Homeಮುಖಪುಟಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಗ್ರಾಮದ ರಾಮ ಮಂದಿರ ಪ್ರವೇಶಿಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಸುಮಾರು 20 ಜನರ ಗುಂಪು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ, ಗುಜರಾತ್‌ನ ಕಛ್‌ನ ಗಾಂಧಿಧಾಮ್ ನಗರದ ಭಚೌ ತಾಲೂಕಿನ ಹಳ್ಳಿಯೊಂದರಲ್ಲಿ ಮೂರು ದಿನಗಳ ಹಿಂದೆ ನಡೆದಿದೆ.

ಗ್ರಾಮದಲ್ಲಿರುವ ರಾಮ ಮಂದಿರದಲ್ಲಿ ಬೇರೆ ಸಮುದಾಯದವರು ಸಮಾರಂಭವೊಂದನ್ನು ಆಯೋಜಿಸಿದ್ದರು. ಈ ವೇಳೆ ಅಲ್ಲಿಗೆ ಪ್ರವೇಶಿಸಿದ ಕಾರಣಕ್ಕೆ ದಲಿತ ಕುಟುಂಬದ 6 ಸದಸ್ಯರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. “ಗ್ರಾಮದ ರಾಮ ಮಂದಿರಕ್ಕೆ ಪ್ರವೇಶಿಸಿದ ನಂತರ ತಮ್ಮನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗಿದೆ” ಎಂದು ಗಾಯಾಳುಗಳು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಸಂತ್ರಸ್ತರು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಆರು ಮಂದಿಯನ್ನು ಕಛ್‌ನ ಭುಜ್‌ನಲ್ಲಿರುವ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ದಾಳಿಯಲ್ಲಿ ಅವರ ತಲೆ ಮತ್ತು ಇತರ ಭಾಗಗಳಿಗೆ ಹರಿತವಾದ ಆಯುಧಗಳಿಂದ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಅಕ್ಟೋಬರ್ 26 ರಂದು ಭಚೌ ತಾಲೂಕಿನ ನೇರ್ ಗ್ರಾಮದಲ್ಲಿ ಎರಡು ದಾಳಿ ಘಟನೆಗಳು ಸಂಭವಿಸಿವೆ. ಇದರಲ್ಲಿ 20 ಜನರ ಗುಂಪು ಮೊದಲು ದಲಿತ ಕುಟುಂಬದ ಕೃಷಿ ಭೂಮಿಯನ್ನು ದನಗಳನ್ನು ಮೇಯಲು ಬಿಟ್ಟು ನಂತರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿತು.

ಮೊದಲ ಘಟನೆಯಲ್ಲಿ, ಗೋವಿಂದ್ ವಘೇಲಾ (39) ಅವರು ಅಕ್ಟೋಬರ್ 26 ರಂದು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಗ್ರಾಮದ ತಮ್ಮ ಜಮೀನಿಗೆ ಜಾನುವಾರುಗಳು ಪ್ರವೇಶಿಸಿವೆ ಎಂದು ತಿಳಿದಿದ್ದಾರೆ.

“ನಾನು ನನ್ನ ಚಿಕ್ಕಪ್ಪ ಗಣೇಶ್ ವಘೇಲಾ ಅವರೊಂದಿಗೆ ಆಟೋ ರಿಕ್ಷಾದಲ್ಲಿ ಹೊರಟಿದ್ದೆ. ನನ್ನ ಕೃಷಿ ಭೂಮಿಯನ್ನು ತಲುಪಿದಾಗ, ಬೆಳೆಗಳು ಧ್ವಂಸಗೊಂಡಿರುವುದನ್ನು ನಾನು ನೋಡಿದೆ. ಜೊತೆಗೆ ಕೈಯಲ್ಲಿ ಕೊಡಲಿಗಳು, ದೊಣ್ಣೆಗಳು, ರಾಡ್‌ಗಳನ್ನು ಹಿಡಿದುಕೊಂಡು ಜನರ ಗುಂಪು ಮರದ ಕೆಳಗೆ ಕಾಯುತ್ತಿದ್ದವು. ನನ್ನ ಗ್ರಾಮದವರೇ ಆಗಿರುವ ಕಾನಾ ಅಹಿರ್ ನೇತೃತ್ವದಲ್ಲಿ ಶಸ್ತ್ರಗಳಿಂದ ನಮ್ಮ ಮೇಲೆ ಹಲ್ಲೆ ನಡೆಸಲಾರಂಭಿಸಿದರು’’ ಎಂದು ಗೋವಿಂದ ವಘೇಲಾ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

