Homeಫ್ಯಾಕ್ಟ್‌ಚೆಕ್ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಗುಜರಾತ್ ನಕಲಿ ರೆಮ್ಡೆಸಿವಿರ್ ದಂಧೆ: ಬಂಧಿತರಲ್ಲಿ ಇಬ್ಬರು ಮುಸ್ಲಿಮರಷ್ಟೇ ಅಲ್ಲ, 5 ಹಿಂದೂಗಳೂ ಇದ್ದಾರೆ!

ಮುಸ್ಲಿಂ ಆರೋಪಿಗಳ ಹೆಸರುಗಳನ್ನು ಮಾತ್ರ ಎತ್ತಿಕೊಂಡು ಪ್ರಕರಣಕ್ಕೆ ಕೋಮುಬಣ್ಣ ಹಚ್ಚಲು ಬಲಪಂಥೀಯರು ಯತ್ನಿಸುತ್ತಿದ್ದಾರೆ.

- Advertisement -
- Advertisement -

ಗುಜರಾತಿನಲ್ಲಿ ರೆಮ್ಡೆಸಿವಿರ್ ಹೆಸರಲ್ಲಿ ನಕಲಿ ಇಂಜೆಕ್ಷನ್ ಮಾರುತ್ತಿದ್ದ ಒಂದು ಜಾಲವನ್ನು ಮೂರು ದಿನದ ಹಿಂದೆ ಭೇದಿಸಲಾಗಿದೆ. ಬಂಧಿತ ಗ್ಯಾಂಗಿನ ಏಳು ಜನರ ಪೈಕಿ ಇಬ್ಬರು ಮುಸ್ಲಿಮರಿದ್ದು, ಬಲಪಂಥೀಯರು ಮತ್ತು ಬಿಜೆಪಿ ಐಟಿ ಸೆಲ್, ಈ ಇಬ್ಬರ ಹೆಸರನ್ನು ಮಾತ್ರ ಉಲ್ಲೇಖಿಸಿ ಇದಕ್ಕೆ ಕೋಮು ಬಣ್ಣ ಕಟ್ಟಲು ಹೊರಟಿದೆ. ಅದೇ ಪ್ರಯೋಗದ ಮುಂದುವರೆದ ಭಾಗವಾಗಿ, ಬೆಂಗಳೂರಲ್ಲಿ ಸಂಸದ ತೇಜಸ್ವಿ ಸೂರ್ಯ ‘ಬೆಡ್ ಬ್ಲಾಕಿಂಗ್’ ವಿಷಯವನ್ನು ಕೋಮು ಬಣ್ಣಕ್ಕೆ ತಿರುಗಿಸುವ ಹುನ್ನಾರ ನಡೆಸಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆ ರೆಮ್ಡೆಸಿವಿರ್ ಕೋವಿಡ್ ರೋಗಿಗಳ ಆರೈಕೆಯಲ್ಲಿ ಕೆಲಸ ಮಾಡದು ಎಂದು ಹೇಳಿದ ಬಳಿಕವೂ, ಭಾರತದಲ್ಲಿ ಕೋವಿಡ್ ರೋಗಿಗಳಿಗೆ ಇದನ್ನು ನೀಡಲಾಗುತ್ತಿದೆ. ರೆಮ್‌ಡೆಸಿವಿರ್‌ನ ಪರಿಣಾಮಕಾರಿತ್ವವನ್ನು ವೈದ್ಯರು ಮತ್ತು ವಿಜ್ಞಾನಿಗಳು ಪ್ರಶ್ನಿಸಿದರೂ, ಹತಾಶ ರೋಗಿಗಳು ಔಷಧವನ್ನು ಬ್ಲ್ಯಾಕ್ ಮಾರುಕಟ್ಟೆಯಲ್ಲಿ 40 ಸಾವಿರ ರೂ.ಗಳಿಗೆ ಖರೀದಿಸುತ್ತಿದ್ದಾರೆ.

