Homeಮುಖಪುಟಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

ಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

- Advertisement -
- Advertisement -

ಮೂವರು ದುಷ್ಕರ್ಮಿಗಳು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್‌ನ ಸೂರತ್ ಜಿಲ್ಲೆಯ ಮಂಗ್ರೋಲ್ ತಾಲೂಕಿನ ಬೋರ್ಸರನ್ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಕಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಓಡಿಸಿ ಮೂವರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಒಂದು ವಾರದಲ್ಲಿ ಇಂತಹ ಎರಡನೇ ಘಟನೆ ನಡೆದಿದ್ದು, ಇದೆ ರೀತಿಯ ಘಟನೆ ಇತ್ತೀಚೆಗೆ ವಡೋದರಾದಲ್ಲಿ ಕೂಡಾ ನಡೆದಿತ್ತು.ಗುಜರಾತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತೆಯ ಸ್ನೇಹಿತನ ಕೂಗಾಟಕ್ಕೆ ಎಚ್ಚರಗೊಂಡ ಗ್ರಾಮಸ್ಥರು ಅರೆಬೆತ್ತಲೆ ಮತ್ತು ಗಾಯಗೊಂಡ ಅಪ್ರಾಪ್ತೆ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾಳಿಕೋರರು ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಮೊಬೈಲ್ ಫೋನ್‌ಗಳನ್ನು ಕದ್ದಿದ್ದಾರೆ. ಪೊಲೀಸರು ಹೇಯ ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳನ್ನು ಗುರುತಿಸಿದ್ದಾರೆ ಎಂದು ವರದಿಯಾಗಿದೆ.

ಕಿಮ್‌ನಲ್ಲಿರುವ ತನ್ನ ಸಹಪಾಠಿ ಸ್ನೇಹಿತನನ್ನು ಭೇಟಿಯಾಗಲು ಹುಡುಗಿ ಬಂದಿದ್ದರು ಎಂದು ಸಂತ್ರಸ್ತೆಯ ಕುಟುಂಬ ಹೇಳಿದೆ. ರಾತ್ರಿ 10:30 ರ ಸುಮಾರಿಗೆ, ಇತರ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ ನಂತರ, ಅವರು ಇಂಧನ ತುಂಬಿಸಲು ಬಿಗ್ ಬೊರ್ಸಾರಾ ಬಳಿಯ ಹೆದ್ದಾರಿ ಪೆಟ್ರೋಲ್ ಪಂಪ್‌ಗೆ ತೆರಳಿದ್ದರು. ಇದರ ನಂತರ ಅವರು ಸ್ವಲ್ಪ ಸಮಯ ರಸ್ತೆಯ ಪಕ್ಕದ ಹೊಲದಲ್ಲಿ ಕುಳಿತಿದ್ದಾಗ, ದಾಳಿಕೋರರು ಆಗಮಿಸಿ ಅಪರಾಧವನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರಿಂದ ಇಬ್ಬರು ಯೋಧರ ಅಪಹರಣ, ಒಬ್ಬರ ಮೃತದೇಹ ಮತ್ತೆ

ಸೂರತ್ ಗ್ರಾಮೀಣ ಪೊಲೀಸ್ ಅಧೀಕ್ಷಕ (ಗ್ರಾಮೀಣ) ಹಿತೇಶ್ ಜೋಯ್ಸರ್ ಮಾತನಾಡಿ, ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಕೊಸಾಂಬಾ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗ್ರೋಲ್ ತಾಲೂಕಿನ ಮೋಟಾ ಬೋರಸರ ಗ್ರಾಮದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಹೇಳಿದ್ದಾರೆ.

