Homeಫ್ಯಾಕ್ಟ್‌ಚೆಕ್ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಮುಸ್ಲಿಂ ಆರೋಪಿಗಳ ಹೆಸರುಗಳನ್ನು ಮಾತ್ರ ಎತ್ತಿಕೊಂಡು ಪ್ರಕರಣಕ್ಕೆ ಕೋಮುಬಣ್ಣ ಹಚ್ಚಲು ಬಲಪಂಥೀಯರು ಯತ್ನಿಸುತ್ತಿದ್ದಾರೆ.

- Advertisement -
- Advertisement -

ಗುಜರಾತಿನಲ್ಲಿ ರೆಮ್ಡೆಸಿವಿರ್ ಹೆಸರಲ್ಲಿ ನಕಲಿ ಇಂಜೆಕ್ಷನ್ ಮಾರುತ್ತಿದ್ದ ಒಂದು ಜಾಲವನ್ನು ಮೂರು ದಿನದ ಹಿಂದೆ ಭೇದಿಸಲಾಗಿದೆ. ಬಂಧಿತ ಗ್ಯಾಂಗಿನ ಏಳು ಜನರ ಪೈಕಿ ಇಬ್ಬರು ಮುಸ್ಲಿಮರಿದ್ದು, ಬಲಪಂಥೀಯರು ಮತ್ತು ಬಿಜೆಪಿ ಐಟಿ ಸೆಲ್, ಈ ಇಬ್ಬರ ಹೆಸರನ್ನು ಮಾತ್ರ ಉಲ್ಲೇಖಿಸಿ ಇದಕ್ಕೆ ಕೋಮು ಬಣ್ಣ ಕಟ್ಟಲು ಹೊರಟಿದೆ. ಅದೇ ಪ್ರಯೋಗದ ಮುಂದುವರೆದ ಭಾಗವಾಗಿ, ಬೆಂಗಳೂರಲ್ಲಿ ಸಂಸದ ತೇಜಸ್ವಿ ಸೂರ್ಯ ‘ಬೆಡ್ ಬ್ಲಾಕಿಂಗ್’ ವಿಷಯವನ್ನು ಕೋಮು ಬಣ್ಣಕ್ಕೆ ತಿರುಗಿಸುವ ಹುನ್ನಾರ ನಡೆಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ರೆಮ್ಡೆಸಿವಿರ್ ಕೋವಿಡ್ ರೋಗಿಗಳ ಆರೈಕೆಯಲ್ಲಿ ಕೆಲಸ ಮಾಡದು ಎಂದು ಹೇಳಿದ ಬಳಿಕವೂ, ಭಾರತದಲ್ಲಿ ಕೋವಿಡ್ ರೋಗಿಗಳಿಗೆ ಇದನ್ನು ನೀಡಲಾಗುತ್ತಿದೆ. ರೆಮ್‌ಡೆಸಿವಿರ್‌ನ ಪರಿಣಾಮಕಾರಿತ್ವವನ್ನು ವೈದ್ಯರು ಮತ್ತು ವಿಜ್ಞಾನಿಗಳು ಪ್ರಶ್ನಿಸಿದರೂ, ಹತಾಶ ರೋಗಿಗಳು ಔಷಧವನ್ನು ಬ್ಲ್ಯಾಕ್ ಮಾರುಕಟ್ಟೆಯಲ್ಲಿ 40 ಸಾವಿರ ರೂ.ಗಳಿಗೆ ಖರೀದಿಸುತ್ತಿದ್ದಾರೆ.

