Homeಸಿನಿಮಾಕ್ರೀಡೆಪ್ರೊ.ಕಬಡ್ಡಿ: ಬೆಂಗಳೂರು ವಿರುದ್ಧ ಸೇಡು ತೀರಿಸಿಕೊಂಡ ಗುಜರಾತ್ ಫಾರ್ಚೂನ್ ಜೈಂಟ್ಸ್

ಪ್ರೊ.ಕಬಡ್ಡಿ: ಬೆಂಗಳೂರು ವಿರುದ್ಧ ಸೇಡು ತೀರಿಸಿಕೊಂಡ ಗುಜರಾತ್ ಫಾರ್ಚೂನ್ ಜೈಂಟ್ಸ್

- Advertisement -
- Advertisement -

ಪ್ರೊ.ಕಬಡ್ಡಿ ಮೂರನೇ ಪಂದ್ಯದಲ್ಲಿ ಗುಜರಾತ್ ಫಾರ್ಚೂನ್ ಜೈಂಟ್ಸ್ ಆರಂಭದಿಂದಲೂ ರೈಡಿಂಗ್ ಮತ್ತು ಡಿಫೆಂಡಿಂಗ್ ಎರಡು ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುವ ಬೆಂಗಳೂರು ಬುಲ್ಸ್ ವಿರುದ್ಧ ಮೂಲಕ ಭಾರೀ ಅಂತರದಿಂದ (42-24) ಗೆಲುವು ಸಾಧಿಸಿತು. ಆ ಮೂಲಕ ಕಳೆದ ಬಾರಿ ಫೈನಲ್ ನಲ್ಲಿ ಸೋಲು ಕಾಣುವ ಮೂಲಕ ಪ್ರಶಸ್ತಿ ವಂಚಿತರಾಗಿದ್ದ ಗುಜರಾತ್ 18 ಅಂಕಗಳಿಂದ ಜಯಸಾಧಿಸಿ ಆ ಸೇಡು ತೀರಿಸಿಕೊಂಡು ಗೆಲುವಿನ ಆರಂಭ ಮಾಡಿತು.

ಇದೇ ವರ್ಷ ಜನವರಿ 5ರಂದು ನಡೆದಿದ್ದ ಪ್ರೊ.ಕಬಡ್ಡಿ ಸೀಸನ್ 6ರ ಫೈನಲ್ ನಲ್ಲಿ ಗುಜರಾತ್ ವಿರುದ್ಧ ಬೆಂಗಳೂರು ಆಕರ್ಷಕ ಜಯಭೇರಿ ಭಾರಿಸಿ ಚೊಚ್ಚಲ ಟ್ರೋಫಿ ಎತ್ತಿ ಹಿಡಿದಿತ್ತು. ಆ ಪಂದ್ಯದಲ್ಲಿ ಪವನ್ ಕುಮಾರ್ ಒಬ್ಬರೇ ಅದ್ಭುತ ಆಟವಾಡಿದ್ದರು. ಆ ಸೋಲಿನ ಸೇಡನ್ನು ಇಂದು ಗುಜರಾತ್ ತೀರಿಸಿಕೊಂಡಿತು. ಗುಜರಾತ್ ತಂಡದ ಕೋಚ್ ಅಗ್ರೆಸ್ಸಿವ್ ಆಗಿ ಸಂಭ್ರಮಿಸುತ್ತಿದ್ದರು.

ಗುಜರಾತ್ ಆರಂಭದಿಂದಲಲೂ ಮುನ್ನಡೆ ಕಾಯ್ದುಕೊಂಡಿತ್ತು. ಮೊದಲಾರ್ಧದಲ್ಲೇ ಬೆಂಗಳೂರು ತಂಡ ಎರಡು ಬಾರಿ ಆಲೌಟ್ ಆಗುವ ಮೂಲಕ ಕಳಪೆ ಪ್ರದರ್ಶನ ತೋರಿತು. ಪಂದ್ಯದ ಮೊದಲಾರ್ಧ ಮುಗಿದಾಗ ಗುಜರಾತ್ 11 (21-10) ಅಂಕಗಳ ಮುನ್ನಡೆ ಸಾಧಿಸುವ ಮೂಲಕ ಗೆಲುವಿನತ್ತ ನಡೆದಿತ್ತು.

ದ್ವಿತೀಯಾರ್ಧದಲ್ಲಿ ಸೂಪರ್ ರೈಡ್ ಮಾಡುವ ಮೂಲಕ ಪವನ್ ಕುಮಾರ್ ಕಮಾಲ್ ಮಾಡಿದರು. ಒಂದೇ ರೈಡ್ ನಲ್ಲಿ ಬೋನಸ್ ಸೇರಿ ನಾಲ್ಕು ಪಾಯಿಂಟ್ ಗಳಿಸಿ ಕಮ್ ಬ್ಯಾಕ್ ಮಾಡುವ ಆಸೆ ಹುಟ್ಟಿಸಿದರಾದರೂ ನಂತರ ಸತತ ಎರಡು ಬಾರಿ ಔಟಾದರು. ಇಂದು ಬೆಂಗಳೂರು ನಾಯಕ ರೋಹಿತ್ ಕುಮಾರ್ ನಿರೀಕ್ಷೆಗೆ ತಕ್ಕ ಆಟವಾಡಲಿಲ್ಲ.. ರೈಡಿಂಗ್ ನಲ್ಲಿ ಪದೇ ಪದೇ ವಿಫಲವಾದರು.

ಪಂದ್ಯದಲ್ಲಿ ಗುಜರಾತ್ ಪರ ಸಚಿನ್ ಕೂಡ ಗುಜರಾತ್ ಪರವಾಗಿ ಸೂಪರ್ ರೈಡ್ ಮಾಡುವ ಮೂಲಕ ಗುಜರಾತ್ ಗೆಲುವನ್ನು ಖಾತ್ರಿಗೊಳಿಸಿದರು. ಗುಜರಾತ್ ನ ಸುನೀಲ್ ಕುಮಾರ್ 6 ಟ್ಯಾಕಲ್ ಪಾಯಿಂಟ್ಸ್ ಗಳಿಸುವ ಮೂಲಕ ಉತ್ತಮ ಡೆಫೆಂಡರ್ ಎನಿಸಿದರು.

ಬೆಂಗಳೂರು ಪರ ಪವನ್ ಕುಮಾರ್ ಇಂದು ಕೇವಲ 13 ರೈಡ್ ಮಾಡಲಷ್ಟೇ ಸಾಧ್ಯವಾಯಿತು. ಅದರಲ್ಲಿ 8 ಪಾಯಿಂಟ್ ಗಳಿಸಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...