Homeಮುಖಪುಟಗುಜರಾತ್‌: ಕೊರೊನಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 18 ಸೋಂಕಿತರು ಮೃತ

ಗುಜರಾತ್‌: ಕೊರೊನಾ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; 18 ಸೋಂಕಿತರು ಮೃತ

- Advertisement -
- Advertisement -

ಗುಜರಾತ್‌ನ ಭರೂಚ್‌ನ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕನಿಷ್ಠ 18 ಕೊರೊನಾ ರೋಗಿಗಳು ಸಾವನ್ನಪ್ಪಿದ ಅಘಾತಕಾರಿ ಘಟನೆ ಶನಿವಾರ ಮುಂಜಾನೆ ನಡೆದಿದೆ. ನಾಲ್ಕು ಅಂತಸ್ತಿನ ಆಸ್ಪತ್ರೆಯ ಕೊರೊನಾ ವಾರ್ಡ್‌ನಲ್ಲಿ ಮುಂಜಾನೆ 1 ಗಂಟೆಗೆ ಬೆಂಕಿ ಕಾಣಿಸಿದೆ. ವಾರ್ಡ್‌ನಲ್ಲಿ ಸುಮಾರು 50 ರೋಗಿಗಳು ಇದ್ದರು ಎನ್ನಲಾಗಿದ್ದು, ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಬೆಳಿಗ್ಗೆ 6.30 ರ ಮಾಹಿತಿಯಂತೆ ದುರಂತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 12 ಜನರು ಸಾವಿಗೀಡಾಗಿರುವುದನ್ನು ನಾವು ದೃಡಪಡಿಸಿದ್ದೇವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ‘ಅದು ಹೃದಯವಲ್ಲ, ಕಲ್ಲು’- ಮೋದಿಗೆ ಪರೋಕ್ಷವಾಗಿ ಕುಟುಕಿದ ರಾಹುಲ್‌ ಗಾಂಧಿ

ಕೊರೊನಾ ವಾರ್ಡ್‌ನ 12 ರೋಗಿಗಳು ಬೆಂಕಿ ಮತ್ತು ಹೊಗೆಯಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಭರೂಚ್ ಎಸ್‌ಪಿ ರಾಜೇಂದ್ರಸಿಂಹ ಚುಡಾಸಮಾ ತಿಳಿಸಿದ್ದಾರೆ. ಉಳಿದ ಆರು ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆಯೇ ಅಥವಾ ಇತರ ಆಸ್ಪತ್ರೆಗಳಿಗೆ ಸ್ಥಳಾಂತರಗೊಳ್ಳುವಾಗ ಮೃತಪಟ್ಟಿದ್ದಾರೆಯೆ ಎಂಬುದು ಸ್ಪಷ್ಟವಾಗಿಲ್ಲ.

ಕೊರೊನಾ ಚಿಕಿತ್ಸೆಗೆ ಗೊತ್ತುಪಡಿಸಿದ ಆಸ್ಪತ್ರೆಯು ಗುಜರಾತ್‌ ರಾಜಧಾನಿ ಅಹಮದಾಬಾದ್‌ನಿಂದ 190 ಕಿ.ಮೀ ದೂರದಲ್ಲಿರುವ ಭರೂಚ್-ಜಂಬುಸರ್ ಹೆದ್ದಾರಿಯಲ್ಲಿದೆ. ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎಂದು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಅಕ್ಕಿ ಕೊಡಿ ಎಂದ ರೈತನಿಗೆ ‘ಸತ್ತೊಗು’ ಎಂದ ಆಹಾರ ಸಚಿವ ಉಮೇಶ್ ಕತ್ತಿ

ಬೆಂಕಿ ಭುಗಿಲೆದ್ದ ಒಂದು ಗಂಟೆಯೊಳಗೆ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಸುಮಾರು 50 ರೋಗಿಗಳನ್ನು ಸ್ಥಳೀಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ್ದಾರೆ. ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಯಿತು ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.

ದುರ್ಘಟನೆಗೆ ಪ್ರಧಾನಿ ಮೋದಿ ಸೇರಿದಂತೆ ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಸಂತಾಪ ಸೂಚಿಸಿದ್ದಾರೆ. ಪ್ರತಿಯೊಬ್ಬ ಮೃತರ ಕುಟುಂಬಗಳಿಗೆ 4 ಲಕ್ಷ ರೂ.ಗಳ ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ.

ಇದನ್ನೂ ಓದಿ: ನಿಂಬೆರಸ, ಶಿಕ್ಷಕನ ಸಾವು: ಸಂಕೇಶ್ವರ್ ವಿರುದ್ಧ ಕೇಸು ದಾಖಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...