ಮೇ 1 ರಂದು ಗುಜರಾತ್ ಪೊಲೀಸರು ನಕಲಿ ರೆಮ್ಡೆಸಿವಿರ್ ದಂಧೆಯನ್ನು ಭೇದಿಸಿ ಮೊರ್ಬಿ, ಅಹಮದಾಬಾದ್ ಮತ್ತು ಸೂರತ್‌ನ ಏಳು ಜನರನ್ನು ಬಂಧಿಸಿದ್ದಾರೆ. 60 ಸಾವಿರ ಖಾಲಿ ಬಾಟಲುಗಳು, 30 ಸಾವಿರ ನಕಲಿ ಸ್ಟಿಕ್ಕರ್‌ಗಳು ಮತ್ತು 90 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಬಂಧಿಸಲ್ಪಟ್ಟವರ ಹೆಸರುಗಳು ರಮೀಜ್ ಕದ್ರಿ ಮತ್ತು ಮೊಹಮ್ಮದ್ ಆಸಿಫ್ ಎಂದು ಬಲಪಂಥೀಯರ ಮತ್ತು ಬಿಜೆಪಿ ಐಟಿ ಸೆಲ್ ಸದಸ್ಯರ ವೈರಲ್ ಸಂದೇಶಗಳು ಸೂಚಿಸುತ್ತಿವೆ.

@Rashtra_Sevika_ ಟ್ವಿಟರ್‌ ಹ್ಯಾಂಡಲ್‌ನ ಟ್ವೀಟ್‌ಗೆ 4,480 ಕ್ಕೂ ಹೆಚ್ಚು ರಿಟ್ವೀಟ್‌ಗಳು ಬಂದಿವೆ. ಈ ಟ್ವೀಟ್‌‌ನಲ್ಲಿ, ‘ಉಪ್ಪು, ಗ್ಲೂಕೋಸ್ ಮತ್ತು ನೀರಿನಿಂದ ನಕಲಿ ರೆಮ್ಡೆಸಿವಿರ್ ತಯಾರಿಸಿದ್ದಕ್ಕಾಗಿ ಆರು ಜನರನ್ನು ಗುಜರಾತಿನಲ್ಲಿ ಬಂಧಿಸಲಾಗಿದೆ. ಅವರು 60 ಸಾವಿರ ನಕಲಿ ರೆಮ್ಡೆಸಿವಿರ್ ಮಾಡಲು ಹೊರಟಿದ್ದರು. ಅಹಮದಾಬಾದ್‌ನ ಜುಹಾಪುರದ ರಮೀಜ್ ಕದ್ರಿ ಮತ್ತು ಮೊಹಮ್ಮದ್ ಆಸಿಫ್ 1117 ನಕಲಿ ರೆಮ್‌ಡೆಸಿವಿರ್ ಬಾಟಲುಗಳು, 50 ಲಕ್ಷ ರೂ. ನಗದು, 55 ಸಾವಿರ ನಕಲಿ ಬಾಟಲುಗಳು ಮತ್ತು 55 ಸಾವಿರ ನಕಲಿ ರೆಮ್‌ಡೆಸಿವಿರ್‌ನೊಂದಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಈ ಸಂದೇಶಗಳು ಹೇಳುತ್ತಿವೆ.

ಅದೇ ಹ್ಯಾಂಡಲ್‌ನ ಹ್ಯಾಂಡಲ್‌ನ ಮತ್ತೊಂದು ಟ್ವೀಟ್‌ನಲ್ಲಿ, ಸಿಕ್ಕಿಬಿದ್ದ ಇತರ ಐದು ಜನರನ್ನು ಹೆಸರಿಸಿದೆ. ಅದರಲ್ಲಿ ಮುಸ್ಲಿಂ ಹೆಸರುಗಳಿಲ್ಲ, ಈ ಟ್ವೀಟ್ ಕಡಿಮೆ ಜನರಿಂದ ರಿಟ್ವೀಟ್‌ ಆಗಿದೆ.

ಇದನ್ನೂ ಓದಿ: ಇಂದೋರ್‌ನಲ್ಲಿನ ಈ ಕೊರೊನಾ ಆರೈಕೆ ಕೇಂದ್ರ RSS ನಿರ್ಮಿಸಿದ್ದಲ್ಲ!

