Homeಮುಖಪುಟಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಗ್ರಾಮದ ರಾಮ ಮಂದಿರ ಪ್ರವೇಶಿಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಸುಮಾರು 20 ಜನರ ಗುಂಪು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ, ಗುಜರಾತ್‌ನ ಕಛ್‌ನ ಗಾಂಧಿಧಾಮ್ ನಗರದ ಭಚೌ ತಾಲೂಕಿನ ಹಳ್ಳಿಯೊಂದರಲ್ಲಿ ಮೂರು ದಿನಗಳ ಹಿಂದೆ ನಡೆದಿದೆ.

ಗ್ರಾಮದಲ್ಲಿರುವ ರಾಮ ಮಂದಿರದಲ್ಲಿ ಬೇರೆ ಸಮುದಾಯದವರು ಸಮಾರಂಭವೊಂದನ್ನು ಆಯೋಜಿಸಿದ್ದರು. ಈ ವೇಳೆ ಅಲ್ಲಿಗೆ ಪ್ರವೇಶಿಸಿದ ಕಾರಣಕ್ಕೆ ದಲಿತ ಕುಟುಂಬದ 6 ಸದಸ್ಯರ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. “ಗ್ರಾಮದ ರಾಮ ಮಂದಿರಕ್ಕೆ ಪ್ರವೇಶಿಸಿದ ನಂತರ ತಮ್ಮನ್ನು ವ್ಯವಸ್ಥಿತವಾಗಿ ಟಾರ್ಗೆಟ್ ಮಾಡಲಾಗಿದೆ” ಎಂದು ಗಾಯಾಳುಗಳು ಹೇಳಿದ್ದಾರೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಕೋರ್ಟ್‌ಗೆ ಶರಣಾದ RSS ಮುಖಂಡ

ಸಂತ್ರಸ್ತರು ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದು, ಆರು ಮಂದಿಯನ್ನು ಕಛ್‌ನ ಭುಜ್‌ನಲ್ಲಿರುವ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ದಾಳಿಯಲ್ಲಿ ಅವರ ತಲೆ ಮತ್ತು ಇತರ ಭಾಗಗಳಿಗೆ ಹರಿತವಾದ ಆಯುಧಗಳಿಂದ ಗಾಯಗಳಾಗಿವೆ.

ಪೊಲೀಸರ ಪ್ರಕಾರ, ಅಕ್ಟೋಬರ್ 26 ರಂದು ಭಚೌ ತಾಲೂಕಿನ ನೇರ್ ಗ್ರಾಮದಲ್ಲಿ ಎರಡು ದಾಳಿ ಘಟನೆಗಳು ಸಂಭವಿಸಿವೆ. ಇದರಲ್ಲಿ 20 ಜನರ ಗುಂಪು ಮೊದಲು ದಲಿತ ಕುಟುಂಬದ ಕೃಷಿ ಭೂಮಿಯನ್ನು ದನಗಳನ್ನು ಮೇಯಲು ಬಿಟ್ಟು ನಂತರ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿತು.

ಮೊದಲ ಘಟನೆಯಲ್ಲಿ, ಗೋವಿಂದ್ ವಘೇಲಾ (39) ಅವರು ಅಕ್ಟೋಬರ್ 26 ರಂದು ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಗ್ರಾಮದ ತಮ್ಮ ಜಮೀನಿಗೆ ಜಾನುವಾರುಗಳು ಪ್ರವೇಶಿಸಿವೆ ಎಂದು ತಿಳಿದಿದ್ದಾರೆ.

