Homeಮುಖಪುಟಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

ಗುಜರಾತ್‌ | ವಿದ್ಯಾರ್ಥಿನಿಯರ ಶಾಲಾ ಪ್ರವಾಸಗಳಲ್ಲಿ ಮಹಿಳಾ ಪೊಲೀಸರು ಕಡ್ಡಾಯ

- Advertisement -
- Advertisement -

ವಿದ್ಯಾರ್ಥಿಗಳ ಸುರಕ್ಷತೆಗೆ ಸಂಬಂಧಿಸಿ ಎಲ್ಲಾ ಶಾಲಾ ಪ್ರವಾಸಗಳಲ್ಲಿ ಇಬ್ಬರು ಸಮವಸ್ತ್ರ ಧರಿಸಿದ ಪೊಲೀಸರ ಉಪಸ್ಥಿತಿಯನ್ನುಗುಜರಾತ್ ಪೊಲೀಸರು ಕಡ್ಡಾಯಗೊಳಿಸಿದ್ದಾರೆ ಎಂದು ವರದಿಯಾಗಿದೆ. ಪ್ರವಾಸಗಳಲ್ಲಿ ವಿದ್ಯಾರ್ಥಿನಿಯರು ಇದ್ದರೆ, ಪುರುಷ ಪೊಲೀಸರೊಂದಿಗೆ ಮಹಿಳಾ ಅಧಿಕಾರಿಗಳನ್ನೂ ಕೂಡಾ ಕಡ್ಡಾಯಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಗುಜರಾತ್‌ | ವಿದ್ಯಾರ್ಥಿನಿಯರ

ಪೊಲೀಸರ ಈ ಕ್ರಮವು ಶೈಕ್ಷಣಿಕ ಪ್ರವಾಸಗಳ ಸಮಯದಲ್ಲಿ ವಿದ್ಯಾರ್ಥಿಗಳನ್ನು ರಕ್ಷಿಸುವ ಮತ್ತು ಯುವಕರು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವಿನ ಸಂಬಂಧವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ.

ಇತ್ತೀಚೆಗೆ ನಡೆದ ಡಿಜಿಪಿ-ಐಜಿಪಿ ಸಮ್ಮೇಳನ-2024 ರಲ್ಲಿ ಪ್ರಧಾನಿ ಮತ್ತು ಕೇಂದ್ರ ಗೃಹ ಸಚಿವರ ನಿರ್ದೇಶನಗಳನ್ನು ಅನುಸರಿಸಿ, ಗುಜರಾತ್‌ನ ರಾಜ್ಯ ಪೊಲೀಸ್ ಮುಖ್ಯಸ್ಥ ವಿಕಾಸ್ ಸಹಾಯ್ ಅವರು ನೂತನ ಕಠಿಣ ಸುರಕ್ಷತಾ ಪ್ರೋಟೋಕಾಲ್ ಅನ್ನು ಘೋಷಿಸಿದ್ದಾರೆ.

ತಕ್ಷಣದಿಂದ ಜಾರಿಗೆ ಬರುವಂತೆ, ಎಲ್ಲಾ ಶಾಲೆಗಳು ಆಯೋಜಿಸುವ ಟ್ರಿಪ್, ಟೂರ್‌ಗಳು, ಪಿಕ್ನಿಕ್‌ಗಳು ಮತ್ತು ಸರ್ಕಾರಿ, ಅರೆ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ನಡುವಿನ ಭೇಟಿಗಳಲ್ಲಿ ಇಬ್ಬರು ಸಮವಸ್ತ್ರ ಧರಿಸಿದ ಪೊಲೀಸರ ಉಪಸ್ಥಿತಿಯನ್ನು ಒಳಗೊಂಡಿರಬೇಕು ಎಂದು ಪ್ರೊಟೊಕಾಲ್ ಹೇಳಿದೆ.

