Homeಮುಖಪುಟಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

ಗುಜರಾತ್‌ | ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; ವಾರದಲ್ಲಿ 2ನೇ ಘಟನೆ

- Advertisement -
- Advertisement -

ಮೂವರು ದುಷ್ಕರ್ಮಿಗಳು 17 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಗುಜರಾತ್‌ನ ಸೂರತ್ ಜಿಲ್ಲೆಯ ಮಂಗ್ರೋಲ್ ತಾಲೂಕಿನ ಬೋರ್ಸರನ್ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಾಲಕಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಓಡಿಸಿ ಮೂವರು ಆರೋಪಿಗಳು ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಒಂದು ವಾರದಲ್ಲಿ ಇಂತಹ ಎರಡನೇ ಘಟನೆ ನಡೆದಿದ್ದು, ಇದೆ ರೀತಿಯ ಘಟನೆ ಇತ್ತೀಚೆಗೆ ವಡೋದರಾದಲ್ಲಿ ಕೂಡಾ ನಡೆದಿತ್ತು.ಗುಜರಾತ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸಂತ್ರಸ್ತೆಯ ಸ್ನೇಹಿತನ ಕೂಗಾಟಕ್ಕೆ ಎಚ್ಚರಗೊಂಡ ಗ್ರಾಮಸ್ಥರು ಅರೆಬೆತ್ತಲೆ ಮತ್ತು ಗಾಯಗೊಂಡ ಅಪ್ರಾಪ್ತೆ ಬಾಲಕಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ದಾಳಿಕೋರರು ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತನ ಮೊಬೈಲ್ ಫೋನ್‌ಗಳನ್ನು ಕದ್ದಿದ್ದಾರೆ. ಪೊಲೀಸರು ಹೇಯ ಕೃತ್ಯದಲ್ಲಿ ಭಾಗಿಯಾಗಿರುವ ಮೂವರು ಆರೋಪಿಗಳನ್ನು ಗುರುತಿಸಿದ್ದಾರೆ ಎಂದು ವರದಿಯಾಗಿದೆ.

ಕಿಮ್‌ನಲ್ಲಿರುವ ತನ್ನ ಸಹಪಾಠಿ ಸ್ನೇಹಿತನನ್ನು ಭೇಟಿಯಾಗಲು ಹುಡುಗಿ ಬಂದಿದ್ದರು ಎಂದು ಸಂತ್ರಸ್ತೆಯ ಕುಟುಂಬ ಹೇಳಿದೆ. ರಾತ್ರಿ 10:30 ರ ಸುಮಾರಿಗೆ, ಇತರ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ ನಂತರ, ಅವರು ಇಂಧನ ತುಂಬಿಸಲು ಬಿಗ್ ಬೊರ್ಸಾರಾ ಬಳಿಯ ಹೆದ್ದಾರಿ ಪೆಟ್ರೋಲ್ ಪಂಪ್‌ಗೆ ತೆರಳಿದ್ದರು. ಇದರ ನಂತರ ಅವರು ಸ್ವಲ್ಪ ಸಮಯ ರಸ್ತೆಯ ಪಕ್ಕದ ಹೊಲದಲ್ಲಿ ಕುಳಿತಿದ್ದಾಗ, ದಾಳಿಕೋರರು ಆಗಮಿಸಿ ಅಪರಾಧವನ್ನು ನಡೆಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಜಮ್ಮು ಮತ್ತು ಕಾಶ್ಮೀರ: ಭಯೋತ್ಪಾದಕರಿಂದ ಇಬ್ಬರು ಯೋಧರ ಅಪಹರಣ, ಒಬ್ಬರ ಮೃತದೇಹ ಮತ್ತೆ

ಸೂರತ್ ಗ್ರಾಮೀಣ ಪೊಲೀಸ್ ಅಧೀಕ್ಷಕ (ಗ್ರಾಮೀಣ) ಹಿತೇಶ್ ಜೋಯ್ಸರ್ ಮಾತನಾಡಿ, ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಕೊಸಾಂಬಾ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗ್ರೋಲ್ ತಾಲೂಕಿನ ಮೋಟಾ ಬೋರಸರ ಗ್ರಾಮದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಹೇಳಿದ್ದಾರೆ.

“ಬಾಲಕಿಯು ತನ್ನ ಕೋಚಿಂಗ್ ಕ್ಲಾಸ್‌ಗೆ ಹಾಜರಾದ ನಂತರ ತನ್ನ ಸ್ನೇಹಿತರನ್ನು ಭೇಟಿ ಮಾಡಲು ಕಿಮ್‌ಗೆ ಹೋಗಿದ್ದರು. ರಾತ್ರಿ 10.30ರ ಸುಮಾರಿಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಐಸ್ ಕ್ರೀಮ್ ಸೇವಿಸಿದ್ದಾಳೆ. ಅವಳು ಮತ್ತು ಅವಳ ಸ್ನೇಹಿತ ಮೋಟಾ ಬೋರ್ಸಾರಾ ಗ್ರಾಮದ ಬಳಿ ಹೆದ್ದಾರಿಯ ಉದ್ದಕ್ಕೂ ಪೆಟ್ರೋಲ್ ಪಂಪ್‌ಗೆ ಹೋಗುವ ದಾರಿಯಲ್ಲಿ ನಿರ್ಜನ ಸ್ಥಳದಲ್ಲಿ ಕುಳಿತಿದ್ದಾಗ ಮೂವರು ದುಷ್ಕರ್ಮಿಗಳು ಅವರ ಬಳಿಗೆ ಬಂದಿದ್ದರು ಎಂದು ಎಸ್‌ಪಿ ಹೇಳಿದ್ದಾರೆ.

