Homeಫ್ಯಾಕ್ಟ್‌ಚೆಕ್ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಮುಸ್ಲಿಂ ಆರೋಪಿಗಳ ಹೆಸರುಗಳನ್ನು ಮಾತ್ರ ಎತ್ತಿಕೊಂಡು ಪ್ರಕರಣಕ್ಕೆ ಕೋಮುಬಣ್ಣ ಹಚ್ಚಲು ಬಲಪಂಥೀಯರು ಯತ್ನಿಸುತ್ತಿದ್ದಾರೆ.

- Advertisement -
- Advertisement -

ಗುಜರಾತಿನಲ್ಲಿ ರೆಮ್ಡೆಸಿವಿರ್ ಹೆಸರಲ್ಲಿ ನಕಲಿ ಇಂಜೆಕ್ಷನ್ ಮಾರುತ್ತಿದ್ದ ಒಂದು ಜಾಲವನ್ನು ಮೂರು ದಿನದ ಹಿಂದೆ ಭೇದಿಸಲಾಗಿದೆ. ಬಂಧಿತ ಗ್ಯಾಂಗಿನ ಏಳು ಜನರ ಪೈಕಿ ಇಬ್ಬರು ಮುಸ್ಲಿಮರಿದ್ದು, ಬಲಪಂಥೀಯರು ಮತ್ತು ಬಿಜೆಪಿ ಐಟಿ ಸೆಲ್, ಈ ಇಬ್ಬರ ಹೆಸರನ್ನು ಮಾತ್ರ ಉಲ್ಲೇಖಿಸಿ ಇದಕ್ಕೆ ಕೋಮು ಬಣ್ಣ ಕಟ್ಟಲು ಹೊರಟಿದೆ. ಅದೇ ಪ್ರಯೋಗದ ಮುಂದುವರೆದ ಭಾಗವಾಗಿ, ಬೆಂಗಳೂರಲ್ಲಿ ಸಂಸದ ತೇಜಸ್ವಿ ಸೂರ್ಯ ‘ಬೆಡ್ ಬ್ಲಾಕಿಂಗ್’ ವಿಷಯವನ್ನು ಕೋಮು ಬಣ್ಣಕ್ಕೆ ತಿರುಗಿಸುವ ಹುನ್ನಾರ ನಡೆಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ರೆಮ್ಡೆಸಿವಿರ್ ಕೋವಿಡ್ ರೋಗಿಗಳ ಆರೈಕೆಯಲ್ಲಿ ಕೆಲಸ ಮಾಡದು ಎಂದು ಹೇಳಿದ ಬಳಿಕವೂ, ಭಾರತದಲ್ಲಿ ಕೋವಿಡ್ ರೋಗಿಗಳಿಗೆ ಇದನ್ನು ನೀಡಲಾಗುತ್ತಿದೆ. ರೆಮ್‌ಡೆಸಿವಿರ್‌ನ ಪರಿಣಾಮಕಾರಿತ್ವವನ್ನು ವೈದ್ಯರು ಮತ್ತು ವಿಜ್ಞಾನಿಗಳು ಪ್ರಶ್ನಿಸಿದರೂ, ಹತಾಶ ರೋಗಿಗಳು ಔಷಧವನ್ನು ಬ್ಲ್ಯಾಕ್ ಮಾರುಕಟ್ಟೆಯಲ್ಲಿ 40 ಸಾವಿರ ರೂ.ಗಳಿಗೆ ಖರೀದಿಸುತ್ತಿದ್ದಾರೆ.

ಮೇ 1 ರಂದು ಗುಜರಾತ್ ಪೊಲೀಸರು ನಕಲಿ ರೆಮ್ಡೆಸಿವಿರ್ ದಂಧೆಯನ್ನು ಭೇದಿಸಿ ಮೊರ್ಬಿ, ಅಹಮದಾಬಾದ್ ಮತ್ತು ಸೂರತ್‌ನ ಏಳು ಜನರನ್ನು ಬಂಧಿಸಿದ್ದಾರೆ. 60 ಸಾವಿರ ಖಾಲಿ ಬಾಟಲುಗಳು, 30 ಸಾವಿರ ನಕಲಿ ಸ್ಟಿಕ್ಕರ್‌ಗಳು ಮತ್ತು 90 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಬಂಧಿಸಲ್ಪಟ್ಟವರ ಹೆಸರುಗಳು ರಮೀಜ್ ಕದ್ರಿ ಮತ್ತು ಮೊಹಮ್ಮದ್ ಆಸಿಫ್ ಎಂದು ಬಲಪಂಥೀಯರ ಮತ್ತು ಬಿಜೆಪಿ ಐಟಿ ಸೆಲ್ ಸದಸ್ಯರ ವೈರಲ್ ಸಂದೇಶಗಳು ಸೂಚಿಸುತ್ತಿವೆ.