ಪ್ರವಾಸಗಳಲ್ಲಿ ವಿದ್ಯಾರ್ಥಿನಿಯರು ಇದ್ದರೆ ಈ ನಿಯಮವು ತೀವ್ರಗೊಳ್ಳುತ್ತದೆ ಮತ್ತು ಅವರ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಲು ಮಹಿಳಾ ಪೊಲೀಸ್ ಅಧಿಕಾರಿಗಳ ಜೊತೆಗಿರಬೇಕು ಎಂದು ಡಿಜಿಪಿ ಕಚೇರಿಯ ಅಧಿಕೃತ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಈ ಅವಶ್ಯಕತೆಯನ್ನು ಪೂರೈಸಲು ಶಾಲಾ ಪ್ರಾಂಶುಪಾಲರು ಈಗ ಸ್ಥಳೀಯ ಪೊಲೀಸ್ ಠಾಣೆಗಳೊಂದಿಗೆ ನೇರವಾಗಿ ಸಮನ್ವಯ ಸಾಧಿಸುವ ಕಾರ್ಯವನ್ನು ಹೊಂದಲಿದ್ದಾರೆ.

ಈ ಆದೇಶವನ್ನು ಜಾರಿಗೊಳಿಸಲು, ರಾಜ್ಯಾದ್ಯಂತ ತ್ವರಿತ ಅನುಷ್ಠಾನಕ್ಕಾಗಿ ಸ್ಪಷ್ಟ ನಿರ್ದೇಶನಗಳನ್ನು ಹೊರಡಿಸುವಂತೆ ಡಿಜಿಪಿ ವಿಕಾಸ್ ಸಹಾಯ್ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಶೈಕ್ಷಣಿಕ ಪ್ರವಾಸಗಳ ಸಮಯದಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಾತರಿಪಡಿಸುವುದು ಮಾತ್ರವಲ್ಲದೆ, ವಿದ್ಯಾರ್ಥಿಗಳು ಮತ್ತು ಕಾನೂನು ಜಾರಿ ಸಂಸ್ಥೆಗಳ ನಡುವೆ ವಿಶ್ವಾಸವನ್ನು ಬಲಪಡಿಸುವುದು ಮತ್ತು ಸಹಕಾರಿ ಸಂಬಂಧವನ್ನು ಬೆಳೆಸುವುದು ಈ ಕ್ರಮದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ಇದಕ್ಕೂ ಮೊದಲು, ಜನವರಿ 18, 2024 ರಂದು ವಡೋದರಾದಲ್ಲಿ ನಡೆದ ದುರಂತ ಹಾರ್ನಿ ದೋಣಿ ಅಪಘಾತದ ನಂತರ, 12 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದಂತೆ 14 ಜೀವಗಳು ಬಲಿಯಾದ ನಂತರ, ಗುಜರಾತ್ ಸರ್ಕಾರವು 2024–25 ರ ಶೈಕ್ಷಣಿಕ ಅವಧಿಗೆ ಶಾಲಾ ಪ್ರವಾಸ ನಿಯಮಗಳನ್ನು ಬಿಗಿಗೊಳಿಸಲು ತ್ವರಿತವಾಗಿ ಕ್ರಮ ಕೈಗೊಂಡಿತು.

ಈ ವೇಳೆ ಸರ್ಕಾರವು ಹೊಸ ಕಡ್ಡಾಯ ಮಾರ್ಗಸೂಚಿಗಳನ್ನು ಘೋಷಿಸಿದ್ದು, ರಾಜ್ಯದ ಎಲ್ಲಾ ಶಾಲೆಗಳು ಯಾವುದೇ ಪ್ರವಾಸಗಳನ್ನು ಆಯೋಜಿಸುವ ಮೊದಲು ಪೂರ್ವಾನುಮತಿ ಪಡೆಯಬೇಕು ಎಂದು ಹೇಳಿತ್ತು. ಇದರಲ್ಲಿ ಪ್ರಾದೇಶಿಕ ಸಾರಿಗೆ ಕಚೇರಿ (RTO) ಮತ್ತು ಸ್ಥಳೀಯ ಪೊಲೀಸ್ ಠಾಣೆಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಪ್ರತಿ ಪ್ರವಾಸದ ಬಗ್ಗೆ ತಿಳಿಸುವ ಕಟ್ಟುನಿಟ್ಟಿನ ನಿಯಮವೂ ಸೇರಿದೆ. ಗುಜರಾತ್‌ | ವಿದ್ಯಾರ್ಥಿನಿಯರ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...