Homeಮುಖಪುಟಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಗ್ರಾಮದ ರಾಮ ಮಂದಿರ ಪ್ರವೇಶಿಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಸುಮಾರು 20 ಜನರ ಗುಂಪು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ, ಗುಜರಾತ್‌ನ ಕಛ್‌ನ ಗಾಂಧಿಧಾಮ್ ನಗರದ ಭಚೌ ತಾಲೂಕಿನ ಹಳ್ಳಿಯೊಂದರಲ್ಲಿ ಮೂರು ದಿನಗಳ ಹಿಂದೆ ನಡೆದಿದೆ.

ಗ್ರಾಮದಲ್ಲಿರುವ ರಾಮ ಮಂದಿರದಲ್ಲಿ ಬೇರೆ ಸಮುದಾಯದವರು ಸಮಾರಂಭವೊಂದನ್ನು ಆಯೋಜಿಸಿದ್ದರು. ಈ ವೇಳೆ ಅಲ್ಲಿಗೆ ಪ್ರವೇಶಿಸಿದ ಕಾರಣಕ್ಕೆ ದಲಿತ ಕುಟುಂಬದ 6 ಸದಸ್ಯರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. “ಗ್ರಾಮದ ರಾಮ ಮಂದಿರಕ್ಕೆ ಪ್ರವೇಶಿಸಿದ ನಂತರ ತಮ್ಮನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗಿದೆ” ಎಂದು ಗಾಯಾಳುಗಳು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಸಂತ್ರಸ್ತರು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಆರು ಮಂದಿಯನ್ನು ಕಛ್‌ನ ಭುಜ್‌ನಲ್ಲಿರುವ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ದಾಳಿಯಲ್ಲಿ ಅವರ ತಲೆ ಮತ್ತು ಇತರ ಭಾಗಗಳಿಗೆ ಹರಿತವಾದ ಆಯುಧಗಳಿಂದ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಅಕ್ಟೋಬರ್ 26 ರಂದು ಭಚೌ ತಾಲೂಕಿನ ನೇರ್ ಗ್ರಾಮದಲ್ಲಿ ಎರಡು ದಾಳಿ ಘಟನೆಗಳು ಸಂಭವಿಸಿವೆ. ಇದರಲ್ಲಿ 20 ಜನರ ಗುಂಪು ಮೊದಲು ದಲಿತ ಕುಟುಂಬದ ಕೃಷಿ ಭೂಮಿಯನ್ನು ದನಗಳನ್ನು ಮೇಯಲು ಬಿಟ್ಟು ನಂತರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿತು.

ಮೊದಲ ಘಟನೆಯಲ್ಲಿ, ಗೋವಿಂದ್ ವಘೇಲಾ (39) ಅವರು ಅಕ್ಟೋಬರ್ 26 ರಂದು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಗ್ರಾಮದ ತಮ್ಮ ಜಮೀನಿಗೆ ಜಾನುವಾರುಗಳು ಪ್ರವೇಶಿಸಿವೆ ಎಂದು ತಿಳಿದಿದ್ದಾರೆ.

“ನಾನು ನನ್ನ ಚಿಕ್ಕಪ್ಪ ಗಣೇಶ್ ವಘೇಲಾ ಅವರೊಂದಿಗೆ ಆಟೋ ರಿಕ್ಷಾದಲ್ಲಿ ಹೊರಟಿದ್ದೆ. ನನ್ನ ಕೃಷಿ ಭೂಮಿಯನ್ನು ತಲುಪಿದಾಗ, ಬೆಳೆಗಳು ಧ್ವಂಸಗೊಂಡಿರುವುದನ್ನು ನಾನು ನೋಡಿದೆ. ಜೊತೆಗೆ ಕೈಯಲ್ಲಿ ಕೊಡಲಿಗಳು, ದೊಣ್ಣೆಗಳು, ರಾಡ್‌ಗಳನ್ನು ಹಿಡಿದುಕೊಂಡು ಜನರ ಗುಂಪು ಮರದ ಕೆಳಗೆ ಕಾಯುತ್ತಿದ್ದವು. ನನ್ನ ಗ್ರಾಮದವರೇ ಆಗಿರುವ ಕಾನಾ ಅಹಿರ್ ನೇತೃತ್ವದಲ್ಲಿ ಶಸ್ತ್ರಗಳಿಂದ ನಮ್ಮ ಮೇಲೆ ಹಲ್ಲೆ ನಡೆಸಲಾರಂಭಿಸಿದರು’’ ಎಂದು ಗೋವಿಂದ ವಘೇಲಾ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