ಫ್ಯಾಕ್ಟ್‌ಚೆಕ್‌

ಇವೆಲ್ಲದರ ಹಿಂದಿನ ಉದ್ದೇಶ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯ ವೈಫಲ್ಯಗಳನ್ನು ಮರೆ ಮಾಚಲು ಘಟನೆಗೆ ಕೋಮುವಾದಿ ರೂಪ ಕೊಡುವುದಾಗಿದೆ. ತಪ್ಪು ದಾರಿಗೆಳೆಯುವ ಪೋಸ್ಟ್‌ಗಳು ಮುಸ್ಲಿಂ ಆರೋಪಿಗಳ ಹೆಸರನ್ನು ಮಾತ್ರ ಎತ್ತಿ ತೋರಿಸುತ್ತಿವೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೊಗಳು ಗುಜರಾತ್‌ನಲ್ಲಿ ನಕಲಿ ಮಾಡಿದ ರೆಮ್‌ಡೆಸಿವಿರ್ ದಂಧೆಗೆ ಸಂಬಂಧಿಸಿವೆ. ಏಳು ಜನರನ್ನು ಬಂಧಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ಹೇಳಿದೆ. ಮೊರ್ಬಿ ನಿವಾಸಿಗಳಾದ ರಾಹುಲ್ ಕೋಟೇಯ ಮತ್ತು ರವಿರಾಜ್ ಹಿರಾನಿ, ಮೊಹಮ್ಮದ್ ಆಶಿಮ್ ಅಲಿಯಾಸ್ ಆಶಿಫ್ ಮತ್ತು ರಮೀಜ್ ಕದ್ರಿ, ಸೂರತ್ ನಿವಾಸಿ ಕೌಶಲ್ ವೋರಾ ಮತ್ತು ಅವರ ಸಹಚರ ಮುಂಬೈ ನಿವಾಸಿ ಪುನೀತ್ ತಲಾಲ್ ಷಾ.

ಕೌಶಲ್ ವೋರಾ ಈ ದಂಧೆಯ ಮಾಸ್ಟರ್ ಮೈಂಡ್ ಎಂದು ವರದಿಯಾಗಿದೆ. ಇದಲ್ಲದೆ, ಪೊಲೀಸರು ಆಶಿಫ್ ಮತ್ತು ರಮೀಜ್‌ರಿಂದ 1,170 ಚುಚ್ಚುಮದ್ದು ಮತ್ತು 17.37 ಲಕ್ಷ ರೂ. ನಗದು ಮತ್ತು 14 ನಕಲಿ ಚುಚ್ಚುಮದ್ದುಗಳನ್ನು, ರಾಹುಲ್ ಮತ್ತು ರವಿರಾಜ್ರಿಂದ 2.15 ಲಕ್ಷ ರೂ. ಹಾಗೂ 7.68 ಲಕ್ಷ ರೂ. ಮುಖಬೆಲೆಯ 190 ನಕಲಿ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು, ಕೌಶಲ್, ಪುನೀತ್‌ರಿಂದ 24.70 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ ಗ್ಯಾಂಗ್ ಗ್ಲೂಕೋಸ್ ಮತ್ತು ಟೇಬಲ್ ಉಪ್ಪನ್ನು ರೆಮ್ಡೆಸಿವಿರ್‌ ಚುಚ್ಚುಮದ್ದು ಎಂದು ಪ್ಯಾಕೇಜಿಂಗ್ ಮಾಡುತ್ತಿತ್ತು.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಡೆಕ್ಕನ್ ಹೆರಾಲ್ಡ್ ಮತ್ತು ದಿ ಇಂಡಿಯನ್ ಎಕ್ಸ್‌ಪ್ರೆಸ್ ಆರು ಆರೋಪಿಗಳನ್ನು ಹೆಸರಿಸಿದ್ದು, ಅಹಮದಾಬಾದ್ ಮಿರರ್ ಇನ್ನೊಬ್ಬ ಏಳನೆ ಆರೋಪಿಯನ್ನು ಸಿರಾಜ್ ಖಾನ್ ಎಂದು ಹೆಸರಿಸಿದೆ. ಈತ ಕೌಶಲ್ ವೋರಾನ ಸಹಾಯಕ ಎಂದು ಅವರು ಹೇಳಿದೆ.

