Homeಮುಖಪುಟಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

ಶಿಕ್ಷೆ ಮುಗಿದ 3 ವರ್ಷಗಳ ನಂತರ ಪಾಕಿಸ್ತಾನ ಜೈಲಿನಲ್ಲಿ ಗುಜರಾತ್ ಮೀನುಗಾರ ಸಾವು

- Advertisement -
- Advertisement -

2022 ರಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಗಡಿ ರೇಖೆಯನ್ನು ದಾಟಿದ ನಂತರ ಪಾಕಿಸ್ತಾನ ಏಜೆನ್ಸಿಗಳಿಂದ ಬಂಧಿಸಲ್ಪಟ್ಟ ಗುಜರಾತ್‌ನ ಮೀನುಗಾರನೊಬ್ಬ ಜನವರಿ 16 ರಂದು ಕರಾಚಿ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ.

ಮೂರು ವರ್ಷಗಳ ಹಿಂದೆ ಆತನ ಶಿಕ್ಷೆಯನ್ನು ಪೂರ್ಣಗೊಳಿಸಿದ್ದರೂ ಅವರು ಪಾಕ್‌ ಜೈಲಿನಲ್ಲೇ ಇದ್ದರು ಎಂದು ಸಾಮಾಜಿಕ ಕಾರ್ಯಕರ್ತರೊಬ್ಬರ ಹೇಳಿದ್ದಾರೆ. ಮೀನುಗಾರ ಸಮುದಾಯವನ್ನು ಪ್ರತಿನಿಧಿಸುವ ನಿಯೋಗವು ಪಾಕಿಸ್ತಾನದ ಜೈಲುಗಳಲ್ಲಿ ಕೊಳೆಯುತ್ತಿರುವ ಅಂತಹ ವ್ಯಕ್ತಿಗಳ ಬಿಡುಗಡೆಯನ್ನು ತ್ವರಿತಗೊಳಿಸುವಂತೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರಿಗೆ ಪತ್ರ ಬರೆದ ಒಂದು ತಿಂಗಳೊಳಗೆ ಹೆಸರು ಬಹಿರಂಗಪಡಿಸದ ಮೀನುಗಾರನ ಸಾವು ಸಂಭವಿಸಿದೆ.

ಜನವರಿ 16 ರಂದು ಕರಾಚಿಯ ಮಾಲಿರ್ ಜೈಲಿನಲ್ಲಿ ಮೀನುಗಾರ ನಿಧನರಾದರು ಎಂದು ಸಾಮಾಜಿಕ ಕಾರ್ಯಕರ್ತ ಜತಿನ್ ದೇಸಾಯಿ ಸೋಮವಾರ ತಿಳಿಸಿದ್ದಾರೆ. ಮೀನುಗಾರಿಕೆಗೆ ತೆರಳುವ ಸಮಯದಲ್ಲಿ ಅಜಾಗರೂಕತೆಯಿಂದ ಅಂತರರಾಷ್ಟ್ರೀಯ ಸಮುದ್ರ ಗಡಿ ರೇಖೆಯನ್ನು (ಐಎಂಬಿಎಲ್‌) ದಾಟಿದ ನಂತರ ಪಾಕಿಸ್ತಾನದಲ್ಲಿ ಸೆರೆಹಿಡಿದು ಜೈಲಿನಲ್ಲಿರುವ ಭಾರತೀಯ ಮೀನುಗಾರರ ಸಮಸ್ಯೆಯನ್ನು ಹೋರಾಟಗಾರರು ಕೈಗೆತ್ತಿಕೊಳ್ಳುತ್ತಿದ್ದಾರೆ.

ಪೋರಬಂದರ್ ದೋಣಿ ಸಂಘದ ಮಾಜಿ ಅಧ್ಯಕ್ಷ ಜೀವನ್ ಜಂಗಿ ಅವರು ಈ ಬೆಳವಣಿಗೆಯನ್ನು ದೃಢಪಡಿಸಿದರು. ಮೃತರು ಗುಜರಾತ್‌ನ ಗಿರ್ ಸೋಮನಾಥ್ ಜಿಲ್ಲೆಯ ಉನಾದವರಾಗಿರಬಹುದು, ಕಳೆದ ಹಲವಾರು ತಿಂಗಳುಗಳಿಂದ ಅವರು ಅಸ್ವಸ್ಥರಾಗಿದ್ದರು ಎಂದು ಹೇಳಿದರು.