“ಮೂವರು ಬಾಲಕಿಯ ಮೇಲೆ ದೌರ್ಜನ್ಯ ನಡೆಸುತ್ತಿದ್ದಾಗ ಆಕೆಯ ಸ್ನೇಹಿತ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ದುಷ್ಕರ್ಮಿಗಳು ಬಾಲಕಿ ಮತ್ತು ಅವರ ಸ್ನೇಹಿತನ ಮೊಬೈಲ್ ಫೋನ್‌ಗಳೊಂದಿಗೆ ಸ್ಥಳದಿಂದ ಪರಾರಿಯಾಗುವ ಮೊದಲು ಬಾಲಕಿಯನ್ನು ಅತ್ಯಾಚಾರ ಮಾಡಿದ್ದಾರೆ” ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ರಾಯ್‌ ವಿರುದ್ಧ 11 ಸಾಕ್ಷ್ಯಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ ಸಿಬಿಐ

“ಅಪರಾಧದಲ್ಲಿ ಭಾಗಿಯಾಗಿದ್ದ ಒಂದು ಬೈಕ್‌ ಅನ್ನು ವಶಪಡಿಸಿಕೊಳ್ಳಲಾಗಿದ್ದು, ಇಬ್ಬರು ಶಂಕಿತರನ್ನು ಗುರುತಿಸಲಾಗಿದೆ. ಅವರು ಬಂಧಿಸಲ್ಪಟ್ಟ ನಂತರ, ನಾವು ಮೂರನೇ ಆರೋಪಿಯನ್ನೂ ಪತ್ತೆಹಚ್ಚುತ್ತೇವೆ” ಎಂದು ಅವರು ಹೇಳಿದ್ದಾರೆ.ಗುಜರಾತ್‌

ಹುಡುಗಿಯ ಸ್ನೇಹಿತ ಸ್ಥಳೀಯರನ್ನು ಎಚ್ಚರಿಸಿದ್ದು, ಅವರು ಅರ್ಧ ಗಂಟೆಯೊಳಗೆ ಘಟನಾ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ. “ಅದರ ನಂತರ ಪೊಲೀಸರಿಗೂ ಸೂಚನೆ ನೀಡಲಾಗಿದ್ದು, ಅವರು ಕೂಡಾ ಸ್ವಲ್ಪ ಸಮಯದಲ್ಲೆ ಗ್ರಾಮಸ್ಥರ ಪ್ರಯತ್ನಗಳೊಂದಿಗೆ ಸೇರಿಕೊಂಡರು” ಎಂದು ಅವರು ಹೇಳಿದ್ದಾರೆ.

ಕೊಸಾಂಬ ಪೊಲೀಸರು BNS ಕಾಯಿದೆಯ ಸೆಕ್ಷನ್ 70(2), 115(2), 54, ಮತ್ತು 309(4) ಸೇರಿದಂತೆ ಅನೇಕ ಸೆಕ್ಷನ್‌ಗಳ ಅಡಿಯಲ್ಲಿ ಆರೋಪಗಳನ್ನು ದಾಖಲಿಸಿದ್ದಾರೆ. ಪ್ರಕರಣವು ದರೋಡೆಯನ್ನು ಸಹ ಒಳಗೊಂಡಿದ್ದು ಸೆಕ್ಷನ್ 352 ಮತ್ತು 351(3) ಸೆಕ್ಷನ್ ಕೂಡಾ ದಾಖಲಿಸಲಾಗಿದೆ. ಹೆಚ್ಚುವರಿಯಾಗಿ, ಪೋಕ್ಸೋ ಕಾಯ್ದೆಯ ಸೆಕ್ಷನ್ 4 ಮತ್ತು 6 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಅಕ್ಟೋಬರ್ 4 ರಂದು ವಡೋದರದ ಹೊರವಲಯದಲ್ಲಿರುವ ನಿರ್ಜನ ಸ್ಥಳದಲ್ಲಿ ಮೂವರು ದುಷ್ಕರ್ಮಿಗಳು ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರು.

ವಿಡಿಯೊ ನೋಡಿ: ‘ಭ್ರಷ್ಟಾಚಾರವನ್ನು ನಾವು ಮರು ವ್ಯಾಖ್ಯಾನಿಸಬೇಕಾಗಿದೆ’ : ವಿ ಎಲ್ ನರಸಿಂಹಮೂರ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...