ಝೀ ನ್ಯೂಸ್ ಗುಜರಾತಿ ಪ್ರಕಾರ, ಆರೋಪಿಗಳಾದ ಕೌಶಲ್ ಮಹೇಂದ್ರ ವೊರಾ (ಸೂರತ್), ರಾಹುಲ್ ಅಶ್ವಿನ್ ಭಾಯ್ ಕೊಚೆತಾ (ಮೊರ್ಬಿ), ರವಿರಾಜ್ ಅಕಾ ರಾಜ್ ಮನೋಜ್ಭಾಯ್ ಹಿರಾನಿ (ಮೊರ್ಬಿ), ಮೊಹಮ್ಮದ್ ಆಶಿಮ್ ಅಕಾ ಮೊಹಮ್ಮದ್ ಆಸಿಫ್ ಮೊಹಮ್ಮದ್ ಅಬ್ಬಾಸ್ ಪಟಾನಿ (ಅಹ್ಮದಾಬಾದ್) ಮತ್ತು ಪುನೀತ್ ಗುನ್ವಂತ್ಲಾಲ್ ಷಾ (ಮುಂಬೈ). ಭರೂಚ್ ಮತ್ತು ಸೂರತ್‌ನ ಇತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಈ ಪ್ರಕರಣದ ಬಗ್ಗೆ ದೇಶ್ ಗುಜರಾತ್ ತನ್ನ ಆರಂಭಿಕ ವರದಿಯಲ್ಲಿ ಮುಸ್ಲಿಂ ಆರೋಪಿಗಳನ್ನು ಮಾತ್ರ ಹೆಸರಿಸಿತ್ತು. ನಂತರ ತನ್ನ ವರದಿಯನ್ನು ನವೀಕರಿಸಿ, ಕುಶಾಲ್ ಮತ್ತು ಪುನೀತ್ ಹೆಸರುಗಳನ್ನು ಸೇರಿಸಿತು.

ಇದನ್ನೂ ಓದಿ: ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಔಷಧದ ಬೇಡಿಕೆ ಗಗನಕ್ಕೇರಿದಾಗಿನಿಂದ ಗುಜರಾತ್ ಪೊಲೀಸರು ರಾಜ್ಯದಲ್ಲಿ ಅನೇಕ ನಕಲಿ ರೆಮ್ಡೆಸಿವಿರ್ ದಂಧೆಗಳನ್ನು ಪತ್ತೆ ಮಾಡಿದ್ದಾರೆ. ಬ್ಲ್ಯಾಕ್ ಮಾರುಕಟ್ಟೆ ಮತ್ತು ನಕಲಿ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ಮಾರಾಟ ಮಾಡಿದ 63 ಆರೋಪಿಗಳ ವಿರುದ್ಧ ಒಟ್ಟು 24 ಪ್ರಕರಣಗಳು ದಾಖಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ಪತ್ರಕರ್ತ ಸರ್ಫರಾಜ್ ಶೇಖ್ ಟ್ವೀಟ್ ಮಾಡಿದ್ದಾರೆ.

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಗುಜರಾತಿನಲ್ಲಿ ನಕಲಿ ರೆಮ್ಡೆಸಿವಿರ್ ದಂಧೆಯಲ್ಲಿ ಇಬ್ಬರು ಮುಸ್ಲಿಂ ಆರೋಪಿಗಳ ಹೆಸರುಗಳನ್ನು ಮಾತ್ರ ಎತ್ತಿಕೊಂಡು ಇದಕ್ಕೆ ಕೋಮುವಾದದ ರೂಪ ಕೊಡಲು ಯತ್ನಿಸುತ್ತಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಈ ಪ್ರಕರಣದಲ್ಲಿ ಸುಮಾರು ಏಳು ಜನರನ್ನು ಬಂಧಿಸಲಾಗಿದೆ. ಅದರಲ್ಲಿ ಇಬ್ಬರು ಮುಸ್ಲಿಮರು ಮತ್ತು ಐವರು ಹಿಂದೂಗಳಿದ್ದಾರೆ ಎಂದು ಅಲ್ಟ್ ನ್ಯೂಸ್ ಫ್ಯಾಕ್ಟ್‌ಚೆಕ್ ನಿರೂಪಿಸಿದೆ.

