Homeಮುಖಪುಟಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

ಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

- Advertisement -
- Advertisement -

ಮೂವರು ದುಷ್ಕರ್ಮಿಗಳು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್‌ನ ಸೂರತ್ ಜಿಲ್ಲೆಯ ಮಂಗ್ರೋಲ್ ತಾಲೂಕಿನ ಬೋರ್ಸರನ್ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಕಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಓಡಿಸಿ ಮೂವರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಒಂದು ವಾರದಲ್ಲಿ ಇಂತಹ ಎರಡನೇ ಘಟನೆ ನಡೆದಿದ್ದು, ಇದೆ ರೀತಿಯ ಘಟನೆ ಇತ್ತೀಚೆಗೆ ವಡೋದರಾದಲ್ಲಿ ಕೂಡಾ ನಡೆದಿತ್ತು.ಗುಜರಾತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತೆಯ ಸ್ನೇಹಿತನ ಕೂಗಾಟಕ್ಕೆ ಎಚ್ಚರಗೊಂಡ ಗ್ರಾಮಸ್ಥರು ಅರೆಬೆತ್ತಲೆ ಮತ್ತು ಗಾಯಗೊಂಡ ಅಪ್ರಾಪ್ತೆ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾಳಿಕೋರರು ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಮೊಬೈಲ್ ಫೋನ್‌ಗಳನ್ನು ಕದ್ದಿದ್ದಾರೆ. ಪೊಲೀಸರು ಹೇಯ ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳನ್ನು ಗುರುತಿಸಿದ್ದಾರೆ ಎಂದು ವರದಿಯಾಗಿದೆ.

ಕಿಮ್‌ನಲ್ಲಿರುವ ತನ್ನ ಸಹಪಾಠಿ ಸ್ನೇಹಿತನನ್ನು ಭೇಟಿಯಾಗಲು ಹುಡುಗಿ ಬಂದಿದ್ದರು ಎಂದು ಸಂತ್ರಸ್ತೆಯ ಕುಟುಂಬ ಹೇಳಿದೆ. ರಾತ್ರಿ 10:30 ರ ಸುಮಾರಿಗೆ, ಇತರ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ ನಂತರ, ಅವರು ಇಂಧನ ತುಂಬಿಸಲು ಬಿಗ್ ಬೊರ್ಸಾರಾ ಬಳಿಯ ಹೆದ್ದಾರಿ ಪೆಟ್ರೋಲ್ ಪಂಪ್‌ಗೆ ತೆರಳಿದ್ದರು. ಇದರ ನಂತರ ಅವರು ಸ್ವಲ್ಪ ಸಮಯ ರಸ್ತೆಯ ಪಕ್ಕದ ಹೊಲದಲ್ಲಿ ಕುಳಿತಿದ್ದಾಗ, ದಾಳಿಕೋರರು ಆಗಮಿಸಿ ಅಪರಾಧವನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರಿಂದ ಇಬ್ಬರು ಯೋಧರ ಅಪಹರಣ, ಒಬ್ಬರ ಮೃತದೇಹ ಮತ್ತೆ

ಸೂರತ್ ಗ್ರಾಮೀಣ ಪೊಲೀಸ್ ಅಧೀಕ್ಷಕ (ಗ್ರಾಮೀಣ) ಹಿತೇಶ್ ಜೋಯ್ಸರ್ ಮಾತನಾಡಿ, ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಕೊಸಾಂಬಾ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗ್ರೋಲ್ ತಾಲೂಕಿನ ಮೋಟಾ ಬೋರಸರ ಗ್ರಾಮದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಹೇಳಿದ್ದಾರೆ.

