Homeಮುಖಪುಟಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಗ್ರಾಮದ ರಾಮ ಮಂದಿರ ಪ್ರವೇಶಿಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಸುಮಾರು 20 ಜನರ ಗುಂಪು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ, ಗುಜರಾತ್‌ನ ಕಛ್‌ನ ಗಾಂಧಿಧಾಮ್ ನಗರದ ಭಚೌ ತಾಲೂಕಿನ ಹಳ್ಳಿಯೊಂದರಲ್ಲಿ ಮೂರು ದಿನಗಳ ಹಿಂದೆ ನಡೆದಿದೆ.

ಗ್ರಾಮದಲ್ಲಿರುವ ರಾಮ ಮಂದಿರದಲ್ಲಿ ಬೇರೆ ಸಮುದಾಯದವರು ಸಮಾರಂಭವೊಂದನ್ನು ಆಯೋಜಿಸಿದ್ದರು. ಈ ವೇಳೆ ಅಲ್ಲಿಗೆ ಪ್ರವೇಶಿಸಿದ ಕಾರಣಕ್ಕೆ ದಲಿತ ಕುಟುಂಬದ 6 ಸದಸ್ಯರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. “ಗ್ರಾಮದ ರಾಮ ಮಂದಿರಕ್ಕೆ ಪ್ರವೇಶಿಸಿದ ನಂತರ ತಮ್ಮನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗಿದೆ” ಎಂದು ಗಾಯಾಳುಗಳು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಸಂತ್ರಸ್ತರು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಆರು ಮಂದಿಯನ್ನು ಕಛ್‌ನ ಭುಜ್‌ನಲ್ಲಿರುವ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ದಾಳಿಯಲ್ಲಿ ಅವರ ತಲೆ ಮತ್ತು ಇತರ ಭಾಗಗಳಿಗೆ ಹರಿತವಾದ ಆಯುಧಗಳಿಂದ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಅಕ್ಟೋಬರ್ 26 ರಂದು ಭಚೌ ತಾಲೂಕಿನ ನೇರ್ ಗ್ರಾಮದಲ್ಲಿ ಎರಡು ದಾಳಿ ಘಟನೆಗಳು ಸಂಭವಿಸಿವೆ. ಇದರಲ್ಲಿ 20 ಜನರ ಗುಂಪು ಮೊದಲು ದಲಿತ ಕುಟುಂಬದ ಕೃಷಿ ಭೂಮಿಯನ್ನು ದನಗಳನ್ನು ಮೇಯಲು ಬಿಟ್ಟು ನಂತರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿತು.

ಮೊದಲ ಘಟನೆಯಲ್ಲಿ, ಗೋವಿಂದ್ ವಘೇಲಾ (39) ಅವರು ಅಕ್ಟೋಬರ್ 26 ರಂದು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಗ್ರಾಮದ ತಮ್ಮ ಜಮೀನಿಗೆ ಜಾನುವಾರುಗಳು ಪ್ರವೇಶಿಸಿವೆ ಎಂದು ತಿಳಿದಿದ್ದಾರೆ.

“ನಾನು ನನ್ನ ಚಿಕ್ಕಪ್ಪ ಗಣೇಶ್ ವಘೇಲಾ ಅವರೊಂದಿಗೆ ಆಟೋ ರಿಕ್ಷಾದಲ್ಲಿ ಹೊರಟಿದ್ದೆ. ನನ್ನ ಕೃಷಿ ಭೂಮಿಯನ್ನು ತಲುಪಿದಾಗ, ಬೆಳೆಗಳು ಧ್ವಂಸಗೊಂಡಿರುವುದನ್ನು ನಾನು ನೋಡಿದೆ. ಜೊತೆಗೆ ಕೈಯಲ್ಲಿ ಕೊಡಲಿಗಳು, ದೊಣ್ಣೆಗಳು, ರಾಡ್‌ಗಳನ್ನು ಹಿಡಿದುಕೊಂಡು ಜನರ ಗುಂಪು ಮರದ ಕೆಳಗೆ ಕಾಯುತ್ತಿದ್ದವು. ನನ್ನ ಗ್ರಾಮದವರೇ ಆಗಿರುವ ಕಾನಾ ಅಹಿರ್ ನೇತೃತ್ವದಲ್ಲಿ ಶಸ್ತ್ರಗಳಿಂದ ನಮ್ಮ ಮೇಲೆ ಹಲ್ಲೆ ನಡೆಸಲಾರಂಭಿಸಿದರು’’ ಎಂದು ಗೋವಿಂದ ವಘೇಲಾ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