ಈಗ ಬೆಂಗಳೂರಿನಲ್ಲಿ ತೇಜಸ್ವಿ ಸೂರ್ಯ ಕೂಡ ಇದೇ ಜಾಡಿನಲ್ಲಿ ‘ಬೆಡ್ ಬ್ಲಾಕಿಂಗ್’ ವಿಷಯವನ್ನು ಪ್ರಸ್ತುತ ಪಡಿಸಿದ್ದಾರೆ.

ಕೃಪೆ: ಅಲ್ಟ್‌ನ್ಯೂಸ್

ಇದನ್ನೂ ಓದಿ: ಆಕ್ಸಿಜನ್, ಆರೋಗ್ಯ ಸೌಲಭ್ಯಗಳ ಕೊರತೆ: ಸಿಎಂ ಯೋಗಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...

‘ನಾಯಿಗಳ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲ’: ರಸ್ತೆಗಳು, ನಾಯಿಗಳಿಂದ ಮುಕ್ತವಾಗಿರಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ನಾಯಿ ಕಚ್ಚುವ ಮನಸ್ಥಿತಿಯಲ್ಲಿರುವಾಗ ಅದರ ಮನಸ್ಸನ್ನು ಯಾರೂ ಓದಲು ಸಾಧ್ಯವಿಲ್ಲವಾದ್ದರಿಂದ, ರಸ್ತೆಗಳು ಅಥವಾ ಬೀದಿಗಳು ನಾಯಿಗಳಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.  ಬೀದಿ ನಾಯಿಗಳಿಗೆ ಸಂಬಂಧಿಸಿದ ಸ್ವಯಂಪ್ರೇರಿತ ಪ್ರಕರಣವನ್ನು...

‘ಮಜಾ ನಾ ಕರಾಯಾ ತೋ..ಪೈಸೆ ವಾಪಸ್’: ಭಾರತಕ್ಕೆ ನೇರ ಬೆದರಿಕೆ ಹಾಕಿದ ಪಾಕಿಸ್ತಾನ ಸೇನಾಧಿಕಾರಿ ಅಹ್ಮದ್ ಷರೀಫ್ ಚೌಧರಿ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) ನ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ, ಕಾಬೂಲ್ ಜೊತೆಗಿನ ಇಸ್ಲಾಮಾಬಾದ್‌ನ ನಡೆಯುತ್ತಿರುವ ಸಂಘರ್ಷದೊಂದಿಗೆ ಭಾರತವನ್ನು ಜೋಡಿಸುವ ಮೂಲಕ ಮತ್ತೊಮ್ಮೆ ವಿವಾದವನ್ನು ಹುಟ್ಟುಹಾಕಿದ್ದಾರೆ.  ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ...

‘ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದ ನೆಹರು, ಮೊಘಲ್ ಆಕ್ರಮಣಕಾರರನ್ನು ವೈಭವೀಕರಿಸುತ್ತಿದ್ದರು’: ಬಿಜೆಪಿ ಆರೋಪ

ನವದೆಹಲಿ: ಸೋಮನಾಥ ದೇವಾಲಯವನ್ನು ಹಿಂದೆ ಘಜ್ನಿ ಮಹಮ್ಮದ್ ಮತ್ತು ಅಲಾವುದ್ದೀನ್ ಖಿಲ್ಜಿ ಲೂಟಿ ಮಾಡಿದ್ದರು ಆದರೆ ಸ್ವತಂತ್ರ ಭಾರತದಲ್ಲಿ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಭಗವಾನ್ ಸೋಮನಾಥನನ್ನು ಹೆಚ್ಚು ದ್ವೇಷಿಸುತ್ತಿದ್ದರು ಎಂದು...