“ಮರಣ ಹೊಂದಿದ ಮೀನುಗಾರನನ್ನು 2022 ರಲ್ಲಿ ಸೆರೆಹಿಡಿಯಲಾಯಿತು. ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಿದ ನಂತರ ಅದೇ ವರ್ಷ ಅವರ ಶಿಕ್ಷೆ ಕೊನೆಗೊಂಡಿತು. ಎರಡೂ ದೇಶಗಳ ನಡುವಿನ 2008 ರ ಕಾನ್ಸುಲರ್ ಪ್ರವೇಶ ಒಪ್ಪಂದದ ಹೊರತಾಗಿಯೂ, ಮೀನುಗಾರರು ಶಿಕ್ಷೆ ಮುಗಿದ ನಂತರ ಮತ್ತು ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಿದ ನಂತರವೂ ಪಾಕಿಸ್ತಾನ ಜೈಲುಗಳಲ್ಲಿ ಕೊಳೆಯುತ್ತಲೇ ಇದ್ದಾರೆ” ಎಂದು ದೇಸಾಯಿ ಗಮನಸೆಳೆದರು.

ಒಪ್ಪಂದದ ಸೆಕ್ಷನ್ 5 ರ ಪ್ರಕಾರ, ಎರಡೂ ಸರ್ಕಾರಗಳು ಅವರ ರಾಷ್ಟ್ರೀಯ ಸ್ಥಾನಮಾನವನ್ನು ದೃಢೀಕರಿಸಿದ, ಶಿಕ್ಷೆಯ ಅವಧಿ ಮುಗಿದ ಒಂದು ತಿಂಗಳೊಳಗೆ ವ್ಯಕ್ತಿಗಳನ್ನು ಬಿಡುಗಡೆ ಮಾಡಿ ಸ್ವದೇಶಕ್ಕೆ ಕಳುಹಿಸುತ್ತವೆ.

ಮೃತರು ಮತ್ತು ಜೈಲಿನಲ್ಲಿರುವ ಇತರ ಮೀನುಗಾರರಲ್ಲಿ ಹೆಚ್ಚಿನವರು ಬಹಳ ಹಿಂದೆಯೇ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿರುವುದರಿಂದ, ಅವರ ರಾಷ್ಟ್ರೀಯತೆಯನ್ನು ದೃಢೀಕರಿಸಲಾಗಿರುವುದರಿಂದ ಈ ಒಪ್ಪಂದವು ಕಾಗದದ ಮೇಲೆಯೇ ಉಳಿದಿದೆ ಎಂದು ದೇಸಾಯಿ ಹೇಳಿದರು.

ಕಳೆದ ವರ್ಷ ಡಿಸೆಂಬರ್ 22 ರಂದು, ಡಿಯುನಲ್ಲಿರುವ ಮೀನುಗಾರ ಸಮುದಾಯದ ಸದಸ್ಯರು ಮತ್ತು ಅವರ ಸ್ನೇಹಿತರು ಈ ವಿಷಯದ ಬಗ್ಗೆ ಗಮನ ಸೆಳೆಯುವ ಪತ್ರವನ್ನು ಇಎಎಂ ಜೈಶಂಕರ್ ಅವರಿಗೆ ಸಲ್ಲಿಸಿದ್ದರು.

ಈ ಮೀನುಗಾರರಲ್ಲಿ ಹೆಚ್ಚಿನವರು ಗುಜರಾತ್, ಡಿಯು ಮತ್ತು ಮಹಾರಾಷ್ಟ್ರಕ್ಕೆ ಸೇರಿದವರು. 160 ಜನರು ರಾಷ್ಟ್ರೀಯತೆಯ ಪರಿಶೀಲನೆಯ ನಂತರ ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ ಎಂದು ಅವರು ಹೇಳಿದರು.