@Rashtra_Sevika_ ಟ್ವಿಟರ್‌ ಹ್ಯಾಂಡಲ್‌ನ ಟ್ವೀಟ್‌ಗೆ 4,480 ಕ್ಕೂ ಹೆಚ್ಚು ರಿಟ್ವೀಟ್‌ಗಳು ಬಂದಿವೆ. ಈ ಟ್ವೀಟ್‌‌ನಲ್ಲಿ, ‘ಉಪ್ಪು, ಗ್ಲೂಕೋಸ್ ಮತ್ತು ನೀರಿನಿಂದ ನಕಲಿ ರೆಮ್ಡೆಸಿವಿರ್ ತಯಾರಿಸಿದ್ದಕ್ಕಾಗಿ ಆರು ಜನರನ್ನು ಗುಜರಾತಿನಲ್ಲಿ ಬಂಧಿಸಲಾಗಿದೆ. ಅವರು 60 ಸಾವಿರ ನಕಲಿ ರೆಮ್ಡೆಸಿವಿರ್ ಮಾಡಲು ಹೊರಟಿದ್ದರು. ಅಹಮದಾಬಾದ್‌ನ ಜುಹಾಪುರದ ರಮೀಜ್ ಕದ್ರಿ ಮತ್ತು ಮೊಹಮ್ಮದ್ ಆಸಿಫ್ 1117 ನಕಲಿ ರೆಮ್‌ಡೆಸಿವಿರ್ ಬಾಟಲುಗಳು, 50 ಲಕ್ಷ ರೂ. ನಗದು, 55 ಸಾವಿರ ನಕಲಿ ಬಾಟಲುಗಳು ಮತ್ತು 55 ಸಾವಿರ ನಕಲಿ ರೆಮ್‌ಡೆಸಿವಿರ್‌ನೊಂದಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಈ ಸಂದೇಶಗಳು ಹೇಳುತ್ತಿವೆ.

ಅದೇ ಹ್ಯಾಂಡಲ್‌ನ ಹ್ಯಾಂಡಲ್‌ನ ಮತ್ತೊಂದು ಟ್ವೀಟ್‌ನಲ್ಲಿ, ಸಿಕ್ಕಿಬಿದ್ದ ಇತರ ಐದು ಜನರನ್ನು ಹೆಸರಿಸಿದೆ. ಅದರಲ್ಲಿ ಮುಸ್ಲಿಂ ಹೆಸರುಗಳಿಲ್ಲ, ಈ ಟ್ವೀಟ್ ಕಡಿಮೆ ಜನರಿಂದ ರಿಟ್ವೀಟ್‌ ಆಗಿದೆ.

ಇದನ್ನೂ ಓದಿ: ಇಂದೋರ್‌ನಲ್ಲಿನ ಈ ಕೊರೊನಾ ಆರೈಕೆ ಕೇಂದ್ರ RSS ನಿರ್ಮಿಸಿದ್ದಲ್ಲ!

