Homeಮುಖಪುಟಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

- Advertisement -
- Advertisement -

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ.

ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರೂ ಅವರು ಪಾಕ್‌ ಜೈಲಿನಲ್ಲೇ ಇದ್ದರು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರ ಹೇಳಿದ್ದಾರೆ. ಮೀನುಗಾರ ಸಮುದಾಯವನ್ನು ಪ್ರತಿನಿಧಿಸುವ ನಿಯೋಗವು ಪಾಕಿಸ್ತಾನದ ಜೈಲುಗಳಲ್ಲಿ ಕೊಳೆಯುತ್ತಿರುವ ಅಂತಹ ವ್ಯಕ್ತಿಗಳ ಬಿಡುಗಡೆಯನ್ನು ತ್ವರಿತಗೊಳಿಸುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದ ಒಂದು ತಿಂಗಳೊಳಗೆ ಹೆಸರು ಬಹಿರಂಗಪಡಿಸದ ಮೀನುಗಾರನ ಸಾವು ಸಂಭವಿಸಿದೆ.

ಜನವರಿ 16 ರಂದು ಕರಾಚಿಯ ಮಾಲಿರ್ ಜೈಲಿನಲ್ಲಿ ಮೀನುಗಾರ ನಿಧನರಾದರು ಎಂದು ಸಾಮಾಜಿಕ ಕಾರ್ಯಕರ್ತ ಜತಿನ್ ದೇಸಾಯಿ ಸೋಮವಾರ ತಿಳಿಸಿದ್ದಾರೆ. ಮೀನುಗಾರಿಕೆಗೆ ತೆರಳುವ ಸಮಯದಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಸಮುದ್ರ ಗಡಿ ರೇಖೆಯನ್ನು (ಐಎಂಬಿಎಲ್‌) ದಾಟಿದ ನಂತರ ಪಾಕಿಸ್ತಾನದಲ್ಲಿ ಸೆರೆಹಿಡಿದು ಜೈಲಿನಲ್ಲಿರುವ ಭಾರತೀಯ ಮೀನುಗಾರರ ಸಮಸ್ಯೆಯನ್ನು ಹೋರಾಟಗಾರರು ಕೈಗೆತ್ತಿಕೊಳ್ಳುತ್ತಿದ್ದಾರೆ.

ಪೋರಬಂದರ್ ದೋಣಿ ಸಂಘದ ಮಾಜಿ ಅಧ್ಯಕ್ಷ ಜೀವನ್ ಜಂಗಿ ಅವರು ಈ ಬೆಳವಣಿಗೆಯನ್ನು ದೃಢಪಡಿಸಿದರು. ಮೃತರು ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯ ಉನಾದವರಾಗಿರಬಹುದು, ಕಳೆದ ಹಲವಾರು ತಿಂಗಳುಗಳಿಂದ ಅವರು ಅಸ್ವಸ್ಥರಾಗಿದ್ದರು ಎಂದು ಹೇಳಿದರು.

“ಮರಣ ಹೊಂದಿದ ಮೀನುಗಾರನನ್ನು 2022 ರಲ್ಲಿ ಸೆರೆಹಿಡಿಯಲಾಯಿತು. ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಿದ ನಂತರ ಅದೇ ವರ್ಷ ಅವರ ಶಿಕ್ಷೆ ಕೊನೆಗೊಂಡಿತು. ಎರಡೂ ದೇಶಗಳ ನಡುವಿನ 2008 ರ ಕಾನ್ಸುಲರ್ ಪ್ರವೇಶ ಒಪ್ಪಂದದ ಹೊರತಾಗಿಯೂ, ಮೀನುಗಾರರು ಶಿಕ್ಷೆ ಮುಗಿದ ನಂತರ ಮತ್ತು ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಿದ ನಂತರವೂ ಪಾಕಿಸ್ತಾನ ಜೈಲುಗಳಲ್ಲಿ ಕೊಳೆಯುತ್ತಲೇ ಇದ್ದಾರೆ” ಎಂದು ದೇಸಾಯಿ ಗಮನಸೆಳೆದರು.

ಒಪ್ಪಂದದ ಸೆಕ್ಷನ್ 5 ರ ಪ್ರಕಾರ, ಎರಡೂ ಸರ್ಕಾರಗಳು ಅವರ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಿದ, ಶಿಕ್ಷೆಯ ಅವಧಿ ಮುಗಿದ ಒಂದು ತಿಂಗಳೊಳಗೆ ವ್ಯಕ್ತಿಗಳನ್ನು ಬಿಡುಗಡೆ ಮಾಡಿ ಸ್ವದೇಶಕ್ಕೆ ಕಳುಹಿಸುತ್ತವೆ.