ಬಿಜೆಪಿ ಕಾರ್ಯಕರ್ತೆಯನ್ನು ವಿವಸ್ತ್ರಗೊಳಿಸಿರುವುದಾಗಿ ಆರೋಪ: ಆಕೆ ತನ್ನನ್ನು ತಾನು ವಿವಸ್ತ್ರಗೊಳಿಸಿಕೊಂಡಿದ್ದಾಳೆ ಎಂದ ಪೊಲೀಸ್ ಕಮಿಷನರ್

ಹುಬ್ಬಳ್ಳಿ: ಪೊಲೀಸ್ ವ್ಯಾನ್ ಒಳಗೆ ಪೂರ್ಣ ಬಟ್ಟೆಯಿಲ್ಲದೆ ಮಹಿಳೆಯೊಬ್ಬರ ವಿಡಿಯೋ ವೈರಲ್ ಆದ ನಂತರ, ಬಿಜೆಪಿ ನಾಯಕರು ಪೊಲೀಸರು ಅವಳನ್ನು ಬಂಧಿಸುವಾಗ ಆಕೆಯ ಬಟ್ಟೆಗಳನ್ನು ಬಿಚ್ಚಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5...

ಬಿಜೆಪಿಯೊಂದಿಗೆ ಕೈಜೋಡಿಸಿದ ಗೌಡರೊಂದಿಗಿನ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ ಕೇರಳ ಜೆಡಿಎಸ್; ಹೊಸ ಪಕ್ಷದೊಂದಿಗೆ ವಿಲೀನ

ಜನತಾ ದಳ (ಜಾತ್ಯತೀತ) ದ ಕೇರಳ ಘಟಕವು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನೇತೃತ್ವದ ರಾಷ್ಟ್ರೀಯ ನಾಯಕತ್ವದೊಂದಿಗೆ ಸಂಬಂಧವನ್ನು ಕಡಿದುಕೊಂಡು ಹೊಸ ರಾಜಕೀಯ ಪಕ್ಷದೊಂದಿಗೆ ವಿಲೀನಗೊಳ್ಳಲು ನಿರ್ಧರಿಸಿದೆ. ಈ ನಿರ್ಧಾರದ ಕುರಿತು ಶೀಘ್ರದಲ್ಲೇ ಅಧಿಕೃತ...

‘ಚೀನಾ, ರಷ್ಯಾ, ಕ್ಯೂಬಾ, ಇರಾನ್‌ಗಳನ್ನು ಹೊರಗಿಡಿ’: ವೆನೆಜುವೆಲಾಗೆ ಟ್ರಂಪ್ ತಂಡದ ಹೊಸ ತೈಲ ಎಚ್ಚರಿಕೆ

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೆನೆಜುವೆಲಾದ ಮಧ್ಯಂತರ ಅಧ್ಯಕ್ಷ ಡೆಲ್ಸಿ ರೊಡ್ರಿಗಸ್ ನೇತೃತ್ವದ ಹೊಸ ಆಡಳಿತಕ್ಕೆ ಚೀನಾ, ರಷ್ಯಾ, ಇರಾನ್ ಮತ್ತು ಕ್ಯೂಬಾ ಜೊತೆಗಿನ ಆರ್ಥಿಕ ಸಂಬಂಧಗಳನ್ನು "ಕಿತ್ತುಹಾಕಬೇಕು" ಮತ್ತು "ಕಡಿತಗೊಳಿಸಬೇಕು" ಎಂದು...

ದೆಹಲಿ ಫೈಜ್-ಎ-ಇಲಾಹಿ ಮಸೀದಿ ಬಳಿ ತೆರವು ಕಾರ್ಯಾಚರಣೆಗೆ ಸ್ಥಳೀಯರಿಂದ ವಿರೋಧ, ಉದ್ವಿಗ್ನತೆ; ಅಶ್ರುವಾಯು ಪ್ರಯೋಗ, 10 ಜನರ ಬಂಧನ

ದೆಹಲಿಯ ತುರ್ಕಮನ್ ಗೇಟ್-ರಾಮ್ಲೀಲಾ ಮೈದಾನ ಪ್ರದೇಶದಲ್ಲಿರುವ ಶತಮಾನಗಳಷ್ಟು ಹಳೆಯದಾದ ಫೈಜ್-ಎ-ಇಲಾಹಿ ಮಸೀದಿಯ ಬಳಿ ಬುಧವಾರ ಮುಂಜಾನೆ ನಡೆದ ತೆರವು ಕಾರ್ಯಾಚರಣೆಗೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದು, ಆ ನಂತರ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ, ಇದು...