ಫ್ಯಾಕ್ಟ್‌ಚೆಕ್‌

ಇವೆಲ್ಲದರ ಹಿಂದಿನ ಉದ್ದೇಶ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯ ವೈಫಲ್ಯಗಳನ್ನು ಮರೆ ಮಾಚಲು ಘಟನೆಗೆ ಕೋಮುವಾದಿ ರೂಪ ಕೊಡುವುದಾಗಿದೆ. ತಪ್ಪು ದಾರಿಗೆಳೆಯುವ ಪೋಸ್ಟ್‌ಗಳು ಮುಸ್ಲಿಂ ಆರೋಪಿಗಳ ಹೆಸರನ್ನು ಮಾತ್ರ ಎತ್ತಿ ತೋರಿಸುತ್ತಿವೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೊಗಳು ಗುಜರಾತ್‌ನಲ್ಲಿ ನಕಲಿ ಮಾಡಿದ ರೆಮ್‌ಡೆಸಿವಿರ್ ದಂಧೆಗೆ ಸಂಬಂಧಿಸಿವೆ. ಏಳು ಜನರನ್ನು ಬಂಧಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ಹೇಳಿದೆ. ಮೊರ್ಬಿ ನಿವಾಸಿಗಳಾದ ರಾಹುಲ್ ಕೋಟೇಯ ಮತ್ತು ರವಿರಾಜ್ ಹಿರಾನಿ, ಮೊಹಮ್ಮದ್ ಆಶಿಮ್ ಅಲಿಯಾಸ್ ಆಶಿಫ್ ಮತ್ತು ರಮೀಜ್ ಕದ್ರಿ, ಸೂರತ್ ನಿವಾಸಿ ಕೌಶಲ್ ವೋರಾ ಮತ್ತು ಅವರ ಸಹಚರ ಮುಂಬೈ ನಿವಾಸಿ ಪುನೀತ್ ತಲಾಲ್ ಷಾ.

ಕೌಶಲ್ ವೋರಾ ಈ ದಂಧೆಯ ಮಾಸ್ಟರ್ ಮೈಂಡ್ ಎಂದು ವರದಿಯಾಗಿದೆ. ಇದಲ್ಲದೆ, ಪೊಲೀಸರು ಆಶಿಫ್ ಮತ್ತು ರಮೀಜ್‌ರಿಂದ 1,170 ಚುಚ್ಚುಮದ್ದು ಮತ್ತು 17.37 ಲಕ್ಷ ರೂ. ನಗದು ಮತ್ತು 14 ನಕಲಿ ಚುಚ್ಚುಮದ್ದುಗಳನ್ನು, ರಾಹುಲ್ ಮತ್ತು ರವಿರಾಜ್ರಿಂದ 2.15 ಲಕ್ಷ ರೂ. ಹಾಗೂ 7.68 ಲಕ್ಷ ರೂ. ಮುಖಬೆಲೆಯ 190 ನಕಲಿ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು, ಕೌಶಲ್, ಪುನೀತ್‌ರಿಂದ 24.70 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ ಗ್ಯಾಂಗ್ ಗ್ಲೂಕೋಸ್ ಮತ್ತು ಟೇಬಲ್ ಉಪ್ಪನ್ನು ರೆಮ್ಡೆಸಿವಿರ್‌ ಚುಚ್ಚುಮದ್ದು ಎಂದು ಪ್ಯಾಕೇಜಿಂಗ್ ಮಾಡುತ್ತಿತ್ತು.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಡೆಕ್ಕನ್ ಹೆರಾಲ್ಡ್ ಮತ್ತು ದಿ ಇಂಡಿಯನ್ ಎಕ್ಸ್‌ಪ್ರೆಸ್ ಆರು ಆರೋಪಿಗಳನ್ನು ಹೆಸರಿಸಿದ್ದು, ಅಹಮದಾಬಾದ್ ಮಿರರ್ ಇನ್ನೊಬ್ಬ ಏಳನೆ ಆರೋಪಿಯನ್ನು ಸಿರಾಜ್ ಖಾನ್ ಎಂದು ಹೆಸರಿಸಿದೆ. ಈತ ಕೌಶಲ್ ವೋರಾನ ಸಹಾಯಕ ಎಂದು ಅವರು ಹೇಳಿದೆ.

