Homeಮುಖಪುಟಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಗ್ರಾಮದ ರಾಮ ಮಂದಿರ ಪ್ರವೇಶಿಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಸುಮಾರು 20 ಜನರ ಗುಂಪು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ, ಗುಜರಾತ್‌ನ ಕಛ್‌ನ ಗಾಂಧಿಧಾಮ್ ನಗರದ ಭಚೌ ತಾಲೂಕಿನ ಹಳ್ಳಿಯೊಂದರಲ್ಲಿ ಮೂರು ದಿನಗಳ ಹಿಂದೆ ನಡೆದಿದೆ.

ಗ್ರಾಮದಲ್ಲಿರುವ ರಾಮ ಮಂದಿರದಲ್ಲಿ ಬೇರೆ ಸಮುದಾಯದವರು ಸಮಾರಂಭವೊಂದನ್ನು ಆಯೋಜಿಸಿದ್ದರು. ಈ ವೇಳೆ ಅಲ್ಲಿಗೆ ಪ್ರವೇಶಿಸಿದ ಕಾರಣಕ್ಕೆ ದಲಿತ ಕುಟುಂಬದ 6 ಸದಸ್ಯರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. “ಗ್ರಾಮದ ರಾಮ ಮಂದಿರಕ್ಕೆ ಪ್ರವೇಶಿಸಿದ ನಂತರ ತಮ್ಮನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗಿದೆ” ಎಂದು ಗಾಯಾಳುಗಳು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಸಂತ್ರಸ್ತರು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಆರು ಮಂದಿಯನ್ನು ಕಛ್‌ನ ಭುಜ್‌ನಲ್ಲಿರುವ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ದಾಳಿಯಲ್ಲಿ ಅವರ ತಲೆ ಮತ್ತು ಇತರ ಭಾಗಗಳಿಗೆ ಹರಿತವಾದ ಆಯುಧಗಳಿಂದ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಅಕ್ಟೋಬರ್ 26 ರಂದು ಭಚೌ ತಾಲೂಕಿನ ನೇರ್ ಗ್ರಾಮದಲ್ಲಿ ಎರಡು ದಾಳಿ ಘಟನೆಗಳು ಸಂಭವಿಸಿವೆ. ಇದರಲ್ಲಿ 20 ಜನರ ಗುಂಪು ಮೊದಲು ದಲಿತ ಕುಟುಂಬದ ಕೃಷಿ ಭೂಮಿಯನ್ನು ದನಗಳನ್ನು ಮೇಯಲು ಬಿಟ್ಟು ನಂತರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿತು.

ಮೊದಲ ಘಟನೆಯಲ್ಲಿ, ಗೋವಿಂದ್ ವಘೇಲಾ (39) ಅವರು ಅಕ್ಟೋಬರ್ 26 ರಂದು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಗ್ರಾಮದ ತಮ್ಮ ಜಮೀನಿಗೆ ಜಾನುವಾರುಗಳು ಪ್ರವೇಶಿಸಿವೆ ಎಂದು ತಿಳಿದಿದ್ದಾರೆ.

“ನಾನು ನನ್ನ ಚಿಕ್ಕಪ್ಪ ಗಣೇಶ್ ವಘೇಲಾ ಅವರೊಂದಿಗೆ ಆಟೋ ರಿಕ್ಷಾದಲ್ಲಿ ಹೊರಟಿದ್ದೆ. ನನ್ನ ಕೃಷಿ ಭೂಮಿಯನ್ನು ತಲುಪಿದಾಗ, ಬೆಳೆಗಳು ಧ್ವಂಸಗೊಂಡಿರುವುದನ್ನು ನಾನು ನೋಡಿದೆ. ಜೊತೆಗೆ ಕೈಯಲ್ಲಿ ಕೊಡಲಿಗಳು, ದೊಣ್ಣೆಗಳು, ರಾಡ್‌ಗಳನ್ನು ಹಿಡಿದುಕೊಂಡು ಜನರ ಗುಂಪು ಮರದ ಕೆಳಗೆ ಕಾಯುತ್ತಿದ್ದವು. ನನ್ನ ಗ್ರಾಮದವರೇ ಆಗಿರುವ ಕಾನಾ ಅಹಿರ್ ನೇತೃತ್ವದಲ್ಲಿ ಶಸ್ತ್ರಗಳಿಂದ ನಮ್ಮ ಮೇಲೆ ಹಲ್ಲೆ ನಡೆಸಲಾರಂಭಿಸಿದರು’’ ಎಂದು ಗೋವಿಂದ ವಘೇಲಾ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

