Homeಮುಖಪುಟಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

- Advertisement -
- Advertisement -

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ.

ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರೂ ಅವರು ಪಾಕ್‌ ಜೈಲಿನಲ್ಲೇ ಇದ್ದರು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರ ಹೇಳಿದ್ದಾರೆ. ಮೀನುಗಾರ ಸಮುದಾಯವನ್ನು ಪ್ರತಿನಿಧಿಸುವ ನಿಯೋಗವು ಪಾಕಿಸ್ತಾನದ ಜೈಲುಗಳಲ್ಲಿ ಕೊಳೆಯುತ್ತಿರುವ ಅಂತಹ ವ್ಯಕ್ತಿಗಳ ಬಿಡುಗಡೆಯನ್ನು ತ್ವರಿತಗೊಳಿಸುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದ ಒಂದು ತಿಂಗಳೊಳಗೆ ಹೆಸರು ಬಹಿರಂಗಪಡಿಸದ ಮೀನುಗಾರನ ಸಾವು ಸಂಭವಿಸಿದೆ.

ಜನವರಿ 16 ರಂದು ಕರಾಚಿಯ ಮಾಲಿರ್ ಜೈಲಿನಲ್ಲಿ ಮೀನುಗಾರ ನಿಧನರಾದರು ಎಂದು ಸಾಮಾಜಿಕ ಕಾರ್ಯಕರ್ತ ಜತಿನ್ ದೇಸಾಯಿ ಸೋಮವಾರ ತಿಳಿಸಿದ್ದಾರೆ. ಮೀನುಗಾರಿಕೆಗೆ ತೆರಳುವ ಸಮಯದಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಸಮುದ್ರ ಗಡಿ ರೇಖೆಯನ್ನು (ಐಎಂಬಿಎಲ್‌) ದಾಟಿದ ನಂತರ ಪಾಕಿಸ್ತಾನದಲ್ಲಿ ಸೆರೆಹಿಡಿದು ಜೈಲಿನಲ್ಲಿರುವ ಭಾರತೀಯ ಮೀನುಗಾರರ ಸಮಸ್ಯೆಯನ್ನು ಹೋರಾಟಗಾರರು ಕೈಗೆತ್ತಿಕೊಳ್ಳುತ್ತಿದ್ದಾರೆ.

ಪೋರಬಂದರ್ ದೋಣಿ ಸಂಘದ ಮಾಜಿ ಅಧ್ಯಕ್ಷ ಜೀವನ್ ಜಂಗಿ ಅವರು ಈ ಬೆಳವಣಿಗೆಯನ್ನು ದೃಢಪಡಿಸಿದರು. ಮೃತರು ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯ ಉನಾದವರಾಗಿರಬಹುದು, ಕಳೆದ ಹಲವಾರು ತಿಂಗಳುಗಳಿಂದ ಅವರು ಅಸ್ವಸ್ಥರಾಗಿದ್ದರು ಎಂದು ಹೇಳಿದರು.

“ಮರಣ ಹೊಂದಿದ ಮೀನುಗಾರನನ್ನು 2022 ರಲ್ಲಿ ಸೆರೆಹಿಡಿಯಲಾಯಿತು. ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಿದ ನಂತರ ಅದೇ ವರ್ಷ ಅವರ ಶಿಕ್ಷೆ ಕೊನೆಗೊಂಡಿತು. ಎರಡೂ ದೇಶಗಳ ನಡುವಿನ 2008 ರ ಕಾನ್ಸುಲರ್ ಪ್ರವೇಶ ಒಪ್ಪಂದದ ಹೊರತಾಗಿಯೂ, ಮೀನುಗಾರರು ಶಿಕ್ಷೆ ಮುಗಿದ ನಂತರ ಮತ್ತು ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಿದ ನಂತರವೂ ಪಾಕಿಸ್ತಾನ ಜೈಲುಗಳಲ್ಲಿ ಕೊಳೆಯುತ್ತಲೇ ಇದ್ದಾರೆ” ಎಂದು ದೇಸಾಯಿ ಗಮನಸೆಳೆದರು.

ಒಪ್ಪಂದದ ಸೆಕ್ಷನ್ 5 ರ ಪ್ರಕಾರ, ಎರಡೂ ಸರ್ಕಾರಗಳು ಅವರ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಿದ, ಶಿಕ್ಷೆಯ ಅವಧಿ ಮುಗಿದ ಒಂದು ತಿಂಗಳೊಳಗೆ ವ್ಯಕ್ತಿಗಳನ್ನು ಬಿಡುಗಡೆ ಮಾಡಿ ಸ್ವದೇಶಕ್ಕೆ ಕಳುಹಿಸುತ್ತವೆ.