ಮೇ 1 ರಂದು ಗುಜರಾತ್ ಪೊಲೀಸರು ನಕಲಿ ರೆಮ್ಡೆಸಿವಿರ್ ದಂಧೆಯನ್ನು ಭೇದಿಸಿ ಮೊರ್ಬಿ, ಅಹಮದಾಬಾದ್ ಮತ್ತು ಸೂರತ್‌ನ ಏಳು ಜನರನ್ನು ಬಂಧಿಸಿದ್ದಾರೆ. 60 ಸಾವಿರ ಖಾಲಿ ಬಾಟಲುಗಳು, 30 ಸಾವಿರ ನಕಲಿ ಸ್ಟಿಕ್ಕರ್‌ಗಳು ಮತ್ತು 90 ಲಕ್ಷ ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಕೊರೊನಾ ರೋಗಿಯನ್ನು ಆಸ್ಪತ್ರೆಯ ಸಿಬ್ಬಂದಿ ಕೊಲ್ಲುತ್ತಿದ್ದಾರೆ ಎಂಬ ಈ ವಿಡಿಯೊ ಸುಳ್ಳು!

ಬಂಧಿಸಲ್ಪಟ್ಟವರ ಹೆಸರುಗಳು ರಮೀಜ್ ಕದ್ರಿ ಮತ್ತು ಮೊಹಮ್ಮದ್ ಆಸಿಫ್ ಎಂದು ಬಲಪಂಥೀಯರ ಮತ್ತು ಬಿಜೆಪಿ ಐಟಿ ಸೆಲ್ ಸದಸ್ಯರ ವೈರಲ್ ಸಂದೇಶಗಳು ಸೂಚಿಸುತ್ತಿವೆ.

@Rashtra_Sevika_ ಟ್ವಿಟರ್‌ ಹ್ಯಾಂಡಲ್‌ನ ಟ್ವೀಟ್‌ಗೆ 4,480 ಕ್ಕೂ ಹೆಚ್ಚು ರಿಟ್ವೀಟ್‌ಗಳು ಬಂದಿವೆ. ಈ ಟ್ವೀಟ್‌‌ನಲ್ಲಿ, ‘ಉಪ್ಪು, ಗ್ಲೂಕೋಸ್ ಮತ್ತು ನೀರಿನಿಂದ ನಕಲಿ ರೆಮ್ಡೆಸಿವಿರ್ ತಯಾರಿಸಿದ್ದಕ್ಕಾಗಿ ಆರು ಜನರನ್ನು ಗುಜರಾತಿನಲ್ಲಿ ಬಂಧಿಸಲಾಗಿದೆ. ಅವರು 60 ಸಾವಿರ ನಕಲಿ ರೆಮ್ಡೆಸಿವಿರ್ ಮಾಡಲು ಹೊರಟಿದ್ದರು. ಅಹಮದಾಬಾದ್‌ನ ಜುಹಾಪುರದ ರಮೀಜ್ ಕದ್ರಿ ಮತ್ತು ಮೊಹಮ್ಮದ್ ಆಸಿಫ್ 1117 ನಕಲಿ ರೆಮ್‌ಡೆಸಿವಿರ್ ಬಾಟಲುಗಳು, 50 ಲಕ್ಷ ರೂ. ನಗದು, 55 ಸಾವಿರ ನಕಲಿ ಬಾಟಲುಗಳು ಮತ್ತು 55 ಸಾವಿರ ನಕಲಿ ರೆಮ್‌ಡೆಸಿವಿರ್‌ನೊಂದಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಈ ಸಂದೇಶಗಳು ಹೇಳುತ್ತಿವೆ.

