Homeಮುಖಪುಟಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

- Advertisement -
- Advertisement -

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ.

ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರೂ ಅವರು ಪಾಕ್‌ ಜೈಲಿನಲ್ಲೇ ಇದ್ದರು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರ ಹೇಳಿದ್ದಾರೆ. ಮೀನುಗಾರ ಸಮುದಾಯವನ್ನು ಪ್ರತಿನಿಧಿಸುವ ನಿಯೋಗವು ಪಾಕಿಸ್ತಾನದ ಜೈಲುಗಳಲ್ಲಿ ಕೊಳೆಯುತ್ತಿರುವ ಅಂತಹ ವ್ಯಕ್ತಿಗಳ ಬಿಡುಗಡೆಯನ್ನು ತ್ವರಿತಗೊಳಿಸುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದ ಒಂದು ತಿಂಗಳೊಳಗೆ ಹೆಸರು ಬಹಿರಂಗಪಡಿಸದ ಮೀನುಗಾರನ ಸಾವು ಸಂಭವಿಸಿದೆ.

ಜನವರಿ 16 ರಂದು ಕರಾಚಿಯ ಮಾಲಿರ್ ಜೈಲಿನಲ್ಲಿ ಮೀನುಗಾರ ನಿಧನರಾದರು ಎಂದು ಸಾಮಾಜಿಕ ಕಾರ್ಯಕರ್ತ ಜತಿನ್ ದೇಸಾಯಿ ಸೋಮವಾರ ತಿಳಿಸಿದ್ದಾರೆ. ಮೀನುಗಾರಿಕೆಗೆ ತೆರಳುವ ಸಮಯದಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಸಮುದ್ರ ಗಡಿ ರೇಖೆಯನ್ನು (ಐಎಂಬಿಎಲ್‌) ದಾಟಿದ ನಂತರ ಪಾಕಿಸ್ತಾನದಲ್ಲಿ ಸೆರೆಹಿಡಿದು ಜೈಲಿನಲ್ಲಿರುವ ಭಾರತೀಯ ಮೀನುಗಾರರ ಸಮಸ್ಯೆಯನ್ನು ಹೋರಾಟಗಾರರು ಕೈಗೆತ್ತಿಕೊಳ್ಳುತ್ತಿದ್ದಾರೆ.

ಪೋರಬಂದರ್ ದೋಣಿ ಸಂಘದ ಮಾಜಿ ಅಧ್ಯಕ್ಷ ಜೀವನ್ ಜಂಗಿ ಅವರು ಈ ಬೆಳವಣಿಗೆಯನ್ನು ದೃಢಪಡಿಸಿದರು. ಮೃತರು ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯ ಉನಾದವರಾಗಿರಬಹುದು, ಕಳೆದ ಹಲವಾರು ತಿಂಗಳುಗಳಿಂದ ಅವರು ಅಸ್ವಸ್ಥರಾಗಿದ್ದರು ಎಂದು ಹೇಳಿದರು.

“ಮರಣ ಹೊಂದಿದ ಮೀನುಗಾರನನ್ನು 2022 ರಲ್ಲಿ ಸೆರೆಹಿಡಿಯಲಾಯಿತು. ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಿದ ನಂತರ ಅದೇ ವರ್ಷ ಅವರ ಶಿಕ್ಷೆ ಕೊನೆಗೊಂಡಿತು. ಎರಡೂ ದೇಶಗಳ ನಡುವಿನ 2008 ರ ಕಾನ್ಸುಲರ್ ಪ್ರವೇಶ ಒಪ್ಪಂದದ ಹೊರತಾಗಿಯೂ, ಮೀನುಗಾರರು ಶಿಕ್ಷೆ ಮುಗಿದ ನಂತರ ಮತ್ತು ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಿದ ನಂತರವೂ ಪಾಕಿಸ್ತಾನ ಜೈಲುಗಳಲ್ಲಿ ಕೊಳೆಯುತ್ತಲೇ ಇದ್ದಾರೆ” ಎಂದು ದೇಸಾಯಿ ಗಮನಸೆಳೆದರು.

ಒಪ್ಪಂದದ ಸೆಕ್ಷನ್ 5 ರ ಪ್ರಕಾರ, ಎರಡೂ ಸರ್ಕಾರಗಳು ಅವರ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಿದ, ಶಿಕ್ಷೆಯ ಅವಧಿ ಮುಗಿದ ಒಂದು ತಿಂಗಳೊಳಗೆ ವ್ಯಕ್ತಿಗಳನ್ನು ಬಿಡುಗಡೆ ಮಾಡಿ ಸ್ವದೇಶಕ್ಕೆ ಕಳುಹಿಸುತ್ತವೆ.