“ಬಾಲಕಿಯು ತನ್ನ ಕೋಚಿಂಗ್ ಕ್ಲಾಸ್‌ಗೆ ಹಾಜರಾದ ನಂತರ ತನ್ನ ಸ್ನೇಹಿತರನ್ನು ಭೇಟಿ ಮಾಡಲು ಕಿಮ್‌ಗೆ ಹೋಗಿದ್ದರು. ರಾತ್ರಿ 10.30ರ ಸುಮಾರಿಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ್ದಾಳೆ. ಅವಳು ಮತ್ತು ಅವಳ ಸ್ನೇಹಿತ ಮೋಟಾ ಬೋರ್ಸಾರಾ ಗ್ರಾಮದ ಬಳಿ ಹೆದ್ದಾರಿಯ ಉದ್ದಕ್ಕೂ ಪೆಟ್ರೋಲ್ ಪಂಪ್‌ಗೆ ಹೋಗುವ ದಾರಿಯಲ್ಲಿ ನಿರ್ಜನ ಸ್ಥಳದಲ್ಲಿ ಕುಳಿತಿದ್ದಾಗ ಮೂವರು ದುಷ್ಕರ್ಮಿಗಳು ಅವರ ಬಳಿಗೆ ಬಂದಿದ್ದರು ಎಂದು ಎಸ್‌ಪಿ ಹೇಳಿದ್ದಾರೆ.

“ಮೂವರು ಬಾಲಕಿಯ ಮೇಲೆ ದೌರ್ಜನ್ಯ ನಡೆಸುತ್ತಿದ್ದಾಗ ಆಕೆಯ ಸ್ನೇಹಿತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದುಷ್ಕರ್ಮಿಗಳು ಬಾಲಕಿ ಮತ್ತು ಅವರ ಸ್ನೇಹಿತನ ಮೊಬೈಲ್ ಫೋನ್‌ಗಳೊಂದಿಗೆ ಸ್ಥಳದಿಂದ ಪರಾರಿಯಾಗುವ ಮೊದಲು ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

“ಅಪರಾಧದಲ್ಲಿ ಭಾಗಿಯಾಗಿದ್ದ ಒಂದು ಬೈಕ್‌ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಶಂಕಿತರನ್ನು ಗುರುತಿಸಲಾಗಿದೆ. ಅವರು ಬಂಧಿಸಲ್ಪಟ್ಟ ನಂತರ, ನಾವು ಮೂರನೇ ಆರೋಪಿಯನ್ನೂ ಪತ್ತೆಹಚ್ಚುತ್ತೇವೆ” ಎಂದು ಅವರು ಹೇಳಿದ್ದಾರೆ.ಗುಜರಾತ್‌

ಹುಡುಗಿಯ ಸ್ನೇಹಿತ ಸ್ಥಳೀಯರನ್ನು ಎಚ್ಚರಿಸಿದ್ದು, ಅವರು ಅರ್ಧ ಗಂಟೆಯೊಳಗೆ ಘಟನಾ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. “ಅದರ ನಂತರ ಪೊಲೀಸರಿಗೂ ಸೂಚನೆ ನೀಡಲಾಗಿದ್ದು, ಅವರು ಕೂಡಾ ಸ್ವಲ್ಪ ಸಮಯದಲ್ಲೆ ಗ್ರಾಮಸ್ಥರ ಪ್ರಯತ್ನಗಳೊಂದಿಗೆ ಸೇರಿಕೊಂಡರು” ಎಂದು ಅವರು ಹೇಳಿದ್ದಾರೆ.

ಕೊಸಾಂಬ ಪೊಲೀಸರು BNS ಕಾಯಿದೆಯ ಸೆಕ್ಷನ್ 70(2), 115(2), 54, ಮತ್ತು 309(4) ಸೇರಿದಂತೆ ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಿದ್ದಾರೆ. ಪ್ರಕರಣವು ದರೋಡೆಯನ್ನು ಸಹ ಒಳಗೊಂಡಿದ್ದು ಸೆಕ್ಷನ್ 352 ಮತ್ತು 351(3) ಸೆಕ್ಷನ್ ಕೂಡಾ ದಾಖಲಿಸಲಾಗಿದೆ. ಹೆಚ್ಚುವರಿಯಾಗಿ, ಪೋಕ್ಸೋ ಕಾಯ್ದೆಯ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಅಕ್ಟೋಬರ್ 4 ರಂದು ವಡೋದರದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ ಮೂವರು ದುಷ್ಕರ್ಮಿಗಳು ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರು.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....