Homeಮುಖಪುಟಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

ಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

- Advertisement -
- Advertisement -

ಮೂವರು ದುಷ್ಕರ್ಮಿಗಳು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್‌ನ ಸೂರತ್ ಜಿಲ್ಲೆಯ ಮಂಗ್ರೋಲ್ ತಾಲೂಕಿನ ಬೋರ್ಸರನ್ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಕಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಓಡಿಸಿ ಮೂವರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಒಂದು ವಾರದಲ್ಲಿ ಇಂತಹ ಎರಡನೇ ಘಟನೆ ನಡೆದಿದ್ದು, ಇದೆ ರೀತಿಯ ಘಟನೆ ಇತ್ತೀಚೆಗೆ ವಡೋದರಾದಲ್ಲಿ ಕೂಡಾ ನಡೆದಿತ್ತು.ಗುಜರಾತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತೆಯ ಸ್ನೇಹಿತನ ಕೂಗಾಟಕ್ಕೆ ಎಚ್ಚರಗೊಂಡ ಗ್ರಾಮಸ್ಥರು ಅರೆಬೆತ್ತಲೆ ಮತ್ತು ಗಾಯಗೊಂಡ ಅಪ್ರಾಪ್ತೆ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾಳಿಕೋರರು ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಮೊಬೈಲ್ ಫೋನ್‌ಗಳನ್ನು ಕದ್ದಿದ್ದಾರೆ. ಪೊಲೀಸರು ಹೇಯ ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳನ್ನು ಗುರುತಿಸಿದ್ದಾರೆ ಎಂದು ವರದಿಯಾಗಿದೆ.

ಕಿಮ್‌ನಲ್ಲಿರುವ ತನ್ನ ಸಹಪಾಠಿ ಸ್ನೇಹಿತನನ್ನು ಭೇಟಿಯಾಗಲು ಹುಡುಗಿ ಬಂದಿದ್ದರು ಎಂದು ಸಂತ್ರಸ್ತೆಯ ಕುಟುಂಬ ಹೇಳಿದೆ. ರಾತ್ರಿ 10:30 ರ ಸುಮಾರಿಗೆ, ಇತರ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ ನಂತರ, ಅವರು ಇಂಧನ ತುಂಬಿಸಲು ಬಿಗ್ ಬೊರ್ಸಾರಾ ಬಳಿಯ ಹೆದ್ದಾರಿ ಪೆಟ್ರೋಲ್ ಪಂಪ್‌ಗೆ ತೆರಳಿದ್ದರು. ಇದರ ನಂತರ ಅವರು ಸ್ವಲ್ಪ ಸಮಯ ರಸ್ತೆಯ ಪಕ್ಕದ ಹೊಲದಲ್ಲಿ ಕುಳಿತಿದ್ದಾಗ, ದಾಳಿಕೋರರು ಆಗಮಿಸಿ ಅಪರಾಧವನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರಿಂದ ಇಬ್ಬರು ಯೋಧರ ಅಪಹರಣ, ಒಬ್ಬರ ಮೃತದೇಹ ಮತ್ತೆ

ಸೂರತ್ ಗ್ರಾಮೀಣ ಪೊಲೀಸ್ ಅಧೀಕ್ಷಕ (ಗ್ರಾಮೀಣ) ಹಿತೇಶ್ ಜೋಯ್ಸರ್ ಮಾತನಾಡಿ, ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಕೊಸಾಂಬಾ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗ್ರೋಲ್ ತಾಲೂಕಿನ ಮೋಟಾ ಬೋರಸರ ಗ್ರಾಮದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಹೇಳಿದ್ದಾರೆ.