“2008 ರಲ್ಲಿ ಉಭಯ ದೇಶಗಳ ನಡುವಿನ ಒಪ್ಪಂದದ ಹೊರತಾಗಿಯೂ, ಮೀನುಗಾರರು ಪಾಕಿಸ್ತಾನದ ಜೈಲುಗಳಲ್ಲಿಯೇ ಇದ್ದಾರೆ. ಶಿಕ್ಷೆಯ ಅವಧಿಯನ್ನು ಮೀರಿದ ಅವರ ಬಂಧನವು ಕುಟುಂಬಗಳಿಗೆ ವರ್ಷಗಳ ಕಾಲ ಸಂವಹನವಿಲ್ಲದೆ ಉಳಿದು ತೀವ್ರ ದುಃಖವನ್ನುಂಟುಮಾಡಿದೆ. ಇದು ಅವರ ಆರೋಗ್ಯ ಮತ್ತು ಯೋಗಕ್ಷೇಮದ ಬಗ್ಗೆ ಗಂಭೀರ ಕಳವಳವನ್ನುಂಟುಮಾಡಿದೆ. ಈ ವಿಷಯವನ್ನು ದಯವಿಟ್ಟು ಪರಿಶೀಲಿಸಿ ಅವರ ಬಿಡುಗಡೆ ಮತ್ತು ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಮೀನುಗಾರರ ಬಿಡುಗಡೆ ಮತ್ತು ವಾಪಸಾತಿ, ಅವರ ತುರ್ತು ವೈದ್ಯಕೀಯ ಆರೈಕೆ ಮತ್ತು ಮಾನವೀಯ ವಾಪಸಾತಿ, ಸಂವಹನ ಮತ್ತು ಕುಟುಂಬ ಸಂಪರ್ಕ, ಕೈದಿಗಳ ಮೇಲಿನ ಜಂಟಿ ನ್ಯಾಯಾಂಗ ಸಮಿತಿಯ ಪುನರುಜ್ಜೀವನ, ಮುಟ್ಟುಗೋಲು ಹಾಕಿಕೊಂಡ ಮೀನುಗಾರಿಕಾ ದೋಣಿಗಳನ್ನು ಹಿಂದಿರುಗಿಸುವುದು ಸೇರಿದಂತೆ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಬೆಂಬಲ ನೀಡುವುದು ಪ್ರಮುಖ ಬೇಡಿಕೆಗಳಲ್ಲಿ ಸೇರಿವೆ.

“ಇಲ್ಲಿಯವರೆಗೆ, ಮಹಾರಾಷ್ಟ್ರದ 19 ಮೀನುಗಾರರು ಸೇರಿದಂತೆ 198 ಭಾರತೀಯ ಮೀನುಗಾರರು ಕರಾಚಿ ಜೈಲಿನಲ್ಲಿದ್ದಾರೆ. ಅವರಲ್ಲಿ ಸುಮಾರು 160 ಜನರು ತಮ್ಮ ಶಿಕ್ಷೆಯನ್ನು ಪೂರ್ಣಗೊಳಿಸಿದ್ದಾರೆ. ಅವರ ರಾಷ್ಟ್ರೀಯತೆಯನ್ನು ಪರಿಶೀಲಿಸಲಾಗಿದೆ. ಬಂಧಿತ ಮೀನುಗಾರರ ಸಮಸ್ಯೆಯನ್ನು ಎರಡೂ ದೇಶಗಳು ಮಾನವೀಯ ದೃಷ್ಟಿಕೋನದಿಂದ ನೋಡಬೇಕು. ಏಕೆಂದರೆ, ಅವರು ಅಜಾಗರೂಕತೆಯಿಂದ ಗಡಿ ದಾಟುತ್ತಾರೆ, ಆದ್ದರಿಂದ ಅವರನ್ನು ತಕ್ಷಣವೇ ಬಿಡುಗಡೆ ಮಾಡಬೇಕು” ಎಂದು ದೇಸಾಯಿ ಪ್ರತಿಪಾದಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ಸಿಎಂ ಹುದ್ದೆಗೆ ರಾಜೀನಾಮೆ ನೀಡಲು ಅಣಿಯಾದ ನಿತೀಶ್ ಕುಮಾರ್ : ಸಂಪುಟ ವಿಸರ್ಜನೆಗೆ ಶಿಫಾರಸು

ಬಿಹಾರದಲ್ಲಿ ಹೊಸ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಣಿಯಾಗಿದ್ದು, ಅದಕ್ಕೂ ಮೊದಲು ಸಚಿವ ಸಂಪುಟ ವಿಸರ್ಜಿಸಲು ಅವರು ಶಿಫಾರಸು ಮಾಡಿದ್ದಾರೆ....

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ಮಾತುಕತೆಗೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...

ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ

ಜನಸಂಖ್ಯೆ ಅನುಪಾತದ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆಯ...