ಝೀ ನ್ಯೂಸ್ ಗುಜರಾತಿ ಪ್ರಕಾರ, ಆರೋಪಿಗಳಾದ ಕೌಶಲ್ ಮಹೇಂದ್ರ ವೊರಾ (ಸೂರತ್), ರಾಹುಲ್ ಅಶ್ವಿನ್ ಭಾಯ್ ಕೊಚೆತಾ (ಮೊರ್ಬಿ), ರವಿರಾಜ್ ಅಕಾ ರಾಜ್ ಮನೋಜ್ಭಾಯ್ ಹಿರಾನಿ (ಮೊರ್ಬಿ), ಮೊಹಮ್ಮದ್ ಆಶಿಮ್ ಅಕಾ ಮೊಹಮ್ಮದ್ ಆಸಿಫ್ ಮೊಹಮ್ಮದ್ ಅಬ್ಬಾಸ್ ಪಟಾನಿ (ಅಹ್ಮದಾಬಾದ್) ಮತ್ತು ಪುನೀತ್ ಗುನ್ವಂತ್ಲಾಲ್ ಷಾ (ಮುಂಬೈ). ಭರೂಚ್ ಮತ್ತು ಸೂರತ್‌ನ ಇತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಈ ಪ್ರಕರಣದ ಬಗ್ಗೆ ದೇಶ್ ಗುಜರಾತ್ ತನ್ನ ಆರಂಭಿಕ ವರದಿಯಲ್ಲಿ ಮುಸ್ಲಿಂ ಆರೋಪಿಗಳನ್ನು ಮಾತ್ರ ಹೆಸರಿಸಿತ್ತು. ನಂತರ ತನ್ನ ವರದಿಯನ್ನು ನವೀಕರಿಸಿ, ಕುಶಾಲ್ ಮತ್ತು ಪುನೀತ್ ಹೆಸರುಗಳನ್ನು ಸೇರಿಸಿತು.

ಇದನ್ನೂ ಓದಿ: ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಔಷಧದ ಬೇಡಿಕೆ ಗಗನಕ್ಕೇರಿದಾಗಿನಿಂದ ಗುಜರಾತ್ ಪೊಲೀಸರು ರಾಜ್ಯದಲ್ಲಿ ಅನೇಕ ನಕಲಿ ರೆಮ್ಡೆಸಿವಿರ್ ದಂಧೆಗಳನ್ನು ಪತ್ತೆ ಮಾಡಿದ್ದಾರೆ. ಬ್ಲ್ಯಾಕ್ ಮಾರುಕಟ್ಟೆ ಮತ್ತು ನಕಲಿ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ಮಾರಾಟ ಮಾಡಿದ 63 ಆರೋಪಿಗಳ ವಿರುದ್ಧ ಒಟ್ಟು 24 ಪ್ರಕರಣಗಳು ದಾಖಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ಪತ್ರಕರ್ತ ಸರ್ಫರಾಜ್ ಶೇಖ್ ಟ್ವೀಟ್ ಮಾಡಿದ್ದಾರೆ.

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಗುಜರಾತಿನಲ್ಲಿ ನಕಲಿ ರೆಮ್ಡೆಸಿವಿರ್ ದಂಧೆಯಲ್ಲಿ ಇಬ್ಬರು ಮುಸ್ಲಿಂ ಆರೋಪಿಗಳ ಹೆಸರುಗಳನ್ನು ಮಾತ್ರ ಎತ್ತಿಕೊಂಡು ಇದಕ್ಕೆ ಕೋಮುವಾದದ ರೂಪ ಕೊಡಲು ಯತ್ನಿಸುತ್ತಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಈ ಪ್ರಕರಣದಲ್ಲಿ ಸುಮಾರು ಏಳು ಜನರನ್ನು ಬಂಧಿಸಲಾಗಿದೆ. ಅದರಲ್ಲಿ ಇಬ್ಬರು ಮುಸ್ಲಿಮರು ಮತ್ತು ಐವರು ಹಿಂದೂಗಳಿದ್ದಾರೆ ಎಂದು ಅಲ್ಟ್ ನ್ಯೂಸ್ ಫ್ಯಾಕ್ಟ್‌ಚೆಕ್ ನಿರೂಪಿಸಿದೆ.

ಈಗ ಬೆಂಗಳೂರಿನಲ್ಲಿ ತೇಜಸ್ವಿ ಸೂರ್ಯ ಕೂಡ ಇದೇ ಜಾಡಿನಲ್ಲಿ ‘ಬೆಡ್ ಬ್ಲಾಕಿಂಗ್’ ವಿಷಯವನ್ನು ಪ್ರಸ್ತುತ ಪಡಿಸಿದ್ದಾರೆ.

ಕೃಪೆ: ಅಲ್ಟ್‌ನ್ಯೂಸ್

ಇದನ್ನೂ ಓದಿ: ಆಕ್ಸಿಜನ್, ಆರೋಗ್ಯ ಸೌಲಭ್ಯಗಳ ಕೊರತೆ: ಸಿಎಂ ಯೋಗಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...