Homeಸಿನಿಮಾಕ್ರೀಡೆಪ್ರೊ.ಕಬಡ್ಡಿ: ಬೆಂಗಳೂರು ವಿರುದ್ಧ ಸೇಡು ತೀರಿಸಿಕೊಂಡ ಗುಜರಾತ್ ಫಾರ್ಚೂನ್ ಜೈಂಟ್ಸ್

ಪ್ರೊ.ಕಬಡ್ಡಿ: ಬೆಂಗಳೂರು ವಿರುದ್ಧ ಸೇಡು ತೀರಿಸಿಕೊಂಡ ಗುಜರಾತ್ ಫಾರ್ಚೂನ್ ಜೈಂಟ್ಸ್

- Advertisement -
- Advertisement -

ಪ್ರೊ.ಕಬಡ್ಡಿ ಮೂರನೇ ಪಂದ್ಯದಲ್ಲಿ ಗುಜರಾತ್ ಫಾರ್ಚೂನ್ ಜೈಂಟ್ಸ್ ಆರಂಭದಿಂದಲೂ ರೈಡಿಂಗ್ ಮತ್ತು ಡಿಫೆಂಡಿಂಗ್ ಎರಡು ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುವ ಬೆಂಗಳೂರು ಬುಲ್ಸ್ ವಿರುದ್ಧ ಮೂಲಕ ಭಾರೀ ಅಂತರದಿಂದ (42-24) ಗೆಲುವು ಸಾಧಿಸಿತು. ಆ ಮೂಲಕ ಕಳೆದ ಬಾರಿ ಫೈನಲ್ ನಲ್ಲಿ ಸೋಲು ಕಾಣುವ ಮೂಲಕ ಪ್ರಶಸ್ತಿ ವಂಚಿತರಾಗಿದ್ದ ಗುಜರಾತ್ 18 ಅಂಕಗಳಿಂದ ಜಯಸಾಧಿಸಿ ಆ ಸೇಡು ತೀರಿಸಿಕೊಂಡು ಗೆಲುವಿನ ಆರಂಭ ಮಾಡಿತು.

ಇದೇ ವರ್ಷ ಜನವರಿ 5ರಂದು ನಡೆದಿದ್ದ ಪ್ರೊ.ಕಬಡ್ಡಿ ಸೀಸನ್ 6ರ ಫೈನಲ್ ನಲ್ಲಿ ಗುಜರಾತ್ ವಿರುದ್ಧ ಬೆಂಗಳೂರು ಆಕರ್ಷಕ ಜಯಭೇರಿ ಭಾರಿಸಿ ಚೊಚ್ಚಲ ಟ್ರೋಫಿ ಎತ್ತಿ ಹಿಡಿದಿತ್ತು. ಆ ಪಂದ್ಯದಲ್ಲಿ ಪವನ್ ಕುಮಾರ್ ಒಬ್ಬರೇ ಅದ್ಭುತ ಆಟವಾಡಿದ್ದರು. ಆ ಸೋಲಿನ ಸೇಡನ್ನು ಇಂದು ಗುಜರಾತ್ ತೀರಿಸಿಕೊಂಡಿತು. ಗುಜರಾತ್ ತಂಡದ ಕೋಚ್ ಅಗ್ರೆಸ್ಸಿವ್ ಆಗಿ ಸಂಭ್ರಮಿಸುತ್ತಿದ್ದರು.

ಗುಜರಾತ್ ಆರಂಭದಿಂದಲಲೂ ಮುನ್ನಡೆ ಕಾಯ್ದುಕೊಂಡಿತ್ತು. ಮೊದಲಾರ್ಧದಲ್ಲೇ ಬೆಂಗಳೂರು ತಂಡ ಎರಡು ಬಾರಿ ಆಲೌಟ್ ಆಗುವ ಮೂಲಕ ಕಳಪೆ ಪ್ರದರ್ಶನ ತೋರಿತು. ಪಂದ್ಯದ ಮೊದಲಾರ್ಧ ಮುಗಿದಾಗ ಗುಜರಾತ್ 11 (21-10) ಅಂಕಗಳ ಮುನ್ನಡೆ ಸಾಧಿಸುವ ಮೂಲಕ ಗೆಲುವಿನತ್ತ ನಡೆದಿತ್ತು.

ದ್ವಿತೀಯಾರ್ಧದಲ್ಲಿ ಸೂಪರ್ ರೈಡ್ ಮಾಡುವ ಮೂಲಕ ಪವನ್ ಕುಮಾರ್ ಕಮಾಲ್ ಮಾಡಿದರು. ಒಂದೇ ರೈಡ್ ನಲ್ಲಿ ಬೋನಸ್ ಸೇರಿ ನಾಲ್ಕು ಪಾಯಿಂಟ್ ಗಳಿಸಿ ಕಮ್ ಬ್ಯಾಕ್ ಮಾಡುವ ಆಸೆ ಹುಟ್ಟಿಸಿದರಾದರೂ ನಂತರ ಸತತ ಎರಡು ಬಾರಿ ಔಟಾದರು. ಇಂದು ಬೆಂಗಳೂರು ನಾಯಕ ರೋಹಿತ್ ಕುಮಾರ್ ನಿರೀಕ್ಷೆಗೆ ತಕ್ಕ ಆಟವಾಡಲಿಲ್ಲ.. ರೈಡಿಂಗ್ ನಲ್ಲಿ ಪದೇ ಪದೇ ವಿಫಲವಾದರು.

ಪಂದ್ಯದಲ್ಲಿ ಗುಜರಾತ್ ಪರ ಸಚಿನ್ ಕೂಡ ಗುಜರಾತ್ ಪರವಾಗಿ ಸೂಪರ್ ರೈಡ್ ಮಾಡುವ ಮೂಲಕ ಗುಜರಾತ್ ಗೆಲುವನ್ನು ಖಾತ್ರಿಗೊಳಿಸಿದರು. ಗುಜರಾತ್ ನ ಸುನೀಲ್ ಕುಮಾರ್ 6 ಟ್ಯಾಕಲ್ ಪಾಯಿಂಟ್ಸ್ ಗಳಿಸುವ ಮೂಲಕ ಉತ್ತಮ ಡೆಫೆಂಡರ್ ಎನಿಸಿದರು.

ಬೆಂಗಳೂರು ಪರ ಪವನ್ ಕುಮಾರ್ ಇಂದು ಕೇವಲ 13 ರೈಡ್ ಮಾಡಲಷ್ಟೇ ಸಾಧ್ಯವಾಯಿತು. ಅದರಲ್ಲಿ 8 ಪಾಯಿಂಟ್ ಗಳಿಸಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...