Homeಸಿನಿಮಾಕ್ರೀಡೆಪ್ರೊ.ಕಬಡ್ಡಿ: ಬೆಂಗಳೂರು ವಿರುದ್ಧ ಸೇಡು ತೀರಿಸಿಕೊಂಡ ಗುಜರಾತ್ ಫಾರ್ಚೂನ್ ಜೈಂಟ್ಸ್

ಪ್ರೊ.ಕಬಡ್ಡಿ: ಬೆಂಗಳೂರು ವಿರುದ್ಧ ಸೇಡು ತೀರಿಸಿಕೊಂಡ ಗುಜರಾತ್ ಫಾರ್ಚೂನ್ ಜೈಂಟ್ಸ್

- Advertisement -
- Advertisement -

ಪ್ರೊ.ಕಬಡ್ಡಿ ಮೂರನೇ ಪಂದ್ಯದಲ್ಲಿ ಗುಜರಾತ್ ಫಾರ್ಚೂನ್ ಜೈಂಟ್ಸ್ ಆರಂಭದಿಂದಲೂ ರೈಡಿಂಗ್ ಮತ್ತು ಡಿಫೆಂಡಿಂಗ್ ಎರಡು ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುವ ಬೆಂಗಳೂರು ಬುಲ್ಸ್ ವಿರುದ್ಧ ಮೂಲಕ ಭಾರೀ ಅಂತರದಿಂದ (42-24) ಗೆಲುವು ಸಾಧಿಸಿತು. ಆ ಮೂಲಕ ಕಳೆದ ಬಾರಿ ಫೈನಲ್ ನಲ್ಲಿ ಸೋಲು ಕಾಣುವ ಮೂಲಕ ಪ್ರಶಸ್ತಿ ವಂಚಿತರಾಗಿದ್ದ ಗುಜರಾತ್ 18 ಅಂಕಗಳಿಂದ ಜಯಸಾಧಿಸಿ ಆ ಸೇಡು ತೀರಿಸಿಕೊಂಡು ಗೆಲುವಿನ ಆರಂಭ ಮಾಡಿತು.

ಇದೇ ವರ್ಷ ಜನವರಿ 5ರಂದು ನಡೆದಿದ್ದ ಪ್ರೊ.ಕಬಡ್ಡಿ ಸೀಸನ್ 6ರ ಫೈನಲ್ ನಲ್ಲಿ ಗುಜರಾತ್ ವಿರುದ್ಧ ಬೆಂಗಳೂರು ಆಕರ್ಷಕ ಜಯಭೇರಿ ಭಾರಿಸಿ ಚೊಚ್ಚಲ ಟ್ರೋಫಿ ಎತ್ತಿ ಹಿಡಿದಿತ್ತು. ಆ ಪಂದ್ಯದಲ್ಲಿ ಪವನ್ ಕುಮಾರ್ ಒಬ್ಬರೇ ಅದ್ಭುತ ಆಟವಾಡಿದ್ದರು. ಆ ಸೋಲಿನ ಸೇಡನ್ನು ಇಂದು ಗುಜರಾತ್ ತೀರಿಸಿಕೊಂಡಿತು. ಗುಜರಾತ್ ತಂಡದ ಕೋಚ್ ಅಗ್ರೆಸ್ಸಿವ್ ಆಗಿ ಸಂಭ್ರಮಿಸುತ್ತಿದ್ದರು.

ಗುಜರಾತ್ ಆರಂಭದಿಂದಲಲೂ ಮುನ್ನಡೆ ಕಾಯ್ದುಕೊಂಡಿತ್ತು. ಮೊದಲಾರ್ಧದಲ್ಲೇ ಬೆಂಗಳೂರು ತಂಡ ಎರಡು ಬಾರಿ ಆಲೌಟ್ ಆಗುವ ಮೂಲಕ ಕಳಪೆ ಪ್ರದರ್ಶನ ತೋರಿತು. ಪಂದ್ಯದ ಮೊದಲಾರ್ಧ ಮುಗಿದಾಗ ಗುಜರಾತ್ 11 (21-10) ಅಂಕಗಳ ಮುನ್ನಡೆ ಸಾಧಿಸುವ ಮೂಲಕ ಗೆಲುವಿನತ್ತ ನಡೆದಿತ್ತು.