“ಅಕ್ಟೋಬರ್ 20 ರಂದು ‘ಪ್ರತಿಷ್ಠಾನ’ ಸಮಾರಂಭ ನಡೆಯುತ್ತಿರುವಾಗ ಯಾಕೆ ರಾಮಮಂದಿರ ಪ್ರವೇಶಿಸಿದ್ದೀರಿ ಎಂದು ಅವರು ನಮ್ಮನ್ನು ಕೇಳಿದ್ದಾರೆ. ಅವರು ನನ್ನ ಮೊಬೈಲ್‌ ಫೋನ್ ದೋಚಿ ಆಟೋರಿಕ್ಷಾದ ಮೇಲೆ ದಾಳಿ ಮಾಡಿದರು. ಇದರಿಂದಾಗಿ ನಮಗೆ ಯಾರ ಸಹಾಯವು ಪಡೆಯಲು ಸಾಧ್ಯವಾಗಿಲ್ಲ. ಅಲ್ಲಿಂದ ಅವರು ನನ್ನ ತಂದೆಯನ್ನು ಕೊಲ್ಲಲು ಹಳ್ಳಿಗೆ ತೆರಳುತ್ತಿರುವುದಾಗಿ ಹೇಳಿದರು. ನನಗೆ ಮತ್ತು ನನ್ನ ಚಿಕ್ಕಪ್ಪನ ತಲೆ ಮತ್ತು ಕೈಕಾಲುಗಳಿಗೆ ಗಾಯಗಳಾಗಿವೆ. ಕೊನೆಗೆ ಪೊಲೀಸರು ನಮ್ಮನ್ನು ಆಸ್ಪತ್ರೆಗೆ ಕರೆದೊಯ್ದು ರಕ್ಷಿಸಿದ್ದಾರೆ” ಎಂದು ಗೋವಿಂದ ವಘೇಲಾ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಬೆಳಿಗ್ಗೆ 11:30 ರ ಸುಮಾರಿಗೆ 20 ಆರೋಪಿಗಳ ತಂಡವು ನಂತರ ಗೋವಿಂದ ವಘೇಲಾ ಅವರ ತಂದೆ ಜಗಭಾಯಿ ವಘೇಲಾ (64) ಅವರ ಮನೆ ತಲುಪಿ ಅವರ ಮೇಲೆ, ಅವರ ಪತ್ನಿ ಬದ್ಧಿಬೆನ್ ವಘೇಲಾ, ಮಗ ಭುರಾ ವಘೇಲಾ ಮತ್ತು ಸೋದರಳಿಯ ಹಸ್ಮುಖ್ ವಘೇಲಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

“ಆರೋಪಿಗಳು ಜಾತಿ ನಿಂದನೆ ಮಾಡಿದ್ದು… ಮತ್ತು ನಮ್ಮ ತಲೆ ಮತ್ತು ಕೈಕಾಲುಗಳಿಗೆ ಹೊಡೆದಿದ್ದಾರೆ. ಇದರಿಂದಾಗಿ ತೀವ್ರ ರಕ್ತಸ್ರಾವವಾಯಿತು” ಎಂದು ಜಗಭಾಯಿ ವಘೇಲಾ ಹೇಳಿದ್ದಾರೆ.

ಇದನ್ನೂ ಓದಿ: ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

ಕಾನಾ ಅಹಿರ್, ಜೀವಾ ಅಹಿರ್, ವೇಲಾ ಅಹಿರ್, ಕೇಸ್ರಾ ರಾಬರಿ, ಅರ್ಜನ್ ರಾಬರಿ, ದಿನೇಶ್ ಬಾಲಸಾರ, ರಾಜೇಶ್ ಬಾಲಸಾರ, ರಾಣಾ ಬಾಲಾಸರ, ದಿನೇಶ್ ರಾಮ್‌ಜಿ ಬಾಲಸರ, ನಯಾ ಅಹಿರ್, ಕಾನಾ ಕೋಲಿ, ಭಂಜಿ ಸುತಾರ್, ರಾಜೇಶ್ ಎಂದು ಗುರುತಿಸಲಾದ ಸುಮಾರು 20 ಆರೋಪಿಗಳ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಮಾರಾಜ್, ದಿನೇಶ್ ಮಾರಾಜ್, ಪಬಾ ರಾಬರಿ, ಚೌಡಾ ಕೋಲಿ, ಸಾವಾ ಕೋಲಿ, ಮೋಮಯಾ ಕೋಲಿ, ಹೇಮಾ ರಾಬರಿ ಮತ್ತು ನವಗನ್ ರಾಬರಿ ವಿರುದ್ಧ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಕೊಲೆ ಯತ್ನ, 323 ಗಾಯಗೊಳಿಸಿದ್ದಕ್ಕಾಗಿ, 324 ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸಿದ್ದಕ್ಕಾಗಿ, 452 ಮನೆ ಟ್ರೆಸ್‌ಪಾಸ್‌ ಅಪರಾಧಿ ಪಿತೂರಿಗಾಗಿ 120ಬಿ, ಕ್ರಿಮಿನಲ್ ಬೆದರಿಕೆಗಾಗಿ 506, ಅಶ್ಲೀಲತೆಗಾಗಿ 294ಬಿ, ಗಲಭೆ ಸೆಕ್ಷನ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಭಾಗಗಳು (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಶುಕ್ರವಾರ ಸಂಜೆಯೊಳಗೆ ಐದು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. “20 ಆರೋಪಿಗಳಲ್ಲಿ ಐವರನ್ನು ಬಂಧಿಸಿದ್ದೇವೆ. ಅವರ ಕೋವಿಡ್ ಪರೀಕ್ಷೆಯ ವಿಧಿವಿಧಾನಗಳು ನಡೆಯುತ್ತಿವೆ. ಉಳಿದ ಆರೋಪಿಗಳ ಪತ್ತೆಗೆ ಒಟ್ಟು ಎಂಟು ತಂಡಗಳನ್ನು ರಚಿಸಲಾಗಿದೆ” ಎಂದು ಭಾಚೌ ಉಪ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ಸಿನ್ಹ್ ಝಾಲಾ ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...