Homeಮುಖಪುಟಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

ಗುಜರಾತ್‌: ಬಂಡಾಯವೆದ್ದ 12 ನಾಯಕರಿಗೆ ಬಿಜೆಪಿಯಿಂದ ಗೇಟ್‌ಪಾಸ್‌

- Advertisement -
- Advertisement -

ಗುಜರಾತ್ ವಿಧಾನಸಭೆಯ ಎರಡನೇ ಹಂತದ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ವಿರುದ್ಧ ನಾಮಪತ್ರ ಸಲ್ಲಿಸಿದ ಕಾರಣಕ್ಕಾಗಿ ಬಿಜೆಪಿಯು ಮಂಗಳವಾರ 12 ಬಂಡಾಯ ನಾಯಕರನ್ನು ಅಮಾನತುಗೊಳಿಸಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಡಿಸೆಂಬರ್ 1 ರಂದು ನಡೆಯಲಿರುವ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಕ್ಕಾಗಿ ಇಬ್ಬರು ಮಾಜಿ ಶಾಸಕರು ಸೇರಿದಂತೆ ಏಳು ಮುಖಂಡರನ್ನು ಬಿಜೆಪಿಯಿಂದ ಅಮಾನತುಗೊಳಿಸಿದ ಎರಡು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.

ಬಿಜೆಪಿ ಟಿಕೆಟ್ ನೀಡಲು ನಿರಾಕರಿಸಿದ ನಂತರ 12 ನಾಯಕರು ಬಿಜೆಪಿ ಅಭ್ಯರ್ಥಿಗಳ ವಿರುದ್ಧ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರನ್ನು ಆರು ವರ್ಷಗಳ ಕಾಲ ಅಮಾನತುಗೊಳಿಸಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸಿ.ಆರ್.ಪಾಟೀಲ್ ಹೇಳಿದ್ದಾರೆ.

ಪದ್ರಾ ವಿಧಾನಸಭಾ ಕ್ಷೇತ್ರದಿಂದ ದಿನೇಶ್ ಪಟೇಲ್, ವಘೋಡಿಯಾದಿಂದ ಮಧು ಶ್ರೀವಾಸ್ತವ್ ಮತ್ತು ಸಾವ್ಲಿಯಿಂದ ಕುಲದೀಪ್ ಸಿಂಗ್ ರೌಲ್ಜಿ ಅವರನ್ನು ಪಕ್ಷ ಅಮಾನತುಗೊಳಿಸಿದೆ.

ರೌಲ್ಜಿ ಅಕ್ಟೋಬರ್‌ನಲ್ಲಿ ಕಾಂಗ್ರೆಸ್‌ಗೆ ಸೇರಿದ್ದರು. ಈಗ ಸಾವ್ಲಿಯಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದಾರೆ. ಅವರು ಎರಡು ಅವಧಿಗೆ ಶಾಸಕರಾಗಿದ್ದರು. ಬಿಜೆಪಿ ಅಭ್ಯರ್ಥಿ ಕೇತನ್ ಇನಾಮದಾರ್ ವಿರುದ್ಧ ಚುನಾವಣೆಯಲ್ಲಿ ಈಗ ಸ್ಪರ್ಧಿಸಿದ್ದಾರೆ. ಎರಡು ಅವಧಿಗೆ ಶಾಸಕರಾಗಿದ್ದ ದಿನೇಶ್ ಪಟೇಲ್ ಮತ್ತು ಆರು ಅವಧಿಗೆ ಶಾಸಕರಾಗಿದ್ದ ಮಧು ಶ್ರೀವಾಸ್ತವ್ ಅವರು ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದು, ಸ್ವತಂತ್ರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ.

ಪಂಚಮಹಲ್ ಜಿಲ್ಲೆಯ ಸೆಹ್ರಾದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಖಾತು ಪಾಗಿ ಅವರನ್ನು ಬಿಜೆಪಿ ಅಮಾನತುಗೊಳಿಸಿದೆ. ಮಹಿಸಾಗರದ ಲುನವಾಡದಲ್ಲಿ ಬಿಜೆಪಿಯು ಎಸ್‌ಎಂ ಖಾಂತ್ ಮತ್ತು ಜೆಪಿ ಪಟೇಲ್ ಅವರನ್ನು ಪಕ್ಷದಿಂದ ಹೊರಹಾಕಿದೆ.

2022ರ ಗುಜರಾತ್‌ ಚುನಾವಣೆಯು 2017ರ ಚುನಾವಣೆಗಿಂತ ಬಹಳ ಭಿನ್ನವಾಗಿದೆ. ಮೀಸಲಾತಿಗಾಗಿ ಒತ್ತಾಯಿಸಿ ನಡೆದ ಪಾಟಿದಾರ್ ಆಂದೋಲನವು 2017ರ ಚುನಾವಣೆಯಲ್ಲಿ ಗಮನ ಸೆಳೆದಿತ್ತು. ಆ ಸಮಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಕಾಂಗ್ರೆಸ್ ಸವಾಲಾಗಿ ಪರಿಣಮಿಸಿತು. ಗ್ರಾಮೀಣ ಸಮಸ್ಯೆಗಳನ್ನು ದೊಡ್ಡ ಚುನಾವಣಾ ವಿಷಯವಾಗಿ ಕಾಂಗ್ರೆಸ್ ಮುಂದುಮಾಡಿತು. ಗುಜರಾತ್‌ನಲ್ಲಿ ಬಿಜೆಪಿ ಸರಳ ಬಹುಮತವನ್ನು ಗಳಿಸುವಲ್ಲಿ ಯಶಸ್ವಿಯಾದರೆ, ಕಾಂಗ್ರೆಸ್ 1985ರಿಂದ ಸೀಟು ಹಂಚಿಕೆಯಲ್ಲಿ ರಾಜ್ಯದಲ್ಲಿ ತನ್ನ ಅತ್ಯುತ್ತಮ ಸಾಧನೆಯನ್ನು ದಾಖಲಿಸಿದೆ. ಕಾಂಗ್ರೆಸ್‌ನ ಗೆಲುವಿನ ಸಂಖ್ಯೆ ಹೆಚ್ಚಾಗಲು ಗ್ರಾಮೀಣ ಪ್ರದೇಶದಲ್ಲಿ ಮೇಲುಗೈ ಸಾಧಿಸಿರುವುದು ಕಾರಣವಾಗಿದೆ. ಈ ಚುನಾವಣೆಯಲ್ಲಿ ಆಮ್‌ಆದ್ಮಿ ಪಕ್ಷವೂ ಸ್ಪರ್ಧಿಸಿರುವುದರಿಂದ ನಗರ ಭಾಗದಲ್ಲಿ ಬಿಜೆಪಿಯ ಮತಗಳನ್ನು ಎಎಪಿ ತನ್ನತ್ತ ಸೆಳೆಯುವ ಸಾಧ್ಯತೆಗಳಿವೆ ಎಂಬ ವಿಶ್ಲೇಷಣೆಗಳು ಬರುತ್ತಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...