ಮೃತರು ಮತ್ತು ಜೈಲಿನಲ್ಲಿರುವ ಇತರ ಮೀನುಗಾರರಲ್ಲಿ ಹೆಚ್ಚಿನವರು ಬಹಳ ಹಿಂದೆಯೇ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿರುವುದರಿಂದ, ಅವರ ರಾಷ್ಟ್ರೀಯತೆಯನ್ನು ದೃಢೀಕರಿಸಲಾಗಿರುವುದರಿಂದ ಈ ಒಪ್ಪಂದವು ಕಾಗದದ ಮೇಲೆಯೇ ಉಳಿದಿದೆ ಎಂದು ದೇಸಾಯಿ ಹೇಳಿದರು.

ಕಳೆದ ವರ್ಷ ಡಿಸೆಂಬರ್ 22 ರಂದು, ಡಿಯುನಲ್ಲಿರುವ ಮೀನುಗಾರ ಸಮುದಾಯದ ಸದಸ್ಯರು ಮತ್ತು ಅವರ ಸ್ನೇಹಿತರು ಈ ವಿಷಯದ ಬಗ್ಗೆ ಗಮನ ಸೆಳೆಯುವ ಪತ್ರವನ್ನು ಇಎಎಂ ಜೈಶಂಕರ್ ಅವರಿಗೆ ಸಲ್ಲಿಸಿದ್ದರು.

ಈ ಮೀನುಗಾರರಲ್ಲಿ ಹೆಚ್ಚಿನವರು ಗುಜರಾತ್, ಡಿಯು ಮತ್ತು ಮಹಾರಾಷ್ಟ್ರಕ್ಕೆ ಸೇರಿದವರು. 160 ಜನರು ರಾಷ್ಟ್ರೀಯತೆಯ ಪರಿಶೀಲನೆಯ ನಂತರ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಅವರು ಹೇಳಿದರು.

“2008 ರಲ್ಲಿ ಉಭಯ ದೇಶಗಳ ನಡುವಿನ ಒಪ್ಪಂದದ ಹೊರತಾಗಿಯೂ, ಮೀನುಗಾರರು ಪಾಕಿಸ್ತಾನದ ಜೈಲುಗಳಲ್ಲಿಯೇ ಇದ್ದಾರೆ. ಶಿಕ್ಷೆಯ ಅವಧಿಯನ್ನು ಮೀರಿದ ಅವರ ಬಂಧನವು ಕುಟುಂಬಗಳಿಗೆ ವರ್ಷಗಳ ಕಾಲ ಸಂವಹನವಿಲ್ಲದೆ ಉಳಿದು ತೀವ್ರ ದುಃಖವನ್ನುಂಟುಮಾಡಿದೆ. ಇದು ಅವರ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಗಂಭೀರ ಕಳವಳವನ್ನುಂಟುಮಾಡಿದೆ. ಈ ವಿಷಯವನ್ನು ದಯವಿಟ್ಟು ಪರಿಶೀಲಿಸಿ ಅವರ ಬಿಡುಗಡೆ ಮತ್ತು ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮೀನುಗಾರರ ಬಿಡುಗಡೆ ಮತ್ತು ವಾಪಸಾತಿ, ಅವರ ತುರ್ತು ವೈದ್ಯಕೀಯ ಆರೈಕೆ ಮತ್ತು ಮಾನವೀಯ ವಾಪಸಾತಿ, ಸಂವಹನ ಮತ್ತು ಕುಟುಂಬ ಸಂಪರ್ಕ, ಕೈದಿಗಳ ಮೇಲಿನ ಜಂಟಿ ನ್ಯಾಯಾಂಗ ಸಮಿತಿಯ ಪುನರುಜ್ಜೀವನ, ಮುಟ್ಟುಗೋಲು ಹಾಕಿಕೊಂಡ ಮೀನುಗಾರಿಕಾ ದೋಣಿಗಳನ್ನು ಹಿಂದಿರುಗಿಸುವುದು ಸೇರಿದಂತೆ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಬೆಂಬಲ ನೀಡುವುದು ಪ್ರಮುಖ ಬೇಡಿಕೆಗಳಲ್ಲಿ ಸೇರಿವೆ.

“ಇಲ್ಲಿಯವರೆಗೆ, ಮಹಾರಾಷ್ಟ್ರದ 19 ಮೀನುಗಾರರು ಸೇರಿದಂತೆ 198 ಭಾರತೀಯ ಮೀನುಗಾರರು ಕರಾಚಿ ಜೈಲಿನಲ್ಲಿದ್ದಾರೆ. ಅವರಲ್ಲಿ ಸುಮಾರು 160 ಜನರು ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲಾಗಿದೆ. ಬಂಧಿತ ಮೀನುಗಾರರ ಸಮಸ್ಯೆಯನ್ನು ಎರಡೂ ದೇಶಗಳು ಮಾನವೀಯ ದೃಷ್ಟಿಕೋನದಿಂದ ನೋಡಬೇಕು. ಏಕೆಂದರೆ, ಅವರು ಅಜಾಗರೂಕತೆಯಿಂದ ಗಡಿ ದಾಟುತ್ತಾರೆ, ಆದ್ದರಿಂದ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು” ಎಂದು ದೇಸಾಯಿ ಪ್ರತಿಪಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...