ಅದೇ ಹ್ಯಾಂಡಲ್‌ನ ಹ್ಯಾಂಡಲ್‌ನ ಮತ್ತೊಂದು ಟ್ವೀಟ್‌ನಲ್ಲಿ, ಸಿಕ್ಕಿಬಿದ್ದ ಇತರ ಐದು ಜನರನ್ನು ಹೆಸರಿಸಿದೆ. ಅದರಲ್ಲಿ ಮುಸ್ಲಿಂ ಹೆಸರುಗಳಿಲ್ಲ, ಈ ಟ್ವೀಟ್ ಕಡಿಮೆ ಜನರಿಂದ ರಿಟ್ವೀಟ್‌ ಆಗಿದೆ.

ಇದನ್ನೂ ಓದಿ: ಇಂದೋರ್‌ನಲ್ಲಿನ ಈ ಕೊರೊನಾ ಆರೈಕೆ ಕೇಂದ್ರ RSS ನಿರ್ಮಿಸಿದ್ದಲ್ಲ!

ಫ್ಯಾಕ್ಟ್‌ಚೆಕ್‌

ಇವೆಲ್ಲದರ ಹಿಂದಿನ ಉದ್ದೇಶ, ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯ ವೈಫಲ್ಯಗಳನ್ನು ಮರೆ ಮಾಚಲು ಘಟನೆಗೆ ಕೋಮುವಾದಿ ರೂಪ ಕೊಡುವುದಾಗಿದೆ. ತಪ್ಪು ದಾರಿಗೆಳೆಯುವ ಪೋಸ್ಟ್‌ಗಳು ಮುಸ್ಲಿಂ ಆರೋಪಿಗಳ ಹೆಸರನ್ನು ಮಾತ್ರ ಎತ್ತಿ ತೋರಿಸುತ್ತಿವೆ.

ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಫೋಟೊಗಳು ಗುಜರಾತ್‌ನಲ್ಲಿ ನಕಲಿ ಮಾಡಿದ ರೆಮ್‌ಡೆಸಿವಿರ್ ದಂಧೆಗೆ ಸಂಬಂಧಿಸಿವೆ. ಏಳು ಜನರನ್ನು ಬಂಧಿಸಲಾಗಿದೆ ಎಂದು ಡೆಕ್ಕನ್ ಹೆರಾಲ್ಡ್ ಹೇಳಿದೆ. ಮೊರ್ಬಿ ನಿವಾಸಿಗಳಾದ ರಾಹುಲ್ ಕೋಟೇಯ ಮತ್ತು ರವಿರಾಜ್ ಹಿರಾನಿ, ಮೊಹಮ್ಮದ್ ಆಶಿಮ್ ಅಲಿಯಾಸ್ ಆಶಿಫ್ ಮತ್ತು ರಮೀಜ್ ಕದ್ರಿ, ಸೂರತ್ ನಿವಾಸಿ ಕೌಶಲ್ ವೋರಾ ಮತ್ತು ಅವರ ಸಹಚರ ಮುಂಬೈ ನಿವಾಸಿ ಪುನೀತ್ ತಲಾಲ್ ಷಾ.

ಕೌಶಲ್ ವೋರಾ ಈ ದಂಧೆಯ ಮಾಸ್ಟರ್ ಮೈಂಡ್ ಎಂದು ವರದಿಯಾಗಿದೆ. ಇದಲ್ಲದೆ, ಪೊಲೀಸರು ಆಶಿಫ್ ಮತ್ತು ರಮೀಜ್‌ರಿಂದ 1,170 ಚುಚ್ಚುಮದ್ದು ಮತ್ತು 17.37 ಲಕ್ಷ ರೂ. ನಗದು ಮತ್ತು 14 ನಕಲಿ ಚುಚ್ಚುಮದ್ದುಗಳನ್ನು, ರಾಹುಲ್ ಮತ್ತು ರವಿರಾಜ್ರಿಂದ 2.15 ಲಕ್ಷ ರೂ. ಹಾಗೂ 7.68 ಲಕ್ಷ ರೂ. ಮುಖಬೆಲೆಯ 190 ನಕಲಿ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು, ಕೌಶಲ್, ಪುನೀತ್‌ರಿಂದ 24.70 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ. ಈ ಗ್ಯಾಂಗ್ ಗ್ಲೂಕೋಸ್ ಮತ್ತು ಟೇಬಲ್ ಉಪ್ಪನ್ನು ರೆಮ್ಡೆಸಿವಿರ್‌ ಚುಚ್ಚುಮದ್ದು ಎಂದು ಪ್ಯಾಕೇಜಿಂಗ್ ಮಾಡುತ್ತಿತ್ತು.