ಮೃತರು ಮತ್ತು ಜೈಲಿನಲ್ಲಿರುವ ಇತರ ಮೀನುಗಾರರಲ್ಲಿ ಹೆಚ್ಚಿನವರು ಬಹಳ ಹಿಂದೆಯೇ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿರುವುದರಿಂದ, ಅವರ ರಾಷ್ಟ್ರೀಯತೆಯನ್ನು ದೃಢೀಕರಿಸಲಾಗಿರುವುದರಿಂದ ಈ ಒಪ್ಪಂದವು ಕಾಗದದ ಮೇಲೆಯೇ ಉಳಿದಿದೆ ಎಂದು ದೇಸಾಯಿ ಹೇಳಿದರು.

ಕಳೆದ ವರ್ಷ ಡಿಸೆಂಬರ್ 22 ರಂದು, ಡಿಯುನಲ್ಲಿರುವ ಮೀನುಗಾರ ಸಮುದಾಯದ ಸದಸ್ಯರು ಮತ್ತು ಅವರ ಸ್ನೇಹಿತರು ಈ ವಿಷಯದ ಬಗ್ಗೆ ಗಮನ ಸೆಳೆಯುವ ಪತ್ರವನ್ನು ಇಎಎಂ ಜೈಶಂಕರ್ ಅವರಿಗೆ ಸಲ್ಲಿಸಿದ್ದರು.

ಈ ಮೀನುಗಾರರಲ್ಲಿ ಹೆಚ್ಚಿನವರು ಗುಜರಾತ್, ಡಿಯು ಮತ್ತು ಮಹಾರಾಷ್ಟ್ರಕ್ಕೆ ಸೇರಿದವರು. 160 ಜನರು ರಾಷ್ಟ್ರೀಯತೆಯ ಪರಿಶೀಲನೆಯ ನಂತರ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಅವರು ಹೇಳಿದರು.

“2008 ರಲ್ಲಿ ಉಭಯ ದೇಶಗಳ ನಡುವಿನ ಒಪ್ಪಂದದ ಹೊರತಾಗಿಯೂ, ಮೀನುಗಾರರು ಪಾಕಿಸ್ತಾನದ ಜೈಲುಗಳಲ್ಲಿಯೇ ಇದ್ದಾರೆ. ಶಿಕ್ಷೆಯ ಅವಧಿಯನ್ನು ಮೀರಿದ ಅವರ ಬಂಧನವು ಕುಟುಂಬಗಳಿಗೆ ವರ್ಷಗಳ ಕಾಲ ಸಂವಹನವಿಲ್ಲದೆ ಉಳಿದು ತೀವ್ರ ದುಃಖವನ್ನುಂಟುಮಾಡಿದೆ. ಇದು ಅವರ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಗಂಭೀರ ಕಳವಳವನ್ನುಂಟುಮಾಡಿದೆ. ಈ ವಿಷಯವನ್ನು ದಯವಿಟ್ಟು ಪರಿಶೀಲಿಸಿ ಅವರ ಬಿಡುಗಡೆ ಮತ್ತು ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮೀನುಗಾರರ ಬಿಡುಗಡೆ ಮತ್ತು ವಾಪಸಾತಿ, ಅವರ ತುರ್ತು ವೈದ್ಯಕೀಯ ಆರೈಕೆ ಮತ್ತು ಮಾನವೀಯ ವಾಪಸಾತಿ, ಸಂವಹನ ಮತ್ತು ಕುಟುಂಬ ಸಂಪರ್ಕ, ಕೈದಿಗಳ ಮೇಲಿನ ಜಂಟಿ ನ್ಯಾಯಾಂಗ ಸಮಿತಿಯ ಪುನರುಜ್ಜೀವನ, ಮುಟ್ಟುಗೋಲು ಹಾಕಿಕೊಂಡ ಮೀನುಗಾರಿಕಾ ದೋಣಿಗಳನ್ನು ಹಿಂದಿರುಗಿಸುವುದು ಸೇರಿದಂತೆ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಬೆಂಬಲ ನೀಡುವುದು ಪ್ರಮುಖ ಬೇಡಿಕೆಗಳಲ್ಲಿ ಸೇರಿವೆ.

“ಇಲ್ಲಿಯವರೆಗೆ, ಮಹಾರಾಷ್ಟ್ರದ 19 ಮೀನುಗಾರರು ಸೇರಿದಂತೆ 198 ಭಾರತೀಯ ಮೀನುಗಾರರು ಕರಾಚಿ ಜೈಲಿನಲ್ಲಿದ್ದಾರೆ. ಅವರಲ್ಲಿ ಸುಮಾರು 160 ಜನರು ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲಾಗಿದೆ. ಬಂಧಿತ ಮೀನುಗಾರರ ಸಮಸ್ಯೆಯನ್ನು ಎರಡೂ ದೇಶಗಳು ಮಾನವೀಯ ದೃಷ್ಟಿಕೋನದಿಂದ ನೋಡಬೇಕು. ಏಕೆಂದರೆ, ಅವರು ಅಜಾಗರೂಕತೆಯಿಂದ ಗಡಿ ದಾಟುತ್ತಾರೆ, ಆದ್ದರಿಂದ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು” ಎಂದು ದೇಸಾಯಿ ಪ್ರತಿಪಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....