ನೋಯ್ಡಾ ಕಾರ್ಮಿಕ ಪ್ರತಿಭಟನೆ: 300ಕ್ಕೂ ಹೆಚ್ಚು ಜನರ ಬಂಧನ, 7 ಎಫ್‌ಐಆರ್‌: ಅಶಾಂತಿಯ ಹಿಂದೆ ‘ಸಂಘಟಿತ ಸಿಂಡಿಕೇಟ್’ ಕುರಿತು ತನಿಖೆ

ನೋಯ್ಡಾದಲ್ಲಿ ಹಿಂಸಾತ್ಮಕವಾಗಿ ತಿರುಗಿದ ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಮಂಗಳವಾರ ಹೇಳಿದ್ದಾರೆ,...

“ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ” : ಕೇಜ್ರಿವಾಲ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ನ್ಯಾ. ಶರ್ಮಾ

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಹಿಂದೆ ಸರಿಯಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಅರವಿಂದ್...

ಜಮ್ಮು-ಕಾಶ್ಮೀರ| ನಕಲಿ ಗೋರಕ್ಷಕರು ಬೆನ್ನಟ್ಟಿದ್ದರಿಂದ ನದಿಗೆ ಹಾರಿದ ವ್ಯಕ್ತಿ ಕಣ್ಮರೆ; ನಾಲ್ವರ ಬಂಧನ

ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ರಾಮ್ಸೂ ಪ್ರದೇಶದ ಹೆದ್ದಾರಿಯಲ್ಲಿ ಗೋರಕ್ಷಕರು ವ್ಯಕ್ತಿಯೊಬ್ಬನನ್ನು ಬೆನ್ನಟ್ಟಿದ್ದರಿಂದ ಹೆದರಿದ ಆತ ಸುರಕ್ಷತೆಗಾಗಿ ನದಿಗೆ ಹಾರಿದ್ದಾನೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ರಾಂಬನ್ ಜಿಲ್ಲೆಯ ಉಖ್ರಾಲ್ ತಹಸಿಲ್‌ನ ಪೋಗಲ್‌ನ ಮುಂಡ್‌ಖಾಲ್...

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕಾಂಗ್ರೆಸ್ ಹಿರಿಯ ನಾಯಕ ನಸೀರ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ಸೋಮವಾರ (ಏ.13) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ರಾಜ್ಯ ಶಿಷ್ಟಾಚಾರ)...

ಮಹಿಳಾ ಮೀಸಲಾತಿ ಮಸೂದೆ: ಏಪ್ರಿಲ್ 15 ರಂದು ಕಾಂಗ್ರೆಸ್ ಸರ್ವಪಕ್ಷ ಸಭೆ ಕರೆಯಲಿದೆ: ಮಲ್ಲಿಕಾರ್ಜುನ ಖರ್ಗೆ 

ಮಹಿಳಾ ಮೀಸಲಾತಿ ಮಸೂದೆಯನ್ನು ಚರ್ಚಿಸಲು ಏಪ್ರಿಲ್ 15 ರಂದು ಎಲ್ಲಾ ವಿರೋಧ ಪಕ್ಷಗಳ ಸಭೆ ಕರೆಯಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ,...

ಗುಜರಾತ್‌| ಮುಸ್ಲಿಂ ವ್ಯಕ್ತಿಯ ಬೀದಿ ವ್ಯಾಪಾರಕ್ಕೆ ಅಡ್ಡಿಪಡಿಸಿದ ಹಿಂದುತ್ವ ಗೂಂಡಾಗಳು

ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಿಂದೂ ಬಹುಸಂಖ್ಯಾತ ಪ್ರದೇಶವೊಂದರಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ಬೀದಿ ವ್ಯಾಪಾರಿಗೆ ಬಜರಂಗದಳ ಸದಸ್ಯರು ಬೆದರಿಕೆ ಹಾಕಿ ಅಲ್ಲಿಂದ ಅಂಗಡಿ ತೆರವುಗೊಳಿಸಿದ್ದಾರೆ. ಮುಸ್ಲಿಂ ವ್ಯಾಪಾರಿಯ ಗುರುತನ್ನು ಕೇಳಿದ ಹಿಂದುತ್ವ ಗೂಂಡಾಗಳು, ನಂತರ ಅವರನ್ನು...

“ನೀವು ಆರ್‌ಎಸ್‌ಎಸ್ ಸಂಬಂಧಿತ ಕಾರ್ಯಕ್ರಮಗಳಲ್ಲಿ 4 ಬಾರಿ ಭಾಗವಹಿಸಿದ್ದೀರಿ” : ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ ಕೇಜ್ರಿವಾಲ್ ಗಂಭೀರ ವಾದ

ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ (ಏ.13) ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಆರ್‌ಎಸ್‌ಎಸ್ ಸಂಯೋಜಿತ...