ಇದನ್ನೂ ಓದಿ: ಮೋದಿ ದುರಂಹಕಾರವೇ ಕೋವಿಡ್ 2ನೆ ಅಲೆಯ ತೀವ್ರತೆಗೆ ಕಾರಣ: ಫ್ರೆಂಚ್ ಪತ್ರಿಕೆ ಸಂಪಾದಕೀಯ

ಡೆಕ್ಕನ್ ಹೆರಾಲ್ಡ್ ಮತ್ತು ದಿ ಇಂಡಿಯನ್ ಎಕ್ಸ್‌ಪ್ರೆಸ್ ಆರು ಆರೋಪಿಗಳನ್ನು ಹೆಸರಿಸಿದ್ದು, ಅಹಮದಾಬಾದ್ ಮಿರರ್ ಇನ್ನೊಬ್ಬ ಏಳನೆ ಆರೋಪಿಯನ್ನು ಸಿರಾಜ್ ಖಾನ್ ಎಂದು ಹೆಸರಿಸಿದೆ. ಈತ ಕೌಶಲ್ ವೋರಾನ ಸಹಾಯಕ ಎಂದು ಅವರು ಹೇಳಿದೆ.

ಝೀ ನ್ಯೂಸ್ ಗುಜರಾತಿ ಪ್ರಕಾರ, ಆರೋಪಿಗಳಾದ ಕೌಶಲ್ ಮಹೇಂದ್ರ ವೊರಾ (ಸೂರತ್), ರಾಹುಲ್ ಅಶ್ವಿನ್ ಭಾಯ್ ಕೊಚೆತಾ (ಮೊರ್ಬಿ), ರವಿರಾಜ್ ಅಕಾ ರಾಜ್ ಮನೋಜ್ಭಾಯ್ ಹಿರಾನಿ (ಮೊರ್ಬಿ), ಮೊಹಮ್ಮದ್ ಆಶಿಮ್ ಅಕಾ ಮೊಹಮ್ಮದ್ ಆಸಿಫ್ ಮೊಹಮ್ಮದ್ ಅಬ್ಬಾಸ್ ಪಟಾನಿ (ಅಹ್ಮದಾಬಾದ್) ಮತ್ತು ಪುನೀತ್ ಗುನ್ವಂತ್ಲಾಲ್ ಷಾ (ಮುಂಬೈ). ಭರೂಚ್ ಮತ್ತು ಸೂರತ್‌ನ ಇತರ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ವರದಿ ತಿಳಿಸಿದೆ.

ಈ ಪ್ರಕರಣದ ಬಗ್ಗೆ ದೇಶ್ ಗುಜರಾತ್ ತನ್ನ ಆರಂಭಿಕ ವರದಿಯಲ್ಲಿ ಮುಸ್ಲಿಂ ಆರೋಪಿಗಳನ್ನು ಮಾತ್ರ ಹೆಸರಿಸಿತ್ತು. ನಂತರ ತನ್ನ ವರದಿಯನ್ನು ನವೀಕರಿಸಿ, ಕುಶಾಲ್ ಮತ್ತು ಪುನೀತ್ ಹೆಸರುಗಳನ್ನು ಸೇರಿಸಿತು.