“ನಾನು ನನ್ನ ಚಿಕ್ಕಪ್ಪ ಗಣೇಶ್ ವಘೇಲಾ ಅವರೊಂದಿಗೆ ಆಟೋ ರಿಕ್ಷಾದಲ್ಲಿ ಹೊರಟಿದ್ದೆ. ನನ್ನ ಕೃಷಿ ಭೂಮಿಯನ್ನು ತಲುಪಿದಾಗ, ಬೆಳೆಗಳು ಧ್ವಂಸಗೊಂಡಿರುವುದನ್ನು ನಾನು ನೋಡಿದೆ. ಜೊತೆಗೆ ಕೈಯಲ್ಲಿ ಕೊಡಲಿಗಳು, ದೊಣ್ಣೆಗಳು, ರಾಡ್‌ಗಳನ್ನು ಹಿಡಿದುಕೊಂಡು ಜನರ ಗುಂಪು ಮರದ ಕೆಳಗೆ ಕಾಯುತ್ತಿದ್ದವು. ನನ್ನ ಗ್ರಾಮದವರೇ ಆಗಿರುವ ಕಾನಾ ಅಹಿರ್ ನೇತೃತ್ವದಲ್ಲಿ ಶಸ್ತ್ರಗಳಿಂದ ನಮ್ಮ ಮೇಲೆ ಹಲ್ಲೆ ನಡೆಸಲಾರಂಭಿಸಿದರು’’ ಎಂದು ಗೋವಿಂದ ವಘೇಲಾ ದೂರಿನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ದಲಿತರಿಗೆ ಕ್ಷೌರ ಮಾಡುವುದಿಲ್ಲ: ಮಂಡ್ಯ ಜಿಲ್ಲೆಯಲ್ಲಿ ಬಹಿರಂಗ ಅಸ್ಪೃಶ್ಯತೆ ಆಚರಣೆ

“ಅಕ್ಟೋಬರ್ 20 ರಂದು ‘ಪ್ರತಿಷ್ಠಾನ’ ಸಮಾರಂಭ ನಡೆಯುತ್ತಿರುವಾಗ ಯಾಕೆ ರಾಮಮಂದಿರ ಪ್ರವೇಶಿಸಿದ್ದೀರಿ ಎಂದು ಅವರು ನಮ್ಮನ್ನು ಕೇಳಿದ್ದಾರೆ. ಅವರು ನನ್ನ ಮೊಬೈಲ್‌ ಫೋನ್ ದೋಚಿ ಆಟೋರಿಕ್ಷಾದ ಮೇಲೆ ದಾಳಿ ಮಾಡಿದರು. ಇದರಿಂದಾಗಿ ನಮಗೆ ಯಾರ ಸಹಾಯವು ಪಡೆಯಲು ಸಾಧ್ಯವಾಗಿಲ್ಲ. ಅಲ್ಲಿಂದ ಅವರು ನನ್ನ ತಂದೆಯನ್ನು ಕೊಲ್ಲಲು ಹಳ್ಳಿಗೆ ತೆರಳುತ್ತಿರುವುದಾಗಿ ಹೇಳಿದರು. ನನಗೆ ಮತ್ತು ನನ್ನ ಚಿಕ್ಕಪ್ಪನ ತಲೆ ಮತ್ತು ಕೈಕಾಲುಗಳಿಗೆ ಗಾಯಗಳಾಗಿವೆ. ಕೊನೆಗೆ ಪೊಲೀಸರು ನಮ್ಮನ್ನು ಆಸ್ಪತ್ರೆಗೆ ಕರೆದೊಯ್ದು ರಕ್ಷಿಸಿದ್ದಾರೆ” ಎಂದು ಗೋವಿಂದ ವಘೇಲಾ ಹೇಳಿದ್ದಾರೆ.

ಪೊಲೀಸರ ಪ್ರಕಾರ, ಬೆಳಿಗ್ಗೆ 11:30 ರ ಸುಮಾರಿಗೆ 20 ಆರೋಪಿಗಳ ತಂಡವು ನಂತರ ಗೋವಿಂದ ವಘೇಲಾ ಅವರ ತಂದೆ ಜಗಭಾಯಿ ವಘೇಲಾ (64) ಅವರ ಮನೆ ತಲುಪಿ ಅವರ ಮೇಲೆ, ಅವರ ಪತ್ನಿ ಬದ್ಧಿಬೆನ್ ವಘೇಲಾ, ಮಗ ಭುರಾ ವಘೇಲಾ ಮತ್ತು ಸೋದರಳಿಯ ಹಸ್ಮುಖ್ ವಘೇಲಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

“ಆರೋಪಿಗಳು ಜಾತಿ ನಿಂದನೆ ಮಾಡಿದ್ದು… ಮತ್ತು ನಮ್ಮ ತಲೆ ಮತ್ತು ಕೈಕಾಲುಗಳಿಗೆ ಹೊಡೆದಿದ್ದಾರೆ. ಇದರಿಂದಾಗಿ ತೀವ್ರ ರಕ್ತಸ್ರಾವವಾಯಿತು” ಎಂದು ಜಗಭಾಯಿ ವಘೇಲಾ ಹೇಳಿದ್ದಾರೆ.

