Homeಮುಖಪುಟಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

- Advertisement -
- Advertisement -

ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿ ಎಲ್ಲಾ ಶಾಲಾ ಪ್ರವಾಸಗಳಲ್ಲಿ ಇಬ್ಬರು ಸಮವಸ್ತ್ರ ಧರಿಸಿದ ಪೊಲೀಸರ ಉಪಸ್ಥಿತಿಯನ್ನುಗುಜರಾತ್ ಪೊಲೀಸರು ಕಡ್ಡಾಯಗೊಳಿಸಿದ್ದಾರೆ ಎಂದು ವರದಿಯಾಗಿದೆ. ಪ್ರವಾಸಗಳಲ್ಲಿ ವಿದ್ಯಾರ್ಥಿನಿಯರು ಇದ್ದರೆ, ಪುರುಷ ಪೊಲೀಸರೊಂದಿಗೆ ಮಹಿಳಾ ಅಧಿಕಾರಿಗಳನ್ನೂ ಕೂಡಾ ಕಡ್ಡಾಯಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಗುಜರಾತ್‌ | ವಿದ್ಯಾರ್ಥಿನಿಯರ

ಪೊಲೀಸರ ಈ ಕ್ರಮವು ಶೈಕ್ಷಣಿಕ ಪ್ರವಾಸಗಳ ಸಮಯದಲ್ಲಿ ವಿದ್ಯಾರ್ಥಿಗಳನ್ನು ರಕ್ಷಿಸುವ ಮತ್ತು ಯುವಕರು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವಿನ ಸಂಬಂಧವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ.

ಇತ್ತೀಚೆಗೆ ನಡೆದ ಡಿಜಿಪಿ-ಐಜಿಪಿ ಸಮ್ಮೇಳನ-2024 ರಲ್ಲಿ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ನಿರ್ದೇಶನಗಳನ್ನು ಅನುಸರಿಸಿ, ಗುಜರಾತ್‌ನ ರಾಜ್ಯ ಪೊಲೀಸ್ ಮುಖ್ಯಸ್ಥ ವಿಕಾಸ್ ಸಹಾಯ್ ಅವರು ನೂತನ ಕಠಿಣ ಸುರಕ್ಷತಾ ಪ್ರೋಟೋಕಾಲ್ ಅನ್ನು ಘೋಷಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ, ಎಲ್ಲಾ ಶಾಲೆಗಳು ಆಯೋಜಿಸುವ ಟ್ರಿಪ್, ಟೂರ್‌ಗಳು, ಪಿಕ್ನಿಕ್‌ಗಳು ಮತ್ತು ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ನಡುವಿನ ಭೇಟಿಗಳಲ್ಲಿ ಇಬ್ಬರು ಸಮವಸ್ತ್ರ ಧರಿಸಿದ ಪೊಲೀಸರ ಉಪಸ್ಥಿತಿಯನ್ನು ಒಳಗೊಂಡಿರಬೇಕು ಎಂದು ಪ್ರೊಟೊಕಾಲ್ ಹೇಳಿದೆ.

ಪ್ರವಾಸಗಳಲ್ಲಿ ವಿದ್ಯಾರ್ಥಿನಿಯರು ಇದ್ದರೆ ಈ ನಿಯಮವು ತೀವ್ರಗೊಳ್ಳುತ್ತದೆ ಮತ್ತು ಅವರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಮಹಿಳಾ ಪೊಲೀಸ್ ಅಧಿಕಾರಿಗಳ ಜೊತೆಗಿರಬೇಕು ಎಂದು ಡಿಜಿಪಿ ಕಚೇರಿಯ ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಈ ಅವಶ್ಯಕತೆಯನ್ನು ಪೂರೈಸಲು ಶಾಲಾ ಪ್ರಾಂಶುಪಾಲರು ಈಗ ಸ್ಥಳೀಯ ಪೊಲೀಸ್ ಠಾಣೆಗಳೊಂದಿಗೆ ನೇರವಾಗಿ ಸಮನ್ವಯ ಸಾಧಿಸುವ ಕಾರ್ಯವನ್ನು ಹೊಂದಲಿದ್ದಾರೆ.