“ಬಾಲಕಿಯು ತನ್ನ ಕೋಚಿಂಗ್ ಕ್ಲಾಸ್‌ಗೆ ಹಾಜರಾದ ನಂತರ ತನ್ನ ಸ್ನೇಹಿತರನ್ನು ಭೇಟಿ ಮಾಡಲು ಕಿಮ್‌ಗೆ ಹೋಗಿದ್ದರು. ರಾತ್ರಿ 10.30ರ ಸುಮಾರಿಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ್ದಾಳೆ. ಅವಳು ಮತ್ತು ಅವಳ ಸ್ನೇಹಿತ ಮೋಟಾ ಬೋರ್ಸಾರಾ ಗ್ರಾಮದ ಬಳಿ ಹೆದ್ದಾರಿಯ ಉದ್ದಕ್ಕೂ ಪೆಟ್ರೋಲ್ ಪಂಪ್‌ಗೆ ಹೋಗುವ ದಾರಿಯಲ್ಲಿ ನಿರ್ಜನ ಸ್ಥಳದಲ್ಲಿ ಕುಳಿತಿದ್ದಾಗ ಮೂವರು ದುಷ್ಕರ್ಮಿಗಳು ಅವರ ಬಳಿಗೆ ಬಂದಿದ್ದರು ಎಂದು ಎಸ್‌ಪಿ ಹೇಳಿದ್ದಾರೆ.

“ಮೂವರು ಬಾಲಕಿಯ ಮೇಲೆ ದೌರ್ಜನ್ಯ ನಡೆಸುತ್ತಿದ್ದಾಗ ಆಕೆಯ ಸ್ನೇಹಿತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದುಷ್ಕರ್ಮಿಗಳು ಬಾಲಕಿ ಮತ್ತು ಅವರ ಸ್ನೇಹಿತನ ಮೊಬೈಲ್ ಫೋನ್‌ಗಳೊಂದಿಗೆ ಸ್ಥಳದಿಂದ ಪರಾರಿಯಾಗುವ ಮೊದಲು ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

“ಅಪರಾಧದಲ್ಲಿ ಭಾಗಿಯಾಗಿದ್ದ ಒಂದು ಬೈಕ್‌ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಶಂಕಿತರನ್ನು ಗುರುತಿಸಲಾಗಿದೆ. ಅವರು ಬಂಧಿಸಲ್ಪಟ್ಟ ನಂತರ, ನಾವು ಮೂರನೇ ಆರೋಪಿಯನ್ನೂ ಪತ್ತೆಹಚ್ಚುತ್ತೇವೆ” ಎಂದು ಅವರು ಹೇಳಿದ್ದಾರೆ.ಗುಜರಾತ್‌

ಹುಡುಗಿಯ ಸ್ನೇಹಿತ ಸ್ಥಳೀಯರನ್ನು ಎಚ್ಚರಿಸಿದ್ದು, ಅವರು ಅರ್ಧ ಗಂಟೆಯೊಳಗೆ ಘಟನಾ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. “ಅದರ ನಂತರ ಪೊಲೀಸರಿಗೂ ಸೂಚನೆ ನೀಡಲಾಗಿದ್ದು, ಅವರು ಕೂಡಾ ಸ್ವಲ್ಪ ಸಮಯದಲ್ಲೆ ಗ್ರಾಮಸ್ಥರ ಪ್ರಯತ್ನಗಳೊಂದಿಗೆ ಸೇರಿಕೊಂಡರು” ಎಂದು ಅವರು ಹೇಳಿದ್ದಾರೆ.

ಕೊಸಾಂಬ ಪೊಲೀಸರು BNS ಕಾಯಿದೆಯ ಸೆಕ್ಷನ್ 70(2), 115(2), 54, ಮತ್ತು 309(4) ಸೇರಿದಂತೆ ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಿದ್ದಾರೆ. ಪ್ರಕರಣವು ದರೋಡೆಯನ್ನು ಸಹ ಒಳಗೊಂಡಿದ್ದು ಸೆಕ್ಷನ್ 352 ಮತ್ತು 351(3) ಸೆಕ್ಷನ್ ಕೂಡಾ ದಾಖಲಿಸಲಾಗಿದೆ. ಹೆಚ್ಚುವರಿಯಾಗಿ, ಪೋಕ್ಸೋ ಕಾಯ್ದೆಯ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಅಕ್ಟೋಬರ್ 4 ರಂದು ವಡೋದರದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ ಮೂವರು ದುಷ್ಕರ್ಮಿಗಳು ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರು.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...