ಇದನ್ನೂ ಓದಿ: ಕೋವಿಡ್ 2ನೆ ಅಲೆ ತೀವ್ರವಾಗುತ್ತಿದ್ದಾಗ ಕುಂಭಮೇಳದಲ್ಲಿ ಮುಳುಗೆದ್ದವರು 70 ಲಕ್ಷ ಜನ!

ಸಾಂಕ್ರಾಮಿಕ ರೋಗದ ಎರಡನೇ ಅಲೆಯಲ್ಲಿ ಔಷಧದ ಬೇಡಿಕೆ ಗಗನಕ್ಕೇರಿದಾಗಿನಿಂದ ಗುಜರಾತ್ ಪೊಲೀಸರು ರಾಜ್ಯದಲ್ಲಿ ಅನೇಕ ನಕಲಿ ರೆಮ್ಡೆಸಿವಿರ್ ದಂಧೆಗಳನ್ನು ಪತ್ತೆ ಮಾಡಿದ್ದಾರೆ. ಬ್ಲ್ಯಾಕ್ ಮಾರುಕಟ್ಟೆ ಮತ್ತು ನಕಲಿ ರೆಮ್‌ಡೆಸಿವಿರ್ ಚುಚ್ಚುಮದ್ದನ್ನು ಮಾರಾಟ ಮಾಡಿದ 63 ಆರೋಪಿಗಳ ವಿರುದ್ಧ ಒಟ್ಟು 24 ಪ್ರಕರಣಗಳು ದಾಖಲಾಗಿವೆ ಎಂದು ಟೈಮ್ಸ್ ಆಫ್ ಇಂಡಿಯಾ ಪತ್ರಕರ್ತ ಸರ್ಫರಾಜ್ ಶೇಖ್ ಟ್ವೀಟ್ ಮಾಡಿದ್ದಾರೆ.

ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಗುಜರಾತಿನಲ್ಲಿ ನಕಲಿ ರೆಮ್ಡೆಸಿವಿರ್ ದಂಧೆಯಲ್ಲಿ ಇಬ್ಬರು ಮುಸ್ಲಿಂ ಆರೋಪಿಗಳ ಹೆಸರುಗಳನ್ನು ಮಾತ್ರ ಎತ್ತಿಕೊಂಡು ಇದಕ್ಕೆ ಕೋಮುವಾದದ ರೂಪ ಕೊಡಲು ಯತ್ನಿಸುತ್ತಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಈ ಪ್ರಕರಣದಲ್ಲಿ ಸುಮಾರು ಏಳು ಜನರನ್ನು ಬಂಧಿಸಲಾಗಿದೆ. ಅದರಲ್ಲಿ ಇಬ್ಬರು ಮುಸ್ಲಿಮರು ಮತ್ತು ಐವರು ಹಿಂದೂಗಳಿದ್ದಾರೆ ಎಂದು ಅಲ್ಟ್ ನ್ಯೂಸ್ ಫ್ಯಾಕ್ಟ್‌ಚೆಕ್ ನಿರೂಪಿಸಿದೆ.

ಈಗ ಬೆಂಗಳೂರಿನಲ್ಲಿ ತೇಜಸ್ವಿ ಸೂರ್ಯ ಕೂಡ ಇದೇ ಜಾಡಿನಲ್ಲಿ ‘ಬೆಡ್ ಬ್ಲಾಕಿಂಗ್’ ವಿಷಯವನ್ನು ಪ್ರಸ್ತುತ ಪಡಿಸಿದ್ದಾರೆ.

ಕೃಪೆ: ಅಲ್ಟ್‌ನ್ಯೂಸ್

ಇದನ್ನೂ ಓದಿ: ಆಕ್ಸಿಜನ್, ಆರೋಗ್ಯ ಸೌಲಭ್ಯಗಳ ಕೊರತೆ: ಸಿಎಂ ಯೋಗಿ ವಿರುದ್ಧ ತಿರುಗಿ ಬಿದ್ದ ಬಿಜೆಪಿ ನಾಯಕರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...