ಈ ಆದೇಶವನ್ನು ಜಾರಿಗೊಳಿಸಲು, ರಾಜ್ಯಾದ್ಯಂತ ತ್ವರಿತ ಅನುಷ್ಠಾನಕ್ಕಾಗಿ ಸ್ಪಷ್ಟ ನಿರ್ದೇಶನಗಳನ್ನು ಹೊರಡಿಸುವಂತೆ ಡಿಜಿಪಿ ವಿಕಾಸ್ ಸಹಾಯ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಶೈಕ್ಷಣಿಕ ಪ್ರವಾಸಗಳ ಸಮಯದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತರಿಪಡಿಸುವುದು ಮಾತ್ರವಲ್ಲದೆ, ವಿದ್ಯಾರ್ಥಿಗಳು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವೆ ವಿಶ್ವಾಸವನ್ನು ಬಲಪಡಿಸುವುದು ಮತ್ತು ಸಹಕಾರಿ ಸಂಬಂಧವನ್ನು ಬೆಳೆಸುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಜನವರಿ 18, 2024 ರಂದು ವಡೋದರಾದಲ್ಲಿ ನಡೆದ ದುರಂತ ಹಾರ್ನಿ ದೋಣಿ ಅಪಘಾತದ ನಂತರ, 12 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ 14 ಜೀವಗಳು ಬಲಿಯಾದ ನಂತರ, ಗುಜರಾತ್ ಸರ್ಕಾರವು 2024–25 ರ ಶೈಕ್ಷಣಿಕ ಅವಧಿಗೆ ಶಾಲಾ ಪ್ರವಾಸ ನಿಯಮಗಳನ್ನು ಬಿಗಿಗೊಳಿಸಲು ತ್ವರಿತವಾಗಿ ಕ್ರಮ ಕೈಗೊಂಡಿತು.

ಈ ವೇಳೆ ಸರ್ಕಾರವು ಹೊಸ ಕಡ್ಡಾಯ ಮಾರ್ಗಸೂಚಿಗಳನ್ನು ಘೋಷಿಸಿದ್ದು, ರಾಜ್ಯದ ಎಲ್ಲಾ ಶಾಲೆಗಳು ಯಾವುದೇ ಪ್ರವಾಸಗಳನ್ನು ಆಯೋಜಿಸುವ ಮೊದಲು ಪೂರ್ವಾನುಮತಿ ಪಡೆಯಬೇಕು ಎಂದು ಹೇಳಿತ್ತು. ಇದರಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ (RTO) ಮತ್ತು ಸ್ಥಳೀಯ ಪೊಲೀಸ್ ಠಾಣೆಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಪ್ರತಿ ಪ್ರವಾಸದ ಬಗ್ಗೆ ತಿಳಿಸುವ ಕಟ್ಟುನಿಟ್ಟಿನ ನಿಯಮವೂ ಸೇರಿದೆ. ಗುಜರಾತ್‌ | ವಿದ್ಯಾರ್ಥಿನಿಯರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ : 15 ಮಂದಿಗೆ 24 ಗಂಟೆಯೊಳಗೆ ದೇಶ ತೊರೆಯಲು ಆದೇಶ : ಮಾಧ್ಯಮಗಳ ಮೂಲಕ ವಿಷಯ ತಿಳಿದುಕೊಂಡ ಕುಟುಂಬಸ್ಥರು

ಅಸ್ಸಾಂನ ನಾಗಾಂವ್ ಜಿಲ್ಲಾಡಳಿತವು 15 ಘೋಷಿತ ವಿದೇಶಿಯರಿಗೆ 24 ಗಂಟೆಗಳ ಒಳಗೆ ರಾಜ್ಯ ತೊರೆಯುವಂತೆ ಆದೇಶಿಸಿದ ಬಗ್ಗೆ ವರದಿಯಾಗಿದೆ. ಬುಧವಾರ (ಡಿ.17) ಜಿಲ್ಲಾಡಳಿತ ಈ ಆದೇಶ ನೀಡಿತ್ತು. ಆದರೆ, ಇದುವರೆಗೆ (ಡಿ.20) ಈ 15...

ಸಿರಿಯಾದ ಐಸಿಸ್ ಅಡಗುತಾಣಗಳ ಮೇಲೆ ಅಮೆರಿಕ ವಾಯುದಾಳಿ

ಕಳೆದ ವಾರ ಅಮೆರಿಕದ ಸಿಬ್ಬಂದಿ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ ಅಮೆರಿಕವು ಮಧ್ಯ ಸಿರಿಯಾದಾದ್ಯಂತ ಡಜನ್‌ಗಟ್ಟಲೆ ಇಸ್ಲಾಮಿಕ್ ಸ್ಟೇಟ್ (ಐಎಸ್) ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 'ಆಪರೇಷನ್ ಹಾಕೈ...

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...