ಮೃತರು ಮತ್ತು ಜೈಲಿನಲ್ಲಿರುವ ಇತರ ಮೀನುಗಾರರಲ್ಲಿ ಹೆಚ್ಚಿನವರು ಬಹಳ ಹಿಂದೆಯೇ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿರುವುದರಿಂದ, ಅವರ ರಾಷ್ಟ್ರೀಯತೆಯನ್ನು ದೃಢೀಕರಿಸಲಾಗಿರುವುದರಿಂದ ಈ ಒಪ್ಪಂದವು ಕಾಗದದ ಮೇಲೆಯೇ ಉಳಿದಿದೆ ಎಂದು ದೇಸಾಯಿ ಹೇಳಿದರು.

ಕಳೆದ ವರ್ಷ ಡಿಸೆಂಬರ್ 22 ರಂದು, ಡಿಯುನಲ್ಲಿರುವ ಮೀನುಗಾರ ಸಮುದಾಯದ ಸದಸ್ಯರು ಮತ್ತು ಅವರ ಸ್ನೇಹಿತರು ಈ ವಿಷಯದ ಬಗ್ಗೆ ಗಮನ ಸೆಳೆಯುವ ಪತ್ರವನ್ನು ಇಎಎಂ ಜೈಶಂಕರ್ ಅವರಿಗೆ ಸಲ್ಲಿಸಿದ್ದರು.

ಈ ಮೀನುಗಾರರಲ್ಲಿ ಹೆಚ್ಚಿನವರು ಗುಜರಾತ್, ಡಿಯು ಮತ್ತು ಮಹಾರಾಷ್ಟ್ರಕ್ಕೆ ಸೇರಿದವರು. 160 ಜನರು ರಾಷ್ಟ್ರೀಯತೆಯ ಪರಿಶೀಲನೆಯ ನಂತರ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಅವರು ಹೇಳಿದರು.

“2008 ರಲ್ಲಿ ಉಭಯ ದೇಶಗಳ ನಡುವಿನ ಒಪ್ಪಂದದ ಹೊರತಾಗಿಯೂ, ಮೀನುಗಾರರು ಪಾಕಿಸ್ತಾನದ ಜೈಲುಗಳಲ್ಲಿಯೇ ಇದ್ದಾರೆ. ಶಿಕ್ಷೆಯ ಅವಧಿಯನ್ನು ಮೀರಿದ ಅವರ ಬಂಧನವು ಕುಟುಂಬಗಳಿಗೆ ವರ್ಷಗಳ ಕಾಲ ಸಂವಹನವಿಲ್ಲದೆ ಉಳಿದು ತೀವ್ರ ದುಃಖವನ್ನುಂಟುಮಾಡಿದೆ. ಇದು ಅವರ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಗಂಭೀರ ಕಳವಳವನ್ನುಂಟುಮಾಡಿದೆ. ಈ ವಿಷಯವನ್ನು ದಯವಿಟ್ಟು ಪರಿಶೀಲಿಸಿ ಅವರ ಬಿಡುಗಡೆ ಮತ್ತು ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮೀನುಗಾರರ ಬಿಡುಗಡೆ ಮತ್ತು ವಾಪಸಾತಿ, ಅವರ ತುರ್ತು ವೈದ್ಯಕೀಯ ಆರೈಕೆ ಮತ್ತು ಮಾನವೀಯ ವಾಪಸಾತಿ, ಸಂವಹನ ಮತ್ತು ಕುಟುಂಬ ಸಂಪರ್ಕ, ಕೈದಿಗಳ ಮೇಲಿನ ಜಂಟಿ ನ್ಯಾಯಾಂಗ ಸಮಿತಿಯ ಪುನರುಜ್ಜೀವನ, ಮುಟ್ಟುಗೋಲು ಹಾಕಿಕೊಂಡ ಮೀನುಗಾರಿಕಾ ದೋಣಿಗಳನ್ನು ಹಿಂದಿರುಗಿಸುವುದು ಸೇರಿದಂತೆ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಬೆಂಬಲ ನೀಡುವುದು ಪ್ರಮುಖ ಬೇಡಿಕೆಗಳಲ್ಲಿ ಸೇರಿವೆ.

“ಇಲ್ಲಿಯವರೆಗೆ, ಮಹಾರಾಷ್ಟ್ರದ 19 ಮೀನುಗಾರರು ಸೇರಿದಂತೆ 198 ಭಾರತೀಯ ಮೀನುಗಾರರು ಕರಾಚಿ ಜೈಲಿನಲ್ಲಿದ್ದಾರೆ. ಅವರಲ್ಲಿ ಸುಮಾರು 160 ಜನರು ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲಾಗಿದೆ. ಬಂಧಿತ ಮೀನುಗಾರರ ಸಮಸ್ಯೆಯನ್ನು ಎರಡೂ ದೇಶಗಳು ಮಾನವೀಯ ದೃಷ್ಟಿಕೋನದಿಂದ ನೋಡಬೇಕು. ಏಕೆಂದರೆ, ಅವರು ಅಜಾಗರೂಕತೆಯಿಂದ ಗಡಿ ದಾಟುತ್ತಾರೆ, ಆದ್ದರಿಂದ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು” ಎಂದು ದೇಸಾಯಿ ಪ್ರತಿಪಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...