“ಅಕ್ಟೋಬರ್ 20 ರಂದು ‘ಪ್ರತಿಷ್ಠಾನ’ ಸಮಾರಂಭ ನಡೆಯುತ್ತಿರುವಾಗ ಯಾಕೆ ರಾಮಮಂದಿರ ಪ್ರವೇಶಿಸಿದ್ದೀರಿ ಎಂದು ಅವರು ನಮ್ಮನ್ನು ಕೇಳಿದ್ದಾರೆ. ಅವರು ನನ್ನ ಮೊಬೈಲ್‌ ಫೋನ್ ದೋಚಿ ಆಟೋರಿಕ್ಷಾದ ಮೇಲೆ ದಾಳಿ ಮಾಡಿದರು. ಇದರಿಂದಾಗಿ ನಮಗೆ ಯಾರ ಸಹಾಯವು ಪಡೆಯಲು ಸಾಧ್ಯವಾಗಿಲ್ಲ. ಅಲ್ಲಿಂದ ಅವರು ನನ್ನ ತಂದೆಯನ್ನು ಕೊಲ್ಲಲು ಹಳ್ಳಿಗೆ ತೆರಳುತ್ತಿರುವುದಾಗಿ ಹೇಳಿದರು. ನನಗೆ ಮತ್ತು ನನ್ನ ಚಿಕ್ಕಪ್ಪನ ತಲೆ ಮತ್ತು ಕೈಕಾಲುಗಳಿಗೆ ಗಾಯಗಳಾಗಿವೆ. ಕೊನೆಗೆ ಪೊಲೀಸರು ನಮ್ಮನ್ನು ಆಸ್ಪತ್ರೆಗೆ ಕರೆದೊಯ್ದು ರಕ್ಷಿಸಿದ್ದಾರೆ” ಎಂದು ಗೋವಿಂದ ವಘೇಲಾ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಬೆಳಿಗ್ಗೆ 11:30 ರ ಸುಮಾರಿಗೆ 20 ಆರೋಪಿಗಳ ತಂಡವು ನಂತರ ಗೋವಿಂದ ವಘೇಲಾ ಅವರ ತಂದೆ ಜಗಭಾಯಿ ವಘೇಲಾ (64) ಅವರ ಮನೆ ತಲುಪಿ ಅವರ ಮೇಲೆ, ಅವರ ಪತ್ನಿ ಬದ್ಧಿಬೆನ್ ವಘೇಲಾ, ಮಗ ಭುರಾ ವಘೇಲಾ ಮತ್ತು ಸೋದರಳಿಯ ಹಸ್ಮುಖ್ ವಘೇಲಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

“ಆರೋಪಿಗಳು ಜಾತಿ ನಿಂದನೆ ಮಾಡಿದ್ದು… ಮತ್ತು ನಮ್ಮ ತಲೆ ಮತ್ತು ಕೈಕಾಲುಗಳಿಗೆ ಹೊಡೆದಿದ್ದಾರೆ. ಇದರಿಂದಾಗಿ ತೀವ್ರ ರಕ್ತಸ್ರಾವವಾಯಿತು” ಎಂದು ಜಗಭಾಯಿ ವಘೇಲಾ ಹೇಳಿದ್ದಾರೆ.

ಇದನ್ನೂ ಓದಿ: ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

ಕಾನಾ ಅಹಿರ್, ಜೀವಾ ಅಹಿರ್, ವೇಲಾ ಅಹಿರ್, ಕೇಸ್ರಾ ರಾಬರಿ, ಅರ್ಜನ್ ರಾಬರಿ, ದಿನೇಶ್ ಬಾಲಸಾರ, ರಾಜೇಶ್ ಬಾಲಸಾರ, ರಾಣಾ ಬಾಲಾಸರ, ದಿನೇಶ್ ರಾಮ್‌ಜಿ ಬಾಲಸರ, ನಯಾ ಅಹಿರ್, ಕಾನಾ ಕೋಲಿ, ಭಂಜಿ ಸುತಾರ್, ರಾಜೇಶ್ ಎಂದು ಗುರುತಿಸಲಾದ ಸುಮಾರು 20 ಆರೋಪಿಗಳ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಮಾರಾಜ್, ದಿನೇಶ್ ಮಾರಾಜ್, ಪಬಾ ರಾಬರಿ, ಚೌಡಾ ಕೋಲಿ, ಸಾವಾ ಕೋಲಿ, ಮೋಮಯಾ ಕೋಲಿ, ಹೇಮಾ ರಾಬರಿ ಮತ್ತು ನವಗನ್ ರಾಬರಿ ವಿರುದ್ಧ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಕೊಲೆ ಯತ್ನ, 323 ಗಾಯಗೊಳಿಸಿದ್ದಕ್ಕಾಗಿ, 324 ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸಿದ್ದಕ್ಕಾಗಿ, 452 ಮನೆ ಟ್ರೆಸ್‌ಪಾಸ್‌ ಅಪರಾಧಿ ಪಿತೂರಿಗಾಗಿ 120ಬಿ, ಕ್ರಿಮಿನಲ್ ಬೆದರಿಕೆಗಾಗಿ 506, ಅಶ್ಲೀಲತೆಗಾಗಿ 294ಬಿ, ಗಲಭೆ ಸೆಕ್ಷನ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಭಾಗಗಳು (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಶುಕ್ರವಾರ ಸಂಜೆಯೊಳಗೆ ಐದು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. “20 ಆರೋಪಿಗಳಲ್ಲಿ ಐವರನ್ನು ಬಂಧಿಸಿದ್ದೇವೆ. ಅವರ ಕೋವಿಡ್ ಪರೀಕ್ಷೆಯ ವಿಧಿವಿಧಾನಗಳು ನಡೆಯುತ್ತಿವೆ. ಉಳಿದ ಆರೋಪಿಗಳ ಪತ್ತೆಗೆ ಒಟ್ಟು ಎಂಟು ತಂಡಗಳನ್ನು ರಚಿಸಲಾಗಿದೆ” ಎಂದು ಭಾಚೌ ಉಪ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ಸಿನ್ಹ್ ಝಾಲಾ ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...