“ಅಕ್ಟೋಬರ್ 20 ರಂದು ‘ಪ್ರತಿಷ್ಠಾನ’ ಸಮಾರಂಭ ನಡೆಯುತ್ತಿರುವಾಗ ಯಾಕೆ ರಾಮಮಂದಿರ ಪ್ರವೇಶಿಸಿದ್ದೀರಿ ಎಂದು ಅವರು ನಮ್ಮನ್ನು ಕೇಳಿದ್ದಾರೆ. ಅವರು ನನ್ನ ಮೊಬೈಲ್‌ ಫೋನ್ ದೋಚಿ ಆಟೋರಿಕ್ಷಾದ ಮೇಲೆ ದಾಳಿ ಮಾಡಿದರು. ಇದರಿಂದಾಗಿ ನಮಗೆ ಯಾರ ಸಹಾಯವು ಪಡೆಯಲು ಸಾಧ್ಯವಾಗಿಲ್ಲ. ಅಲ್ಲಿಂದ ಅವರು ನನ್ನ ತಂದೆಯನ್ನು ಕೊಲ್ಲಲು ಹಳ್ಳಿಗೆ ತೆರಳುತ್ತಿರುವುದಾಗಿ ಹೇಳಿದರು. ನನಗೆ ಮತ್ತು ನನ್ನ ಚಿಕ್ಕಪ್ಪನ ತಲೆ ಮತ್ತು ಕೈಕಾಲುಗಳಿಗೆ ಗಾಯಗಳಾಗಿವೆ. ಕೊನೆಗೆ ಪೊಲೀಸರು ನಮ್ಮನ್ನು ಆಸ್ಪತ್ರೆಗೆ ಕರೆದೊಯ್ದು ರಕ್ಷಿಸಿದ್ದಾರೆ” ಎಂದು ಗೋವಿಂದ ವಘೇಲಾ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಬೆಳಿಗ್ಗೆ 11:30 ರ ಸುಮಾರಿಗೆ 20 ಆರೋಪಿಗಳ ತಂಡವು ನಂತರ ಗೋವಿಂದ ವಘೇಲಾ ಅವರ ತಂದೆ ಜಗಭಾಯಿ ವಘೇಲಾ (64) ಅವರ ಮನೆ ತಲುಪಿ ಅವರ ಮೇಲೆ, ಅವರ ಪತ್ನಿ ಬದ್ಧಿಬೆನ್ ವಘೇಲಾ, ಮಗ ಭುರಾ ವಘೇಲಾ ಮತ್ತು ಸೋದರಳಿಯ ಹಸ್ಮುಖ್ ವಘೇಲಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

“ಆರೋಪಿಗಳು ಜಾತಿ ನಿಂದನೆ ಮಾಡಿದ್ದು… ಮತ್ತು ನಮ್ಮ ತಲೆ ಮತ್ತು ಕೈಕಾಲುಗಳಿಗೆ ಹೊಡೆದಿದ್ದಾರೆ. ಇದರಿಂದಾಗಿ ತೀವ್ರ ರಕ್ತಸ್ರಾವವಾಯಿತು” ಎಂದು ಜಗಭಾಯಿ ವಘೇಲಾ ಹೇಳಿದ್ದಾರೆ.

ಇದನ್ನೂ ಓದಿ: ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

ಕಾನಾ ಅಹಿರ್, ಜೀವಾ ಅಹಿರ್, ವೇಲಾ ಅಹಿರ್, ಕೇಸ್ರಾ ರಾಬರಿ, ಅರ್ಜನ್ ರಾಬರಿ, ದಿನೇಶ್ ಬಾಲಸಾರ, ರಾಜೇಶ್ ಬಾಲಸಾರ, ರಾಣಾ ಬಾಲಾಸರ, ದಿನೇಶ್ ರಾಮ್‌ಜಿ ಬಾಲಸರ, ನಯಾ ಅಹಿರ್, ಕಾನಾ ಕೋಲಿ, ಭಂಜಿ ಸುತಾರ್, ರಾಜೇಶ್ ಎಂದು ಗುರುತಿಸಲಾದ ಸುಮಾರು 20 ಆರೋಪಿಗಳ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಮಾರಾಜ್, ದಿನೇಶ್ ಮಾರಾಜ್, ಪಬಾ ರಾಬರಿ, ಚೌಡಾ ಕೋಲಿ, ಸಾವಾ ಕೋಲಿ, ಮೋಮಯಾ ಕೋಲಿ, ಹೇಮಾ ರಾಬರಿ ಮತ್ತು ನವಗನ್ ರಾಬರಿ ವಿರುದ್ಧ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಕೊಲೆ ಯತ್ನ, 323 ಗಾಯಗೊಳಿಸಿದ್ದಕ್ಕಾಗಿ, 324 ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸಿದ್ದಕ್ಕಾಗಿ, 452 ಮನೆ ಟ್ರೆಸ್‌ಪಾಸ್‌ ಅಪರಾಧಿ ಪಿತೂರಿಗಾಗಿ 120ಬಿ, ಕ್ರಿಮಿನಲ್ ಬೆದರಿಕೆಗಾಗಿ 506, ಅಶ್ಲೀಲತೆಗಾಗಿ 294ಬಿ, ಗಲಭೆ ಸೆಕ್ಷನ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಭಾಗಗಳು (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಶುಕ್ರವಾರ ಸಂಜೆಯೊಳಗೆ ಐದು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. “20 ಆರೋಪಿಗಳಲ್ಲಿ ಐವರನ್ನು ಬಂಧಿಸಿದ್ದೇವೆ. ಅವರ ಕೋವಿಡ್ ಪರೀಕ್ಷೆಯ ವಿಧಿವಿಧಾನಗಳು ನಡೆಯುತ್ತಿವೆ. ಉಳಿದ ಆರೋಪಿಗಳ ಪತ್ತೆಗೆ ಒಟ್ಟು ಎಂಟು ತಂಡಗಳನ್ನು ರಚಿಸಲಾಗಿದೆ” ಎಂದು ಭಾಚೌ ಉಪ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ಸಿನ್ಹ್ ಝಾಲಾ ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...