“ಅಕ್ಟೋಬರ್ 20 ರಂದು ‘ಪ್ರತಿಷ್ಠಾನ’ ಸಮಾರಂಭ ನಡೆಯುತ್ತಿರುವಾಗ ಯಾಕೆ ರಾಮಮಂದಿರ ಪ್ರವೇಶಿಸಿದ್ದೀರಿ ಎಂದು ಅವರು ನಮ್ಮನ್ನು ಕೇಳಿದ್ದಾರೆ. ಅವರು ನನ್ನ ಮೊಬೈಲ್‌ ಫೋನ್ ದೋಚಿ ಆಟೋರಿಕ್ಷಾದ ಮೇಲೆ ದಾಳಿ ಮಾಡಿದರು. ಇದರಿಂದಾಗಿ ನಮಗೆ ಯಾರ ಸಹಾಯವು ಪಡೆಯಲು ಸಾಧ್ಯವಾಗಿಲ್ಲ. ಅಲ್ಲಿಂದ ಅವರು ನನ್ನ ತಂದೆಯನ್ನು ಕೊಲ್ಲಲು ಹಳ್ಳಿಗೆ ತೆರಳುತ್ತಿರುವುದಾಗಿ ಹೇಳಿದರು. ನನಗೆ ಮತ್ತು ನನ್ನ ಚಿಕ್ಕಪ್ಪನ ತಲೆ ಮತ್ತು ಕೈಕಾಲುಗಳಿಗೆ ಗಾಯಗಳಾಗಿವೆ. ಕೊನೆಗೆ ಪೊಲೀಸರು ನಮ್ಮನ್ನು ಆಸ್ಪತ್ರೆಗೆ ಕರೆದೊಯ್ದು ರಕ್ಷಿಸಿದ್ದಾರೆ” ಎಂದು ಗೋವಿಂದ ವಘೇಲಾ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಬೆಳಿಗ್ಗೆ 11:30 ರ ಸುಮಾರಿಗೆ 20 ಆರೋಪಿಗಳ ತಂಡವು ನಂತರ ಗೋವಿಂದ ವಘೇಲಾ ಅವರ ತಂದೆ ಜಗಭಾಯಿ ವಘೇಲಾ (64) ಅವರ ಮನೆ ತಲುಪಿ ಅವರ ಮೇಲೆ, ಅವರ ಪತ್ನಿ ಬದ್ಧಿಬೆನ್ ವಘೇಲಾ, ಮಗ ಭುರಾ ವಘೇಲಾ ಮತ್ತು ಸೋದರಳಿಯ ಹಸ್ಮುಖ್ ವಘೇಲಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

“ಆರೋಪಿಗಳು ಜಾತಿ ನಿಂದನೆ ಮಾಡಿದ್ದು… ಮತ್ತು ನಮ್ಮ ತಲೆ ಮತ್ತು ಕೈಕಾಲುಗಳಿಗೆ ಹೊಡೆದಿದ್ದಾರೆ. ಇದರಿಂದಾಗಿ ತೀವ್ರ ರಕ್ತಸ್ರಾವವಾಯಿತು” ಎಂದು ಜಗಭಾಯಿ ವಘೇಲಾ ಹೇಳಿದ್ದಾರೆ.

ಇದನ್ನೂ ಓದಿ: ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

ಕಾನಾ ಅಹಿರ್, ಜೀವಾ ಅಹಿರ್, ವೇಲಾ ಅಹಿರ್, ಕೇಸ್ರಾ ರಾಬರಿ, ಅರ್ಜನ್ ರಾಬರಿ, ದಿನೇಶ್ ಬಾಲಸಾರ, ರಾಜೇಶ್ ಬಾಲಸಾರ, ರಾಣಾ ಬಾಲಾಸರ, ದಿನೇಶ್ ರಾಮ್‌ಜಿ ಬಾಲಸರ, ನಯಾ ಅಹಿರ್, ಕಾನಾ ಕೋಲಿ, ಭಂಜಿ ಸುತಾರ್, ರಾಜೇಶ್ ಎಂದು ಗುರುತಿಸಲಾದ ಸುಮಾರು 20 ಆರೋಪಿಗಳ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಮಾರಾಜ್, ದಿನೇಶ್ ಮಾರಾಜ್, ಪಬಾ ರಾಬರಿ, ಚೌಡಾ ಕೋಲಿ, ಸಾವಾ ಕೋಲಿ, ಮೋಮಯಾ ಕೋಲಿ, ಹೇಮಾ ರಾಬರಿ ಮತ್ತು ನವಗನ್ ರಾಬರಿ ವಿರುದ್ಧ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಕೊಲೆ ಯತ್ನ, 323 ಗಾಯಗೊಳಿಸಿದ್ದಕ್ಕಾಗಿ, 324 ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸಿದ್ದಕ್ಕಾಗಿ, 452 ಮನೆ ಟ್ರೆಸ್‌ಪಾಸ್‌ ಅಪರಾಧಿ ಪಿತೂರಿಗಾಗಿ 120ಬಿ, ಕ್ರಿಮಿನಲ್ ಬೆದರಿಕೆಗಾಗಿ 506, ಅಶ್ಲೀಲತೆಗಾಗಿ 294ಬಿ, ಗಲಭೆ ಸೆಕ್ಷನ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಭಾಗಗಳು (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಶುಕ್ರವಾರ ಸಂಜೆಯೊಳಗೆ ಐದು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. “20 ಆರೋಪಿಗಳಲ್ಲಿ ಐವರನ್ನು ಬಂಧಿಸಿದ್ದೇವೆ. ಅವರ ಕೋವಿಡ್ ಪರೀಕ್ಷೆಯ ವಿಧಿವಿಧಾನಗಳು ನಡೆಯುತ್ತಿವೆ. ಉಳಿದ ಆರೋಪಿಗಳ ಪತ್ತೆಗೆ ಒಟ್ಟು ಎಂಟು ತಂಡಗಳನ್ನು ರಚಿಸಲಾಗಿದೆ” ಎಂದು ಭಾಚೌ ಉಪ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ಸಿನ್ಹ್ ಝಾಲಾ ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...