ಇದನ್ನೂ ಓದಿ: ‘ದಲಿತರು ಅಂದ್ರೆ ಕಾಂಗ್ರೆಸ್ಸು, ಕಾಂಗ್ರೆಸ್‌ ಅಂದ್ರೆ ದಲಿತರು, ಹೊಟ್ಟೆಪಾಡಿಗಾಗಿ ಕೆಲವರು ಬಿಜೆಪಿಯಲ್ಲಿದ್ದಾರೆ’

ಕಾನಾ ಅಹಿರ್, ಜೀವಾ ಅಹಿರ್, ವೇಲಾ ಅಹಿರ್, ಕೇಸ್ರಾ ರಾಬರಿ, ಅರ್ಜನ್ ರಾಬರಿ, ದಿನೇಶ್ ಬಾಲಸಾರ, ರಾಜೇಶ್ ಬಾಲಸಾರ, ರಾಣಾ ಬಾಲಾಸರ, ದಿನೇಶ್ ರಾಮ್‌ಜಿ ಬಾಲಸರ, ನಯಾ ಅಹಿರ್, ಕಾನಾ ಕೋಲಿ, ಭಂಜಿ ಸುತಾರ್, ರಾಜೇಶ್ ಎಂದು ಗುರುತಿಸಲಾದ ಸುಮಾರು 20 ಆರೋಪಿಗಳ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ.

ಮಾರಾಜ್, ದಿನೇಶ್ ಮಾರಾಜ್, ಪಬಾ ರಾಬರಿ, ಚೌಡಾ ಕೋಲಿ, ಸಾವಾ ಕೋಲಿ, ಮೋಮಯಾ ಕೋಲಿ, ಹೇಮಾ ರಾಬರಿ ಮತ್ತು ನವಗನ್ ರಾಬರಿ ವಿರುದ್ಧ ಐಪಿಸಿ ಸೆಕ್ಷನ್ 307 ಅಡಿಯಲ್ಲಿ ಕೊಲೆ ಯತ್ನ, 323 ಗಾಯಗೊಳಿಸಿದ್ದಕ್ಕಾಗಿ, 324 ಅಪಾಯಕಾರಿ ಆಯುಧಗಳಿಂದ ಗಾಯಗೊಳಿಸಿದ್ದಕ್ಕಾಗಿ, 452 ಮನೆ ಟ್ರೆಸ್‌ಪಾಸ್‌ ಅಪರಾಧಿ ಪಿತೂರಿಗಾಗಿ 120ಬಿ, ಕ್ರಿಮಿನಲ್ ಬೆದರಿಕೆಗಾಗಿ 506, ಅಶ್ಲೀಲತೆಗಾಗಿ 294ಬಿ, ಗಲಭೆ ಸೆಕ್ಷನ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿಭಾಗಗಳು (ದೌರ್ಜನ್ಯ ತಡೆ) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪೊಲೀಸರು ಶುಕ್ರವಾರ ಸಂಜೆಯೊಳಗೆ ಐದು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ. “20 ಆರೋಪಿಗಳಲ್ಲಿ ಐವರನ್ನು ಬಂಧಿಸಿದ್ದೇವೆ. ಅವರ ಕೋವಿಡ್ ಪರೀಕ್ಷೆಯ ವಿಧಿವಿಧಾನಗಳು ನಡೆಯುತ್ತಿವೆ. ಉಳಿದ ಆರೋಪಿಗಳ ಪತ್ತೆಗೆ ಒಟ್ಟು ಎಂಟು ತಂಡಗಳನ್ನು ರಚಿಸಲಾಗಿದೆ” ಎಂದು ಭಾಚೌ ಉಪ ಪೊಲೀಸ್ ವರಿಷ್ಠಾಧಿಕಾರಿ ಕಿಶೋರ್ಸಿನ್ಹ್ ಝಾಲಾ ಹೇಳಿದ್ದಾರೆ.

ಇದನ್ನೂ ಓದಿ: ಮಂಡ್ಯದಲ್ಲಿ ಅಮಾನವೀಯ ಜಾತಿ ದೌರ್ಜನ್ಯ: ದಲಿತ ಯುವಕನ ಮೇಲೆ ಹಲ್ಲೆ, ಹಸುವಿಗೆ ಕಟ್ಟಿ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....