ದ್ವಿತೀಯಾರ್ಧದಲ್ಲಿ ಸೂಪರ್ ರೈಡ್ ಮಾಡುವ ಮೂಲಕ ಪವನ್ ಕುಮಾರ್ ಕಮಾಲ್ ಮಾಡಿದರು. ಒಂದೇ ರೈಡ್ ನಲ್ಲಿ ಬೋನಸ್ ಸೇರಿ ನಾಲ್ಕು ಪಾಯಿಂಟ್ ಗಳಿಸಿ ಕಮ್ ಬ್ಯಾಕ್ ಮಾಡುವ ಆಸೆ ಹುಟ್ಟಿಸಿದರಾದರೂ ನಂತರ ಸತತ ಎರಡು ಬಾರಿ ಔಟಾದರು. ಇಂದು ಬೆಂಗಳೂರು ನಾಯಕ ರೋಹಿತ್ ಕುಮಾರ್ ನಿರೀಕ್ಷೆಗೆ ತಕ್ಕ ಆಟವಾಡಲಿಲ್ಲ.. ರೈಡಿಂಗ್ ನಲ್ಲಿ ಪದೇ ಪದೇ ವಿಫಲವಾದರು.

ಪಂದ್ಯದಲ್ಲಿ ಗುಜರಾತ್ ಪರ ಸಚಿನ್ ಕೂಡ ಗುಜರಾತ್ ಪರವಾಗಿ ಸೂಪರ್ ರೈಡ್ ಮಾಡುವ ಮೂಲಕ ಗುಜರಾತ್ ಗೆಲುವನ್ನು ಖಾತ್ರಿಗೊಳಿಸಿದರು. ಗುಜರಾತ್ ನ ಸುನೀಲ್ ಕುಮಾರ್ 6 ಟ್ಯಾಕಲ್ ಪಾಯಿಂಟ್ಸ್ ಗಳಿಸುವ ಮೂಲಕ ಉತ್ತಮ ಡೆಫೆಂಡರ್ ಎನಿಸಿದರು.

ಬೆಂಗಳೂರು ಪರ ಪವನ್ ಕುಮಾರ್ ಇಂದು ಕೇವಲ 13 ರೈಡ್ ಮಾಡಲಷ್ಟೇ ಸಾಧ್ಯವಾಯಿತು. ಅದರಲ್ಲಿ 8 ಪಾಯಿಂಟ್ ಗಳಿಸಿದರು.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ: ಸಚಿವ ರುದ್ರಪ್ಪ ಲಮಾಣಿಗೆ 3 ಕೋಟಿ ರೂ. ದಂಡ

ಕಲ್ಲು ಗಣಿಗಾರಿಕೆ ನಡೆಸುವ ವೇಳೆ ಸಾಲು ಸಾಲು ನಿಯಮಗಳನ್ನು ಉಲ್ಲಂಘಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶ್ರೀ ರುದ್ರಪ್ಪ ಮಾನಪ್ಪ ಲಮಾಣಿ ಅವರಿಗೆ ಗಣಿ ಮತ್ತು...

ಪಶ್ಚಿಮ ಬಂಗಾಳ SIR: 38 ಲಕ್ಷ ಮೇಲ್ಮನವಿಗಳಲ್ಲಿ ವಿಲೇವಾರಿಯಾಗಿದ್ದು ಕೇವಲ 1 ಲಕ್ಷ

ಪಶ್ಚಿಮ ಬಂಗಾಳದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (SIR) ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಬೃಹತ್ ಪ್ರಮಾಣದ ಮೇಲ್ಮನವಿಗಳ ಪೈಕಿ ವಿಲೇವಾರಿಯಾದ ಅರ್ಜಿಗಳ ಸಂಖ್ಯೆ ತೀರಾ ಕನಿಷ್ಠ ಮಟ್ಟದಲ್ಲಿದೆ ಎಂಬ ಆಘಾತಕಾರಿ ಮಾಹಿತಿ...