ ಕ್ರಮ ಕೈಗೊಳ್ಳಲಾಗಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...