“ಬಾಲಕಿಯು ತನ್ನ ಕೋಚಿಂಗ್ ಕ್ಲಾಸ್‌ಗೆ ಹಾಜರಾದ ನಂತರ ತನ್ನ ಸ್ನೇಹಿತರನ್ನು ಭೇಟಿ ಮಾಡಲು ಕಿಮ್‌ಗೆ ಹೋಗಿದ್ದರು. ರಾತ್ರಿ 10.30ರ ಸುಮಾರಿಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ್ದಾಳೆ. ಅವಳು ಮತ್ತು ಅವಳ ಸ್ನೇಹಿತ ಮೋಟಾ ಬೋರ್ಸಾರಾ ಗ್ರಾಮದ ಬಳಿ ಹೆದ್ದಾರಿಯ ಉದ್ದಕ್ಕೂ ಪೆಟ್ರೋಲ್ ಪಂಪ್‌ಗೆ ಹೋಗುವ ದಾರಿಯಲ್ಲಿ ನಿರ್ಜನ ಸ್ಥಳದಲ್ಲಿ ಕುಳಿತಿದ್ದಾಗ ಮೂವರು ದುಷ್ಕರ್ಮಿಗಳು ಅವರ ಬಳಿಗೆ ಬಂದಿದ್ದರು ಎಂದು ಎಸ್‌ಪಿ ಹೇಳಿದ್ದಾರೆ.

“ಮೂವರು ಬಾಲಕಿಯ ಮೇಲೆ ದೌರ್ಜನ್ಯ ನಡೆಸುತ್ತಿದ್ದಾಗ ಆಕೆಯ ಸ್ನೇಹಿತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದುಷ್ಕರ್ಮಿಗಳು ಬಾಲಕಿ ಮತ್ತು ಅವರ ಸ್ನೇಹಿತನ ಮೊಬೈಲ್ ಫೋನ್‌ಗಳೊಂದಿಗೆ ಸ್ಥಳದಿಂದ ಪರಾರಿಯಾಗುವ ಮೊದಲು ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

“ಅಪರಾಧದಲ್ಲಿ ಭಾಗಿಯಾಗಿದ್ದ ಒಂದು ಬೈಕ್‌ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಶಂಕಿತರನ್ನು ಗುರುತಿಸಲಾಗಿದೆ. ಅವರು ಬಂಧಿಸಲ್ಪಟ್ಟ ನಂತರ, ನಾವು ಮೂರನೇ ಆರೋಪಿಯನ್ನೂ ಪತ್ತೆಹಚ್ಚುತ್ತೇವೆ” ಎಂದು ಅವರು ಹೇಳಿದ್ದಾರೆ.ಗುಜರಾತ್‌

ಹುಡುಗಿಯ ಸ್ನೇಹಿತ ಸ್ಥಳೀಯರನ್ನು ಎಚ್ಚರಿಸಿದ್ದು, ಅವರು ಅರ್ಧ ಗಂಟೆಯೊಳಗೆ ಘಟನಾ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. “ಅದರ ನಂತರ ಪೊಲೀಸರಿಗೂ ಸೂಚನೆ ನೀಡಲಾಗಿದ್ದು, ಅವರು ಕೂಡಾ ಸ್ವಲ್ಪ ಸಮಯದಲ್ಲೆ ಗ್ರಾಮಸ್ಥರ ಪ್ರಯತ್ನಗಳೊಂದಿಗೆ ಸೇರಿಕೊಂಡರು” ಎಂದು ಅವರು ಹೇಳಿದ್ದಾರೆ.

ಕೊಸಾಂಬ ಪೊಲೀಸರು BNS ಕಾಯಿದೆಯ ಸೆಕ್ಷನ್ 70(2), 115(2), 54, ಮತ್ತು 309(4) ಸೇರಿದಂತೆ ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಿದ್ದಾರೆ. ಪ್ರಕರಣವು ದರೋಡೆಯನ್ನು ಸಹ ಒಳಗೊಂಡಿದ್ದು ಸೆಕ್ಷನ್ 352 ಮತ್ತು 351(3) ಸೆಕ್ಷನ್ ಕೂಡಾ ದಾಖಲಿಸಲಾಗಿದೆ. ಹೆಚ್ಚುವರಿಯಾಗಿ, ಪೋಕ್ಸೋ ಕಾಯ್ದೆಯ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಅಕ್ಟೋಬರ್ 4 ರಂದು ವಡೋದರದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ ಮೂವರು ದುಷ್ಕರ್ಮಿಗಳು ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರು.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...